ವಿವೇಕಾನಂದರ ಆದರ್ಶಗಳು ನಮ್ಮ ಜೀವನಕ್ಕೆ ದಾರಿದೀಪವಾಗಿದೆ - ಶ್ರೀ ಅಶೋಕ್ ಕುಂಬ್ಳೆ

ವಿವೇಕಾನಂದರ ಆದರ್ಶಗಳು ನಮ್ಮ ಜೀವನಕ್ಕೆ ದಾರಿದೀಪವಾಗಿದೆ – ಶ್ರೀ ಅಶೋಕ್ ಕುಂಬ್ಳೆ

Friday, January 17th, 2025

ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳಿಗೆ ಪೂರಕವಾಗಿ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ವಿವೇಕಾನಂದರ ಆದರ್ಶಗಳನ್ನು ಪಾಲಿಸುತ್ತಾ ಸಾಧನೆಗೈಯಬೇಕೆಂದು ಶಾಲಾ ಆಡಳಿತಮಂಡಳಿಯ ಕೋಶಾಧಿಕಾರಿಯಾದ ಶ್ರೀಯುತ ಅಶೋಕ್ ಕುಂಬ್ಳೆ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ವಿವೇಕಾನಂದ ಜಯಂತಿ ಮತ್ತು ಮಕರ ಸಂಕ್ರಾ0ತಿ ಆಚರಣೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಅಭ್ಯಾಗತರಾಗಿ ಆಗಮಿಸಿದ ಶಾಲಾ ಪೋಷಕರಾದ ಶ್ರೀಮತಿ ಗೀತಾ ರೈ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ವಿದ್ಯಾರ್ಥಿ ಧನುಷ್.ಡಿ.ಜಿ ವಿವೇಕಾನಂದರ ಚಿಕಾಗೋ ಭಾಷಣದ ಸಾರಾಂಶವನ್ನು ತಿಳಿಸಿದರು. ಕೌಶಿಕ್ ಮಕರ ಸಂಕ್ರಾ0ತಿಯ ವಿಶೇಷತೆಯನ್ನು […]

ಮಕರ ಸಂಕ್ರಾಂತಿ ಹಬ್ಬವು ಸಮೃದ್ಧಿಯ ಪ್ರತೀಕವಾಗಿದೆ – ವನಿತಾ ಸುರೇಶ್

ಮಕರ ಸಂಕ್ರಾಂತಿ ಹಬ್ಬವು ಸಮೃದ್ಧಿಯ ಪ್ರತೀಕವಾಗಿದೆ – ವನಿತಾ ಸುರೇಶ್

Friday, January 17th, 2025

ಸೂರ್ಯನ ಪಥವು ದಕ್ಷಿಣಾಯನದಿಂದ ಉತ್ತರಾಯಣದ ಕಡೆಗೆ ಚಲಿಸುತ್ತದೆ. ಅಂತೆಯೇ ನಮ್ಮಲ್ಲಿ ಉತ್ತಮ ಗುಣಗಳನ್ನು ಬೆಳೆಸಿಕೊಂಡು ನಮ್ಮ ಪಥವನ್ನು ಸಾಧನೆಯ ಕಡೆಗೆ ಚಲಿಸಬೇಕು ಎಂದು ಶಾಲಾ ಅನ್ನಪೂರ್ಣಾ ಕಾರ್ಯಕಾರಿಣಿ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ವನಿತಾ ಸುರೇಶ್ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಮಕರ ಸಂಕ್ರಾಂತಿ ಮತ್ತು ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಈ ಮೇಲಿನ ಮಾತುಗಳನ್ನಾಡಿದರು. ಅಭ್ಯಾಗತರಾಗಿ ಆಗಮಿಸಿದ ಶಾಲಾ ಪೋಷಕರಾದ ಶ್ರೀಮತಿ ಸವಿತಾ ಬಹುಮಾನ ವಿತರಿಸಿದರು. ಶಾಲಾ ವಿದ್ಯಾರ್ಥಿಯಾದ ಧನುಷ್ ಡಿ.ಜಿ ವಿವೇಕಾನಂದರ ಆದರ್ಶದ ಕುರಿತು ಮಾತನಾಡಿದರು. […]

