ಶಾಲಾ ಚುನಾವಣೆ

ಶಾಲಾ ಚುನಾವಣೆ

Tuesday, June 11th, 2013

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿ ದಿನಾಂಕ 08.06.2013 ರಂದು ಶಾಲಾ ಚುನಾವಣೆ ನಡೆಯಿತು. ಪ್ರೌಢಶಾಲಾ ನಾಯಕಿಯಾಗಿ ಕು| ಪ್ರಜ್ಞಾ.ಪಿ.ಆರ್ ಮತ್ತು ಉಪನಾಯಕನಾಗಿ ಪೃಥ್ವಿನಾರಾಯಣ ಇವರು ಬಹುಮತದಿಂದ ಆಯ್ಕೆಯಾದರು. ಪ್ರಾಥಮಿಕ ಶಾಲಾ ನಾಯಕನಾಗಿ ಭವಿಷಿತ್, ಉಪನಾಯಕಿಯಾಗಿ ಕು| ವಿಭಾ ಆಚಳ್ಳಿಯವರು ಆಯ್ಕೆಯಾದರು. ಚುನಾವಣೆಯ ಮುಖ್ಯಗುರುಗಳ ಮಾರ್ಗದರ್ಶನದಲ್ಲಿ ಎಲ್ಲಾ ಶಿಕ್ಷಕರ ಸಹಕಾರದೊಂದಿಗೆ ನಡೆಯಿತು.

ಅಭಿನಂದನಾ ಕಾರ್ಯಕ್ರಮ

ಅಭಿನಂದನಾ ಕಾರ್ಯಕ್ರಮ

Tuesday, June 11th, 2013

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರು ಇಲ್ಲಿ ದಿನಾಂಕ 08.06.2013 ರಂದು 2012-13ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪ್ರೋ|ವಿ.ಬಿ. ಅರ್ತಿಕಜೆಯವರು ಮಾತನಾಡಿ, ವಿದ್ಯಾರ್ಥಿಗಳು ತಾವು ಕಲಿತ ಶಾಲೆಯನ್ನು ಸದಾ ನೆನಪಿನಲ್ಲಿಟ್ಟುಕೊಂಡಿರಬೇಕು ಎಂದರು, ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ|ಕೃಷ್ಣ ಭಟ್ ಉಪಸ್ಥಿತರಿದ್ದು, ಸಾಧನೆಗೆ ಸದಾ ಪ್ರಯತ್ನಶೀಲರು ನಾವಾಗಬೇಕು, ನಮ್ಮಲ್ಲಿ ಕನಸು ಇರಬೇಕು, ಆಗ ಮಾತ್ರ ಕನಸನ್ನು ನನಸಾಗಿಸಲು ಸಾಧ್ಯ ಎಂಬುದಾಗಿ […]

ಶಾಲಾ ಪ್ರವೇಶೋತ್ಸವ ಕಾರ್ಯಕ್ರಮ

ಶಾಲಾ ಪ್ರವೇಶೋತ್ಸವ ಕಾರ್ಯಕ್ರಮ

Monday, June 10th, 2013

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರು ಇಲ್ಲಿ ದಿನಾಂಕ 06.06.2013 ರಂದು ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಪ್ರವೇಶೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸರಕಾರಿ ಪದವಿ ಕಾಲೇಜು ಬಂಟ್ವಾಳ ಇಲ್ಲಿನ ಉಪನ್ಯಾಸಕರಾದ ಡಾ.ಅಜಕ್ಕಳ ಗಿರೀಶ್ ಭಟ್ ರವರು ದೀಪ ಪ್ರಜ್ವಲಿಸಿ ಘೃತಾಹುತಿ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪೋಷಕರೊಂದಿಗೆ ‘ಪರಿಣಾಮಕಾರಿ ಪೋಷಕತ್ವ’ದ ಬಗ್ಗೆ ಸಂವಾದ ನಡೆಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆ ಮತ್ತು ನಮ್ಮ ಭಾರತೀಯ ಸಂಸ್ಕೃತಿಯ ಬಗ್ಗೆ […]

ಪ್ರಜ್ಞಾ ಸಾಧಕ ಪ್ರಶಸ್ತಿ

ಪ್ರಜ್ಞಾ ಸಾಧಕ ಪ್ರಶಸ್ತಿ

Monday, June 10th, 2013

ಪ್ರಜ್ಞಾ ಎಜ್ಯುಕೇಶನ್ ಟ್ರಸ್ಟ್ (ರಿ.) ಸುಳ್ಯ ಇವರು ನಡೆಸಿದ ‘ಸದಾ ಸಿದ್ಧರಾಗಿರೋಣ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ’ – 2013 ರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸ್ವಾತಿಕ್ ಶರ್ಮ ಬಿ.ಎಸ್ 5ನೇ ತರಗತಿಯಲ್ಲಿ ‘ಪ್ರಜ್ಞಾ ತಾಲೂಕು ಸಾಧಕ’ ಪ್ರಶಸ್ತಿಯೊಂದಿಗೆ ರೂ 2,000 ನಗದು, ಪ್ರಶಸ್ತಿ ಪತ್ರ ಹಾಗೂ ಪದಕವನ್ನು ಪಡೆದಿರುತ್ತಾನೆ. ಈತನಿಗೆ ಅಭಿನಂದನೆಗಳು.

ಎಸ್.ಎಸ್.ಎಲ್.ಸಿ 2012-13 ಫಲಿತಾಂಶ 93%

ಎಸ್.ಎಸ್.ಎಲ್.ಸಿ 2012-13 ಫಲಿತಾಂಶ 93%

Tuesday, May 21st, 2013

2012-13ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ 98 ವಿದ್ಯಾರ್ಥಿಗಳಲ್ಲಿ 91 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು  ಶೇಕಡಾ 93 ಫಲಿತಾಂಶ ಬಂದಿರುತ್ತದೆ. ಇದರಲ್ಲಿ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ,  51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ,  16  ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ಮತ್ತು 12 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಜಯಶ್ರೀ.ಪಿ – 593 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದು ಪುತ್ತೂರು ತಾಲೂಕಿಗೆ ದ್ವಿತೀಯ ಸ್ಥಾನಿಯಾಗಿರುತ್ತಾಳೆ. ಶ್ರೀವಿದ್ಯಾ ಕೆ.ಎಂ – 591 ಅಂಕಗಳೊಂದಿಗೆ ದ್ವಿತೀಯ ಸ್ಥಾನಿಯಾಗಿದ್ದು ಪುತ್ತೂರು […]

