ವಿವೇಕಾನಂದ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ವಿವೇಕಾನಂದ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Friday, January 10th, 2014

ವಿವೇಕಾನಂದ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇದರ2013-14ನೇ ಸಾಲಿನ ವಾರ್ಷಿಕ ಕ್ರೀಡಾಕೂಟ 02.12.2013 ರಂದು ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಶ್ರೀ ಪ್ರವೀಣ್‌ಚಂದ್ರ ಆಳ್ವ, ಖ್ಯಾತ ಕಬಡ್ಡಿ ಆಟಗಾರ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ ಕ್ರೀಡೆ ಜೀವನದಲ್ಲಿ ಶಿಸ್ತು ಮತ್ತು ಮಾನಸಿಕ ಒತ್ತಡಗಳನ್ನು ದೂರಮಾಡುತ್ತದೆ ಎಂದು ಹೇಳಿದರು. ಕ್ರೀಡಾ ಸ್ಪೂರ್ತಿಯನ್ನು ಬೆಳೆಸಿಕೊಂಡು ಸಮಾಜದಲ್ಲಿ ಶ್ರೇಷ್ಠ ಕ್ರೀಡಾಳುಗಳ ಸಾಲಿಗೆ ಸೇರುವುದರ ಜೊತೆಗೆ ದೈಹಿಕ ಕ್ಷಮತೆಯನ್ನು ಸಾಧಿಸಬಹುದು ಎಂದರು. ಶ್ರೀ ಸುಂದರ ಗೌಡ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು, […]

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟಕ್ಕೆ ಆಯ್ಕೆ

Thursday, December 19th, 2013

ಅರಫಾ ವಿದ್ಯಾಕೇಂದ್ರ ಉಪ್ಪಿನಂಗಡಿಯಲ್ಲಿ ಜರುಗಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಜನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢ ಶಾಲಾ ತಂಡ.

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟಕ್ಕೆ ಆಯ್ಕೆ

Thursday, December 19th, 2013

ಅರಫಾ ವಿದ್ಯಾಕೇಂದ್ರ ಉಪ್ಪಿನಂಗಡಿಯಲ್ಲಿ ಜರುಗಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಜನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ಪ್ರಾಥಮಿಕ ತಂಡ.

ವಿವೇಕನಗರದಲ್ಲಿ ವಿವೇಕೋತ್ಸವ - 853 ವಿದ್ಯಾರ್ಥಿಗಳಿಂದ ಬೃಹತ್ ಕಲಾ ಪ್ರದರ್ಶನ

ವಿವೇಕನಗರದಲ್ಲಿ ವಿವೇಕೋತ್ಸವ – 853 ವಿದ್ಯಾರ್ಥಿಗಳಿಂದ ಬೃಹತ್ ಕಲಾ ಪ್ರದರ್ಶನ

Wednesday, December 18th, 2013

ಗ್ರಾಮೀಣ ಪ್ರದೇಶದಲ್ಲಿ ಮಕ್ಕಳಿಗೆ ಉತ್ತಮ ರೀತಿಯಲ್ಲಿ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವುದು ಪುತ್ತೂರಿಗೆ ಹೆಮ್ಮೆಯ ವಿಚಾರ. ತಂತ್ರಜ್ಞಾನ ಯುಗದಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಇಂತಹ ಶಾಲೆಗಳಿಂದ ಸಾಧ್ಯ ಎಂದು ಬೆಂಗಳೂರಿನ ಸೌಂದರ್ಯ ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿ ಸೌಂದರ್ಯ ಮಂಜಪ್ಪ ಪಿ ಹೇಳಿದರು. ಅವರು ಡಿ. 13 ರಂದು ತೆಂಕಿಲ ವಿವೇಕನಗರದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಹೊನಲು ಬೆಳಕಿನ ವಿವೇಕೋತ್ಸವ ಕಾರ್ಯಕ್ರಮ ನಡೆದ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಅವರು ಧ್ವಜಾರೋಹಣ […]

ಭವಿಷ್ಯತ್ತಿಗಾಗಿ ಯೋಗ

ಭವಿಷ್ಯತ್ತಿಗಾಗಿ ಯೋಗ

Saturday, December 14th, 2013

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್,  ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಆಯ್ದ ಶಾಲೆಗಳಲ್ಲಿ ಚಾರಿತ್ರಿಕ ಗಿನ್ನೆಸ್ ದಾಖಲೆಗಾಗಿ ಆಯೋಜಿಸಲಾಗಿರುವ ಅಭೂತಪೂರ್ವ ಕಾರ್ಯಕ್ರಮ ‘ಭವಿಷ್ಯತ್ತಿಗಾಗಿ ಯೋಗ’ ದಿನಾಂಕ 13-12-2013 ರಂದು ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆಯಿತು.

ಹೊನಲು ಬೆಳಕಿನ ವಿವೇಕೋತ್ಸವ - 2013

ಹೊನಲು ಬೆಳಕಿನ ವಿವೇಕೋತ್ಸವ – 2013

Saturday, November 30th, 2013
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ರಾಷ್ಟ್ರಮಟ್ಟಕ್ಕೆ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ರಾಷ್ಟ್ರಮಟ್ಟಕ್ಕೆ

Friday, November 29th, 2013

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನಂ, ನವದೆಹಲಿ ಮತ್ತು ತಪಸ್ವಿ ಜಗಜೀವನ್ ಜಿ ಮಹಾರಾಜ್ ಸರಸ್ವತಿ ವಿದ್ಯಾಮಂದಿರ ಬೊಕಾರೋ ಸ್ಟೀಲ್ ಸಿಟಿ, ಜಾರ್ಖಾಂಡ್ ಇದರ ಆಶ್ರಯದಲ್ಲಿ ನ. 18 ರಿಂದ ನ. 22 ರವರೆಗೆ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಸೌಮ್ಯಶ್ರೀ.ಎಂ ತ್ರಿವಿಧ ಜಿಗಿತ ಪ್ರಥಮ ಮತ್ತು 100 ಮೀ ಅಡೆತಡೆ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜನವರಿ 7 ರಿಂದ 12 ರವರೆಗೆ ಜಾರ್ಖಾಂಡ್‌ನ […]

ಶ್ಲೋಕ ಕಂಠಪಾಠ - ದ್ವಿತೀಯ

ಶ್ಲೋಕ ಕಂಠಪಾಠ – ದ್ವಿತೀಯ

Monday, November 25th, 2013

ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರು ನಡೆಸಿದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅರ್ಪಿತಾ ಸಿ.ಪಿ ದ್ವಿತೀಯ ಸ್ಥಾನ ಪಡೆದಿದ್ದಾರೆ