ಸಂಕ್ರಾಂತಿ ಹಿಂದೂಗಳ ಪವಿತ್ರ ಹಬ್ಬ - ಶ್ರೀಮತಿ ಕ್ಷಮಾ ಬಿ ಎಸ್

ಸಂಕ್ರಾಂತಿ ಹಿಂದೂಗಳ ಪವಿತ್ರ ಹಬ್ಬ – ಶ್ರೀಮತಿ ಕ್ಷಮಾ ಬಿ ಎಸ್

Friday, January 17th, 2025

ಸಮೃದ್ಧಿಯ ಸಂಕೇತವಾದ ಸಂಕ್ರಾಂತಿ ಹಬ್ಬವು ಎಳ್ಳು -ಬೆಲ್ಲದ ಸಮ್ಮಿಶ್ರಣದಂತೆ ಎಲ್ಲರ ಬಾಳಿನಲ್ಲೂ ಹೊಸ ಚೈತನ್ಯವನ್ನು ಮೂಡಿಸಲಿ ಎಂದು ಶಾಲಾ ಮಾತೃಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕ್ಷಮಾ ಬಿ.ಎಸ್ ಇವರು  ಶಾಲೆಯಲ್ಲಿ ನಡೆದ ಮಕರ ಸಂಕ್ರಾಂತಿ ಆಚರಣೆಯ ಸಂದರ್ಭದಲ್ಲಿ ಅಧ್ಯಕ್ಷೀಯ ನೆಲೆಯಲ್ಲಿಈ ಮೇಲಿನ ಮಾತನ್ನಾಡಿದರು. ಅಭ್ಯಾಗತರಾಗಿ ಆಗಮಿಸಿದ ಶಾಲಾ ಪೋಷಕರಾದ ಶ್ರೀಮತಿ ದೀಪಿಕಾರವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು. ಪೂರ್ವಪ್ರಾಥಮಿಕ ತರಗತಿಯ ವಿದ್ಯಾರ್ಥಿಗಳು ವಿವೇಕಾನಂದರ ಉಡುಗೆ – ತೊಡುಗೆಯಲ್ಲಿ ಸಂಭ್ರಮಿಸಿದರು. ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ […]

ಗಾನ-ನೃತ್ಯ-ಯಕ್ಷ ಸಂಭ್ರಮ – ೨೦೨೫ ಪೋಷಕರ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಗಾನ-ನೃತ್ಯ-ಯಕ್ಷ ಸಂಭ್ರಮ – ೨೦೨೫ ಪೋಷಕರ ಸಮಿತಿಯ ಪದಾಧಿಕಾರಿಗಳ ಆಯ್ಕೆ

Thursday, January 16th, 2025

                         ಶೃತಿ ವಿಸ್ಮಿತ್                ಹರೀಶ್ ಆಚಾರ್ಯ              ಶ್ರೀಮತಿ ಗುಲಾಬಿ ಶಾಲೆಯಲ್ಲಿ ೨೦೨೪-೨೫ನೇ ಸಾಲಿನ ಗಾನ-ನೃತ್ಯ-ಯಕ್ಷ ಸಂಭ್ರಮದ ಪೋಷಕರ ಸಭೆಯಲ್ಲಿ ಈ ವರ್ಷದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಪ್ರಸಕ್ತ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಶೃತಿ ವಿಸ್ಮಿತ್, ಕಾರ್ಯದರ್ಶಿಗಳಾಗಿ ಶ್ರೀ ಹರೀಶ್ ಆಚಾರ್ಯ, ಉಪಕಾರ್ಯದರ್ಶಿಯಾಗಿ […]