 ಬೀಳ್ಕೊಡಗೆ ಸಮಾರಂಭ

ಬೀಳ್ಕೊಡಗೆ ಸಮಾರಂಭ

Tuesday, March 19th, 2013

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರು ಇಲ್ಲಿ ದಿನಾಂಕ 18-03-2013 ರಂದು ಎಸ್.ಎಸ್.ಯಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀಮತಿ ಶಶಿಕಲಾ ಅಮ್ಮನವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು ನಂತರ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದ ಅನಿಸಿಕೆಯನ್ನು ಹೇಳಿದರು. ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ರವೀಂದ್ರ.ಪಿ. ರವರು ಮಾತನಾಡಿ “ವಿದ್ಯಾರ್ಥಿ ಜೀವನ ನಿಂತನೀರಲ್ಲಿ ಅದು ಸದಾ ಪ್ರವಾಹಿಸುತ್ತಿರುವ ನೀರು” ಎಂದು ತಿಳಿಸಿ ಶುಭಹಾರೈಕೆಯನ್ನು ಹೇಳಿದರು, ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ಪೂರ್ಣಿಮ […]

ಶಾರದಾ ಪೂಜೆ ಮತ್ತು ಭಜನೆ ಕಾರ್ಯಕ್ರಮ

ಶಾರದಾ ಪೂಜೆ ಮತ್ತು ಭಜನೆ ಕಾರ್ಯಕ್ರಮ

Monday, February 25th, 2013

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಇಲ್ಲಿ ದಿನಾಂಕ 22-02-2013 ರಂದು ವರ್ಷಂಪ್ರತಿ ನಡೆಯುವ ಶಾರದಾ ಪೂಜೆ ಮತ್ತು ಭಜನೆ ನಡೆಯಿತು. ವಿದ್ಯಾರ್ಥಿಗಳು, ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಶ್ರೀದೇವರ ಕೃಪೆಗೆ ಪಾತ್ರರಾದರು.

ಸಾಂಸ್ಕೃತಿಕ ಕಾರ್ಯಕ್ರಮ

ಸಾಂಸ್ಕೃತಿಕ ಕಾರ್ಯಕ್ರಮ

Monday, February 25th, 2013

ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇದರ ರಜತ ಮಹೋತ್ಸವದ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

ವಿವೇಕಾನಂದ ತೆಂಕಿಲದಲ್ಲಿ ಸೂರ್ಯ ನಮಸ್ಕಾರ

ವಿವೇಕಾನಂದ ತೆಂಕಿಲದಲ್ಲಿ ಸೂರ್ಯ ನಮಸ್ಕಾರ

Saturday, February 23rd, 2013

ವಿವೇಕಾನಂದ ಮಹೋತ್ಸವ ಸಮಿತಿ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಫೆ. ೧೮ ರಂದು ಬೆಳಿಗ್ಗೆ ತೆಂಕಿಲ ವಿವೇಕನಗರದಲ್ಲಿ ವಿವೇಕಾನಂದ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ಮಾಡಲಾಯಿತು. ಶಾಲಾ ವಿದ್ಯಾರ್ಥಿಗಳು, ಬಿ.ಎಡ್ ವಿದ್ಯಾರ್ಥಿಗಳು, ಶಿಕ್ಷಕರು ಸೂರ್ಯನಮಸ್ಕಾರ ಮಾಡಿದರು. ಪುಟಾಣಿಗಳು ಶಾಲಾ ಒಳಾಂಗಣದ ಸಭಾಂಗಣದಲ್ಲಿ ಸೂರ್ಯನಮಸ್ಕಾರ ಮಾಡಿದರು. ಯೋಗ ಶಿಕ್ಷಕಿ ಶ್ರೀಮತಿ ಶರಾವತಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ್ ಹಾಗೂ ವಿವೇಕಾನಂದ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿಯ […]

ಯಕ್ಷಗಾನ ಪ್ರದರ್ಶನ

ಯಕ್ಷಗಾನ ಪ್ರದರ್ಶನ

Friday, February 15th, 2013

ಕರ್ನಾಟಕ ಸಂಘ ಪುತ್ತೂರು ಹಾಗೂ ವಿವಿಧ ಸಾಹಿತ್ಯಾಸಕ್ತ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಸಾಹಿತ್ಯ ಕಲಾಕುಶಲೋಪರಿ ಸಂಸ್ಕೃತಿ ಸಲ್ಲಾಪ – 2013 ದಿನಾಂಕ 09.02.2013 ರಿಂದ 17.02.2013 ರವರೆಗೆ ಅನುರಾಗ ವಠಾರದಲ್ಲಿ ನಡೆದಿದ್ದು ದಿನಾಂಕ 12.02.2013 ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಂದ ಕೃಷ್ಣ-ಕೃಷ್ಣ ಶ್ರೀ ಕೃಷ್ಣ ಯಕ್ಷಗಾನ ನಡೆಯಿತು. ಶ್ರೀ ರಮೇಶ ಶೆಟ್ಟಿ ಬಾಯಾರು ಇವರ ನಿರ್ದೇಶನದಲ್ಲಿ ಶಾಲಾ ಮಕ್ಕಳು ಯಕ್ಷಗಾನ ಪ್ರದರ್ಶನ ನೀಡಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಶಿಕ್ಷಕರಾದ ಶ್ರೀ ಚಂದ್ರಶೇಖರ್.ಬಿ ರವರು ನೆರವೇರಿಸಿದರು.

ವಿವೇಕಾನಂದ ಜಯಂತಿ

ವಿವೇಕಾನಂದ ಜಯಂತಿ

Saturday, February 9th, 2013

ಸ್ವಾಮಿ ವಿವೇಕಾನಂದ ೧೫೦ನೇ ವರ್ಷಾಚರಣೆ ಹಾಗೂ ವಿವೇಕಾನಂದ ಜಯಂತಿ ಕಾರ್ಯಕ್ರಮ ವೈವಿಧ್ಯ ಕಿರಿಯ ಪ್ರಾಥಮಿಕ ಮಕ್ಕಳಿಗೆ ಮಕ್ಕಳು ವಿವೇಕಾನಂದರ ವೇಷ ಧರಿಸಿ ವಿವೇಕಾನಂದ ಮಾದರಿ ಶಿಶು ಮಂದಿರದ ಮೆರವಣಿಗೆಯಲ್ಲಿ ಪಾಲ್ಗೊಂಡರು. ವಿವೇಕಾನಂದರ ನುಡಿಮುತ್ತುಗಳು ಹಾಗೂ ಚಿತ್ರ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಹಿರಿಯ ಪ್ರಾಥಮಿಕ ಮಕ್ಕಳಿಗೆ ವಿವೇಕಾನಂದ ಬಾಲ್ಯ, ವಿವೇಕಾನಂದರ ಶಿಕ್ಷಣ ಹಾಗೂ ಸ್ವದೇಶ ಪ್ರೇಮದ ಬಗ್ಗೆ ಭಾಷಣ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡಲಾಯಿತು. ಪ್ರೌಢ ಶಾಲಾ ವಿದ್ಯಾರ್ಥಿಗಳು ವಿವೇಕಾನಂದ ಕಾಲೇಜಿನಲ್ಲಿ ಜರುಗಿದ ವಿವೇಕಾನಂದ ಜಯಂತಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. […]

