ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Friday, June 30th, 2017

ಕನ್ನಡ ಪತ್ರಿಕೋದ್ಯಮದಲ್ಲಿ ಹಲವು ದಾಖಲೆಗಳನ್ನು ಮಾಡಿರುವ ವಿಜಯ ಕರ್ನಾಟಕ ಪತ್ರಿಕೆಯು ನಡೆಸಿದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ಏರ್ಪಡಿಸಿದ್ದ ದಕ್ಷಿಣಕನ್ನಡ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಗೌತಮ್, ಮುಖೇಶ್ ಕೃಷ್ಣ, ಅನಘಾ ಭಟ್, ಪೂಜಾ ಬಿ.ಎ ಮತ್ತು ಅಮಿತಾ ಎಸ್‌.ಎನ್. ಆಯ್ಕೆಯಾಗಿದ್ದು ಇವರಲ್ಲಿ 9 ನೇ ತರಗತಿ ವಿದ್ಯಾರ್ಥಿ ಗೌತಮ್‌ ಎಸ್. ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. […]

10ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆ

10ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆ

Thursday, June 29th, 2017

ದಿನಾಂಕ 29-6-2017 ರಂದು ಅಪರಾಹ್ನ 2.30 ಕ್ಕೆ 10 ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಕರೆಯಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಅಚ್ಯುತ್ ನಾಯಕರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ವಿದ್ಯಾರ್ಥಿಗಳ ಕಲಿಕೆಯ ಜೊತೆಗೆ ನಮ್ಮ ಸನಾತನ ಸಂಸ್ಕೃತಿಯನ್ನು ಪಾಲಿಸುತ್ತಾ ಮುಂದಿನ ಪೀಳಿಗೆಗೆ ಅದನ್ನು ವರ್ಗಾಯಿಸುವ ಮಹತ್ತರ ಜವಾಬ್ದಾರಿ ಇಂದಿನ ಪೋಷಕರ ಮೇಲಿದೆ ಎಂದು ಹೇಳಿದರು. ಅಲ್ಲದೆ ಅದೇ ಸಂಸ್ಕೃತಿಯ ಕಾರಣಕ್ಕೆ ಈ ಸಂಸ್ಥೆ ಸ್ಥಾಪನೆಯಾದುದು ಎಂಬುವುದನ್ನು ಔಚಿತ್ಯಪೂರ್ಣವಾಗಿ ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಪಾಲಕರು ಉಪಸ್ಥಿತರಿದ್ದು ವಿದ್ಯಾರ್ಥಿಗಳ ಪಠ್ಯ ಹಾಗೂ […]

5 ಮತ್ತು 6 ನೇ ವಿದ್ಯಾರ್ಥಿಗಳ ಪೋಷಕರ ಸಭೆ

5 ಮತ್ತು 6 ನೇ ವಿದ್ಯಾರ್ಥಿಗಳ ಪೋಷಕರ ಸಭೆ

Thursday, June 29th, 2017

2017-18 ನೇ ಸಾಲಿನ 5 ನೇ ತರಗತಿ ಹಾಗೂ 6 ನೇ ತರಗತಿ ಮಕ್ಕಳ ಪೋಷಕರ ಸಭೆಯನ್ನು ದಿನಾಂಕ 29-06-2017 ರಂದು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯು ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮೊದಲಿಗೆ ಶಿಕ್ಷಕರು ಮತ್ತು ಪೋಷಕರು ತಮ್ಮ ತಮ್ಮ ಪರಿಚಯವನ್ನು ಮಾಡಿಕೊಂಡರು. ಶಾಲೆ ಪಠ್ಯ ಹಾಗೂ ಪಠ್ಯಪೂರಕ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಶಾಲಾ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆಯವರು ಮಕ್ಕಳನ್ನು ಓರ್ವ ಸತ್ಪ್ರಜೆಯಾಗಿ ಬೆಳೆಸುವಲ್ಲಿ ಹೆತ್ತವರ ಪಾತ್ರ ಮಹತ್ತರವಾದುದು ಎನ್ನುತ್ತಾ ಶಾಲೆಯಲ್ಲಿ ನಡೆಯುವ ಚಟುವಟಿಕೆಗಳ ಬಗ್ಗೆ […]

3 ಮತ್ತು 4ನೇ ತರಗತಿಯ ಪೋಷಕರ ಸಭೆ

Wednesday, June 28th, 2017

3 ಮತ್ತು 4 ನೇ ತರಗತಿಯ ಪೋಷಕರ ಸಭೆಯನ್ನು ದಿನಾಂಕ 28-6-2017 ರ  ಬುಧವಾರದಂದು ಪೋಷಕರ ಸಭೆಯನ್ನು ನಡೆಸಲಾಯಿತು. ಪ್ರೌಢಶಾಲಾ ಮುಖ್ಯಗುರುಗಳಾದ ಆಶಾ ಬೆಳ್ಳಾರೆಯವರು ಮಾತನಾಡಿ ಮಾತೃಭಾಷಾ ಶಿಕ್ಷಣದ ಜೊತೆಗೆ ಪೋಷಕರ ಮಾರ್ಗದರ್ಶನದಿಂದ ಮಕ್ಕಳು ಉತ್ತಮ ಪ್ರಗತಿ ಹೊಂದಲು ಸಾಧ್ಯ ಎಂದು ಹೇಳಿದರು. ಅಂತೆಯೇ ಶಾಲಾ ಅಧ್ಯಕ್ಷರಾದ ಶ್ರೀಯುತ ಅಚ್ಯುತನಾಯಕ್ ರವರು ಮಾತನಾಡಿ ನಮ್ಮ ದೇಶದ ಸಂಸ್ಕೃತಿಯ ಜೊತೆಗೆ ಸಂಸ್ಕಾರಯುತವಾದ ಶಿಕ್ಷಣವನ್ನು ಮಕ್ಕಳಿಗೆ ಕೊಡಬೇಕೆಂದು ಹೆಳಿದರು. ಸಭೆಯಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಯುತ ರಮೇಶ್ಚಂದ್ರ ನಾಯಕ್ ಉಪಸ್ಥಿತರಿದ್ದರು. ವೀಣಾಸರಸ್ವತಿ […]

ಒಳಮೊಗ್ರು ಗ್ರಾಮದಲ್ಲಿ ಕೋಟಿ ವೃಕ್ಷ ಆಂದೋಲನ

ಒಳಮೊಗ್ರು ಗ್ರಾಮದಲ್ಲಿ ಕೋಟಿ ವೃಕ್ಷ ಆಂದೋಲನ

Friday, June 23rd, 2017

ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ಸಮರ್ಥ ಭಾರತ ಪುತ್ತೂರು ಇವರ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ನೇತೃತ್ವದಲ್ಲಿ ಒಳಮೊಗ್ರು ಗ್ರಾಮದ ಪರ್ಪುಂಜ ರುದ್ರಭೂಮಿಯ ಆವರಣದಲ್ಲಿ ಕೋಟಿವೃಕ್ಷ ಆಂದೋಲನಕ್ಕೆ ಚಾಲನೆ ನೀಡಲಾಯಿತು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಒಳಮೊಗ್ರು ಗ್ರಾಮಕ್ಕೆ ತೆರಳಿ ಆಂದೋಲನದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಸಸಿ ನೆಡುವುದರ ಮೂಲಕ ಪ್ರಕೃತಿಯ ಸಮತೋಲನವನ್ನು ಕಾಯ್ದುಕೊಂಡು ಮುಂಂದಿನ ಜನಾಂಗಕ್ಕೆ ಸಂಪದ್ಬರಿತ ಭವ್ಯ ಭಾರತವನ್ನು ನೀಡುವಲ್ಲಿ ಇಂದಿನ ವಿದ್ಯಾರ್ಥಿಗಳ ಪಾಲುದಾರಿಕೆ ಮಹತ್ವದ್ದು ಎಂಬುದಾಗಿ ಜಿಲ್ಲಾ […]