ಪ್ರತಿಭಾ ಪುರಸ್ಕಾರ

ಪ್ರತಿಭಾ ಪುರಸ್ಕಾರ

Thursday, December 26th, 2024

“ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿಯೂ ಪರಿಶ್ರಮದಿಂದ ಉತ್ಕೃಷ್ಟ  ಸಾಧನೆ ಮಾಡಬೇಕು. ಆ ಮೂಲಕ ಗುರುವನ್ನೇ ಮೀರಿಸಿದ ಶಿಷ್ಯ ಎಂದು ಕಲಿಸಿದ ಗುರುಗಳು ಹೆಮ್ಮೆ ಪಡುವಂತಾಗಬೇಕು” ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರರವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ‘ಪ್ರತಿಭಾ ಪುರಸ್ಕಾರ’ ೨ನೇ ಅವಧಿಯ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಕೋಶಾಧಿಕಾರಿಗಳಾದ ಶ್ರೀ ಅಶೋಕ್ ಕುಂಬ್ಳೆ ಶುಭ ಹಾರೈಸಿದರು. ಅಭ್ಯಾಗತರಾಗಿ ಆಗಮಿಸಿದ್ದ ಅಡ್ವಾನ್ಸ್ ಟ್ಯಾಕ್ಸ್ ಅನಾಲಿಸ್ಟ್ […]

‘ಪ್ರತಿಭಾ ಪುರಸ್ಕಾರ’

‘ಪ್ರತಿಭಾ ಪುರಸ್ಕಾರ’

Thursday, December 26th, 2024

ಹಿರಿಯರ ಮಾರ್ಗದರ್ಶನ ಮಕ್ಕಳ ಸುಗಮ ಜೀವನಕ್ಕೆ ಆಧಾರ – ಶ್ರೀಮತಿ ವೀಣಾ ನಾಗೇಶ್ ತಂತ್ರಿ ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳಿಸುವುದರ ಜೊತೆಗೆ ಶೈಕ್ಷಣಿಕವಾಗಿಯೂ ಮುತುವರ್ಜಿವಹಿಸಿ ಉತ್ತಮ ಫಲಿತಾಂಶ ಪಡೆದು ಶಾಲೆಗೂ ಹೆತ್ತವರಿಗೂ ಕೀರ್ತಿ ತರುವಂತಾಗಬೇಕು. ಹಿರಿಯರು ನೀಡುವ ಮಾರ್ಗದರ್ಶನ ಸಂಸ್ಕಾರದಂತೆ ನಡೆದಾಗ ಜೀವನ ಸುಗಮವಾಗುತ್ತದೆ ಎಂದು ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ವೀಣಾ ನಾಗೇಶ್ ತಂತ್ರಿ ಅವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ‘ಪ್ರತಿಭಾ ಪುರಸ್ಕಾರ’ ಮೊದಲ ಅವಧಿಯ ಕಾರ್ಯಕ್ರಮವನ್ನು ದೀಪ […]

ಡ್ರಾಯಿಂಗ್ ಗ್ರೇಡ್ ಪರೀಕ್ಷೆ- ಶೇ.100 ಫಲಿತಾಂಶ.

ಡ್ರಾಯಿಂಗ್ ಗ್ರೇಡ್ ಪರೀಕ್ಷೆ- ಶೇ.100 ಫಲಿತಾಂಶ.

Thursday, December 26th, 2024

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ  ಶಾಲೆಗೆ ಶೇ.100 ಬಂದಿರುತ್ತದೆ. ಶಾಲೆಯ ಒಟ್ಟು 40 ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿದ್ದಾರೆ. ಹೈಯರ್ ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 15 ವಿದ್ಯಾರ್ಥಿಗಳು ಅತ್ಯುತ್ತಮ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ, 05 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಲೋವರ್ ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಕು. ಸಾಯೀಶ್ವರಿ ಡಿ ಇವಳು ವಿಶಿಷ್ಠ ಶ್ರೇಣಿಯೊಂದಿಗೆ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು […]