ವಿವೇಕಾನಂದ  ಶಾಲಾ ವಾರ್ಷಿಕ ಕ್ರೀಡಾಕೂಟ

ವಿವೇಕಾನಂದ ಶಾಲಾ ವಾರ್ಷಿಕ ಕ್ರೀಡಾಕೂಟ

Saturday, February 9th, 2013

ಇಲ್ಲಿನ ತೆಂಕಿಲದಲ್ಲಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲಾ ವಾರ್ಷಿಕ ಕ್ರೀಡಾ ಕೂಟವನ್ನು ಜಿ.ಪಂ. ಸದಸ್ಯ ಕೇಶವ ಗೌಡ ಬಜತ್ತೂರು ಉದ್ಫಾಟಿಸಿದರು. ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಜೀವಂಧರ್ ಜೈನ್, ಶಾಲಾ ಆಡಳಿತ ಮಂಡಳಿ ಪ್ರಮುಖರಾದ ಬಂಗಾರಡ್ಕ ವಿಶ್ವೇಶ್ವರ ಭಟ್, ರವೀಂದ್ರ.ಪಿ, ಕನ್ನಡ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕ ಸತೀಶ್ ಉಜಿ ಮತ್ತಿತ್ತರು ಉಪಸ್ಥಿತರಿದ್ದರು.

ಸಾಮೂಹಿಕ ಹುಟ್ಟುಹಬ್ಬ

ಸಾಮೂಹಿಕ ಹುಟ್ಟುಹಬ್ಬ

Saturday, February 9th, 2013

ಚಿಕ್ಕಂದಿನಲ್ಲಿ ಇತರ ಮಕ್ಕಳಂತೆ ಬಾಲ್ಯ ಸಹಜ ಚೇಷ್ಟೆಗಳನ್ನು ತೋರುತ್ತಾ ಬೆಳೆದ ನರೇಂದ್ರ ದೊಡ್ಡವನಾಗಿ ಮಹಾ ತೇಜಸ್ವಿ ವಿವೇಕಾನಂದರಾಗಿ ಜಗದ್ವಿಖ್ಯಾತರಾದಂತೆ ಮಕ್ಕಳೆಲ್ಲರೂ ಅವರ ಸದ್ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಶ್ರೀಮತಿ ಶ್ರೀದೇವಿ ಕಾನಾವು ಇವರು ದಿನಾಂಕ ೨೬.೦೧.೨೦೧೩ ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ  ಜರುಗಿದ ಸಾಮೂಹಿಕ ಹುಟ್ಟುಹಬ್ಬದ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಈ ಮೇಲಿನ ಮಾತುಗಳನ್ನಾಡಿದರು. ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಶ್ಯಾಮಪ್ರಸಾದ ಶಾಸ್ತ್ರೀಗಳು ಶುಭ ಹಾರೈಸಿದರು. ಶ್ರೀಮತಿ ದಾಕ್ಷಾಯಿಣಿ ಮಾತಾಜಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು.ಸ್ವಾತಿ ಸ್ವಾಗತಿಸಿ, […]

ಗಣರಾಜ್ಯೋತ್ಸವ ದಿನಾಚರಣೆ

Saturday, February 9th, 2013

ದೇಶ ರಕ್ಷಣೆಗೆ ಸೈನಿಕರ ಅವಶ್ಯಕತೆಯಿದ್ದು ಹೆಚ್ಚು ಹೆಚ್ಚು ಯುವಜನರು ಸೇನೆಗೆ ಸೇರಬೇಕು. ಸೇವಾ ನಿವೃತ್ತಿಯ ನಂತರವೂ ಉತ್ತಮ ಸೌಲಭ್ಯಗಳೂ, ಉದ್ಯೋಗವೂ ಸಿಗುವುದು ಎಂಬುದಾಗಿ ಮಾಜಿ ಸೈನಿಕರೂ ಪ್ರಸ್ತುತ ಪುತ್ತೂರಿನ ಕಾರ್ಪೋರೇಶನ್ ಬ್ಯಾಂಕಿನ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದು ಮಾಜಿ ಸೈನಿಕರ ಸಂಘದ ಅಧ್ಯಕ್ಷರಾಗಿರುವ ಕೆ.ಎಸ್.ದಯಾನಂದರವರು ಹೇಳಿದರು. ಇವರು ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಧ್ವಜಾರೋಹಣ ಗೈದು ಈ ಮೇಲಿನ ಮಾತುಗಳನ್ನಾಡಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಡಿ.ಜ್ಯೋತ್ಸ್ನಾರವರು ಭಾರತದ ಸಂವಿಧಾನವು […]

ರಾಜ್ಯಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟಕ್ಕೆ ಆಯ್ಕೆ

Friday, January 18th, 2013

ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇದರ ವತಿಯಿಂದ ಶಿಕ್ಷಕರಿಗೆ ಏರ್ಪಡಿಸಿದ ಸಹಪಠ್ಯ ಚಟುವಟಿಕೆಯ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರಾದ ಶ್ರೀ ರುಕ್ಮಯ ಪೂಜಾರಿ ಇವರು ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕು| ಲಾವಣ್ಯ ಪಾಠೋಪಕರಣ ತಯಾರಿಕಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಅತ್ಯುತ್ಕ್ರಷ್ಟತೆಯನ್ನು ಸಾಧಿಸಿ - ಸುಲೇಖಾ ವರದರಾಜ್

ಅತ್ಯುತ್ಕ್ರಷ್ಟತೆಯನ್ನು ಸಾಧಿಸಿ – ಸುಲೇಖಾ ವರದರಾಜ್

Tuesday, January 15th, 2013

ಮನಸ್ಸಿದ್ದಲ್ಲಿ ಮಾರ್ಗವಿದೆ ಎಂಬ ಮಾತಿನಂತೆ ಸಾಧಿಸುವ ಛಲವಿದ್ದರೆ ಯಾವುದೇ ಅಡೆತಡೆಗಳೂ ಗುರಿ ಸಾಧನೆಗೆ ಅಡ್ಡಿಯಾಗಲಾರವು ಎಂಬುದನ್ನು ನೈಜ ದೃಷ್ಟಾಂತಗಳ ಮೂಲಕ ವಿದ್ಯಾರ್ಥಿಗಳ ಮನಮುಟ್ಟುವ ಮಾತುಗಳನ್ನಾಡುತ್ತಾ ಸುಲೇಖಾ ವರದರಾಜ್ ರವರು ಕ್ರೀಡೆ, ಕಲೆ, ಕೃಷಿ, ರಾಜಕೀಯ ಇತ್ಯಾದಿ ಯಾವುದೇ ಕ್ಷೇತ್ರವಿರಲಿ ಅವಿರತ ಪರಿಶ್ರಮದ ಮೂಲಕ ಅತ್ಯುತ್ಕ್ರಷ್ಟತೆಯನ್ನು ಸಾಧಿಸಲು ಕರೆ ನೀಡಿದರು. ಅವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ನಡೆದ ಸಂವಾದ ಸಂದರ್ಭದಲ್ಲಿ ಈ ಮೇಲಿನ ಮಾತನ್ನಾಡುತ್ತಾ ದೂರದರ್ಶನ, ಮೊಬೈಲ್ ಇತ್ಯಾದಿ […]