ಕೆದಂಬಾಡಿ ಗ್ರಾಮ ಪಂಚಾಯತ್ - ಕೋಟಿವೃಕ್ಷ ಆಂದೋಲನ

ಕೆದಂಬಾಡಿ ಗ್ರಾಮ ಪಂಚಾಯತ್ – ಕೋಟಿವೃಕ್ಷ ಆಂದೋಲನ

Friday, June 23rd, 2017

ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ಸಮರ್ಥ ಭಾರತ ಪುತ್ತೂರು ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಮತ್ತು ಕೆದಂಬಾಡಿ ಬಿ.ಜೆ.ಪಿ. ಪಂಚಾಯತ್ ಸಮಿತಿ ಇದರ ಸಹಯೋಗದಲ್ಲಿ ಕೋಟಿವೃಕ್ಷ ಆಂದೋಲನ ಕಾರ್ಯಕ್ರಮ ಕೆದಂಬಾಡಿ ಶ್ರಿ ರಾಮ ಮಂದಿರ ಮತ್ತು ಪ್ರಾಥಮಿಕ ಶಾಲಾ ವಠಾರದಲ್ಲಿ ಜರುಗಿತು. ನಾವಿರುವುದು ಪ್ರಕೃತಿ ಮಡಿಲಲ್ಲಿ – ಕಡಮಜಲು ಸುಭಾಷ್‌ ರೈ ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಉದ್ಫಾಟಿಸಿದ ಪ್ರಗತಿಪರಕೃಷಿಕರು ಹಾಗೂ ’ಪರಿಸರ ಮಿತ್ರ’ ಪ್ರಶಸ್ತಿ ವಿಜೇತರಾದ ಕಡಮಜಲು ಸುಭಾಷ್ ರೈಯವರು ಮಾತನಾಡಿ’ನಾವಿರುವುದು ಪ್ರಕೃತಿ ಮಡಿಲಲ್ಲಿ’. […]

ಕೋಟಿವೃಕ್ಷ ಆಂದೋಲನ - ಅರಿಯಡ್ಕ ಗ್ರಾಮ ಪಂಚಾಯತ್

ಕೋಟಿವೃಕ್ಷ ಆಂದೋಲನ – ಅರಿಯಡ್ಕ ಗ್ರಾಮ ಪಂಚಾಯತ್

Friday, June 23rd, 2017

ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ಸಮರ್ಥ ಭಾರತ ಪುತ್ತೂರು ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಮತ್ತು ಅರಿಯಡ್ಕ ಗ್ರಾಮಪಂಚಾಯತ್ ಸಹಯೋಗದಲ್ಲಿ ಕೋಟಿವೃಕ್ಷ ಆಂದೋಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಫಾಟನೆಯನ್ನು ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಮುಕುಂದ ಶಾಂತಿವನ ನೆರವೇರಿಸಿ ಮರಗಿಡಗಳು ಜೀವದ ಉಸಿರು ಅದನ್ನು ಕಾರ್ಯಕ್ರಮವಾಗಿ ಆಯೋಜಿಸಿ ಭವಿಷ್ಯತ್ತಿಗಾಗಿ ಒಳಿತನ್ನು ಬಯಸುವ ನರೇಂದ್ರ ಮೋದಿಯವರ ಯೋಜನೆ ಉತ್ತಮವಾದದ್ದು ಎಂದರು. ಮುಖ್ಯ ಅತಿಥಿಯಾಗಿ ಮಾತನಾಡಿದ ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೋರ್ಕರ್‌ ಕೋಟಿವೃಕ್ಷ ಆಂದೋಲನದ ಮೂಲಕ […]

ಕುರಿಯ ಗ್ರಾಮದಲ್ಲಿ ಕೋಟಿವೃಕ್ಷ ಆಂದೋಲನ

ಕುರಿಯ ಗ್ರಾಮದಲ್ಲಿ ಕೋಟಿವೃಕ್ಷ ಆಂದೋಲನ

Friday, June 23rd, 2017

ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ಸಮರ್ಥ ಭಾರತ ಪುತ್ತೂರು ಇವರ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮಕ್ಕಳ ನೇತೃತ್ವದಲ್ಲಿ ಕುರಿಯ ಗ್ರಾಮದಲ್ಲಿ ಕೋಟಿ ವೃಕ್ಷ ಆಂದೋಲನಕ್ಕೆ ಚಾಲನೆ ನೀಡಲಾಯಿತು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಮತ್ತು ಶಿಕ್ಷಕರು ಕುರಿಯ ಗ್ರಾಮಕ್ಕೆ ತೆರಳಿ ಆಂದೋಲನದಲ್ಲಿ ಭಾಗವಹಿಸಿದರು. ಎ.ಪಿ.ಎಂ.ಸಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೂಡಿಯಾರ್ ಮತ್ತು ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ ಇವರ ಮುಂದಾಳ್ವತದಲ್ಲಿ ಕಾರ್ಯಕ್ರಮ ನಡೆಯಿತು. ಕುರಿಯ ದ.ಕ.ಜಿ.ಪಂಉನ್ನತ ಹಿರಿಯ ಪ್ರಾಥಮಿಕ ಶಾಲೆಯ […]

ವಿವಿಧ ಗ್ರಾಮಗಳಲ್ಲಿ ಕೋಟಿವೃಕ್ಷ ಆಂದೋಲನ

ವಿವಿಧ ಗ್ರಾಮಗಳಲ್ಲಿ ಕೋಟಿವೃಕ್ಷ ಆಂದೋಲನ

Friday, June 23rd, 2017

ವಿವೇಕಾನಂದ ವಿದ್ಯಾವರ್ಧಕ ಸಂಘ, ಸಮರ್ಥ ಭಾರತ ಪುತ್ತೂರು ಘಟಕದ ಸಂಯುಕ್ತಾಶ್ರಯದಲ್ಲಿ ಕೋಟಿವೃಕ್ಷ ಆಂದೋಲನ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜೂನ್ 23 ರಂದು ಆಯೋಜಿಸಲಾಗಿದ್ದು ಆ ಪ್ರಯುಕ್ತ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಿಂದ ಅರಿಯಡ್ಕ , ಒಳಮೊಗ್ರು, ಕೆದಂಬಾಡಿ ಮತ್ತು ಕುರಿಯದಲ್ಲಿ ಸಸಿ ನೆಡಲು ತಯಾರಾಗಿ ವೃಕ್ಷಆಂದೋಲನದ ಘೋಷಣೆಗಳೊಂದಿಗೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡಗಳು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಶಿಕ್ಷಕರೊಂದಿಗೆ ಶಾಲಾ ಆವರಣದಲ್ಲಿ ಸೇರಿದ ಕ್ಷಣ.

ಸತತ ಪರಿಶ್ರಮದಿಂದಲೇ ನೃತ್ಯದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ : ಅಚ್ಯುತ ನಾಯಕ್

ಸತತ ಪರಿಶ್ರಮದಿಂದಲೇ ನೃತ್ಯದಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ : ಅಚ್ಯುತ ನಾಯಕ್

Thursday, June 22nd, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಶ್ರೀ ರಾಜೇಶ್ ವಿಟ್ಲ ನೇತೃತ್ವದಲ್ಲಿ ನಡೆಯಲಿರುವ ನೃತ್ಯತರಗತಿಯು ದಿನಾಂಕ 19-6-2017 ರಂದು ಶಾಲಾ ವಠಾರದಲ್ಲಿ ಉದ್ಫಾಟನೆಗೊಂಡಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ಅಚ್ಯುತ ನಾಯ್ಕ್ರು ವಹಿಸಿ, ನೃತ್ಯ ಎಂಬುದು ತಪಸ್ಸು ಇದ್ದ ಹಾಗೆ ಸತತ ಪ್ರರಿಶ್ರಮವಿದ್ದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಹೆಳಿದರು. ನೃತ್ಯ ಗುರು ರಾಜೇಶ್ ವಿಟ್ಲ ಮಾತನಾಡಿ ಮಕ್ಕಳಿಗೆ ಸಮಯಪಾಲನೆ ಮಾಡುವ ಜೊತೆಗೆ ಶ್ರದ್ಧೆಯಿಂದ ಕಲಿಯುವಂತೆ ಕಿವಿಮಾತು ಹೇಳಿದರು. ನೃತ್ಯ ತರಗತಿಗಳು ಪ್ರತೀ […]