ರಾಷ್ಟ್ರಮಟ್ಟದ ಕರಾಟೆಯಲ್ಲಿ ದ್ವಿತೀಯ ಸ್ಥಾನ

ರಾಷ್ಟ್ರಮಟ್ಟದ ಕರಾಟೆಯಲ್ಲಿ ದ್ವಿತೀಯ ಸ್ಥಾನ

Thursday, November 21st, 2013

ಗುಜರಾತಿನ ಸೂರತ್ ನಗರದಲ್ಲಿ All India Karate Fedaration  ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸಾತ್ವಿಕ್ ಶರ್ಮ ಬಿ.ಎಸ್. 12 ವರ್ಷದ ಕೆಳಗಿನ ಕಟಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾನೆ. ಮತ್ತು  20 ಕೆ.ಜಿ. ಒಳಗಿನ ವಿಭಾಗದ ಕುಮಿಟೆಯಲ್ಲಿ  2ನೇ ತರಗತಿ ವಿದ್ಯಾರ್ಥಿನಿ ಸಂಹಿತಾ ಶರ್ಮ ಬಿ.ಎಸ್. ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಪುತ್ತೂರಿನ ಷಿಹಾನ್ ಎಂ. ಸುರೇಶ್ ಇವರಲ್ಲಿ ಕರಾಟೆ ಕಲಿಯುತ್ತಿದ್ದಾರೆ.

ಚಿತ್ರಕಲೆ - ಪ್ರಥಮ ಸ್ಥಾನ

ಚಿತ್ರಕಲೆ – ಪ್ರಥಮ ಸ್ಥಾನ

Tuesday, November 19th, 2013

ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರು ನಡೆಸಿದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ರಾಮ್‌ಪ್ರಸಾದ್ ದ್ವಿತೀಯ ಸ್ಥಾನ ಹಾಗೂ ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ಇವರು ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಶ್ರೀಮಲ್ಲೇಶ್ ಆಚಾರ್ಯ ಮತ್ತು ಶ್ರೀಮತಿ ಅನುರಾಧ ಇವರ ಪುತ್ರ.

ಹಿರಿಯ ವಿದ್ಯಾರ್ಥಿಗಳು ಶಾಲೆಯ ಆಸ್ತಿ- ಡಾ. ಮೋಹನ್ ಕುಮಾರ್ ವೈ.ಎಸ್

ಹಿರಿಯ ವಿದ್ಯಾರ್ಥಿಗಳು ಶಾಲೆಯ ಆಸ್ತಿ- ಡಾ. ಮೋಹನ್ ಕುಮಾರ್ ವೈ.ಎಸ್

Tuesday, November 19th, 2013

ವಿವೇಕಾನಂದ ಕನ್ನಡ ಮಾಧ್ಯಮ ಹಿರಿಯ ವಿದ್ಯಾರ್ಥಿಗಳ ಸಭೆ ಹಿರಿಯ ವಿದ್ಯಾರ್ಥಿಗಳು ಶಾಲೆಯ ಆಸ್ತಿ, ಶಾಲೆಯ ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಬಹುಮುಖ್ಯ. ಕನ್ನಡ ಮಾಧ್ಯಮ ಶಾಲೆ ಎಂದು ಯಾವುದೇ ಕೀಳರಿಮೆ ಬೇಡ ಅಂತೆಯೇ ಬಾಲ್ಯದ ಶಾಲೆಯನ್ನು ಯಾರೂ ಮರೆಯಬಾರದು ಎಂದು ಎಂಡೋ ವಿರೋಧಿ ಹೋರಾಟಗಾರ ಡ.ಮೋಹನ್ ಕುಮಾರ್ ವೈ.ಎಸ್ ಹೇಳಿದರು. ಅವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನವೆಂಬರ್ 1 ರಂದು ನಡೆದ ಹಿರಿಯ ವಿದ್ಯಾರ್ಥಿಗಳ ಸಭೆಯಲ್ಲಿ ಅತಿಥಿಯಾಗಿ ಆಗಮಿಸಿ ಯುವಜನತೆ ಹಳ್ಳಿ ತೊರೆದು ಪಟ್ಟಣ ವಾಸಿಗಳಾಗುತ್ತಿರುವುದು […]

ಚಂದನ್- ಸಮಗ್ರ ಪ್ರಶಸ್ತಿ

ಚಂದನ್- ಸಮಗ್ರ ಪ್ರಶಸ್ತಿ

Tuesday, November 19th, 2013

ಪುತ್ತೂರು ಚೆಸ್ ಅಕಾಡೆಮಿ ಆಯೋಜಿಸಿದ ಅಂತರ್ ತಾಲೂಕು ಮಟ್ಟದ ಚೆಸ್ ಸ್ಪರ್ಧೆ-2013 ಇದರಲ್ಲಿ ತೃತೀಯ ಸಮಗ್ರ ಪ್ರಶಸ್ತಿಯೊಂದಿಗೆ ಜೀನಿಯಸ್ ಟ್ರೋಫಿಯನ್ನು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10 ನೇ ತರಗತಿಯ ಚಂದನ್ ಪಡೆದುಕೊಂಡಿದ್ದಾರೆ. ಇವರು ಶಶಿ ಸ್ಟುಡಿಯೋ ಮಾಲಕ ಶ್ರೀ ಶಶಿಧರ್ ಮತ್ತು ಶ್ರೀಮತಿ ಭಾರತಿ ಇವರ ಪುತ್ರ.

ಯೋಗ - ಒಂದು ಚಿಕಿತ್ಸೆ

ಯೋಗ – ಒಂದು ಚಿಕಿತ್ಸೆ

Tuesday, November 19th, 2013

ಶಾರೀರಿಕ ಹಾಗೂ ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಹಾಗೂ ಪ್ರಾಣಾಯಾಮ ಮಾರ್ಗಸೂಚಿ ಎಂದು ನಿವೃತ್ತ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಹಾಗೂ ಯೋಗ ಚಿಕಿತ್ಸಕ ಶ್ರೀ ಶಂಕರನಾರಾಯಣ ಶಾಸ್ತ್ರೀ ನುಡಿದರು. ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲಾ ಮಕ್ಕಳಿಗೆ ಯೋಗ ಒಂದು ಚಿಕಿತ್ಸೆ ಎಂಬ ವಿಷಯದ ಕುರಿತು ಪ್ರಾತ್ಯಕ್ಷಿಕಾ ತರಗತಿ ನಡೆಸಿಕೊಟ್ಟರು.