ಗಾನ - ನೃತ್ಯ - ಯಕ್ಷಗಾನದ ವಾರ್ಷಿಕೋತ್ಸವ

ಗಾನ – ನೃತ್ಯ – ಯಕ್ಷಗಾನದ ವಾರ್ಷಿಕೋತ್ಸವ

Friday, January 11th, 2013

ದಿನಾಂಕ ೦೬.೦೧.೨೦೧೩ ರಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಗಾನ-ನೃತ್ಯ-ಯಕ್ಷ ಸಂಭ್ರಮವು ನಡೆಯಿತು. ಈ ಕಾರ್ಯಕ್ರಮಕ್ಕೆ ಚಾಲನೆಯನ್ನು ಹಿರಿಯ ವಿದ್ಯಾರ್ಥಿಗಳಾದ ಶರಣ್ ಕುಮಾರ್ ಮತ್ತು ದಿವ್ಯಾ.ಬಿ.ಕೆ ರವರು ದೀಪ ಪ್ರಜ್ವಲನೆಯ ಮೂಲಕ ನೆರವೇರಿಸಿದರು. ಇದಾದ ಬಳಿಕ ಸಂಗೀತಾಭ್ಯಾಸ ನಡೆಸುತ್ತಿರುವ ವಿದ್ಯಾರ್ಥಿಗಳ ‘ಗಾನ ಸಿಂಚನ’ ನಡೆಯಿತು. ಸುಮಾರು ೪.೩೦ ಗಂಟೆಗೆ ಸಭಾ ಕಾರ್ಯಕ್ರಮವು ಪ್ರಾರಂಭವಾಯಿತು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಅಧ್ಯಕ್ಷರಾಗಿ ಉಪಸ್ಥಿತರಿದ್ದ ಶ್ರೀ ಪಿ.ಕಮಲಾಕ್ಷ ಆಚಾರ್ ರವರು ಮಾತನಾಡಿ ಸಂಗೀತ, ಭರತನಾಟ್ಯ, ಯಕ್ಷಗಾನಗಳನ್ನು ಅಭ್ಯಾಸ ಮಾಡುವುದರೊಂದಿಗೆ ವಿದ್ಯಾರ್ಥಿಗಳು ತಮ್ಮ […]

ವಾರ್ಷಿಕ ಕ್ರೀಡಾ ಕೂಟ 2012-13

ವಾರ್ಷಿಕ ಕ್ರೀಡಾ ಕೂಟ 2012-13

Friday, January 4th, 2013
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹೊನಲು ಬೆಳಕಿನ ವಿವೇಕೋತ್ಸವ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹೊನಲು ಬೆಳಕಿನ ವಿವೇಕೋತ್ಸವ

Thursday, January 3rd, 2013

ದೈಹಿಕ, ಮಾನಸಿಕ ಮಕ್ಕಳ ವೃದ್ಧಿಗಾಗಿ ಕ್ರೀಡೆ ಸಹಕಾರಿ-ಡಾ| ಹರೀಶ್ ಕುಮಾರ್ ಶಿಕ್ಷಣ ಕೇವಲ ಜ್ಞಾನವನ್ನು ಮಾತ್ರ ವೃದ್ಧಿಸುವುದಲ್ಲದೆ ನಮ್ಮಲ್ಲಿ ಜೀವನ ಕಲೆಯನ್ನು ಬೆಳೆಸುವಲ್ಲಿ ಸಾಧ್ಯವಾಗಿಲ್ಲ. ಇದಕ್ಕೆ ಬದಲಾಗಿ ಕ್ರೀಡೋತ್ಸವ ಕಾರ್ಯಕ್ರಮ ದೈಹಿಕ ಮತ್ತು ಮಾನಸಿಕವಾಗಿ ಮಕ್ಕಳಲ್ಲಿ ಜ್ಞಾನ ವೃದ್ದಿಯಾಗಲು ಸಹಕಾರಿಯಾಗುತ್ತದೆ. ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಡಾ| ಹರೀಶ್ ಕುಮಾರ್ ಹೇಳಿದರು. ಅವರು ಇಲ್ಲಿನ ತೆಂಕಿಲ ವಿವೇಕನಗರ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಡಿಸೆಂಬರ್ ೯ ರಂದು ಸಂಜೆ ನಡೆದ ಹೊನಲು ಬೆಳಕಿನ ವಿವೇಕೋತ್ಸವ -೨೦೧೨ವನ್ನು […]

ಆಧುನಿಕ ಯುಗಕ್ಕೊಂದು ಆದರ್ಶಣೀಯ ಸವಾಲು

ಆಧುನಿಕ ಯುಗಕ್ಕೊಂದು ಆದರ್ಶಣೀಯ ಸವಾಲು

Thursday, November 29th, 2012

ಬರಬರುತ್ತಾ ಕೃಷಿ ವಲಯ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದೆ. ಅದರಲ್ಲೂ ಕೃಷಿಕೂಲಿಯಾಳುಗಳ ಕೊರತೆ ಬಹಳ ಗಂಭೀರವಾಗಿದ್ದು ಇದಕ್ಕೆ ಪರಿಹಾರವಾಗಿ ಎಷ್ಟೇ ಯಂತ್ರೋಪಕರಣ ಬಂದಿದೆಯಾದರೂ ಸಮಸ್ಯೆಗಳು ಮುಗಿಯಲೇ ಇಲ್ಲ. ಇದನ್ನು ಮನಗಂಡು ತೆಂಕಿಲದ ವಿವೇಕಾನಂದ ವಿದ್ಯಾಸಂಸ್ಥೆಯ ರಾಷ್ಟ್ರಪತಿ ಪುರಸ್ಕಾರ ಪರೀಕ್ಷೆಗೆ ತಯಾರು ನಡೆಸುತ್ತಿರುವ ಸ್ಕೌಟ್ ವಿದ್ಯಾರ್ಥಿಗಳು ಕೃಷಿ ಚಟುವಟಿಕೆಗಳಿಗೆ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಒಂದು ಆದರ್ಶನೀಯ. ಇತ್ತೀಚೆಗೆ ಮೊಟ್ಟೆತ್ತಡ್ಕದಲ್ಲಿ ಉಪೇಂದ್ರ ಬಲ್ಯಾಯ ರವರ ಭತ್ತದ ಗದ್ದೆಯಲ್ಲಿ ಭತ್ತದ ನರ್ಸರಿ(ನೇಜಿ) ತಯಾರು ಮಾಡಿ, ನೇಜಿ ತೆಗೆದು ಸಮಯಕ್ಕೆ ಸರಿಯಾಗಿ ನಾಟಿ […]

ವಿವೇಕೋತ್ಸವ ೨೦೧೨ ಆಮಂತ್ರಣ

ವಿವೇಕೋತ್ಸವ ೨೦೧೨ ಆಮಂತ್ರಣ

Wednesday, November 28th, 2012

ವಿವರಗಳಿಗೆ ಚಿತ್ರವನ್ನು ಕ್ಲಿಕ್ಕಿಸಿ.

