ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅನುರಣನ ಪ್ರತಿಭೋತ್ಸವ 2022

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅನುರಣನ ಪ್ರತಿಭೋತ್ಸವ 2022

Thursday, November 17th, 2022

ಅನುರಣನ ಪ್ರತಿಭೋತ್ಸವ 2022-23 ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತಂತಹ ಮಕ್ಕಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಮುಖ್ಯ ಪಾತ್ರ ವಹಿಸುತ್ತಾರೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಅನುರಣನ ಪ್ರತಿಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾದ ಶ್ರೀ ಸತೀಶ್ ರಾವ್ ನುಡಿದರು. ಶಾಲಾ ಪೋಷಕರಾದ ಶ್ರೀ ವಿಷ್ಣು ಭಟ್ ಪಾದೆ ಕಲ್ಲು ಮಾತನಾಡಿ ಗುರುಹಿರಿಯರ ಮಾರ್ಗದರ್ಶನದೊಂದಿಗೆ ಬದುಕುತ್ತಾ ಉತ್ತಮ ಕೆಲಸ ಕಾರ್ಯಗಳ ಸಫಲತೆಗೆ ಒಗ್ಗಟ್ಟಿನಲ್ಲಿ ಬಲವಿದ್ದರೆ ಮಾತ್ರ ಸಾಧ್ಯ ಎಂಬುದನ್ನು ಕಥೆಯ […]

ಪ್ರತಿಭಾ ಕಾರಂಜಿ 2022 ಜಿಲ್ಲಾಮಟ್ಟಕ್ಕೆ ಆಯ್ಕೆ.

ಪ್ರತಿಭಾ ಕಾರಂಜಿ 2022 ಜಿಲ್ಲಾಮಟ್ಟಕ್ಕೆ ಆಯ್ಕೆ.

Thursday, November 3rd, 2022

ವಿವೇಕಾನಂದ ಕನ್ನಡ ಶಾಲೆ ತೆಂಕಿಲ ಪುತ್ತೂರು ‘ಆಶುಭಾಷಣ’ – ಶ್ರೀ ಕೃಷ್ಣ ಪ್ರಥಮ’ ‘ಕ್ಲೇ ಮಾಡಲಿಂಗ್ ‘ – ಕಿಶಾನ್ ತೃತೀಯ ‘ಆಶುಭಾಷಣ’ – ಶಿವಾನಿ ರೈ ಪ್ರಥಮ ‘ಕಂಠಪಾಠ ‘ – ಶ್ರೀಶ ನಿದ್ವಣ್ಣಾಯ ಪ್ರಥಮ ‘ರಂಗೋಲಿ’ – ಕವನ ಪ್ರಥಮ , ‘ಭರತನಾಟ್ಯ’ – ಅವನಿ ಪ್ರಥಮ ,’ ‘ಸಂಸ್ಕೃತ ಭಾಷಣ’ – ಸಿಂಚನ ದ್ವಿತೀಯ, ‘ಚಿತ್ರಕಲೆ’ – ಅಗಮ್ಯ ದ್ವಿತೀಯ , ‘ಹಾಸ್ಯ’ –  ಭವಿಶ್ ತೃತೀಯ ಗುಂಪು ಸ್ಪರ್ಧೆ ‘ಕವಾಲಿ ‘ಅಮೃತ […]

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 'ನವದಂಪತಿ ಸಮಾವೇಶ'

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ನವದಂಪತಿ ಸಮಾವೇಶ’

Thursday, November 3rd, 2022

“ಕುಟುಂಬ ವ್ಯವಸ್ಥೆ ವ್ಯಕ್ತಿ ಬೆಳವಣಿಗೆಯಲ್ಲಿ ಮಹತ್ವಪೂರ್ಣ ಪಾತ್ರ ವಹಿಸುತ್ತದೆ ಇದರಲ್ಲೂ ಮದುವೆ ಎಂಬ ಪವಿತ್ರ ಬಾಂಧವ್ಯ ಭಾರತೀಯ ಕುಟುಂಬದ ಭದ್ರ ಬುನಾದಿಯಾಗಿದೆ” – ಸು.ರಾಮಣ್ಣ , ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ಕುಟುಂಬ ಪ್ರಬೋಧನ್ ಪುತ್ತೂರು’ ವತಿಯಿಂದ ನಡೆದ ನವದಂಪತಿ ಸಮಾವೇಶಕ್ಕೆ ಅಭ್ಯಾಗತರಾಗಿ ಆಗಮಿಸಿದ ಹಿರಿಯರಾದ ಸು.ರಾಮಣ್ಣ ಇವರು ‘ಪ್ರಕೃತಿಯ ಕೊಡುಗೆಗಳಲ್ಲಿ ಸಂಸ್ಕೃತಿಯನ್ನು ಪೋಷಿಸುತ್ತಾ ಸಮೃದ್ಧ ಜೀವನ ನಡೆಸುತ್ತಿರುವ ಕುಟುಂಬಗಳು ಭಾರತದ ಶಕ್ತಿ’ ಎಂದರು. ಕುಟುಂಬ ಪ್ರಬೋಧನ್ ನ […]