ಅಭಿನಂದನೆಗಳು

ಅಭಿನಂದನೆಗಳು

Wednesday, November 13th, 2013
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Tuesday, November 12th, 2013

ತಾಲೂಕು ಮಟ್ಟದ ಪ್ರಾಥಮಿಕ – ಪ್ರೌಢಶಾಲಾ ಕ್ರೀಡಾಕೂಟ- ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ ದಿನಾಂಕ 15-11-2013 ಮತ್ತು 16-11-2013 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ. ಇದರಲ್ಲಿ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ (17ರ ವಯೋಮಿತಿ) ಗುರುಪ್ರಸಾದ್ ಎಸ್.ಎನ್ ಬಾಲಕಿಯರ ವಿಭಾಗದಲ್ಲಿ ಸೌಮ್ಯಶ್ರೀ ಮತ್ತು ಪ್ರೌಢಶಾಲಾ ಬಾಲಕಿಯರ […]

ತಾಲೂಕು ಮಟ್ಟದ ಪ್ರಾಥಮಿಕ - ಪ್ರೌಢಶಾಲಾ ಕ್ರೀಡಾಕೂಟ- ವೈಯಕ್ತಿಕ ಚಾಂಪಿಯನ್ಸ್

ತಾಲೂಕು ಮಟ್ಟದ ಪ್ರಾಥಮಿಕ – ಪ್ರೌಢಶಾಲಾ ಕ್ರೀಡಾಕೂಟ- ವೈಯಕ್ತಿಕ ಚಾಂಪಿಯನ್ಸ್

Tuesday, November 12th, 2013

ದಿನಾಂಕ 05-11-2013 ಮತ್ತು  06-11-2013 ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಸಮಗ್ರ ಪ್ರಶಸ್ತಿ ಪಡೆದಿದೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ (17ರ ವಯೋಮಿತಿ) ಗುರುಪ್ರಸಾದ್ ಎಸ್.ಎನ್ ಬಾಲಕಿಯರ ವಿಭಾಗದಲ್ಲಿ ಸೌಮ್ಯಶ್ರೀ ಮತ್ತು ಪ್ರೌಢಶಾಲಾ ಬಾಲಕಿಯರ (14 ರ ವಯೋಮಿತಿ) ವಿಭಾಗದಲ್ಲಿ ಅನುಷಾ.ಜಿ ವೈಯಕ್ತಿಕ ಚಾಂಪಿಯನ್ ಪಡೆದಿದ್ದಾರೆ.

೨೦೧೩-೧೪ ನೇ ಸಾಲಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘ

೨೦೧೩-೧೪ ನೇ ಸಾಲಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘ

Tuesday, November 12th, 2013

2013-14 ನೇ ಸಾಲಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀ ವೆಂಕಪ್ಪ ನಾಯ್ಕ  ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಭಾರತಿ ಕೆ.ಎನ್ ಆಯ್ಕೆಯಾಗಿದ್ದಾರೆ.

ಮೇಧಾ ಕಂಪ್ಯೂಟರ್ ಲ್ಯಾಬ್ ಉದ್ಫಾಟನೆ

ಮೇಧಾ ಕಂಪ್ಯೂಟರ್ ಲ್ಯಾಬ್ ಉದ್ಫಾಟನೆ

Friday, November 8th, 2013

ದಿನಾಂಕ ೩೦.೧೦.೧೩ ರಂದು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ  ಅಧ್ಯಕ್ಷರಾದ ಶ್ರೀ ಬಲರಾಮ ಆಚಾರ್ಯ ಇವರ ಅಧ್ಯಕ್ಷತೆಯಲ್ಲಿ ಡಾ.ಎ.ಪಿ. ಭಟ್, ಶಂಕರ ಭಟ್ ಬದನಾಜೆ ಶ್ರೀ ಶಶಿಧರ್ ಜಿ.ಎಸ್ ಇವರೆಲ್ಲರ ಗೌರವ ಉಪಸ್ಥಿತಿಯಲ್ಲಿ ‘ಮೇಧಾ’ ಕಂಪ್ಯೂಟರ್  ಪ್ರಯೋಗಾಲಯಗಳ ಉದ್ಫಾಟನೆ ಜರುಗಿತು. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯವರು, ಮುಖ್ಯಗುರುಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆ

ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆ

Friday, November 8th, 2013

ಅನಿಬೆಸೆಂಟ್ ಪಾರ್ಕ್ ದೊಡ್ಡ ಬಳ್ಳಾಪುರದಲ್ಲಿ  ನಡೆದ 2012 –13 ಸ್ಕೌಟ್ಸ್ ವಿಭಾಗದ ರಾಷ್ಟ್ರಪತಿ ಪುರಸ್ಕಾರ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮಶಾಲೆಯ ವಿದ್ಯಾರ್ಥಿಯಾದ ಚರಣ್‌ ಬಿ. ಎಲ್ ತೇರ್ಗಡೆ ಹೊಂದಿ ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾನೆ. ಈತ ಸವಣೂರು ಶ್ರೀ ಲಿಂಗಪ್ಪ ಗೌಡ ಮತ್ತು ಶ್ರೀಮತಿ ಬಿ.ಎಲ್ ಕಸ್ತೂರಿ ದಂಪತಿಯ ಪುತ್ರ. ಪ್ರಸ್ತುತ ಈತ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ  ಪಿ.ಯು.ಸಿ ವಿದ್ಯಾರ್ಥಿ. ಗೈಡ್ಸ್ ವಿಭಾಗದಲ್ಲಿ  ಕು. ಅನುಷಾ ಕೆ ರಾಷ್ಟ್ರಪತಿ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಶ್ರೀ ಆನಂದ ಶರ್ಮ […]

ಮಾದರಿ ಪ್ರದರ್ಶನ - ರಾಷ್ಟ್ರಮಟ್ಟಕ್ಕೆ ಆಯ್ಕೆ

ಮಾದರಿ ಪ್ರದರ್ಶನ – ರಾಷ್ಟ್ರಮಟ್ಟಕ್ಕೆ ಆಯ್ಕೆ

Wednesday, October 30th, 2013

ಶಾರದಾ ವಿದ್ಯಾನಿಕೇತನ ತಲಪಾಡಿ  ಮಂಗಳೂರು ಇಲ್ಲಿ ನಡೆದ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಜೇಯ ಕೆ.ಎಚ್, ಅಂಕಿತಾ ವಿ.ಕೆ ಹಾಗೂ ಗಣಿತ ಪ್ರದರ್ಶನದಲ್ಲಿ ಪ್ರತೀಕ್ಷಾ.ಹೆಚ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಇವರಲ್ಲಿ ಅಜಯ್ ಕೆ.ಎಚ್ ಪ್ರದರ್ಶಿಸಿದ ‘ಬೆಳಕಿನ ವಕ್ರೀಭವನ ಮತ್ತು ಪ್ರತಿಫಲನ‘ ಮಾದರಿ ರಾಜ್ಯಮಟ್ಟದಲ್ಲಿ ಹಾಗೂ ಮಧ್ಯಕ್ಷೇತ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತದೆ.

ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಷ್ಟ್ರಮಟ್ಟಕ್ಕೆ ಆಯ್ಕೆ

Monday, October 28th, 2013

 

ಅಂತರಾಷ್ಟ್ರೀಯ ಚೆಸ್ ಪಂದ್ಯಾಟದಲ್ಲಿ ಪ್ರಶಸ್ತಿ

ಅಂತರಾಷ್ಟ್ರೀಯ ಚೆಸ್ ಪಂದ್ಯಾಟದಲ್ಲಿ ಪ್ರಶಸ್ತಿ

Monday, October 28th, 2013

ಅಕ್ಟೋಬರ್ 18ರಿಂದ 21 ರವರೆಗೆ ಕನ್ಯಾಕುಮಾರಿಯಲ್ಲಿ ಜರುಗಿದ ಅಂತರಾಷ್ಟ್ರೀಯ ಶ್ರೇಯಾಂಕಿತರ (FIDE RATED) ಚೆಸ್ ಪಂದ್ಯಾಟದಲ್ಲಿ ಭಾಗವಹಿಸಿದ್ದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿಯ ಚಂದನ್ ಎ ಇವರಿಗೆ 15ರ ವಯೋಮಿತಿಯ ವಿಭಾಗದಲ್ಲಿ ಪ್ರಶಸ್ತಿ ಲಭಿಸಿರುತ್ತದೆ. ಪುತ್ತೂರಿನ ‘ಜೀನಿಯಸ್ ಚೆಸ್ ಸ್ಕೂಲ್’ ನಲ್ಲಿ ಚೆಸ್ ತರಬೇತಿಯನ್ನು ಪಡೆಯುತ್ತಿದ್ದಾರೆ. ಇವರು ಶಶಿ ಸ್ಟುಡಿಯೋ ಮಾಲಿಕ ಶ್ರೀ ಶಶಿಧರ್ ಮತ್ತು ಶ್ರೀಮತಿ ಭಾರತಿ ಇವರ ಪುತ್ರ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಅಭಿನಂದನೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಅಭಿನಂದನೆ

Monday, October 28th, 2013

2012-13 ನೇ ಸಾಲಿನ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನಿಗಳಾಗಿರುವ ಜಯಶ್ರೀ-593 ಅಂಕ, ಶ್ರೀವಿದ್ಯಾ- 593 ಅಂಕ, ಈಶ್ವರ್ ಸಂದೇಶ್ -593 ಅಂಕ ಇವರು ಕರ್ನಾಟಕ ಸರಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದವರು  ನೀಡಿದ ನಗದು ರೂಪದ ಬಹುಮಾನ ಹಾಗೂ ಪ್ರಶಸ್ತಿ ಫಲಕಗಳನ್ನು ಪಡೆದಿರುತ್ತಾರೆ.

ಶೈಕ್ಷಣಿಕ ಪ್ರಯೋಗಗಳು ಅಂಕಿ ಅಂಶಗಳಿಗೆ ಸೀಮಿತವಾಗದಿರಲಿ - ಸಾವಿತ್ರಿ

ಶೈಕ್ಷಣಿಕ ಪ್ರಯೋಗಗಳು ಅಂಕಿ ಅಂಶಗಳಿಗೆ ಸೀಮಿತವಾಗದಿರಲಿ – ಸಾವಿತ್ರಿ

Monday, October 28th, 2013

ದಿನಾಂಕ 27-10-2013 ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕರಿಗೆ ಮಕ್ಕಳ ಕಲಿಕಾ ದೋಷ, ಕಲಿಕಾ ನ್ಯೂನತೆ ತಿಳಿಯುವ ಮತ್ತು ನಿವಾರಣೆ ದೃಷ್ಟಿಯಿಂದ ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಐ.ಇ.ಆರ್.ಟಿ ಪುತ್ತೂರು  ಇಲ್ಲಿನ ಸಂಪನ್ಮೂಲ ವ್ಯಕ್ತಿಯಾಗಿರುವ ಶ್ರೀಮತಿ ಸಾವಿತ್ರಿ ಇವರು ಮಾಹಿತಿ ಕಾರ್ಯಾಗಾರ  ನಡೆಸಿದರು.

ನೃತ್ಯ ವೈವಿಧ್ಯ

ನೃತ್ಯ ವೈವಿಧ್ಯ

Thursday, October 24th, 2013

ದಿನಾಂಕ 28-10-2013 ರಂದು ಶ್ರೀಕೃಷ್ಣ ಲೋಕ ಕಾರ್ಯಕ್ರಮದ ಪ್ರಯುಕ್ತ ನಮ್ಮ ಮಕ್ಕಳಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯ ಮಕ್ಕಳಿಂದ ನಡೆಸಿದ ನೃತ್ಯ ವೈವಿಧ್ಯ ಕಾರ್ಯಕ್ರಮಗಳು.

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ

ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ

Thursday, October 24th, 2013

ಪುತ್ತೂರು:ಅಗೋಸ್ತು 15 :ವಿವೇಕಾನಂದ ವಿದ್ಯಾಸಂಸ್ಥೆ, ತೆಂಕಿಲದಲ್ಲಿ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ದೇಶ ಸೇವೆ ಮಾಡಲು ಸೈನಿಕನಾಗಬೇಕೆಂಬುದು ಸುಳ್ಳು, ದೇಶದ ಮೇಲೆ ಅಭಿಮಾನ ಹೊಂದಿರುವ ನಾವೆಲ್ಲರೂ ಸೈನಿಕರೇ ಆಗಿರುವುದರಿಂದ ದೇಶ ಕಾಯುವ, ರಕ್ಷಿಸುವ ಕಾಯಕ ಮಾಡಬೇಕು ಎಂದು ನಿವೃತ್ತ ಸೈನಿಕರಾದ ಶ್ರೀ ರಮಾನಾಥ ರೈ ವಿಟ್ಲ ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ. ಕೆ.ಎಂ ಕೃಷ್ಣ ಭಟ್, ಸಂಚಾಲಕ ಶ್ರೀ ರವೀಂದ್ರ.ಪಿ, ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಶೋಭಾ ಕೊಳತ್ತಾಯ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ […]