ವಿಶ್ವ ಯೋಗ ದಿನಾಚರಣೆ

ವಿಶ್ವ ಯೋಗ ದಿನಾಚರಣೆ

Wednesday, June 21st, 2017

ನಮ್ಮ ಶಾಲೆಯಲ್ಲಿ ಯೋಗಾಸನ ಅಭ್ಯಾಸವು ಕೇವಲ ಒಂದು ದಿನಕ್ಕೆ ಸೀಮಿತವಾಗಿಲ್ಲ, ಯೋಗಾಭ್ಯಾಸವನ್ನು ಕಲಿಕಾ ಅವಧಿಯಲ್ಲಿ ಜೋಡಿಸಿರುವುದು ವಿದ್ಯಾರ್ಥಿ ಜೀವನದಲ್ಲಿ ನಮಗೆ ಏಕಾಗ್ರತೆ ಮತ್ತು ಶಿಸ್ತನ್ನು ಅಳವಡಿಸಲು ಸಹಕಾರಿಯಾಗಿತ್ತು ಎಂದು ವಿವೇಕಾನಂದ ಕನ್ನಡ ಶಾಲಾ ಹಿರಿಯ ವಿದ್ಯಾರ್ಥಿನಿ ಕು. ಮಾನಸ ಇವರು ನುಡಿದರು. ಪ್ರಸ್ತುತ ಚಿಕಿತ್ಸಾತ್ಮಕ ಯೋಗದಲ್ಲಿ ಎಂ.ಎಸ್ಸಿ ಪದವಿ ಪಡೆದು ಮಂಗಳೂರಿನಲ್ಲಿ ಚಿಕಿತ್ಸಾತ್ಮಕ ಯೋಗ ತರಗತಿಗಳನ್ನು ನಡೆಸುತ್ತಿರುವ ಇವರು ನೆನಪಿನ ಶಕ್ತಿಗೆ ಸರಳ ಪ್ರಾಣಾಯಾಮ ಹೇಗೆ ಸಹಕಾರಿ ಎಂಬುದನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಟ್ಟರು. ಮಂಜುನಾಥೇಶ್ವರ ಯೋಗ ಮತ್ತು […]

ಉನ್ನತ ಸಾಧನೆಗೆ ಮಾತೃ ಭಾಷೆ ಮಾಧ್ಯಮವು ಉತ್ತಮ ಸಾಧನ - ಹರಿಣಿ ಪುತ್ತೂರಾಯ

ಉನ್ನತ ಸಾಧನೆಗೆ ಮಾತೃ ಭಾಷೆ ಮಾಧ್ಯಮವು ಉತ್ತಮ ಸಾಧನ – ಹರಿಣಿ ಪುತ್ತೂರಾಯ

Friday, June 16th, 2017

’ಸಮಾಜದ ಹಿರಿಯರು ಉನ್ನತ ಉದ್ಯೋಗವನ್ನು ಪಡೆದು ಹೆಚ್ಚಿನ ಸಾಧನೆಗೈಯಲು ಅವರಿಗೆ ಕನ್ನಡ ಮಾಧ್ಯಮ ಶಿಕ್ಷಣವೇ ತಳಹದಿಯಾಗಿತ್ತು. ಮಾತೃಭಾಷೆಯಲ್ಲಿ ಶಿಕ್ಷಣ ಪಡೆದವರು ಇಂದು ಜಗತ್ತಿನ ನಾನಾ ಸ್ಥಳಗಳಲ್ಲಿ ಮಿಂಚುತ್ತಿದ್ದಾರೆ. ಮಾತೃ ಸಂಸ್ಕೃತಿಯ ಶಿಕ್ಷಣ ಪಡೆದ ನೀವು ಧನ್ಯರು. ಇದರ ಋಣವನ್ನು ಎಂದೂ ಮರೆಯಬಾರದು ಹಾಗೂ ಶಾಲೆಯ ಉನ್ನತಿಗಾಗಿ ಸಹಕರಿಸಬೇಕು’ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ವಿವೇಕಾನಂದ ಪದವಿ ವಿದ್ಯಾಲಯದ ಉಪನ್ಯಾಸಕಿ ಹರಿಣಿ ಪುತ್ತೂರಾಯ ನುಡಿದರು. […]

ಯಕ್ಷಗಾನ ನಾಟ್ಯ ತರಬೇತಿ ಆರಂಭ

ಯಕ್ಷಗಾನ ನಾಟ್ಯ ತರಬೇತಿ ಆರಂಭ

Wednesday, June 14th, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಇಲ್ಲಿ ದಿನಾಂಕ 9-6-2017 ರಂದು 2017-18 ನೇ ಸಾಲಿನ ಯಕ್ಷಗಾನ ನಾಟ್ಯ ತರಗತಿಯು ಉದ್ಫಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಅಚ್ಯುತ್ ನಾಯಕ್ ರವರು ದೀಪ ಬೆಳಗಿಸುವುದರ ಮೂಲಕ ನಾಟ್ಯ ತರಗತಿಗೆ ಚಾಲನೆ ನೀಡಿ ಶುಭ ಹಾರೈಸಿದರು. ನಾಟ್ಯಗುರುಗಳಾದ ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳರವರು ಮತನಾಡಿ ಕರಾವಳಿಯ ಗಂಡುಕಲೆಯನ್ನು ಉಳಿಸಿ ಬೆಳೆಸಿ ಜೀವಂತವಾಗಿರಿಸಿ ಎಂದು ಕರೆಯಿತ್ತರು. ಪೋಷಕರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಯಕ್ಷಗಾನ ತರಬೇತಿಯ ನಿರ್ದೇಶಕರಾದ […]

ಬಾಲಕರ್ಮಿಕ ಪದ್ದತಿ ತಡೆಯಲು ಕಾನೂನು ಮಾಹಿತಿ

ಬಾಲಕರ್ಮಿಕ ಪದ್ದತಿ ತಡೆಯಲು ಕಾನೂನು ಮಾಹಿತಿ

Wednesday, June 14th, 2017

ಓದುವ ವಯಸ್ಸಿನಲ್ಲಿರುವ ಮಕ್ಕಳನ್ನು ಕಾರ್ಮಿಕರನ್ನಾಗಿ ಉಪಯೋಗಿಸುವುದು ಶೋಷಣೆ ಮಾಡಿದಂತೆ. ಅದಕ್ಕೆ ಕಾನೂನಿನಲ್ಲಿ ಶಿಕ್ಷೆಯೂ ಇದೆ. ಅದಕ್ಕಾಗಿ ಮಕ್ಕಳೂ ಕಾನೂನು ಜ್ಞಾನ ಅರಿತುಕೊಳ್ಳಬೇಕು ಎಂದು ಪುತ್ತೂರು ನ್ಯಾಯಾಲಯದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಎಸಿಜೆಎಂ ಸಿ.ಕೆ ಬಸವರಾಜ್ ರವರು ಹೇಳಿದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲದಲ್ಲಿ ಜೂನ್ 12 ರಂದು ನಡೆದ, ಅಂತರ್ ರಾಷ್ಟ್ರೀಯ ಬಾಲಕಾರ್ಮಿಕರ ವಿರೋಧಿ ದಿನಾಚರಣೆ ಕುರಿತು ಕಾನೂನು ಮಾಹಿತಿ ಶಿಬಿರವನ್ನು ಉದ್ಫಾಟಿಸಿ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು […]

ಶಾಲಾ ಮಂತ್ರಿಮಂಡಲ

ಶಾಲಾ ಮಂತ್ರಿಮಂಡಲ

Tuesday, June 13th, 2017

ಪ್ರೌಢಶಾಲಾ ನಾಯಕಿ – ಸಾತ್ವಿಕ್ ಶರ್ಮ ಬಿ.ಎಸ್. ಪ್ರೌಢಶಾಲಾ ಉಪನಾಯಕ – ಆಶ್ರಯ್ ಪಿ.ವಿ. ಪ್ರಾಥಮಿಕ ಶಾಲಾ ನಾಯಕ – ಆದಿತ್ಯ ನಾರಾಯಣ ಪಿ.ಎಸ್. ಪ್ರಾಥಮಿಕ ಶಾಲಾ ಉಪನಾಯಕ – ಮುಖೇಶ್ ಕೃಷ್ಣ ಪ್ರತಿಪಕ್ಷ ನಾಯಕ – ಮೋಹಿತ್ ರಾಜ್ ಪ್ರತಿಪಕ್ಷ ನಾಯಕಿ – ಅಮಿತಾ ಎಸ್. ಎನ್. ಸ್ಪೀಕರ್ – ಮೋಕ್ಷಿತಾ ಸಾಂಸ್ಕೃತಿಕ ಮಂತ್ರಿ – ಭವಿತ ವಿದ್ಯಾಮಂತ್ರಿ – ತೃಷಾ ಭಟ್ ನೀರಾವರಿ ಮಂತ್ರಿ – ಕಾರ್ತಿಕ್ ಗೃಹ ಮಂತ್ರಿ – ಧನುಷ್ ಕ್ರೀಡಾಮಂತ್ರಿ […]