ಪ್ರಬಂಧ ಸ್ಪರ್ಧೆ - ಪ್ರಥಮ ಸ್ಥಾನ

ಪ್ರಬಂಧ ಸ್ಪರ್ಧೆ – ಪ್ರಥಮ ಸ್ಥಾನ

Thursday, November 8th, 2012

ಪುರಸಭೆಯ ವತಿಯಿಂದ ಪುತ್ತೂರಿನ ಗುರುಭವನದಲ್ಲಿ ನಡೆದ ‘ಘನತ್ಯಾಜ್ಯ ವಿಲೇವಾರಿಯಲ್ಲಿ ವಿದ್ಯಾರ್ಥಿಯ ಪಾತ್ರ’ ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕು. ಶೀತಲ್ ಪ್ರಥಮ ಸ್ಥಾನ ಪಡೆದು 3000 ರೂ ನಗದು ಬಹುಮಾನ ಪಡೆದುಕೊಂಡಿದ್ದಾರೆ.

ವಿಜ್ಞಾನ ಸಮಾವೇಶ - ರಾಜ್ಯಮಟ್ಟಕ್ಕೆ ಆಯ್ಕೆ

ವಿಜ್ಞಾನ ಸಮಾವೇಶ – ರಾಜ್ಯಮಟ್ಟಕ್ಕೆ ಆಯ್ಕೆ

Tuesday, November 6th, 2012

ಉಪ್ಪಿನಂಗಡಿಯಲ್ಲಿ ನಡೆದ  ೨೦ನೇ ವಾರ್ಷಿಕ ದ.ಕ ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಸಮಾವೇಶದಲ್ಲಿ ‘ಜೈವಿಕ ಅನಿಲ ಬಳಸಿ, ದ್ರವಿಕೃತ ಅನಿಲ ಉಳಿಸಿ’ ಕಾರ್ಯಯೋಜನೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹರ್ಷಿತಾ.ಕೆ.ಸಿ ಮತ್ತು ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಜ್ಞಾನ ಮಾದರಿ - ಜಿಲ್ಲಾಮಟ್ಟಕ್ಕೆ ಆಯ್ಕೆ

ವಿಜ್ಞಾನ ಮಾದರಿ – ಜಿಲ್ಲಾಮಟ್ಟಕ್ಕೆ ಆಯ್ಕೆ

Tuesday, November 6th, 2012

ಉಪ್ಪಿನಂಗಡಿಯಲ್ಲಿ ನಡೆದ ೨೦ನೇ ವಾರ್ಷಿಕ ದ.ಕ ಜಿಲ್ಲಾ ಮಟ್ಟದ ಮಕ್ಕಳ ರಾಷ್ಟ್ರೀಯ ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವರ್ಷಿತ್, ಮಂಜುನಾಥ ಮತ್ತು ಪ್ರಣವ ಬೆಳ್ಳಾರೆ, ಅಜಯ್ ಇವರುಗಳ ತಂಡ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಯೋಗಾಸನ - ರಾಜ್ಯಮಟ್ಟಕ್ಕೆ ಆಯ್ಕೆ

ಯೋಗಾಸನ – ರಾಜ್ಯಮಟ್ಟಕ್ಕೆ ಆಯ್ಕೆ

Monday, November 5th, 2012

ಎಸ್.ಡಿ.ಎಂ ಮಂಗಳ ಜ್ಯೋತಿ ಶಾಲೆ ವಾಮಂಜೂರು ಇಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಡಿ.ಜಿ.ರಾಘವೇಂದ್ರ ಗೌಡ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ತರಬೇತಿ ನೀಡಿರುತ್ತಾರೆ.

ಕನ್ನಡ ರಾಜ್ಯೋತ್ಸವ

ಕನ್ನಡ ರಾಜ್ಯೋತ್ಸವ

Saturday, November 3rd, 2012

ಪುತ್ತೂರು ಪುರಭವನದಲ್ಲಿ ನಡೆದ  ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ರಾಜ್ಯಮಟ್ಟದಲ್ಲಿ ದ್ವಿತೀಯ

ರಾಜ್ಯಮಟ್ಟದಲ್ಲಿ ದ್ವಿತೀಯ

Saturday, November 3rd, 2012

ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಕೊಪ್ಪಳದಲ್ಲಿ  ನಡೆದ  ರಾಜ್ಯಮಟ್ಟದ ಬಾಲಕರ  ೧೪ರ ವಯೋಮಾನದ ಒಳಗಿನ  ತ್ರೋಬಾಲ್  ಪಂದ್ಯಾಟದಲ್ಲಿ ಪ್ರತಿನಿಧಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರಲ್ಲಿ ಪ್ರಜ್ವಲ್, ರಂಜೀತ್, ಸುಜೀತ್ ಇವರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  

ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಷ್ಟ್ರಮಟ್ಟಕ್ಕೆ ಆಯ್ಕೆ

Saturday, November 3rd, 2012

ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ  ಕೊಪ್ಪಳದಲ್ಲಿ ನಡೆದ ರಾಜ್ಯಮಟ್ಟದ ಬಾಲಕರ ೧೪ ವಯೋಮಾನದ ಒಳಗಿನ ತ್ರೋಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ  ಪ್ರಜ್ವಲ್ , ರಂಜಿತ್, ಸುಜೀತ್ ಇವರು ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಲು ಆಯ್ಕೆ ಯಾಗಿದ್ದಾರೆ.