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ – ಕನ್ನಡ ರಾಜ್ಯೋತ್ಸವ ಆಚರಣೆ ೨೦೨೨. ರಂಜಿಸಿದ ಕಾವ್ಯ-ನಾಟ್ಯ-ರಂಗ-ಕಥಾ ಹಾಗೂ ಕವಿ-ಕಾವ್ಯ-ಕುಂಚ ಕಾರ್ಯಕ್ರಮಗಳು.

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ – ಕನ್ನಡ ರಾಜ್ಯೋತ್ಸವ ಆಚರಣೆ ೨೦೨೨. ರಂಜಿಸಿದ ಕಾವ್ಯ-ನಾಟ್ಯ-ರಂಗ-ಕಥಾ ಹಾಗೂ ಕವಿ-ಕಾವ್ಯ-ಕುಂಚ ಕಾರ್ಯಕ್ರಮಗಳು.

Thursday, November 3rd, 2022

          ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವೇಕಾನಂದ ಕನ್ನಡ ಶಾಲೆ ತೆಂಕಿಲದಲ್ಲಿ ಕಾವ್ಯ-ನಾಟ್ಯ-ರಂಗ-ಕಥಾ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ನೃತ್ಯ ಗುರು ವಿದುಷಿ ಮಂಜುಳಾ ಸುಬ್ರಹ್ಮಣ್ಯಂ ಅವರ ನಾಟ್ಯ ರಂಗ ಪುತ್ತೂರು ವತಿಯಿಂದ ಪ್ರಸ್ತುತಿಗೊಂಡ ಕಾರ್ಯಕ್ರಮದ ತಂಡದಲ್ಲಿ ರಚನಾ ನರಿಯೂರು, ಅನ್ನಪೂರ್ಣ ರಾವ್ ಹಾಗೂ ವಿನಿತಾ ಶೆಟ್ಟಿ ಸಾಥ್ ನೀಡಿದರು. ಜಿ. ಎಸ್. ಶಿವರುದ್ರಪ್ಪ ಅವರ ‘ಹಣತೆ ಹಚ್ಚುತ್ತೇವೆ’ ಕವನ ವಾಚನದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಹಳೆಗನ್ನಡ ಪದ್ಯ, ಸಾಹಿತಿ ಎಸ್. ದಿವಾಕರ ಅವರ […]

ಕಬಡ್ಡಿ ಪಂದ್ಯಾವಳಿ -ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಬಡ್ಡಿ ಪಂದ್ಯಾವಳಿ -ರಾಷ್ಟ್ರ ಮಟ್ಟಕ್ಕೆ ಆಯ್ಕೆ

Tuesday, September 13th, 2022

ವಿಜಯಪುರದ ಮುದ್ದೇಬಿಹಾಳದಲ್ಲಿ ನಡೆದ ಪ್ರಾಂತೀಯ ಮತ್ತು ಕ್ಷೇತ್ರಿಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು.  

ಕಬಡ್ಡಿ ಪಂದ್ಯಾಟ - ದ್ವಿತೀಯ ಸ್ಥಾನ

ಕಬಡ್ಡಿ ಪಂದ್ಯಾಟ – ದ್ವಿತೀಯ ಸ್ಥಾನ

Tuesday, September 13th, 2022

ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಲ್ನಾಡು, ಪುತ್ತೂರು. ಇಲ್ಲಿ ನಡೆದ ವಲಯ ಮಟ್ಟದ ಬಾಲಕ- ಬಾಲಕಿಯರ(ಪ್ರಾಥಮಿಕ) ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತದೆ.

