ವಿವೇಕಾನಂದರ ಆದರ್ಶಗಳು ನಮ್ಮ ಜೀವನಕ್ಕೆ ದಾರಿದೀಪವಾಗಿದೆ - ಶ್ರೀ ಅಶೋಕ್ ಕುಂಬ್ಳೆ

ವಿವೇಕಾನಂದರ ಆದರ್ಶಗಳು ನಮ್ಮ ಜೀವನಕ್ಕೆ ದಾರಿದೀಪವಾಗಿದೆ – ಶ್ರೀ ಅಶೋಕ್ ಕುಂಬ್ಳೆ

Friday, January 17th, 2025

ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳಿಗೆ ಪೂರಕವಾಗಿ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ವಿವೇಕಾನಂದರ ಆದರ್ಶಗಳನ್ನು ಪಾಲಿಸುತ್ತಾ ಸಾಧನೆಗೈಯಬೇಕೆಂದು ಶಾಲಾ ಆಡಳಿತಮಂಡಳಿಯ ಕೋಶಾಧಿಕಾರಿಯಾದ ಶ್ರೀಯುತ ಅಶೋಕ್ ಕುಂಬ್ಳೆ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ವಿವೇಕಾನಂದ ಜಯಂತಿ ಮತ್ತು ಮಕರ ಸಂಕ್ರಾ0ತಿ ಆಚರಣೆಯ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಅಭ್ಯಾಗತರಾಗಿ ಆಗಮಿಸಿದ ಶಾಲಾ ಪೋಷಕರಾದ ಶ್ರೀಮತಿ ಗೀತಾ ರೈ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ವಿದ್ಯಾರ್ಥಿ ಧನುಷ್.ಡಿ.ಜಿ ವಿವೇಕಾನಂದರ ಚಿಕಾಗೋ ಭಾಷಣದ ಸಾರಾಂಶವನ್ನು ತಿಳಿಸಿದರು. ಕೌಶಿಕ್ ಮಕರ ಸಂಕ್ರಾ0ತಿಯ ವಿಶೇಷತೆಯನ್ನು […]

ಮಕರ ಸಂಕ್ರಾಂತಿ ಹಬ್ಬವು ಸಮೃದ್ಧಿಯ ಪ್ರತೀಕವಾಗಿದೆ – ವನಿತಾ ಸುರೇಶ್

ಮಕರ ಸಂಕ್ರಾಂತಿ ಹಬ್ಬವು ಸಮೃದ್ಧಿಯ ಪ್ರತೀಕವಾಗಿದೆ – ವನಿತಾ ಸುರೇಶ್

Friday, January 17th, 2025

ಸೂರ್ಯನ ಪಥವು ದಕ್ಷಿಣಾಯನದಿಂದ ಉತ್ತರಾಯಣದ ಕಡೆಗೆ ಚಲಿಸುತ್ತದೆ. ಅಂತೆಯೇ ನಮ್ಮಲ್ಲಿ ಉತ್ತಮ ಗುಣಗಳನ್ನು ಬೆಳೆಸಿಕೊಂಡು ನಮ್ಮ ಪಥವನ್ನು ಸಾಧನೆಯ ಕಡೆಗೆ ಚಲಿಸಬೇಕು ಎಂದು ಶಾಲಾ ಅನ್ನಪೂರ್ಣಾ ಕಾರ್ಯಕಾರಿಣಿ ಸಮಿತಿ ಉಪಾಧ್ಯಕ್ಷೆ ಶ್ರೀಮತಿ ವನಿತಾ ಸುರೇಶ್ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಮಕರ ಸಂಕ್ರಾಂತಿ ಮತ್ತು ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಈ ಮೇಲಿನ ಮಾತುಗಳನ್ನಾಡಿದರು. ಅಭ್ಯಾಗತರಾಗಿ ಆಗಮಿಸಿದ ಶಾಲಾ ಪೋಷಕರಾದ ಶ್ರೀಮತಿ ಸವಿತಾ ಬಹುಮಾನ ವಿತರಿಸಿದರು. ಶಾಲಾ ವಿದ್ಯಾರ್ಥಿಯಾದ ಧನುಷ್ ಡಿ.ಜಿ ವಿವೇಕಾನಂದರ ಆದರ್ಶದ ಕುರಿತು ಮಾತನಾಡಿದರು. […]