ಜೀವ ವೈವಿಧ್ಯತೆ ಕಾಪಾಡಲು ಪರಿಸರ ಸಂರಕ್ಷಣೆ ಅಗತ್ಯ - ಜೆಡ್ಡು ಗಣಪತಿ ಭಟ್

ಜೀವ ವೈವಿಧ್ಯತೆ ಕಾಪಾಡಲು ಪರಿಸರ ಸಂರಕ್ಷಣೆ ಅಗತ್ಯ – ಜೆಡ್ಡು ಗಣಪತಿ ಭಟ್

Tuesday, June 13th, 2017

ಹೆಚ್ಚು ವಿಧದ ಸಸ್ಯ ಸಂಕುಲಗಳನ್ನು ಬೆಳಿಸಿ ಪೋಷಿಸಿದಾಗ ಪ್ರಕೃತಿಯಲ್ಲಿ ಜೀವ ವೈವಿಧ್ಯತೆಗೆ ಅವಕಾಶ ಉಂಟಾಗುವುದರಿಂದ ನಿಸರ್ಗ ಸ್ನೇಹಿ ವ್ಯವಸ್ಥೆ ನಿರ್ಮಾಣವಾಗುತ್ತದೆ. ನಾವಿರುವ ಪರಿಸರವು’ಶೂನ್ಯಕಾರ್ಬನ್ ಎನಿಸಿಕೊಂಡು’ ಸ್ವಸ್ಥ ಸುಂದರ ತಾಣವಾಗಿ ಬದಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಕಿರಿಯರು ಆಸಕ್ತಿ ಹೊಂದಿ ತಮ್ಮನ್ನು ತೊಡಗಿಸಿಕೊಳ್ಳಲು ’ವಿಶ್ವ ಪರಿಸರ ದಿನ’ದಂತಹ ಆಚರಣೆಗಳು ಸಹಕಾರಿಎಂದು ಆರ್ಯುವೇದ ತಜ್ಞ ಹಾಗೂ ಪರಿಸರ ಪ್ರೇಮಿಯು ಆಗಿರುವ ಜೆಡ್ಡು ಗಣಪತಿ ಭಟ್‌ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲದ ’ವೃತಿಕಾ’ ವಿಜ್ಞಾನ ಸಂಘವು ಹಮ್ಮಿಕೊಂಡ ವಿಶ್ವ ಪರಿಸರ […]

ಶಾಲಾ ಚುನಾವಣೆ

ಶಾಲಾ ಚುನಾವಣೆ

Friday, June 9th, 2017

ವಿವೇಕಾನಂದಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿ 2017-18 ನೇ ಸಾಲಿನ ಶಾಲಾ ಚುನಾವಣೆಯು ಮುಖ್ಯಗುರುಗಳ ಸಮ್ಮುಖದಲ್ಲಿ ನಡೆಯಿತು. ಪ್ರೌಢಶಾಲಾ ವಿಭಾಗದ ನಾಯಕನಾಗಿ ಸಾತ್ವಿಕ್ ಶರ್ಮ ಬಿ.ಎಸ್ ಮತ್ತು ಉಪನಾಯಕನಾಗಿ ಆಶ್ರಯ್ ಪಿ.ವಿ. ಆಯ್ಕೆಯಾದರು. ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ ಆದಿತ್ಯ ನಾರಾಯಣ ಪಿ.ಎಸ್. ಮತ್ತು ಉಪನಾಯಕನಾಗಿ ಮುಖೇಶ್ ಕೃಷ್ಣ ಆಯ್ಕೆಯಾದರು. ಚುನಾವಣೆಯ ಉಸ್ತುವಾರಿಯನ್ನು ಶಿಕ್ಷಕರಾದ ಶ್ರೀಯುತ ವಿಶ್ವನಾಥ ಮುಡೂರು ವಹಿಸಿದರು ಎಲ್ಲಾ ಶಿಕ್ಷಕರು ಸಹಕರಿಸಿದರು.

ಹಿಂದೂ ಸಾಮ್ರಾಜ್ಯೋತ್ಸವ ದಿನಾಚರಣೆ

ಹಿಂದೂ ಸಾಮ್ರಾಜ್ಯೋತ್ಸವ ದಿನಾಚರಣೆ

Wednesday, June 7th, 2017

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ದಿನಾಂಕ 7-6-2017 ರಂದು ಹಿಂದೂ ಸಾಮ್ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಭಾರತ ದೇಶದ ಹೆಮ್ಮೆಯ ಪ್ರತೀಕ, ಭವ್ಯ ಭಾರತದ ದಿವ್ಯ ಪುರುಷನಾದ ಶಿವಾಜಿಯವರ ಪಟ್ಟಾಭಿಷೇಕ ದಿನಾಚರಣೆಯ ನೆನಪಿಗಾಗಿ ಹಿಂದೂ ಸಾಮ್ರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ, ಮತ್ತು ಅವರು ನೀಡಿದ ಆದರ್ಶಗಳು ನಮ್ಮೆಲ್ಲರಿಗೂ ಮಾರ್ಗದರ್ಶಕವಾಗಿದೆ ಎಂದು ಶಿಕ್ಷಕ ಶ್ರೀ ಚಂದ್ರಶೇಖರ ಸುಳ್ಯಪದವು ನುಡಿದರು. ಶಿಕ್ಷಕಿ ಕು. ಲೀಲಾವತಿ ಹಂದ್ರಟ್ಟ ಮಾತಾನಾಡಿ ಶಿವಾಜಿಯವರ ಜೀವನ ಚರಿತ್ರೆ, ಅವರ ಸಾಹಸಮಯ ಘಟನೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಶಾಲಾ ಮುಖ್ಯಗುರುಗಳಾದ […]

ವಿಶಿಷ್ಟ ರೀತಿಯಲ್ಲಿ ಮಕ್ಕಳಿಗೆ ಸ್ವಾಗತ

ವಿಶಿಷ್ಟ ರೀತಿಯಲ್ಲಿ ಮಕ್ಕಳಿಗೆ ಸ್ವಾಗತ

Monday, June 5th, 2017

ಬೆಳ್ಳಿಹಬ್ಬ ಆಚರಣೆಯ ಹೊಸ್ತಿಲಲ್ಲಿರುವ ಸಂಸ್ಥೆಯ ಸಂಭ್ರಮದ ಕ್ಷಣಗಳ ಆರಂಭವಾಗಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಆರಂಭೋತ್ಸವ ನಡೆಯಿತು. 1993 ರಲ್ಲಿ 7 ಮಕ್ಕಳಿಂದ ಆರಂಭಗೊಂಡ ಸಂಸ್ಥೆಯಲ್ಲಿ ಕಳೆದ ಶೈಕ್ಷಣಿಕ ವರ್ಷ 871 ಮಕ್ಕಳಿದ್ದು 2017-18 ನೇ ಸಾಲಿನಲ್ಲಿ ಸುಮಾರು 950 ಮಕ್ಕಳ ಕಲಿಕಾ ಕೇಂದ್ರವಾಗಿ ’ಶೇಷಾದ್ರಿ’ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಪ್ರಸಕ್ತ ವರ್ಷ 70 ಮಕ್ಕಳು ಹೊಸದಾಗಿ ಸೇರ್ಪಡೆಗೊಂಡಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ ಆಡಳಿತ ಮಂಡಳಿ ಮತ್ತು ಪೋಷಕ ವೃಂದ ಕನ್ನಡ ಭಾಷಾ ಶಾಲೆಯಾಗಿ ವಿವೇಕಾನಂದ ಕನ್ನಡ ಶಾಲೆ ಒಂದು ಪ್ರಗತಿಪರ […]

ಬೆಳ್ಳಿ ಹಬ್ಬ ಹಾಗೂ ನೂತನ ಕಟ್ಟಡ ಉದ್ಘಾಟನೆ

Friday, May 19th, 2017

ಮಾತೃಭಾಷಾ ಪ್ರೇಮದೇಶವನ್ನು ಅಭಿವೃದ್ಧಿಗೊಳಿಸುತ್ತದೆ: ಅರ್ಜುನ್‌ರಾಮ್ ಮೇಘ್ವಾಲ್ ಪುತ್ತೂರು: ಹತ್ತೊಂಬತ್ತನೇ ಶತಮಾನಯುರೋಪ್‌ ಅದರಲ್ಲೂ ಇಂಗ್ಲೆಂಡಿನದಾಗಿತ್ತು. ಇಪ್ಪತ್ತನೆಯ ಶತಮಾನ ಉತ್ತರ ಅಮೇರಿಕಾದ ಪಾಲಾಯಿತು. ಇಪ್ಪತೊಂದನೆಯ ಶತಮಾನ ಯಾರದ್ದೆಂಬ ಚರ್ಚೆಯನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹುಟ್ಟು ಹಾಕಿದರು. ಅವರು ಈ ಶತಮಾನ ಏಷ್ಯಾಕ್ಕೆ ಸೇರಿದ್ದು ಎಂದರು. ಪರಿಣಾಮ ಬಹು ದೊಡ್ಡ ಚರ್ಚೆ ಆರಂಭವಾಯಿತು. ಯಾವ ದೇಶದಲ್ಲಿ ವಿವೇಕಾನಂದರ ಆದರ್ಶ ಹಾಗೂ ಮಾತೃ ಭಾಷಾ ಶಿಕ್ಷಣದ ಪ್ರೇಮ ಇದೆಯೋ ಅಂತಹ ಭಾರತವೇ ವಿಶ್ವಗುರು ಆಗಲು ಸಾಧ್ಯ ಎಂಬ ಸತ್ಯ ಈಗ […]