ಮನೆಯಂಗಳದಲ್ಲಿ ಭಜನೆ

ಮನೆಯಂಗಳದಲ್ಲಿ ಭಜನೆ

Thursday, October 17th, 2013

ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಂದ ನಡೆಸಲ್ಪಡುವ ಮನೆಂಯಂಗಳದಲ್ಲಿ  ಭಜನಾ ಕಾರ್‍ಯಕ್ರದ ಅಂಗವಾಗಿ ತೆಂಕಿಲದ ಕಟ್ಟತ್ತಾರು ಶ್ರೀ ನಾಗರಾಜ.ಟಿ ಎಂಬವರ ಮನೆಯಲ್ಲಿ ಶ್ರೀ ಶಾರದಾ ಪೂಜೆ ಹಾಗೂ ಭಜನಾ ಕಾರ್‍ಯಕ್ರಮ ನಡೆಯಿತು. ಡಾ. ಶೋಭಿತಾ ಸತೀಶ್ ಇವರ ಶ್ರೀ ಶಾರದಾ ಸ್ತುತಿಯೊಂದಿಗೆ ಆರಂಭಗೊಂಡ ಮಕ್ಕಳ ಭಜನೆಯಲ್ಲಿ ಶಾಲಾ ಶಿಕ್ಷಕರು ಹಾಗೂ ಪೋಷಕರು ಭಾಗವಹಿಸಿದ್ದರು.

ಹಿರಿಯ ವಿದ್ಯಾರ್ಥಿ ಸಭೆ

ಹಿರಿಯ ವಿದ್ಯಾರ್ಥಿ ಸಭೆ

Thursday, October 17th, 2013

1993-94 ರಲ್ಲಿ ಆರಂಭಗೊಂಡ ನಮ್ಮ ಶಾಲೆಯು ತನ್ನ ದ್ವಿಂಶತಿ ಆಚರಿಸುತ್ತಿರುವ ಈ ಶುಭ ಸಂದರ್ಭದಲ್ಲಿ ಶಾಲಾ ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ, ಕ್ರೀಡಾ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ಮೈಗೊಡಿಸಿಕೊಂಡು ತೆರಳಿರುವ ಶಾಲಾ ಹಿರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು. ಪ್ರಸ್ತುತ ಶೈಕ್ಷಣಿಕ ವರ್ಷದ ಹಿರಿಯ ವಿದ್ಯಾರ್ಥಿ ಸಭೆಯನ್ನು ನವೆಂಬರ್ 1ನೇ ತಾರೀಕು ಶುಕ್ರವಾರದಂದು ನಡೆಸಲಾಗುವುದು. ಶಾಲೆಯ ಹಿರಿಯ ವಿದ್ಯಾರ್ಥಿಗಳು ಸಮಾಜದ ಹತ್ತು  ಹಲವು ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುತ್ತೀರಿ, ನಿಮ್ಮೊಂದಿಗೆ ಬೆರೆತು, ಕಲಿತ ನಿಮ್ಮ ಸ್ನೇಹಿತರು ಹಾಗೂ ಶಿಕ್ಷಕರೊಂದಿಗೆ ಬೆರೆಯಲು ಈ ಸಂದರ್ಭದಲ್ಲಿ […]

ಆಹಾರ ಮತ್ತು ಆರೋಗ್ಯ ಮಾಹಿತಿ

ಆಹಾರ ಮತ್ತು ಆರೋಗ್ಯ ಮಾಹಿತಿ

Thursday, October 17th, 2013

‘ಆಹಾರ, ಮನಸ್ಸು, ದೇಹ ಇವುಗಳ ಪರಸ್ಪರ ಸಂಬಂಧ ಹಾಗೂ ಆರೋಗ್ಯಯುತ ಬೆಳವಣೆಗೆಯು ಅತೀ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿಷಮುಕ್ತ ಆಹಾರವನ್ನು ಸೇವಿಸಬೇಕಾದ ಬೌದ್ಧಿಕ ಎಚ್ಚರಿಕೆಯನ್ನು ನಾವಿಂದು ಬೆಳೆಸಿಕೊಳ್ಳಬೇಕಾಗಿದೆ’ ಎಂದು ಪುತ್ತೂರಿನ ಆಯುರ್ವೇದ ಮತ್ತು ಯೋಗ  ಚಿಕಿತ್ಸಾ ಕೇಂದ್ರದ   ವೈದ್ಯಾಧಿಕಾರಿಗಳಾದ ಡಾ | ಮನೋಜ್ ಇವರು ಹೇಳಿದರು ಇವರು ಶಾಲಾ ಮಕ್ಕಳೊಂದಿಗೆ ಆಹಾರ ಮತ್ತು ಆರೋಗ್ಯ ಎಂಬ ವಿಷಯದ ಕುರಿತು ಪ್ರಾತ್ಯಕ್ಷಿಕೆ ಹಾಗೂ ಸಂವಾದ ನಡೆಸಿದರು.

ವೈಯಕ್ತಿಕ ಚಾಂಪಿಯನ್

ವೈಯಕ್ತಿಕ ಚಾಂಪಿಯನ್

Saturday, September 7th, 2013

ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ ಮೈಸೂರಿನ ಕೆ.ಆರ್ ನಗರದಲ್ಲಿ ನಡೆದ ಪ್ರಾಂತೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಹಾಗೂ ವೀರಾಗ್ರಣಿ ಪ್ರಶಸ್ತಿ ಪಡೆದಿರುತ್ತಾರೆ. ಇವರಲ್ಲಿ ಕು|ವಾಣಿ  ವೈಯಕ್ತಿಕ ಚಾಂಪಿಯನ್ ಗಳಿಸಿ ವಿಶಾಖ ಪಟ್ಟಣದಲ್ಲಿ ನಡೆಯುವ ದಕ್ಷಿಣ ಕ್ಷೇತ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.

ವಿವೇಕಾನಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು - ದಕ್ಷಿಣ ಕ್ಷೇತ್ರೀಯ ಮಟ್ಟಕ್ಕೆ

ವಿವೇಕಾನಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು – ದಕ್ಷಿಣ ಕ್ಷೇತ್ರೀಯ ಮಟ್ಟಕ್ಕೆ

Saturday, September 7th, 2013

ವಿದ್ಯಾಭಾರತಿ ಕರ್ನಾಟಕ ಇದರ ಆಶ್ರಯದಲ್ಲಿ ಮೈಸೂರಿನ ಕೆ.ಆರ್ ನಗರದಲ್ಲಿ ನಡೆದ ಪ್ರಾಂತೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಹಾಗೂ ವೀರಾಗ್ರಣಿ ಪ್ರಶಸ್ತಿ ಪಡೆಯುವುದರ ಮೂಲಕ ರಂಜಿತ್, ಯತೀಶ್, ವೀಣಾ, ವಾಣಿ, ಆಯಿಷಾ, ಸವಿತಾ, ಸೌಮ್ಯ, ಸಂಧ್ಯಾ,ಪೂಜಾ ವಿಶಾಖ ಪಟ್ಟಣದಲ್ಲಿ ನಡೆಯುವ ದಕ್ಷಿಣ ಕ್ಷೇತ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.

