ಕಬಡ್ಡಿ ತಾಲೂಕು ಮಟ್ಟಕ್ಕೆ ಆಯ್ಕೆ

ಕಬಡ್ಡಿ ತಾಲೂಕು ಮಟ್ಟಕ್ಕೆ ಆಯ್ಕೆ

Tuesday, January 17th, 2023

ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು, ಪುತ್ತೂರು. ಇಲ್ಲಿ ನಡೆದ ವಲಯ ಮಟ್ಟದ ಬಾಲಕ- ಬಾಲಕಿಯರ(ಪ್ರಾಥಮಿಕ) ಕಬಡ್ಡಿ ಪಂದ್ಯಾಟದಲ್ಲಿ ನಮ್ಮ ಶಾಲಾ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತದೆ.

ವಿವೇಕ ಜಯಂತಿ ಆಚರಣೆ

ವಿವೇಕ ಜಯಂತಿ ಆಚರಣೆ

Tuesday, January 17th, 2023

” ಭಾರತದ ಹಿರಿಮೆ- ಗರಿಮೆಯನ್ನು ಜಗತ್ತಿನಾತ್ಯಂತ ಸಾರಿದ ಸ್ವಾಮಿ ವಿವೇಕಾನಂದರ ಜನುಮ ದಿನವನ್ನು ರಾಷ್ಟ್ರೀಯ ಯುವದಿನವನ್ನಾಗಿ ಆಚರಿಸಲು ರಾಷ್ಟ್ರದಾತ್ಯಂತ ಕರೆಕೊಟ್ಟಿರುವ ಹಿನ್ನೆಲೆಯನ್ನು ವಿದ್ಯಾರ್ಥಿ ದಿಶೆಯಿಂದ ನಾವೆಲ್ಲರೂ ತಿಳಿದುಕೊಳ್ಳಬೇಕಾಗಿದೆ” – ಶ್ರೀ ಹರಿಪ್ರಸಾದ್, ತೃತೀಯ ಬಿಎ ವಿದ್ಯಾರ್ಥಿ, ವಿವೇಕಾನಂದ ಪದವಿ ಕಾಲೇಜು ನೆಹರುನಗರ ಪುತ್ತೂರು.     ದಿನಾಂಕ 12.01.2023ರಂದು ನಮ್ಮ ಶಾಲೆಯಲ್ಲಿ ಜರುಗಿದ ವಿವೇಕಾನಂದ ಜಯಂತಿಗೆ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಹರಿಪ್ರಸಾದ್ ಇವರು ಸ್ವಾಮೀಜಿಯವರ ದೃಢಸಂಕಲ್ಪದ ದೃಷ್ಟಾಂತಗಳು ನಮ್ಮಲ್ಲಿ ಭಾರತೀಯತೆಯ ದೃಷ್ಟಿಕೋನ ಬೆಳೆಸಿಕೊಳ್ಳಲು ಸಹಕಾರಿಯಾಗುವ ಬಗೆಯನ್ನು ತಿಳಿಸಿದರು. […]

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Wednesday, January 11th, 2023

ಕ್ರೀಡಾ ಭಾರತಿ ಮಂಗಳೂರು ವಿಭಾಗದ ವತಿಯಿಂದ ಮಡಿಕೇರಿಯ ಕುಶಾಲನಗರದ ರೈತಭವನದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಯಾದ ಲಿತಿನ್ ಎಸ್ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಕಬಡ್ಡಿ - ರಾಜ್ಯ ಮಟ್ಟಕ್ಕೆ ಆಯ್ಕೆ

ಕಬಡ್ಡಿ – ರಾಜ್ಯ ಮಟ್ಟಕ್ಕೆ ಆಯ್ಕೆ

Wednesday, January 11th, 2023

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಾಥಮಿಕ ಬಾಲಕಿಯರು, ಪ್ರೌಢಶಾಲಾ ಬಾಲಕರು ಮತ್ತು ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಬಾಲಕಿಯರ ಖೋ-ಖೋ ತಂಡ

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಬಾಲಕಿಯರ ಖೋ-ಖೋ ತಂಡ

Wednesday, January 11th, 2023

ಶ್ರೀದೇವಿ ಶಾಲೆ ಪುಣಚದಲ್ಲಿ ನಡೆದ ವಿದ್ಯಾಭಾರತಿಯ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಾಲಾ ಬಾಲಕಿಯರ ತಂಡ.

ಶ್ರೀಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಇಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಸಮನ್ವಯ

ಶ್ರೀಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಇಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಸಮನ್ವಯ

Tuesday, January 10th, 2023

ಶ್ರೀಕೃಷ್ಣ ಭಜನಾ ಮಂದಿರ ಕೌಡಿಚ್ಚಾರು ಇಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸಮನ್ವಯ ಕಾರ್ಯಕ್ರಮ ನಡೆಯಿತು. ಇದು ಭಕ್ತ ಬಾಂಧವರ ಮನಸ್ಸಿಗೂ ಮುದವನ್ನು ನೀಡಿರುತ್ತದೆ. ತನ್ಮೂಲಕ ಮಕ್ಕಳು ಶ್ರೀಕೃಷ್ಣನ ಕೃಪೆಗೆ ಪಾತ್ರರಾಗಿ ಕೃತಾರ್ಥರಾಗಿರುತ್ತಾರೆ.