ಸಂಕ್ರಾಂತಿ ಹಿಂದೂಗಳ ಪವಿತ್ರ ಹಬ್ಬ - ಶ್ರೀಮತಿ ಕ್ಷಮಾ ಬಿ ಎಸ್

ಸಂಕ್ರಾಂತಿ ಹಿಂದೂಗಳ ಪವಿತ್ರ ಹಬ್ಬ – ಶ್ರೀಮತಿ ಕ್ಷಮಾ ಬಿ ಎಸ್

Friday, January 17th, 2025

ಸಮೃದ್ಧಿಯ ಸಂಕೇತವಾದ ಸಂಕ್ರಾಂತಿ ಹಬ್ಬವು ಎಳ್ಳು -ಬೆಲ್ಲದ ಸಮ್ಮಿಶ್ರಣದಂತೆ ಎಲ್ಲರ ಬಾಳಿನಲ್ಲೂ ಹೊಸ ಚೈತನ್ಯವನ್ನು ಮೂಡಿಸಲಿ ಎಂದು ಶಾಲಾ ಮಾತೃಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಕ್ಷಮಾ ಬಿ.ಎಸ್ ಇವರು  ಶಾಲೆಯಲ್ಲಿ ನಡೆದ ಮಕರ ಸಂಕ್ರಾಂತಿ ಆಚರಣೆಯ ಸಂದರ್ಭದಲ್ಲಿ ಅಧ್ಯಕ್ಷೀಯ ನೆಲೆಯಲ್ಲಿಈ ಮೇಲಿನ ಮಾತನ್ನಾಡಿದರು. ಅಭ್ಯಾಗತರಾಗಿ ಆಗಮಿಸಿದ ಶಾಲಾ ಪೋಷಕರಾದ ಶ್ರೀಮತಿ ದೀಪಿಕಾರವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು. ಪೂರ್ವಪ್ರಾಥಮಿಕ ತರಗತಿಯ ವಿದ್ಯಾರ್ಥಿಗಳು ವಿವೇಕಾನಂದರ ಉಡುಗೆ – ತೊಡುಗೆಯಲ್ಲಿ ಸಂಭ್ರಮಿಸಿದರು. ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ […]

ಗಾನ-ನೃತ್ಯ-ಯಕ್ಷ ಸಂಭ್ರಮ – ೨೦೨೫ ಪೋಷಕರ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಗಾನ-ನೃತ್ಯ-ಯಕ್ಷ ಸಂಭ್ರಮ – ೨೦೨೫ ಪೋಷಕರ ಸಮಿತಿಯ ಪದಾಧಿಕಾರಿಗಳ ಆಯ್ಕೆ

Thursday, January 16th, 2025

                         ಶೃತಿ ವಿಸ್ಮಿತ್                ಹರೀಶ್ ಆಚಾರ್ಯ              ಶ್ರೀಮತಿ ಗುಲಾಬಿ ಶಾಲೆಯಲ್ಲಿ ೨೦೨೪-೨೫ನೇ ಸಾಲಿನ ಗಾನ-ನೃತ್ಯ-ಯಕ್ಷ ಸಂಭ್ರಮದ ಪೋಷಕರ ಸಭೆಯಲ್ಲಿ ಈ ವರ್ಷದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಪ್ರಸಕ್ತ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಶೃತಿ ವಿಸ್ಮಿತ್, ಕಾರ್ಯದರ್ಶಿಗಳಾಗಿ ಶ್ರೀ ಹರೀಶ್ ಆಚಾರ್ಯ, ಉಪಕಾರ್ಯದರ್ಶಿಯಾಗಿ […]