ವಿಕಸಿತ ಸಂಭ್ರಮ -ವಾರ್ಷಿಕ ಕ್ರೀಡಾಕೂಟ

ವಿಕಸಿತ ಸಂಭ್ರಮ -ವಾರ್ಷಿಕ ಕ್ರೀಡಾಕೂಟ

Tuesday, December 24th, 2024

  ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ವಿಕಸಿತ ಸಂಭ್ರಮ ನಡೆಯಿತು. ಸ.ಹಿ.ಪ್ರಾ ಉನ್ನತೀಕರಿಸಿದ ಶಾಲೆ, ಅನಂತಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ಸುನೀತಾ ರೈ ಧ್ಜಜಾರೋಹಣಗೈದು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಲೋಕೇಶ್ ಎಸ್ ಆರ್ ಉದ್ಘಾಟಿಸಿ ಉತ್ತಮ ಆಹಾರಾಭ್ಯಾಸ, ಕ್ರೀಡಾ ತರಬೇತಿ ಮತ್ತು ಪ್ರೇರಣೆಯಿಂದಾಗಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ತಮ್ಮ ಸಂಸ್ಥೆ ಗುರುತಿಸುವಂತಾಗಿದೆ ಅದೇ ರೀತಿ ಶೈಕ್ಷಣಿಕವಾಗಿಯೂ ಉತ್ತಮ ಫಲಿತಾಂಶ ಬರುವಂತೆ ಪ್ರಯತ್ನಿಸಿ ಎಂದು ತಿಳಿಸಿದರು. […]

‘ಸಾಂಸ್ಕೃತಿಕ ಸಮನ್ವಯ’ ವರ್ಷದ ಹಬ್ಬ  - 2024

‘ಸಾಂಸ್ಕೃತಿಕ ಸಮನ್ವಯ’ ವರ್ಷದ ಹಬ್ಬ – 2024

Thursday, December 12th, 2024

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಾಂಸ್ಕೃತಿಕ ಸಮನ್ವಯ ‘ವರ್ಷದ ಹಬ್ಬ-2024’ ನಡೆಯಿತು. ಸ್ವಾಮಿ ವಿವೇಕಾನಂದರ ಬದುಕು ನಮಗೆ ಆದರ್ಶವಾಗಲಿ, ಸಾಮಾಜಿಕ ಕೆಡುಕುಗಳನ್ನು ಸಂಹರಿಸುವ ಶ್ರೀಕೃಷ್ಣರಾಗೋಣ – ಕಿಶೋರ್ ಕುಮಾರ್ ಬೊಟ್ಯಾಡಿ – ಗೌರವಾರ್ಪಣೆ ಸ್ವೀಕರಿಸಿ ಮಾತನಾಡಿದ ಕಾರ್ಯಕ್ರಮದ ಮುಖ್ಯ ಅಭ್ಯಾಗತರಲ್ಲಿ ಒಬ್ಬರಾಗಿದ್ದ, ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ ಅವರು, ಪುತ್ತೂರು ಮಹಾಲಿಂಗೇಶ್ವರ ದೇವರ ಕೃಪಾ ಕಟಾಕ್ಷ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಶೀರ್ವಾದ ಮತ್ತು ನಿಮ್ಮಲ್ಲರ ಪ್ರೀತಿ – ಅಭಿಮಾನದ ಬಲದಿಂದ ಇಂದು ನಾನ್ನು ಎಂಎಲ್ಸಿಯಾಗಿ […]

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ – ದ್ವಿತೀಯ

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ – ದ್ವಿತೀಯ

Friday, December 6th, 2024

ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮತ್ತು ಹೋಲಿ ರಿಡೀಮರ್ ಶಿಕ್ಷಣ ಸಂಸ್ಥೆಗಳು ಬೆಳ್ತಂಗಡಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿಯಲ್ಲಿ  ಶಾಲೆಯ ಶ್ರೀಕೃಷ್ಣ ಬಿ( ಶ್ರೀ ವೆಂಕಟೇಶ.ಬಿ ಮತ್ತು ಶ್ರೀಮತಿ ಮಂಗಳ ಗೌರಿ ದಂಪತಿಗಳ ಪುತ್ರ) -ಹಿರಿಯ ಪ್ರಾಥಮಿಕ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ.

Highslide for Wordpress Plugin