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ - ಎಸ್.ಎಸ್.ಎಲ್.ಸಿ. ಫಲಿತಾಂಶ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ – ಎಸ್.ಎಸ್.ಎಲ್.ಸಿ. ಫಲಿತಾಂಶ

Friday, May 12th, 2017

2016-17 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅರ್ಪಿತಾ ಸಿ.ಪಿ – 613 ಅಂಕಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಕುಂಜೂರು ಪಂಜ ನಿವಾಸಿ ಚಂದ್ರಶೇಖರ ಕಲ್ಲೂರಾಯ ಮತ್ತು ಅನುರಾಧ ದಂಪತಿಗಳ ಪುತ್ರಿ. ಉಳಿದಂತೆ ಚಿಂತನಾ ಕೆ- 609 (ವೇಣುಗೋಪಾಲ್ ಮತ್ತು ಶಕುಂತಳ ದಂಪತಿ ಪುತ್ರಿ), ವಿಭಾ ಆಚಳ್ಳಿ – 602 (ಬೆದ್ರಾಳ ನಿವಾಸಿ ರವಿಶಂಕರ್ ಎ. ಎನ್. ಮತ್ತು ಸವಿತಾ ಎ ಆರ್ ದಂಪತಿಗಳ ಪುತ್ರಿ) , ತೀರ್ಥರಾಜ್- 599, ಶ್ರೀಪ್ರದ – 599, ದೀಕ್ಷಾ ಬಿ – 595, ಸ್ಕಂದ […]

ಶಾಲೆಯ ಬೆಳ್ಳಿಹಬ್ಬದ ಆಮಂತ್ರಣ ಪತ್ರ ಬಿಡುಗಡೆ - ಪ್ರಮುಖರ ಸಭೆ

ಶಾಲೆಯ ಬೆಳ್ಳಿಹಬ್ಬದ ಆಮಂತ್ರಣ ಪತ್ರ ಬಿಡುಗಡೆ – ಪ್ರಮುಖರ ಸಭೆ

Friday, April 21st, 2017

ಮೇ 18 ರಂದು ಬೆಳ್ಳಿಹಬ್ಬ, ನೂತನಕಟ್ಟಡ ಲೋಕಾರ್ಪಣೆ | ಏ 30 ರೊಳಗೆ ಗ್ರಾಮ ಮಟ್ಟದ ಸಭೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾಗಿ ತೆಂಕಿಲದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬೆಳ್ಳಿಹಬ್ಬ ಮತ್ತು ನೂತನ ಶಾಲಾ ಕಟ್ಟಡದ ಲೋಕಾರ್ಪಣಾ ಸಮಾರಂಭ ಮೇ 18 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಗ್ರಾಮ ಸಮಿತಿ ಪ್ರಮುಖರ ಸಭೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಏ 20 ರಂದು ಅಪರಾಹ್ನ ಶಾಲೆಯಲ್ಲಿ ನಡೆಯಿತು. ವಿವೇಕಾನಂದ ಬಿ.ಎಡ್‌. ಕಾಲೇಜಿನ ಅಧ್ಯಕ್ಷರಾದ ಪ್ರೊ. ಎ.ವಿ.ನಾರಾಯಣ ಇವರು ದೀಪ ಬೆಳಗಿಸಿ ಆಮಂತ್ರಣ ಪತ್ರವನ್ನು […]

ಶಾರದಾ ಪೂಜೆ

ಶಾರದಾ ಪೂಜೆ

Friday, March 31st, 2017

ಪ್ರತಿವರ್ಷದಂತೆ ಶಾಲೆಯಲ್ಲಿ ದಿನಾಂಕ 14-3-2017 ರಂದು ಶಾರದಾ ಪೂಜೆಯನ್ನು ನಡೆಸಲಾಯಿತು.

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅಭಿನಂದನೆ

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅಭಿನಂದನೆ

Tuesday, March 14th, 2017

ದಿನಾಂಕ 13-3-2017 ರಂದು ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಆಯೋಜಿಸಿದ ಶಿಕ್ಷಣದಲ್ಲಿ ನವೀನ ಪರಿಕಲ್ಪನೆಯ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಪ್ರಗತಿ ತರುವ ದೃಷ್ಟಿಯಿಂದ ಪುತ್ತೂರು ಶಿಕ್ಷಣ ಇಲಾಖೆಯು ಆರಂಭಿಸಿದ ಮಿಷನ್ 95+ ಯೋಜನೆಯನ್ನು ಮಂಡಿಸಿ, ನ್ಯಾಶನಲ್ ಕಾನ್ಫರೆನ್ಸ್ ಆನ್ ಇನ್ನೋವೇಶನ್ಸ್ ಇನ್ ಎಜ್ಯುಕೇಶನಲ್ ಅಡ್ಮಿನಿಸ್ಟ್ರೇಶನ್ ಅಂಡ್ ಪ್ರೆಸೆಂಟೇಶನ್ ಆಫ್ ಅವಾರ್ಡ್, ರಾಷ್ಟ್ರೀಯ ಪುರಸ್ಕಾರವನ್ನು ಕೇಂದ್ರ ಸಚಿವರಾದ ಪ್ರಕಾಶ್ ಜಾವೆಡ್ಕರ್ ಅವರಿಂದ ಸ್ವೀಕರಿಸಿದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಜಿ.ಎಸ್. ಶಶಿಧರ್ […]

ಡ್ರಾಯಿಂಗ್‌ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ 100% ಫಲಿತಾಂಶ

ಡ್ರಾಯಿಂಗ್‌ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ 100% ಫಲಿತಾಂಶ

Thursday, March 2nd, 2017

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ಏರ್ಪಡಿಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಲೋವರ್‌ಗ್ರೇಡ್ ವಿಭಾಗದಲ್ಲಿ 4 ವಿಶಿಷ್ಟ ಶ್ರೇಣಿಯಲ್ಲಿ ಮತ್ತು 11 ಪ್ರಥಮ ಶ್ರೇಣಿ ತೇರ್ಗಡೆಯಾಗಿದ್ದಾರೆ. ಹೈಯರ್ ಗ್ರೇಡ್ ವಿಭಾಗದಲ್ಲಿ 21 ವಿದ್ಯಾರ್ಥಿಗಳು ಭಾಗವಹಿಸಿದ್ದು 10 ವಿಶಿಷ್ಟ ಶ್ರೇಣಿಯಲ್ಲಿ ಮತ್ತು 11 ಪ್ರಥಮ ಶ್ರೇಣಿ ತೇರ್ಗಡೆಯಾಗಿದ್ದಾರೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಶೇರಾಇವರುತರಬೇತಿ ನೀಡಿದ್ದರು. ಲೋವರ್‌ಗ್ರೇಡ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿ ಪಡೆದವರು: ಗೌತಮ್‌ಎಸ್. (ನೆಹರುನಗರ ನಿವಾಸಿ ಗಣೇಶ್ ಪೂಜಾರಿ ಮತ್ತು ಮಮತ ದಂಪತಿಗಳ ಪುತ್ರ), ಜನನಿ […]