ರಾಜ್ಯಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟಕ್ಕೆ ಆಯ್ಕೆ

Monday, September 2nd, 2013

ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಕು|ರಕ್ಷಿತ್.ಕೆ ಬಾಲವನ ಈಜುಕೊಳ ಪುತ್ತೂರು ಇಲ್ಲಿ ನಡೆದ ಹದಿನೇಳು ವರ್ಷದ ಮಯೋಮಿತಿಯ ಬಾಲಕರ 800ಮೀ ಪ್ರೀ ಸ್ಟೈಲ್ ಸ್ಪರ್ಧೆಯಲ್ಲಿ ದ್ವಿತೀಯ, 400 ಮೀ ವೈಯಕ್ತಿಕ ಮಿಡ್ಲೆಯಲ್ಲಿ ದ್ವಿತೀಯ, 400ಮೀ ಫ್ರೀಸ್ಟೈಲ್‌ನಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟದ ಈಜುಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ಖೋ-ಖೋ ಜಿಲ್ಲಾಮಟ್ಟಕ್ಕೆ ಆಯ್ಕೆ

ಖೋ-ಖೋ ಜಿಲ್ಲಾಮಟ್ಟಕ್ಕೆ ಆಯ್ಕೆ

Monday, September 2nd, 2013

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಂಗಳೂರು ಉಪನಿರ್ದೇಶಕರ ಕಚೇರಿ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕೊಂಬೆಟ್ಟು ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಸಹಯೋಗದಲ್ಲಿ ಕೊಂಬೆಟ್ಟು ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆದ 2013-14ನೇ ಸಾಲಿನ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ದಿನಾಂಕ 05.09.2013ರಂದು ಹಾಸನದಲ್ಲಿ ನಡೆಯುವ ವಿಭಾಗ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ

ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ

Friday, August 30th, 2013

ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ತಿಂಗಳಾಡಿಯಲ್ಲಿ ನಡೆದ ಯೋಗಾಸನ ಸ್ಪರ್ಧೆಯಲ್ಲಿ ೧೭ರ ವಯೋಮಾನದ ಸ್ಪರ್ಧೆಯಲ್ಲಿ ಸುಮ ಪ್ರಥಮ, ಗ್ರೀಷ್ಮಾ ಪಂಚಮ ಹಾಗೂ ವಸುಧಾ ಪ್ರಥಮ, ಬಾಲಕರ ವಿಭಾಗದಲ್ಲಿ ಪೃಥ್ವಿನಾರಾಯಣ ಭಟ್ ಎಂ.ಜಿ ಪ್ರಥಮ ಸ್ಥಾನ ಪಡೆದು ದಿನಾಂಕ 12.09.2013ರಂದು ಸುಬ್ರಮಣ್ಯದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಯೋಗಾಸ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ವಾಲಿಬಾಲ್ ಪ್ರಥಮ

ವಾಲಿಬಾಲ್ ಪ್ರಥಮ

Friday, August 30th, 2013

ವಾಲಿಬಾಲ್ ಅಸೋಸಿಯೇಶನ್ ಪುತ್ತೂರು ಮತ್ತು ವಿದ್ಯಾರಶ್ಮಿ ಪ್ರೌಢಶಾಲೆ ಸವಣೂರು ಇವರ ವತಿಯಿಂದ ನಡೆದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕ ಶ್ರೀ ದಾಮೋದರ್ ತರಬೇತಿ ನೀಡಿರುತ್ತಾರೆ.

ರಾಜ್ಯಮಟ್ಟಕ್ಕೆ  ಆಯ್ಕೆ

ರಾಜ್ಯಮಟ್ಟಕ್ಕೆ ಆಯ್ಕೆ

Friday, August 30th, 2013

ರಾಮಕುಂಜ ಪ್ರೌಢಶಾಲೆ ಹಾಗೂ ವಿದ್ಯಾಭಾರತಿ ಕರ್ನಾಟಕ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಅಂತರ್ ಶಾಲಾ ಅತ್ಲೆಟಿಕ್ಸ್‌ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲವರ್ಗದ ಹುಡುಗಿಯರು, ಕಿಶೋರವರ್ಗದ ಹುಡುಗರು, ಹುಡುಗಿಯರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಸುಮಾರು 25 ವಿದ್ಯಾರ್ಥಿಗಳು ರಾಜ್ಯಮಟ್ಟದ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಶೈಕ್ಷಣಿಕ ಸಹಮಿಲನ 2013-14

ಶೈಕ್ಷಣಿಕ ಸಹಮಿಲನ 2013-14

Monday, August 26th, 2013

ಪುತ್ತೂರು: ಜುಲೈ 13. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಶೈಕ್ಷಣಿಕ ಸಹಮಿಲನ 2013-14 ಒಂದು ದಿನದ ಕಾರ್ಯಾಗಾರ ‘ಯಾದವಶ್ರೀ ಸಭಾಂಗಣ’ ವಿವೇಕಾನಂದ ವಿದ್ಯಾಸಂಸ್ಥೆ, ತೆಂಕಿಲದಲ್ಲಿ ನಡೆಯಿತು. ಶ್ರೀ ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುತ್ತೂರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಆಧ್ಯಾತ್ಮ ಹಾಗೂ ಆದರ್ಶ ತತ್ವಗಳಿಂದ ಪ್ರೇರಿತವಾದ ಶಿಕ್ಷಣವು ವಿದ್ಯಾಭಾರತಿ ಸಂಸ್ಥೆಗಳಿಂದ ದೊರೆಯುತ್ತಿರುವುದು ಶ್ಲಾಘನೀಯ ಎಂದರು. ಆದರ್ಶಗಳು ವಿಚಾರಗಳು ಎಂದೂ ಸಾಯುವುದಿಲ್ಲ ಕನಸು ಕಾಣಬೇಕು. ಕನಸು ಕಂಡಾಗ ವಿಚಾರಗಳು ಬರುತ್ತವೆ. ವಿಚಾರಗಳು ತಿಳಿದಾಗ ವ್ಯವಹಾರಗಳು ಉತ್ತಮವಾಗುತ್ತವೆ. […]