ಶಿಕ್ಷಕರಿಗಾಗಿ ಶೈಕ್ಷಣಿಕ ಕಾರ್ಯಾಗಾರ

ಶಿಕ್ಷಕರಿಗಾಗಿ ಶೈಕ್ಷಣಿಕ ಕಾರ್ಯಾಗಾರ

Wednesday, October 31st, 2012

ದಿನಾಂಕ 25-10-2012ರಂದು ವಿವೇಕಾನಂದ ವಿದ್ಯಾ ಸಂಸ್ಧೆಯ ಶಿಕ್ಷಕರಿಗಾಗಿ ಮೂರು ದಿನಗಳ ಶೈಕ್ಷಣಿಕ ಕಾರ್ಯಾಗಾರವು ಉದ್ಘಾಟನೆಗೊಂಡಿತು. ಈ ಕಾರ್ಯಾಗಾರವನ್ನು ದೀಪ ಬೆಳಗಿಸುವುದರ ಮೂಲಕ ತಾಲೂಕು ಪಂಚಾಯಿತಿನ ಅಧ್ಯಕ್ಷರಾದ ಶ್ರೀಮತಿ ಶಶಿಪ್ರಭಾ ಸಂಪ್ಯರವರು ಉದ್ಘಾಟಿಸಿದರು. ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಶಿವಪ್ರಸಾದ ಇ. ಹಾಗೂ ವಿವೇಕಾನಂದ ಆಂಗ್ಲ ಮತ್ತು ಕನ್ನಡ ಮಾದ್ಯಮಾ ಶಾಲೆಯ ಮುಖ್ಯಗುರುಗಳಾದ ಶ್ರೀ ಸತೀಶ್ ರೈ, ಶ್ರೀಮತಿ ಅಶಾಬೆಳ್ಳಾರೆ ಉಪಸ್ಧಿತರಿದ್ದರು. ನಂತರದ ಅವಧಿಯಲ್ಲಿ ಪಠ್ಯಕ್ರಮ ಮತ್ತು ಭೋಧನೆ ಎಂಬ ವಿಷಯದಲ್ಲಿ ಕಾರ್ಯಾಗಾರವನ್ನು ಶ್ರೀ ಡಾ| […]

ಪರೀಕ್ಷಾ ಪೂರ್ವ ತಯಾರಿ

ಪರೀಕ್ಷಾ ಪೂರ್ವ ತಯಾರಿ

Saturday, October 20th, 2012

ಜೇಸಿಯ ರಾಷ್ಟ್ರ ತರಬೇತುದಾರ ರಾಜೇಂದ್ರ ಭಟ್ ಬೆಳ್ಮಣ್ಣು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ಮಕ್ಕಳಿಗೆ ಪರೀಕ್ಷಾ ಪೂರ್ವ ತಯಾರಿ, ಪ್ರೇರಣೆ ಹಾಗೂ ಧನಾತ್ಮಕ ಯೋಚನೆಗಳ ಬಗ್ಗೆ ದಿನಾಂಕ ೧೨.೧೦.೨೦೧೨ ರಂದು ಕಾರ್ಯಾಗಾರ ನಡೆಸಿದರು.     ಶಾಲಾ ಸಂಚಾಲಕರಾದ ಶ್ರೀ ರವೀಂದ್ರ.ಪಿ ಕಾರ್ಯಾಗಾರವನ್ನು ಉದ್ಫಾಟಿಸಿ ಶುಭ ಹಾರೈಸಿದರು. ಆಡಳಿತ ಮಂಡಳಿಯ ಸದಸ್ಯರಾದ ಡಾ.ಸುಲೇಖಾ ವರದರಾಜ್ , ಮುಖ್ಯಗುರುಗಳು , ಶಿಕ್ಷಕ ವೃಂದ ಉಪಸ್ಥಿತರಿದ್ದರು.  

ಭಗವದ್ಗೀತಾಧ್ಯಯನ

ಭಗವದ್ಗೀತಾಧ್ಯಯನ

Saturday, October 20th, 2012

ಸಂಸ್ಕೃತ ಶಬ್ಧಗಳ ತಪ್ಪು ಉಚ್ಛಾರಣೆಯು ಅರ್ಥವ್ಯತ್ಯಾಸವನ್ನುಂಟುಮಾಡುತ್ತದೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಇದರ ಸ್ಪಷ್ಟ, ನಿರ್ದಿಷ್ಟ ಉಚ್ಛಾರಣೆಯ ಕಡೆಗೆ ಗಮನ ಅತೀ ಅಗತ್ಯವಾಗಿದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ಡಾ.ಶ್ರೀಶ ಕುಮಾರ್ ನುಡಿದರು. ಇವರು ವಿವೇಕಾನಂದ ಕನ್ನಡ ಮಾಧ್ಯಮದ ಶಿಕ್ಷಕರಿಗೆ ಹಾಗೂ ಮಕ್ಕಳಿಗೆ ಭಗವದ್ಗೀತೆಯ ಶ್ಲೋಕಗಳ ಉಚ್ಛಾರಣಾ ಕ್ರಮದ ಬಗ್ಗೆ ತರಗತಿ ನಡೆಸಿದರು.

ಹಿರಿಯ ವಿದ್ಯಾರ್ಥಿಗಳ ಸಭೆ

ಹಿರಿಯ ವಿದ್ಯಾರ್ಥಿಗಳ ಸಭೆ

Monday, October 15th, 2012

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ೨೦೧೨-೧೩ನೇ ಸಾಲಿನ ಹಿರಿಯ ವಿದ್ಯಾರ್ಥಿಗಳ  ಸಭೆಯನ್ನು ದಿನಾಂಕ ೧೪.೧೦.೧೨ ರಂದು ಶಾಲಾ ವಠಾರದಲ್ಲಿ ನಡೆಸಲಾಯಿತು. ಸಭೆಯ ಪ್ರಾರಂಭದಲ್ಲಿ ಶಾಲಾ ಹಿರಿಯ ವಿದ್ಯಾರ್ಥಿಗಳಾದ ಯಶ್ವಿತ್ ಕುಮಾರ್ ಅಮೀನ್, ಅಭಿಷೇಕ್.ಡಿ ಹಾಗೂ ಇತರರು ಸಿದ್ಧಪಡಿಸಿದ ವಿಕಸನ ವಾರ್ತಾಸಂಚಿಕೆಯ ವೀಡಿಯೋ ಚಿತ್ರಣವನ್ನು ಪ್ರದರ್ಶಿಸಿ ಅವರ ಸಾಧನೆಯನ್ನು ಶ್ಲಾಘಿಸಲಾಯಿತು. ನಂತರ ಹಿರಿಯ ವಿದ್ಯಾರ್ಥಿ ಸಂಘದ  ಪದಾಧಿಕಾರಿಗಳನ್ನು  ಈ ಸಂದರ್ಭದಲ್ಲಿ ಆರಿಸಲಾಯಿತು. ಸಂಘದ ಅಧ್ಯಕ್ಷರಾಗಿ ಪುನೀತ್ ಎನ್.ಎ, ಉಪಾಧ್ಯಕ್ಷರಾಗಿ ಅಂಕಿತಾ.ಜಿ, ಕಾರ್ಯದರ್ಶಿಯಾಗಿ ವಿರೂಪಾಕ್ಷ ಭಟ್, ಸಹಕಾರ್ಯದರ್ಶಿಯಾಗಿ ಜ್ಯೋತಿಶ್ರೀ ಹಾಗೂ […]