ಶಾಲಾ ವಿದ್ಯಾರ್ಥಿಗೆ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ

ಶಾಲಾ ವಿದ್ಯಾರ್ಥಿಗೆ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ

Monday, February 20th, 2017

ಬಾಲಭವನ ಸೊಸೈಟಿ ಕಬ್ಬನ್, ಉದ್ಯಾನವನ, ಬೆಂಗಳೂರು ಹಾಗೂ ಜಿಲ್ಲಾ ಬಾಲಭವನ ಸಮಿತಿ, ಬೆಳಗಾವಿ ಜಿಲ್ಲೆ ಇವರು ಬೆಳಗಾವಿ ಜಿಲ್ಲೆಯಲ್ಲಿ ನಡೆಸಿದ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆ ಶಿಬಿರದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ ರಾಮ್ ಪ್ರಸಾದ್ ಸೃಜನಾತ್ಮಕ ಕಲಾ ವಿಭಾಗದಲ್ಲಿ ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಬಾಲಭವನ ಸೊಸೈಟಿ ಬೆಂಗಳೂರು ಇದರ ಅಧ್ಯಕ್ಷರಾದ ಡಾ. ಅಚಿಜಲಿ ನಿಂಬಾಳ್ಕರ್‌ರವರು ಪ್ರಶಸ್ತಿ ನೀಡಿ ಗೌರವಿಸಿದರು. ಇವರು ಕೆ.ಮಲ್ಲೇಶ್ ಕುಮಾರ್ ಮತ್ತು ಅನುರಾಧ ಕೆ ದಂಪತಿಗಳ ಪುತ್ರ ಇವರಿಗೆ ಶಾಲಾ […]

ಪರೀಕ್ಷೆಯನ್ನು ಸ್ನೇಹಿತನಂತೆ ಕಾಣಿ - ಬಿ.ವಿ ಸೂರ್ಯನಾರಾಯಣ

ಪರೀಕ್ಷೆಯನ್ನು ಸ್ನೇಹಿತನಂತೆ ಕಾಣಿ – ಬಿ.ವಿ ಸೂರ್ಯನಾರಾಯಣ

Tuesday, February 7th, 2017

‘ಉತ್ತಮ ಪೂರ್ವ ತಯಾರಿಯೊಂದಿಗಿನ ಅಧ್ಯಯನವು ಪರೀಕ್ಷೆಯ ಬಗೆಗಿನ ಆತಂಕವನ್ನು ದೂರ ಮಾಡುತ್ತದೆ’ ಎಂದು ಸವಣೂರು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಬಿ.ವಿ ಸೂರ್ಯನಾರಾಯಣ ಇವರು ನುಡಿದರು. ವಿವೇಕಾನಂದ ಕನ್ನಡ ಶಾಲಾ 10 ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಮಾತನಾಡುತ್ತಾ ಅಧ್ಯಯನದೊಂದಿಗೆ ದೈನಂದಿನ ಚಟುವಟಿಕೆಗಳ ಹಾಗೂ ಆಹಾರ ಕ್ರಮದ ಬಗ್ಗೆ ಗಮನ ಹರಿಸಬೇಕಾದ ಅಂಶಗಳನ್ನು ತಿಳಿಸಿದರು. ಮಕ್ಕಳ ವಿವಿಧ ಪ್ರಶ್ನೆಗಳಿಗೆ ಉತ್ತರಿಸುತ್ತಾ ಪರೀಕ್ಷೆಯನ್ನು ಶತ್ರುವಂತೆ ಕಾಣದೆ ಮಿತ್ರನಂತೆ ಕಾಣಬೇಕು ಎನ್ನುವ ಕಿವಿ ಮಾತನ್ನು ಹೇಳಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಲಿರುವ ಕ್ರೀಡಾಪಟುಗಳು

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಲಿರುವ ಕ್ರೀಡಾಪಟುಗಳು

Tuesday, January 31st, 2017

ಮಹಾರಾಷ್ಟ್ರರಾಜ್ಯದ ಪುಣೆ ನಗರದಲ್ಲಿ ಫೆಬ್ರವರಿ 4 ರಿಂದ 10 ರವರೆಗೆ ನಡೆಯುವ ರಾಷ್ಟ್ರಮಟ್ಟದ ಸ್ಕೂಲ್‌ಗೇಮ್ಸ್ ಫೆಡರೇಶನ್‌ ಆಫ್ ಇಂಡಿಯಾ ಕ್ರೀಡಾಕೂಟಕ್ಕೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕೃತಿ.ಜಿ.ಶೆಟ್ಟಿ (ದರ್ಬೆತ್ತಡ್ಕ ಉದಯ್ ಕುಮಾರ್ ಶೆಟ್ಟಿ ಮತ್ತು ವೈಶಲತಾ ಶೆಟ್ಟಿ ದಂಪತಿಗಳ ಪುತ್ರಿ), ಕು. ರುಚಿತಾ (ಪೆರ್ಲಂಪಾಡಿ ಕುದ್ಕುಳಿ ಮಂಜುನಾಥ ಮತ್ತು ಹರ್ಷಕುಮಾರಿ ದಂಪತಿಗಳ ಪುತ್ರಿ), ಗಾಯತ್ರಿ.ಕೆ.ಎನ್ (ಕೇಪು ಕಲ್ಲಪಾಪು ನಿರಂಜನ್ ಕೆ ಮತ್ತು ಸುನಂದ.ಕೆ.ಎನ್ ದಂಪತಿಗಳ ಪುತ್ರಿ), ವಿಭಾ ಯು.ಎಸ್ (ಶಿಶಿಲದ ಉಮೇಶ್‌ಕುಲಾಲ್ ಮತ್ತು ಸಾವಿತ್ರಿ ದಂಪತಿಗಳ ಪುತ್ರಿ), ನಿಶ್ಮಿತಾ […]

ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಪಾಂಚಜನ್ಯದಲ್ಲಿ ಯಕ್ಷಗಾನ ತಾಳಮದ್ದಳೆ

ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಪಾಂಚಜನ್ಯದಲ್ಲಿ ಯಕ್ಷಗಾನ ತಾಳಮದ್ದಳೆ

Monday, January 23rd, 2017

ವಿವೇಕಾನಂದ ಕಾಲೇಜಿನ ’ಪಾಂಚಜನ್ಯ’ ಆಕಾಶವಾಣಿ ಕೇಂದ್ರದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ’ಬಭ್ರುವಾಹನ’ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ಹಿಮ್ಮೇಳದಲ್ಲಿ – ಭಾಗವತರಾಗಿ ಚಿನ್ಮಯ ಕಲ್ಲಡ್ಕ, ಚೆಂಡೆವಾದನದಲ್ಲಿ ಮುರಳೀಧರ ಕಲ್ಲೂರಾಯ, ಮದ್ದಳೆಯಲ್ಲಿ ಅಚಿಂತ್ಯ ಕೃಷ್ಣ 8ನೇ ತರಗತಿ ಸಹಕರಿಸಿದರು. ಮುಮ್ಮೇಳದಲ್ಲಿ ಅರ್ಜುನನಾಗಿ – ಪ್ರಣಮ್ಯ 7ನೇ ತರಗತಿ, ಹಂಸಧ್ವಜನಾಗಿ – ಭವಿಷ್ 6ನೇ ತರಗತಿ, ಬಭ್ರುವಾಹನನಾಗಿ – ಶ್ರೀಹರಿ – 7ನೇ ತರಗತಿ, ಕೃಷ್ಣನಾಗಿ ಆದಿತ್ಯನಾರಾಯಣ 6ನೇ ತರಗತಿ, ಚಿತ್ರಾಂಗದೆಯಾಗಿ ಕು. ಧಾತ್ರಿ ಆರ್‌ ರೈ 5ನೇ […]

ನಮ್ಮ ಸಂಸ್ಕೃತಿ, ಮೌಲ್ಯಗಳನ್ನು ಕಲೆಗಳು ರಕ್ಷಿಸುತ್ತವೆ - ಚಂದ್ರಹಾಸ ರೈ

ನಮ್ಮ ಸಂಸ್ಕೃತಿ, ಮೌಲ್ಯಗಳನ್ನು ಕಲೆಗಳು ರಕ್ಷಿಸುತ್ತವೆ – ಚಂದ್ರಹಾಸ ರೈ

Monday, January 16th, 2017

ಇಂದಿನ ದಿನಗಳಲ್ಲಿ ನಶಿಸಿಹೋಗುತ್ತಿರುವ ನಮ್ಮ ಸಂಸ್ಕೃತಿ, ಮಾನವೀಯ ಮೌಲ್ಯಗಳನ್ನು ರಕ್ಷಿಸಲು ಕಲೆಗಳು ಸಹಾಯಮಾಡುತ್ತವೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಗಾನ – ನೃತ್ಯ – ಯಕ್ಷ ಸಂಭ್ರಮ 2017 ರ ಅಧ್ಯಕ್ಷೀಯ ನೆಲೆಯಲ್ಲಿ ಮೇಲಿನ ಮಾತುಗಳನ್ನು ರಿಜಿಸ್ಟಾರ್ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರಿನ ಶ್ರೀ ಚಂದ್ರಹಾಸ ರೈಯವರು ನುಡಿದರು. ಅತಿಥಿಗಳಾಗಿ ಆಗಮಿಸಿದ ಶ್ರೀಯುತ ಚಿದಾನಂದ ಕಾಮತ್ ಹಾಗೂ ವಿದುಷಿ ಶ್ರೀಮತಿ ಶೋಭಿತಾ ಸತೀಶ್‌ರವರು ಸಂದರ್ಬೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ […]