ನೇತ್ರಾವತಿ ನದಿ ತಿರುವು - ಒಂದು ಚಿಂತನೆ

ನೇತ್ರಾವತಿ ನದಿ ತಿರುವು – ಒಂದು ಚಿಂತನೆ

Thursday, August 1st, 2013

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ  ದಿನಾಂಕ  27-07-2013ರಂದು ವಿವೇಕಾನಂದ ಪದವಿ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ  ಡಾ. ಶ್ರೀಶ ಕುಮಾರ್‌ರವರು ನೇತ್ರಾವತಿ ನದಿ ತಿರುವು ಯೋಜನೆಯ ಬಗ್ಗೆ  ಮಾತನಾಡಿ ಅದರ ಒಳಿತು ಕೆಡುಕುಗಳನ್ನು ಕೆಲವೊಂದು ಸಾಕ್ಷ್ಯ ಚಿತ್ರಗಳನ್ನು ತೋರಿಸುವ ಮೂಲಕ ಪರಿಚಯ ಮಾಡಿದರು. ಪರಿಸರ ಪ್ರೇಮಿಗಳಾದ ಸಮಾಜ ಬಾಂಧವರು ಈ ಯೋಜನೆಯು ಜಾರಿಗೊಳ್ಳದಂತೆ ಜಾಗೃತರಾಗಬೇಕೆಂದು ಕರೆ ಇತ್ತರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಮುಖ್ಯ ಗುರುಗಳು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಸ್ವಾತಿಯವರು ಕಾರ್ಯಕ್ರಮವನ್ನು ನಿರೂಪಿಸಿದರು.

ಮಕ್ಕಳನ್ನು ರಂಜಿಸಿದ ಪೆಪ್ಪರಮೆಂಟ್ ಸುಬ್ಬಜ್ಜ

ಮಕ್ಕಳನ್ನು ರಂಜಿಸಿದ ಪೆಪ್ಪರಮೆಂಟ್ ಸುಬ್ಬಜ್ಜ

Thursday, August 1st, 2013

ದಿನಾಂಕ  20-07-2013ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ನಡೆಯುವ ಸಾಂಸ್ಕೃತಿಕ  ಚಟುವಟಿಕೆಗಳ ಅಂಗವಾಗಿ ಹಿರಿಯ ಶಿಶು ಸಾಹಿತಿ ಶ್ರೀ ಬೆಂಡರವಾಡಿ  ಸುಬ್ರಹ್ಮಣ್ಯ ಭಟ್‌ರವರು  ಪುಟಾಣಿ ಮಕ್ಕಳಿಗೆ ಕಥೆ, ಹಾಡುಗಳನ್ನು ಹೇಳುವುದರ ಮೂಲಕ ಕುಣಿದು ಕುಪ್ಪಳಿಸುವಂತೆ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ದುರ್ಗಾದೇವಿಯವರು ಉಪಸ್ಥಿತರಿದ್ದರು.

ಕಾರ್ಗಿಲ್ ವಿಜಯೋತ್ಸವ ಮಾಹಿತಿ

ಕಾರ್ಗಿಲ್ ವಿಜಯೋತ್ಸವ ಮಾಹಿತಿ

Thursday, August 1st, 2013

ದಿನಾಂಕ 27-07-2013ರಂದು  ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ  ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಾರ್ಗಿಲ್ ವಿಜಯೋತ್ಸವ  ದಿನಾಚರಣೆಯ ಕುರಿತು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀ ರೋಹಿಣಾಕ್ಷ ಶೀರ್ಲಾಲುರವರು, ಈ ದಿನಾಚರಣೆಯ ಮಹತ್ವ, ದೇಶಕ್ಕಾಗಿ ಹೋರಾಡಿದ ವೀರ ಯೋಧರ ತ್ಯಾಗ ಬಲಿದಾನಗಳ ಕುರಿತು ಹೃದಯಸ್ಪರ್ಶಿ ಮಾತುಗಳನ್ನಾಡುತ್ತಾ ನಮ್ಮ ಯುವಕರಿಗೆ ಸೇನೆಗೆ ಸೇರಲಿರುವ ಅವಕಾಶಗಳ ಕುರಿತು ಮಾಹಿತಿಯನ್ನು ನೀಡಿದರು. ಶಾಲಾ ಮುಖ್ಯಗುರುಗಳು, ಶಿಕ್ಷಕರು ಉಪಸ್ಥಿತರಿದ್ದರು.

ರಾಜ್ಯ ದಕ್ಷಿಣ ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

ರಾಜ್ಯ ದಕ್ಷಿಣ ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ

Wednesday, July 31st, 2013

ದಿನಾಂಕ 24-07-2013ರಂದು ವಿದ್ಯಾಭಾರತಿ ಕರ್ನಾಟಕ ಮತ್ತು ಶುಭೋದಯ ಪ್ರೌಢಶಾಲೆ ಮೂಡುಶೆಡ್ಡೆಯಲ್ಲಿ ನಡೆದ 17 ವರುಷದ ಕಿಶೋರವರ್ಗದ ಬಾಲಕಿಯರ ವಿಭಾಗದ  ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ ವಿವೇಕಾನಂದ ಕನ್ನಡಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು ಇವರಲ್ಲಿ ಸುಮಾ ರಾಜ್ಯಮಟ್ಟದಿಂದ ದಕ್ಷಿಣಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಕಿಶೋರವರ್ಗದ ಬಾಲಕರ ವಿಭಾಗದಲ್ಲಿ  ಪೃಥ್ವಿನಾರಾಯಣ ಮತ್ತು ರಾಕೇಶ್ ರಾಜ್ಯಮಟ್ಟದಿಂದ ದಕ್ಷಿಣ ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿ ಆಗಸ್ಟ್ 10,11 ಕ್ಕೆ ತಮಿಳುನಾಡಿನ ಕಾಂಚಿಪುರಂನಲ್ಲಿ ನಡೆಯುವ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.  