ಹರಿಕಥಾ - ಪ್ರವಚನ

ಹರಿಕಥಾ – ಪ್ರವಚನ

Monday, October 15th, 2012

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿ ದಿನಾಂಕ ೧೩.೧೦.೨೦೧೨ ರಂದು  ಹರಿಕಥಾ ಮತ್ತು  ಭಾವಗಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಉದ್ಫಾಟನೆಯನ್ನು ಶ್ರೀಮತಿ ವಿದ್ಯಾ ಕಾಂಚನ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ವಿವೇಕಾನಂದ ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರಿ ರವೀಂದ್ರ.ಪಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ವೇದಿಕೆಯಲ್ಲಿ ಶ್ರೀಮತಿ ಆಶಾಬೆಳ್ಳಾರೆ ಉಪಸ್ಥಿತರಿದ್ದರು. ಬಳಿಕ ಚಿ. ಗೌರೀಶ ಕಾರಂತ ರಿಂದ ಭಕ್ತಮಾರ್ಕಂಡೇಯ ಎಂಬ ಹರಿಕಥಾ ಭಾಗವತ ನಡೆಯಿತು. ನಂತರ ಶಾಲಾ ವಿದ್ಯಾರ್ಥಿನಿಯರಿಂದ ಭಾವಗಾನ ಕಾರ್ಯಕ್ರಮ  ನಡೆಯಿತು. ಕಾರ್ಯಕ್ರಮದ ನಿರೂಪಣೆ ಹಾಗೂ […]

ವಿವೇಕಾನಂದ ಕನ್ನಡ ಮಾಧ್ಯಮ - ಸಮಗ್ರ ಪ್ರಶಸ್ತಿ

ವಿವೇಕಾನಂದ ಕನ್ನಡ ಮಾಧ್ಯಮ – ಸಮಗ್ರ ಪ್ರಶಸ್ತಿ

Friday, October 5th, 2012

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಡಬದಲ್ಲಿ ಎರಡು ದಿನಗಳ ಕಾಲ ನಡೆದ  ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ ಲಭಿಸಿದೆ.

ಮೊಸರು ಕುಡಿಕೆ - ಸ್ಪರ್ಧಾ ವಿಜೇತರು

ಮೊಸರು ಕುಡಿಕೆ – ಸ್ಪರ್ಧಾ ವಿಜೇತರು

Monday, September 10th, 2012

ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಪುತ್ತೂರು ದ.ಕ ಇಲ್ಲಿ ನಡೆದ ೪ನೇ ವರ್ಷದ ಮೊಸರು ಕುಡಿಕೆ ಉತ್ಸವದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ರಾಮಪ್ರಸಾದ್ ಭಾರತಮಾತೆಯ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ, ಸ್ವಾತಿಭಟ್, ಭಗವದ್ಗೀತೆ ಪ್ರಥಮ, ಶ್ವೇತಾ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಸ್ಪರ್ಧಾ ವಿಜೇತರು

ಸ್ಪರ್ಧಾ ವಿಜೇತರು

Monday, September 10th, 2012

ಎಲ್.ಐ.ಸಿ ಪುತ್ತೂರು ಇವರ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾದ ಶ್ರೀಲಕ್ಷ್ಮೀ ಗಾಯನ ಸ್ಪರ್ಧೆಯಲ್ಲಿ ಪ್ರಥಮ, ಭಗವದ್ಗೀತೆ ಪಠಣದಲ್ಲಿ ವರುಣ್ ದ್ವಿತೀಯ ಹಾಗೂ ಚಿತ್ರಕಲೆಯಲ್ಲಿ ಗೌತಮ್ ದ್ವಿತೀಯ ಅಭಿನಯ ಗೀತೆಯಲ್ಲಿ ಅಧಿತಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಖೋ-ಖೋ ವಿಭಾಗ ಮಟ್ಟಕ್ಕೆ ಆಯ್ಕೆ

ಖೋ-ಖೋ ವಿಭಾಗ ಮಟ್ಟಕ್ಕೆ ಆಯ್ಕೆ

Monday, September 10th, 2012

ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಬೈಂದೂರಿನಲ್ಲಿ ನಡೆದ ಜಿಲ್ಲಾಮಟ್ಟದ ಹುಡುಗಿಯರ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಗಳಿಸಿ ಮೈಸೂರಿನಲ್ಲಿ ನಡೆಯುವ ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಶಿಕ್ಷಕ - ರಕ್ಷಕ ಸಂಘಕ್ಕೆ ಆಯ್ಕೆ

ಶಿಕ್ಷಕ – ರಕ್ಷಕ ಸಂಘಕ್ಕೆ ಆಯ್ಕೆ

Monday, August 27th, 2012

೨೦೧೨-೧೩ ನೇ ಸಾಲಿನ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀ ರಾಮಣ್ಣ ಗೌಡ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ಭಾರತಿ ಶಶಿಧರ್ ಆಯ್ಕೆಯಾಗಿದ್ದಾರೆ.    

ಸ್ವಾತಂತ್ರ್ಯ ದಿನಾಚರಣೆ

ಸ್ವಾತಂತ್ರ್ಯ ದಿನಾಚರಣೆ

Thursday, August 16th, 2012

ವಿವೇಕಾನಂದ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆ ಇಲ್ಲಿ ದಿನಾಂಕ 15.08.2012 ರಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಿವೃತ್ತ ಸೇನಾ ಯೋಧರಾದ ಶ್ರೀರಂಗಶಾಸ್ತ್ರೀ ಮಣಿಲರವರು ಭಾಗವಹಿಸಿ ಧ್ವಜಾರೋಹಣವನ್ನು ಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಮಹತ್ವವವ್ವು ತಿಳಿಸಿದರು. ಈ ಸಂಧರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಂಗಾರಡ್ಕ ವಿಶ್ವೇಶ್ವರ ಭಟ್ ಹಾಗೂ ಸಂಚಾಲಕರಾದ ಶ್ರೀ ರವೀಂದ್ರ.ಪಿ, ಆಡಳಿತ ಮಂಡಳಿ ಸದಸ್ಯರಾದ ಶ್ರಿ ಅಚ್ಯುತ್ ನಾಯಕ್ ಇವರು ಘೋಷಣೆಯನ್ನು ಕೂಗಿದರು. ಬಳಿಕ ಶ್ರೀ ಜಯಪ್ರಕಾಶ್ ಕಲ್ಲಡ್ಕ ಇವರಿಂದ ಏಕವ್ಯಕ್ತಿ ಯಕ್ಷಗಾನ […]