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮೂಲ ವಿಜ್ಞಾನದ ಪ್ರಾಯೋಗಿಕ ಕಾರ್ಯಾಗಾರ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮೂಲ ವಿಜ್ಞಾನದ ಪ್ರಾಯೋಗಿಕ ಕಾರ್ಯಾಗಾರ

Tuesday, January 10th, 2023

ವಿವೇಕಾನಂದ ಪದವಿ ಕಾಲೇಜು ವತಿಯಿಂದ ವಿಜ್ಞಾನ ಹಾಗೂ ಗಣಿತ ಪಠ್ಯ ವಿಷಯಗಳ ಸುಲಭ ಹಾಗೂ ಪರಿಣಾಮಕಾರಿ ಕಲಿಕೆಗೆ ಸಂಬಂಧಿಸಿ ಪ್ರಾಯೋಗಿಕ ಕಾರ್ಯಗಾರ ನಡೆಯಿತು. ವಿವೇಕಾನಂದ ಪದವಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಮಕ್ಕಳು ಅತ್ಯುತ್ತಮ ರೀತಿಯಲ್ಲಿ ಮಕ್ಕಳಿಗೆ ತಿಳಿಸಿಕೊಟ್ಟರು. ಪರೀಕ್ಷಾ ತಯಾರಿ ಹಾಗೂ ತಿಳುವಳಿಕೆಯ ದೃಷ್ಟಿಯಿಂದ ಎಲ್ಲಾ 10ನೇ ತರಗತಿ ವಿದ್ಯಾರ್ಥಿಗಳಿಗೆ ಕಾರ್ಯಗಾರವು ತುಂಬಾ ಸಹಕಾರಿಯಾಗಿತ್ತು. ನಮ್ಮ ಶಾಲಾ ವಿಜ್ಞಾನ ಶಿಕ್ಷಕರುಗಳಾದ ಶ್ರೀಮತಿ ಪೂರ್ಣಿಮ, ಶ್ರೀಮತಿ ಶ್ವೇತಾ, ಶ್ರೀಮತಿ ಪುಷ್ಪಾವತಿ ಭಾಗವಹಿಸಿದರು.

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಗಣಿತ ಕಾರ್ಯಗಾರ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಗಣಿತ ಕಾರ್ಯಗಾರ

Tuesday, January 10th, 2023

ಶಾಲಾ ಹತ್ತನೇ ತರಗತಿಯ ಮಕ್ಕಳ ಗಣಿತ ಕಲಿಕೆಗೆ ಸಂಬಂಧಿಸಿದಂತೆ ದಿನಾಂಕ 07-01-2023 ಮತ್ತು 08-01-2023ರಂದು ಪ್ರಾಯೋಗಿಕ ಗಣಿತ ಕಾರ್ಯಗಾರ ನಡೆಯಿತು. ಹತ್ತನೇ ತರಗತಿ ಪಠ್ಯಪುಸ್ತಕ ರಚನಾ ಸಮಿತಿಯ ಸದಸ್ಯರಾದ ಶ್ರೀ ಟಿ. ಎನ್ ಪ್ರಸನ್ನಮೂರ್ತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಮಕ್ಕಳ ಗಣಿತ ಪಠ್ಯದ ಕಠಿಣ ಕಲಿಕಾಂಶಗಳನ್ನು ಸುಲಭ ಹಾಗೂ ಸರಳ ರೀತಿಯಲ್ಲಿ ಕಲಿಯುವ ನಿಟ್ಟಿನಲ್ಲಿ ಪರಿಣಾಮಕಾರಿಯಾದ ಪ್ರಯೋಗಗಳನ್ನು ಹಾಗೂ ಪ್ರಾತ್ಯಕ್ಷಿಕೆಗಳನ್ನು ಪ್ರಸ್ತುತಪಡಿಸುತ್ತಾ ಮಕ್ಕಳ ಗಣಿತ ಸಂಬಂಧಿ ಸಂಶಯಗಳಿಗೆ ಉತ್ತರಿಸಿದರು. ಮಕ್ಕಳ ಕ್ರಿಯಾತ್ಮಕ ಭಾಗವಹಿಸುವಿಕೆ ಹಾಗೂ ಅವರ ಆಸಕ್ತಿ ,ಪ್ರತಿಭೆಗಳನ್ನು […]

ಕಬಡ್ಡಿ - ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಬಡ್ಡಿ – ರಾಷ್ಟ್ರ ಮಟ್ಟಕ್ಕೆ ಆಯ್ಕೆ

Tuesday, January 3rd, 2023

                                                        ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ) ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ). ಉಡುಪಿ 3ನೇ ರಾಜ್ಯ ಸಬ್ ಜೂನಿಯರ್ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ […]

10ನೇ ತರಗತಿಯ ವಿದ್ಯಾರ್ಥಿ ಕೃಷ್ಣ.ಜಿ ಇವರು ಗುಂಡುಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

10ನೇ ತರಗತಿಯ ವಿದ್ಯಾರ್ಥಿ ಕೃಷ್ಣ.ಜಿ ಇವರು ಗುಂಡುಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Thursday, November 17th, 2022

                            ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಗಳು, ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆ ಕಡಬ ಇದರ ಸಹಯೋಗದಲ್ಲಿ ನಡೆದ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ೧೦ನೇ ತರಗತಿಯ ವಿದ್ಯಾರ್ಥಿ ಕೃಷ್ಣ […]

Highslide for Wordpress Plugin