ವಿವೇಕಾನಂದ ಜಯಂತಿ ಆಚರಣೆ

ವಿವೇಕಾನಂದ ಜಯಂತಿ ಆಚರಣೆ

Friday, January 13th, 2017

ವಿವೇಕಾನಂದರ 154 ನೇ ಜನ್ಮ ದಿನಾಚರಣೆ ಗುರುವಾರ ನಡೆಯಿತು. ಶಾಲಾ ಸಹಶಿಕ್ಷಕಿಯಾದ ಶ್ರೀಮತಿ ವಿದ್ಯಾ ಅನಿಲ್ ರವರು ದೀಪ ಪ್ರಜ್ವಲಿಸಿ, ಎಲ್ಲಾ ಶಿಕ್ಷಕರು ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಫಾರ್ಚನೆಗೈಯುವುದರ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಪ್ರಾಥಮಿಕ ಮುಖ್ಯಗುರುಗಳಾದ ನಳಿನಿ ಮಾತಾಜಿ, ಚಿತ್ರಕಲಾಶಿಕ್ಷಕರಾದ ಶ್ರೀ ರುಕ್ಮಯ, ಸಹಶಿಕ್ಷಕರಾದ ನಮಿತಾ ಹಾಗೂ ಮಮತಾ ಉಪಸ್ಥಿತರಿದ್ದರು. ವಿವೇಕಾನಂದರ ಬಾಲ್ಯ ಹಾಗೂ ಶಿಕ್ಷಣದ ಕುರಿತಾಗಿ ವಿದ್ಯಾರ್ಥಿಗಳು ಭಾಷಣ ಮಾಡಿದರು. 1 ನೇ ತರಗತಿಯ ಪುಟಾಣಿಗಳು ವಿವೇಕಾನಂದರ ಉಡುಗೆ ತೊಟ್ಟು ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ವಿವೇಕಾನಂದರ ಜೀವನದ […]

ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

Monday, January 9th, 2017

ಮಂಗಳೂರಿನ ಕದ್ರಿ ಬಾಲಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಕಲಾಶ್ರೀ ಆಯ್ಕೆ ಪ್ರಕ್ರಿಯೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಮ್ ಪ್ರಸಾದ್ (ಕೆ.ಮಲ್ಲೇಶ್ ಕುಮಾರ್ ಮತ್ತು ಅನುರಾಧ ಕೆ ದಂಪತಿಗಳ ಪುತ್ರ) ಸೃಜನಾತ್ಮಕ ಕಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದು ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಶಸ್ತಿ

ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಶಸ್ತಿ

Saturday, January 7th, 2017

ಅಂತರಾಷ್ಟ್ರೀಯ ಯೂತ್ ಯೋಗ ಫೆಡರೇಶನ್ ಹಾಗೂ ಶ್ರೀಲಂಕಾ ಯೂತ್ ಯೋಗ ಫೆಡರೇಶನ್‌ರವರ ಸಹಯೋಗದೊಂದಿಗೆ ಶ್ರೀಲಂಕಾದ ವಾರಿಯಪೋಲದಲ್ಲಿ ಏರ್ಪಡಿಸಿದ್ದ ಭಾರತ ಶ್ರೀಲಂಕಾ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರತೀಕ್ಷಾ ಆರ್ ರೈ (ಮದಕ ರಾಜೇಶ್ ರೈ ಮತ್ತು ಪ್ರಪುಲ್ಲ ರೈ ದಂಪತಿಗಳ ಪುತ್ರಿ) – ಪ್ರಥಮ, ಹೇಮಶ್ರೀ (ಮುದಲಾಜೆ ಪುರುಷೋತ್ತಮ ಗೌಡ ಮತ್ತು ಕಮಲಾಕ್ಷಿ ದಂಪತಿಗಳ ಪುತ್ರಿ)- ಪ್ರಥಮ, ಭವಿಷ್(ತಾರಿಗುಡ್ಡೆ ಬಾಲಕೃಷ್ಣ ಮತ್ತು ವೀಣಾ ದಂಪತಿಗಳ ಪುತ್ರ) – ದ್ವಿತೀಯ, ರಾಜೇಶ್ ಗೌಡ […]

ಜಿಲ್ಲಾ ಮಟ್ಟದ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

ಜಿಲ್ಲಾ ಮಟ್ಟದ ಕಲಾಶ್ರೀ ಪ್ರಶಸ್ತಿಗೆ ಆಯ್ಕೆ

Friday, January 6th, 2017

ಪುತ್ತೂರಿನ ಶಿವರಾಮ ಕಾರಂತ ಬಾಲವನದಲ್ಲಿ ನಡೆದ ತಾಲೂಕು ಮಟ್ಟದ ಕಲಾಶ್ರೀ ಆಯ್ಕೆ ಪ್ರಶಸ್ತಿಗೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅರ್ಪಿತಾ ಸಿ.ಪಿ (ಕುಂಜೂರುಪಂಜ ನಿವಾಸಿ ಚಂದ್ರಶೇಖರ ಕಲ್ಲೂರಾಯ ಮತ್ತು ಅನುರಾಧ ದಂಪತಿಗಳ ಪುತ್ರಿ) – ಸೃಜನಾತ್ಮಕ ಪ್ರದರ್ಶನ ಕಲೆಯಲ್ಲಿ – ಪ್ರಥಮ, ರಾಮ್ ಪ್ರಸಾದ್ (ಕೆ.ಮಲ್ಲೇಶ್‌ಕುಮಾರ್ ಮತ್ತುಅನುರಾಧ ಕೆ ದಂಪತಿಗಳ ಪುತ್ರ) – ಸೃಜನಾತ್ಮಕ ಕಲೆಯಲ್ಲಿ – ಪ್ರಥಮ, ಸಿಂಚನಾ ಟಿ. – (ಉರಿಮಜಲು ಬಾಲಸುಬ್ರಹ್ಮಣ್ಯ ಭಟ್ ಮತ್ತು ರೇಶ್ಮಾದಂಪತಿಗಳ ಪುತ್ರಿ), ಸೃಜನಾತ್ಮಕ ಬರವಣಿಗೆಯಲ್ಲಿ -ಪ್ರಥಮ, […]

ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ - ಪ್ರಥಮ

ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ – ಪ್ರಥಮ

Tuesday, January 3rd, 2017

ಶಾಂತಿವನ ಟ್ರಸ್ಟ್ ರಿ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶ್ರೀ ಕ್ಷೇತ್ರ ಧರ್ಮಸ್ಥಳ ಇವರು ಧರ್ಮಸ್ಥಳದಲ್ಲಿ ನಡೆಸಿದ ’ಜ್ಞಾನ ಸುಧಾ’ ಪುಸ್ತಕ ಆಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿರಾಮ್ ಪ್ರಸಾದ್ (ಕೆ.ಮಲ್ಲೇಶ್‌ಕುಮಾರ್ ಮತ್ತು ಅನುರಾಧ ಕೆ. ದಂಪತಿಗಳ ಪುತ್ರ) ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರಿಗೆ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಇವರು ತರಬೇತಿ ನೀಡಿರುತ್ತಾರೆ.