ಜಿಲ್ಲಾಮಟ್ಟದ ವಾಲಿಬಾಲ್- ತ್ರೋಬಾಲ್ ಪಂದ್ಯಾಟ

ಜಿಲ್ಲಾಮಟ್ಟದ ವಾಲಿಬಾಲ್- ತ್ರೋಬಾಲ್ ಪಂದ್ಯಾಟ

Monday, August 13th, 2012

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಇಲ್ಲಿ ದಿನಾಂಕ ೧೧.೦೮.೨೦೧೨ ರಂದು ವಿದ್ಯಾಭಾರತಿ ಕರ್ನಾಟಕ  ವತಿಯಿಂದ ಜಿಲ್ಲಾ ಮಟ್ಟದ ತ್ರೋಬಾಲ್ ಮತ್ತು ವಾಲಿಬಾಲ್  ಪಂದ್ಯಾಟ ನಡೆಯಿತು. ಈ ಪಂದ್ಯಾಟದ ಉದ್ಫಾಟಕರಾಗಿ ಶ್ರೀ ಮೃತ್ಯುಂಜೇಶ್ವರ  ದೇವಸ್ಥಾನ ಮುಂಡೂರು ಇಲ್ಲಿಯ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಜಯಂತ ನಡುಬೈಲು ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಹರೀಶ್ ಪುತ್ತೂರಾಯ ಹಾಗೂ ಅಧ್ಯಕ್ಷರಾಗಿ ಶ್ರೀ ಬಂಗಾರಡ್ಕ ವಿಶ್ವೇಶ್ವರ ಭಟ್ ಉಪಸ್ಥಿತರಿದ್ದು ಕ್ರೀಡಾಳುಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ಮತ್ತು […]

ಇಂಟರ್ಯಾಕ್ಟ್ ಪದಗ್ರಹಣ ಸಮಾರಂಭ

ಇಂಟರ್ಯಾಕ್ಟ್ ಪದಗ್ರಹಣ ಸಮಾರಂಭ

Tuesday, August 7th, 2012

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ೨೦೧೨-೧೩ ನೇ ಸಾಲಿನ ಇಂಟರ್ಯಾಕ್ಟ್ ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭವು ಪುತ್ತೂರು ಪೂರ್ವ ರೋಟರಿ ಕ್ಲಬ್ ಅಧ್ಯಕ್ಷರಾದ ರೋ. ಹರೀಶ್.ಕೆ.ಪುತ್ತೂರಾಯ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ರೋ. ಜಯರಾಮ್ ಭಟ್, ರೋ. ವಿಶ್ವನಾಥ ನಾಯಕ್, ರೋ. ಪ್ರಮೀಳಾರಾವ್ ಉಪಸ್ಥಿತರಿದ್ದರು. ಶಾಲಾ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ ನೂತನ ಇಂಟರ್ಯಾಕ್ಟ್ ಸದಸ್ಯರಿಗೆ ಶುಭಹಾರೈಸಿದರು. ಕಿರಣಸುಬ್ರಹ್ಮಣ್ಯ ನೂತನ ಅಧ್ಯಕ್ಷರಾಗಿ, ಪ್ರಜ್ಞಾ. ಪಿ. ಆರ್ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಅಪೂರ್ವಗೌರಿ, ಹರ್ಷಿತಾ, ಪೂಜಾ, ಚಂದನ್, ಕಾರ್ತಿಕ್, ರಕ್ಷಿತ್, ಪವನ್ […]

ತಾಲೂಕು ಮಟ್ಟದ  ಯೋಗಾಸನ

ತಾಲೂಕು ಮಟ್ಟದ ಯೋಗಾಸನ

Tuesday, August 7th, 2012

ದ. ಕ. ಜಿ. ಪಂ ಹಿರಿಯ ಪ್ರಾಥಮಿಕ ಶಾಲೆ ಪರ್ಪುಂಜ ಇದರ ಸುವರ್ಣ ಸಂಭ್ರಮ ವರ್ಷದ ೨೦೧೨  ಇದರ ಅಂಗವಾಗಿ ಪುತ್ತೂರು ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಪ್ರೌಢಶಾಲಾ ಬಾಲಕಿಯರ ತಂಡ ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.  

ಯೋಗಾಸನ ಸ್ಪರ್ಧೆ - ಪ್ರಥಮ ಸ್ಥಾನ

ಯೋಗಾಸನ ಸ್ಪರ್ಧೆ – ಪ್ರಥಮ ಸ್ಥಾನ

Tuesday, July 31st, 2012

ಹುಡುಗರು ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ಮಹಾವಿದ್ಯಾಲಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ  ಮಾಧ್ಯಮದ ವಿದ್ಯಾರ್ಥಿಗಳಾದ  ರಾಘವೇಂದ್ರ ಮತ್ತು ತಂಡ ಕಿಶೋರವಿಭಾಗದ ಹುಡುಗರ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಹುಡುಗಿಯರು ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ಮಹಾವಿದ್ಯಾಲಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ  ಮಾಧ್ಯಮದ ವಿದ್ಯಾರ್ಥಿಗಳಾದ ಸುಶ್ಮಿತಾ ಮತ್ತು ತಂಡ ಕಿಶೋರ ವಿಭಾಗದ ಹುಡುಗಿಯರ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಖೋ - ಖೋ - ಪ್ರಥಮ ಸ್ಥಾನ

ಖೋ – ಖೋ – ಪ್ರಥಮ ಸ್ಥಾನ

Tuesday, July 31st, 2012

ಬಾಲಕರು ವಿದ್ಯಾಭಾರತಿ ಕರ್ನಾಟಕ ಮತ್ತು ಸರಸ್ವತಿ ವಿದ್ಯಾಲಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ  ಮಾಧ್ಯಮದ  ಕಿಶೋರ ವಿಭಾಗದ ಬಾಲಕರು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕಿಯರು ವಿದ್ಯಾಭಾರತಿ ಕರ್ನಾಟಕ ಮತ್ತು ಸರಸ್ವತಿ ವಿದ್ಯಾಲಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ  ಮಾಧ್ಯಮದ ಕಿಶೋರ ವಿಭಾಗದ ಬಾಲಕಿಯರು ಪ್ರಥಮಸ್ಥಾನ ಪಡೆದುಕೊಂಡಿದ್ದಾರೆ.

ಭಜನೆ - ಪ್ರಥಮ

ಭಜನೆ – ಪ್ರಥಮ

Tuesday, July 31st, 2012

ವಿದ್ಯಾಭಾರತಿ ಕರ್ನಾಟಕ ಮತ್ತು ಶಾರದಾ ಮಹಾವಿದ್ಯಾಲಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ  ಮಾಧ್ಯಮದ ವಿದ್ಯಾರ್ಥಿಗಳಾದ ಈಶ್ವರ ಸಂದೇಶ ಕಿಶೋರ ವಿಭಾಗದ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಪ್ರಥಮಸ್ಥಾನ ಹಾಗೂ ಕಿಶೋರ ವಿಭಾಗದ ಭಜನೆಯಲ್ಲಿ ಸಂಗೀತ ಮತ್ತು ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.

Highslide for Wordpress Plugin