ಕಾರ್ಗಿಲ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಆಚರಣೆ

Friday, July 26th, 2013

ದಿನಾಂಕ 26.07.2013ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿ ‘ಕಾರ್ಗಿಲ್ ವಿಜಯೋತ್ಸವ ಆಚರಣೆ’ ನಡೆಯಿತು.ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಗಿಲ್‌ನ ಯುದ್ಧದ ಬಗೆಗೆಗಿನ ಮಹತ್ವವನ್ನು ಮತ್ತು ದೇಶ ಭಕ್ತರನ್ನು ನೆನಪಿಸುವ ಸ್ವಾರಸ್ಯಕರ ವಿಷಯಗಳನ್ನು ಮಕ್ಕಳಿಗೆ ಮನಮುಟ್ಟುವಂತೆ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕರಾದ ಶ್ರೀ ರಾಜೇಶ್ ನೆಲ್ಲಿತ್ತಡ್ಕ ಇವರು ತಿಳಿಸಿದರು.  ನಂತರ ವಿದ್ಯಾರ್ಥಿಗಳಿಗೆ ಕಾರ್ಗಿಲ್ ವಿಜಯೋತ್ಸವದ ಸಾಕ್ಷ್ಯ ಚಿತ್ರಗಳನ್ನು ತೋರಿಸಲಾಯಿತು. ಈ ಕಾರ್ಯಕ್ರಮದ ಸ್ವಾಗತವನ್ನು ಶಿಕ್ಷಕರಾದ ಶ್ರೀ ಚಂದ್ರಶೇಖರ ಹಾಗೂ ವಂದನಾರ್ಪಣೆಯನ್ನು ಶ್ರೀ ರಾಜೇಶ್ ಪಿ.ಬಿ ರವರು […]

ರಾಜ್ಯಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟಕ್ಕೆ ಆಯ್ಕೆ

Friday, July 26th, 2013

ವಿದ್ಯಾಭಾರತಿ ಕರ್ನಾಟಕ ಹಾಗೂ ಶಾರದಾ ವಿದ್ಯಾನಿಕೇತನ ತಲಪಾಡಿ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 22.0.2013 ರಂದು ಶಾರದಾ ವಿದ್ಯಾನಿಕೇತನ ತಲಪಾಡಿ ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ 14ರ ವಯೋಮಾನದ ಬಾಲಕಿಯರ ಕಿಶೋರವರ್ಗದ ಖೋ-ಖೋದಲ್ಲಿ ಮತ್ತು ಬಾಲವರ್ಗದ ಖೋ-ಖೋದಲ್ಲಿ , ಹಾಗೂ ವಿದ್ಯಾಭಾರತಿ ಕರ್ನಾಟಕ ಹಾಗೂ ಷಣ್ಮುಖ ದೇವ ಪ್ರೌಢಶಾಲೆ ಪೆರ್ಲಂಪಾಡಿ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 18.07.2013 ರಂದು ಷಣ್ಮುಖ ದೇವ ಪ್ರೌಢ ಶಾಲೆ, ಪೆರ್ಲಂಪಾಡಿ ಇಲ್ಲಿ ನಡೆದ ಜಿಲ್ಲಾಮಟ್ಟದ 17ರ ವಯೋಮಾನದ ಬಾಲಕಿಯರ ಕಿಶೋರವರ್ಗದ […]

ಸ್ವಗೃಹದಲ್ಲಿ ಗುರುವಂದನೆ - ವಿಶಿಷ್ಠ ಆಚರಣೆ

ಸ್ವಗೃಹದಲ್ಲಿ ಗುರುವಂದನೆ – ವಿಶಿಷ್ಠ ಆಚರಣೆ

Tuesday, July 23rd, 2013

ಸಮಾಜಮುಖಿ ಕಾರ್ಯ ಹಾಗೂ ಗುರುತ್ವದ ಔಚಿತ್ಯ ಸ್ಮರಿಸಿಕೊಂಡಾಗ ಪುತ್ತೂರಿನ ವಿ.ಬಿ ಅರ್ತಿಕಜೆಯವರು ಕಣ್ಮುಂದೆ ಬರುತ್ತಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಇವರು ಪ್ರೇರಕ ಗುರುಗಳ ಸಾಲಿಗೆ ಬರುವ ಕೆಲವರಲ್ಲಿ ಒಬ್ಬರು. ಪ್ರಾಧ್ಯಾಪಕರಾಗಿ ವೃತ್ತಿಯಿಂದ ನಿವೃತ್ತಿ ಹೊಂದಿದರೂ, ಪ್ರವೃತ್ತಿಯಲ್ಲಿ ಮಕ್ಕಳೊಂದಿಗೆ ಮಾತು, ಶಿಕ್ಷಕರಿಗೆ ಕಿವಿಮಾತು, ಸಾಹಿತ್ಯ ಕಲಾ ಪೋಷಕರು ವಿಶೇಷವಾಗಿ ಮನೆಯಲ್ಲೇ ಗ್ರಂಥಾಲಯ ಹೊಂದಿದ್ದು ಗ್ರಂಥಾಲಯ ಮಾಡ ಬಯಸುವ ಮನೆ ಮನಗಳಿಗೆ ಸಹಕಾರ ಇನ್ನೂ ಅನೇಕ. ಗುರುಪೂರ್ಣಿಮೆಯಂದು ಶ್ರೀಯುತರನ್ನು ವಿವೇಕಾನಂದ ಕನ್ನಡ ಮಾಧ್ಯಮದ ಮಕ್ಕಳು ಹಾಗೂ ಶಿಕ್ಷಕ ವೃಂದ […]

ಹಿಂದೂ ಸಾಮ್ರಾಜೋತ್ಸವ

ಹಿಂದೂ ಸಾಮ್ರಾಜೋತ್ಸವ

Saturday, July 6th, 2013

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ದಿನಾಂಕ 06.07.2013 ರಂದು ‘ಹಿಂದೂ ಸಾಮ್ರಾಜೋತ್ಸವ’ದ ಆಚರಣೆ ಜರುಗಿತು. ಈ ಕಾರ್ಯಕ್ರಮದಲ್ಲಿ ಶಿವಾಜಿಯ ಬಾಲ್ಯ, ದೇಶಭಕ್ತಿ ಎಂಬ ವಿಷಯದಡಿ ವಿವೇಕಾನಂದ ಡಿ.ಇಡಿ ಕಾಲೇಜಿನ ಉಪನ್ಯಾಸಕರಾದ ಶ್ರೀ ರಘುರಾಜ ಯು.ವಿ ರವರು ಮಕ್ಕಳಿಗೆ ಮನದಟ್ಟಾಗುವಂತೆ ಕಥೆ ಹೇಳಿದರು. ಕಾರ್ಯಕ್ರಮದ ನಿರೂಪಣೆ, ಸ್ವಾಗತವನ್ನು ಶಿಕ್ಷಕರಾದ ಶ್ರೀ ಚಂದ್ರಶೇಖರ.ಬಿ ರವರು ನೆರವೇರಿಸಿದರು.

Highslide for Wordpress Plugin