Vivekotsava - Media Report

Vivekotsava – Media Report

Saturday, December 24th, 2016
ವಿವೇಕೋತ್ಸವ 2016

ವಿವೇಕೋತ್ಸವ 2016

Wednesday, December 14th, 2016
ಕರಾಟೆ - ಶಾಲೆಯ ವಿದ್ಯಾರ್ಥಿಗಳು ಎಸ್.ಜಿ.ಎಫ್.ಐ. ಗೆ ಆಯ್ಕೆ

ಕರಾಟೆ – ಶಾಲೆಯ ವಿದ್ಯಾರ್ಥಿಗಳು ಎಸ್.ಜಿ.ಎಫ್.ಐ. ಗೆ ಆಯ್ಕೆ

Monday, December 12th, 2016

ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಶರ್ಮ (ಸಾಲ್ಮರ ರಾಜೇಶ್ ಶರ್ಮ ಮತ್ತು ಸೀಮಾ ದಂಪತಿಗಳ ಪುತ್ರ) 17ರ ವಯೋಮಾನದ ವಿಭಾಗದ 45 ಕೆ.ಜಿ. ಕುಮಿಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ ವಿಘ್ನೇಶ್ ಆರ್. (ಬಪ್ಪಳಿಗೆ ರಾಮಕೃಷ್ಣ ಹಾಗೂ ಜಯಲಕ್ಷ್ಮೀ ದಂಪತಿಗಳ ಪುತ್ರ) 17 ರ ವಯೋಮಾನದ ವಿಭಾಗದ 60  ಕೆ.ಜಿ. ಕುಮಿಟೆ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾರೆ. ಇವರಲ್ಲಿ ಸಾತ್ವಿಕ್ ಶರ್ಮ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್ […]

ಡಿ.15 ರಂದು ವಿವೇಕೋತ್ಸವ 2016

ಡಿ.15 ರಂದು ವಿವೇಕೋತ್ಸವ 2016

Monday, December 12th, 2016
ಕ್ರೀಡಾಬದ್ದತೆ ಆರೋಗ್ಯಪೂರ್ಣ ಬದುಕಿಗೆ ಪೂರಕ - ಬಿ.ಕೆ ಮಾಧವ

ಕ್ರೀಡಾಬದ್ದತೆ ಆರೋಗ್ಯಪೂರ್ಣ ಬದುಕಿಗೆ ಪೂರಕ – ಬಿ.ಕೆ ಮಾಧವ

Tuesday, December 6th, 2016

ಎಳವೆಯಿಂದಲೇ ನಿರ್ದಿಷ್ಟ ಕ್ರೀಡಾಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರಿಂದ ಬದ್ಧತೆ, ಸಮಯಪಾಲನೆ, ಆರೋಗ್ಯವಂತ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದು ನಿವೃತ್ತ ಯುವಜನ ಮತ್ತು ಸೇವಾ ಕ್ರೀಡಾಧಿಕಾರಿಯಾದ ಶ್ರೀ.ಬಿ.ಕೆ ಮಾಧವ ಇವರು ನುಡಿದರು. ಇವರು ವಿವೇಕಾನಂದ ಕನ್ನಡ ಶಾಲೆಯ ಶ್ರೀಡಾಕೂಟದ ಉದ್ಫಾಟಕರಾಗಿ ಆಗಮಿಸಿ ಕ್ರೀಡಾಕೂಟಕ್ಕೆ ಉದ್ಫಾಟಕರಾಗಿ ಆಗಮಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವಂದನಾ ಸ್ವೀಕಾರ ಮಾಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಬಾಲಚಂದ್ರ ಬಾರ್ತಿಕುಮೇರು ಇವರು ಈ ಶಾಲೆಯ ಕ್ರೀಡಾಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟಗಳಲ್ಲಿ ಸಾಧನೆಗೈದು ಗುರುತಿಸಿಕೊಂಡಿರುವುದು ನಮಗೆಲ್ಲರಿಗೂ […]

ಕುಶಲತೆ ಮತ್ತು ಪರಿಶ್ರಮದ ಕೆಲಸ ಅಗತ್ಯ - ನಿಖಿಲ ಸುಮಾ

ಕುಶಲತೆ ಮತ್ತು ಪರಿಶ್ರಮದ ಕೆಲಸ ಅಗತ್ಯ – ನಿಖಿಲ ಸುಮಾ

Friday, December 2nd, 2016

ಸಮಾಜದಲ್ಲಿ ಇತರರು ತಮ್ಮನ್ನು ಗುರುತಿಸುವಂತಾಗಲು ವಿದ್ಯಾರ್ಥಿಗಳು ಕುಶಲತೆ ಮತ್ತು ಪರಿಶ್ರಮವೆರಡನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಸ್ತುತ ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿನಿ ಕು. ನಿಖಿಲ ಸುಮ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ’ಪ್ರತಿಭಾ ಪುರಸ್ಕಾರ’ ಸಮಾರಂಭದಲ್ಲಿ ಮುಖ್ಯಾತಿಥಿಯಾಗಿ ಆಗಮಿಸಿ ಮಾತನಾಡಿದರು. ಇನ್ನೊರ್ವ ಮುಖ್ಯ ಅತಿಥಿಯಾದ ದ.ಕ ಜಿಲ್ಲಾ ಯುವಜನ ಒಕ್ಕೂಟದ ಸ್ಥಾಪಕಾಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಮಾತನಾಡುತ್ತಾ ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳಿಂದ ಸಾಧಕರಿಗೆ ವೇದಿಕೆ […]

ಡಿ. 15 : ವಿವೇಕೋತ್ಸವ 2016

ಡಿ. 15 : ವಿವೇಕೋತ್ಸವ 2016

Friday, December 2nd, 2016
ಡಿ. 2 - ಪ್ರತಿಭಾ ಪುರಸ್ಕಾರ

ಡಿ. 2 – ಪ್ರತಿಭಾ ಪುರಸ್ಕಾರ

Friday, December 2nd, 2016
ವಿವೇಕ ಉದ್ಯೋಗ ಮೇಳ - 2017

ವಿವೇಕ ಉದ್ಯೋಗ ಮೇಳ – 2017

Friday, December 2nd, 2016

ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಇದೇ ಪ್ರಥಮ ಬಾರಿಗೆ ನೆಹರು ನಗರದ ತನ್ನ ವಿಶಾಲ ಕ್ಯಾಂಪಸ್‌ನಲ್ಲಿ ವಿವೇಕ ಉದ್ಯೋಗ ಮೇಳ 2017ನ್ನು ಆಯೋಜಿಸಿದೆ. ಇದರಲ್ಲಿ 100 ಕ್ಕೂ ಹೆಚ್ಚು ಪ್ರತಿಷ್ಠಿತ ಉದ್ಯೋಗ ಸಂಸ್ಥೆಗಳು ಭಾಗವಹಿಸಲಿವೆ. ಉದ್ಯೋಗಾಕಾಂಕ್ಷಿಗಳ ನೋಂದಣಿ ಕಛೇರಿಯು ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ದಿನಾಂಕ 3-12-2017 ನೇ ಶನಿವಾರದಂದು ಅಪರಾಹ್ನ 2.30ಕ್ಕೆ ಉದ್ಫಾಟನೆಗೊಳ್ಳಲಿದೆ. ಉದ್ಯೋಗಾಕಾಂಕ್ಷಿಗಳು ತಮ್ಮ ಸೂಕ್ತ ದಾಖಲೆ ಪತ್ರಗಳೊಂದಿಗೆ ಶನಿವಾರ ಅಪರಾಹ್ನ 2.30 ಕ್ಕೆ ಶಾಲಾ ಆವರಣದಲ್ಲಿ ಉಪಸ್ಥಿತರಿರಬೇಕಾಗಿ ವಿನಂತಿ.

ಮಂಗಳೂರಿನಲ್ಲಿ ಯಕ್ಷ ಚಿಣ್ಣರ ಬಳಗ

ಮಂಗಳೂರಿನಲ್ಲಿ ಯಕ್ಷ ಚಿಣ್ಣರ ಬಳಗ

Friday, November 25th, 2016

ಯಕ್ಷ ಚಿಣ್ಣರ ಬಳಗ ತೆಂಕಿಲ ಪುತ್ತೂರು ಇಲ್ಲಿನ ಯಕ್ಷಗಾನ ತಂಡವು ಮಂಗಳೂರಿನ ಬೊಳಾರಿನ ಸಿಟಿ ಬೀಚ್‌ನಲ್ಲಿ ಭಾರತೀಯ ನೌಕದಳದ ನಿವೃತ್ತ ಯೋಧರ ಸಂಘದ ಕಾರ್ಯಕ್ರಮದಲ್ಲಿ ’ಮಹಿಷ ಮರ್ಧಿನಿ’ ಎಂಬ ಪುಣ್ಯಭಾಗವನ್ನು ಆಡಿ ತೋರಿಸಿದರು. ತಂಡದ ನಿರ್ದೇಶಕರಾದ ಶ್ರೀ ಚಂದ್ರಶೇಖರ ಸುಳ್ಯಪದವು ಮತ್ತು ನಾಟ್ಯಗುರು ಶ್ರೀ ಬಾಲಕೃಷ್ಣ ಪೂಜಾರಿ ಉಡ್ಡಂಗಳರವರು ಸಹಕರಿಸಿದರು.

Highslide for Wordpress Plugin