ಕಬಡ್ಡಿ ಪಂದ್ಯಾಟ - ರಾಜ್ಯ ಮಟ್ಟಕ್ಕೆ ಆಯ್ಕೆ

ಕಬಡ್ಡಿ ಪಂದ್ಯಾಟ – ರಾಜ್ಯ ಮಟ್ಟಕ್ಕೆ ಆಯ್ಕೆ

Tuesday, September 13th, 2022

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಾಥಮಿಕ ಬಾಲಕಿಯರು, ಪ್ರೌಢಶಾಲಾ ಬಾಲಕರು ಮತ್ತು ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಖೋ-ಖೋ ಪಂದ್ಯಾಟ - ರಾಜ್ಯ ಮಟ್ಟಕ್ಕೆ ಆಯ್ಕೆ

ಖೋ-ಖೋ ಪಂದ್ಯಾಟ – ರಾಜ್ಯ ಮಟ್ಟಕ್ಕೆ ಆಯ್ಕೆ

Tuesday, September 13th, 2022

ಶ್ರೀದೇವಿ ಶಾಲೆ ಪುಣಚದಲ್ಲಿ ನಡೆದ ವಿದ್ಯಾಭಾರತಿಯ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಶಾಲಾ ಬಾಲಕಿಯರ ತಂಡ.

ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Tuesday, September 13th, 2022

ದಿವಂಗತ ಡಾ|ಕೆ.ಪಿ ಬಾಲಕೃಷ್ಣ ರೈ ಮಧುವನ ನೆಟ್ಟಣಿಗೆ ಇವರ ಸ್ಮರಣಾರ್ಥ ಸರ್ವೋದಯ ಪ್ರೌಢಶಾಲೆ ಸುಳ್ಯಪದವಿನಲ್ಲಿ ನಡೆದ ತಾಲೂಕು ಮಟ್ಟದ ಅಂತರ್ ಪ್ರೌಢಶಾಲಾ ದೇಶ ಭಕ್ತಿಗೀತೆ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಾದ ಅಗಮ್ಯ ತೃತೀಯ 1200  ರೂ ನಗದು ಮತ್ತು ಚಿನ್ಮಯಿ ಮಜಿ ಪ್ರೋತ್ಸಾಹಕ ಬಹುಮಾನ ರೂಪಾಯಿ 1000 ಪಡೆದಿರುತ್ತಾರೆ.

ಗಣಿತ-ಪ್ರಯೋಗಾತ್ಮಕ ಬೋಧನೆ ಕಾರ್ಯಾಗಾರ

ಗಣಿತ-ಪ್ರಯೋಗಾತ್ಮಕ ಬೋಧನೆ ಕಾರ್ಯಾಗಾರ

Tuesday, September 13th, 2022

ಗಣಿತ ಬೋಧನೆ ಪ್ರಯೋಗಾತ್ಮಕ ಹಾಗೂ ಚಟುವಟಿಕಾತ್ಮಕ ಆದಲ್ಲಿ ಕಲಿಕೆ ಪರಿಣಾಮಕಾರಿಯಾಗುತ್ತದೆ-ಶ್ರೀ ಸುಬ್ರಹ್ಮಣ್ಯ ಭಟ್ ಆಡಳಿತ ಮಂಡಳಿ ಸದಸ್ಯರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು. ಆವರ್ತ-ಗಣಿತ ಸಂಘದ ವತಿಯಿಂದ ಏರ್ಪಡಿಸಲಾದ ಗಣಿತ-ಪ್ರಯೋಗಾತ್ಮಕ ಬೋಧನೆ ಎಂಬ ವಿಷಯದಲ್ಲಿ ಗಣಿತ ವಿಷಯ ಬೋಧಕ ಶಿಕ್ಷಕರಿಗೆ ಶಾಲಾ ಆಡಳಿತ ಮಂಡಳಿ ಸದಸ್ಯರಾದ ನಿವೃತ್ತ ಮುಖ್ಯೋಪಾಧ್ಯಾಯರೂ ಆದ ಶ್ರೀಯುತ ಸುಬ್ರಹ್ಮಣ್ಯ ಭಟ್ ಕೆದಿಲ ಇವರು ಗಣಿತ ಕಲಿಕೋಪಕರಣ ತಯಾರಿ ಬಗ್ಗೆ ಅವಧಿ ನಡೆಸಿಕೊಟ್ಟರು. ಶಾಲೆಯಲ್ಲಿ ಗಣಿತ ಪ್ರಯೋಗಾಲಯ ಮಾಡುವ ಯೋಜನೆಯಂತೆ ವಿಭಿನ್ನ […]

Highslide for Wordpress Plugin