ಪ್ರತಿಭಾ ಪುರಸ್ಕಾರ

ಪ್ರತಿಭಾ ಪುರಸ್ಕಾರ

Thursday, December 26th, 2024

“ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿಯೂ ಪರಿಶ್ರಮದಿಂದ ಉತ್ಕೃಷ್ಟ  ಸಾಧನೆ ಮಾಡಬೇಕು. ಆ ಮೂಲಕ ಗುರುವನ್ನೇ ಮೀರಿಸಿದ ಶಿಷ್ಯ ಎಂದು ಕಲಿಸಿದ ಗುರುಗಳು ಹೆಮ್ಮೆ ಪಡುವಂತಾಗಬೇಕು” ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರರವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ‘ಪ್ರತಿಭಾ ಪುರಸ್ಕಾರ’ ೨ನೇ ಅವಧಿಯ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಕೋಶಾಧಿಕಾರಿಗಳಾದ ಶ್ರೀ ಅಶೋಕ್ ಕುಂಬ್ಳೆ ಶುಭ ಹಾರೈಸಿದರು. ಅಭ್ಯಾಗತರಾಗಿ ಆಗಮಿಸಿದ್ದ ಅಡ್ವಾನ್ಸ್ ಟ್ಯಾಕ್ಸ್ ಅನಾಲಿಸ್ಟ್ […]

‘ಪ್ರತಿಭಾ ಪುರಸ್ಕಾರ’

‘ಪ್ರತಿಭಾ ಪುರಸ್ಕಾರ’

Thursday, December 26th, 2024

ಹಿರಿಯರ ಮಾರ್ಗದರ್ಶನ ಮಕ್ಕಳ ಸುಗಮ ಜೀವನಕ್ಕೆ ಆಧಾರ – ಶ್ರೀಮತಿ ವೀಣಾ ನಾಗೇಶ್ ತಂತ್ರಿ ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳಿಸುವುದರ ಜೊತೆಗೆ ಶೈಕ್ಷಣಿಕವಾಗಿಯೂ ಮುತುವರ್ಜಿವಹಿಸಿ ಉತ್ತಮ ಫಲಿತಾಂಶ ಪಡೆದು ಶಾಲೆಗೂ ಹೆತ್ತವರಿಗೂ ಕೀರ್ತಿ ತರುವಂತಾಗಬೇಕು. ಹಿರಿಯರು ನೀಡುವ ಮಾರ್ಗದರ್ಶನ ಸಂಸ್ಕಾರದಂತೆ ನಡೆದಾಗ ಜೀವನ ಸುಗಮವಾಗುತ್ತದೆ ಎಂದು ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ವೀಣಾ ನಾಗೇಶ್ ತಂತ್ರಿ ಅವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ‘ಪ್ರತಿಭಾ ಪುರಸ್ಕಾರ’ ಮೊದಲ ಅವಧಿಯ ಕಾರ್ಯಕ್ರಮವನ್ನು ದೀಪ […]

ಡ್ರಾಯಿಂಗ್ ಗ್ರೇಡ್ ಪರೀಕ್ಷೆ- ಶೇ.100 ಫಲಿತಾಂಶ.

ಡ್ರಾಯಿಂಗ್ ಗ್ರೇಡ್ ಪರೀಕ್ಷೆ- ಶೇ.100 ಫಲಿತಾಂಶ.

Thursday, December 26th, 2024

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ  ಶಾಲೆಗೆ ಶೇ.100 ಬಂದಿರುತ್ತದೆ. ಶಾಲೆಯ ಒಟ್ಟು 40 ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿದ್ದಾರೆ. ಹೈಯರ್ ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 15 ವಿದ್ಯಾರ್ಥಿಗಳು ಅತ್ಯುತ್ತಮ (ಡಿಸ್ಟಿಂಕ್ಷನ್) ಶ್ರೇಣಿಯಲ್ಲಿ, 05 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಲೋವರ್ ವಿಭಾಗದಲ್ಲಿ ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಕು. ಸಾಯೀಶ್ವರಿ ಡಿ ಇವಳು ವಿಶಿಷ್ಠ ಶ್ರೇಣಿಯೊಂದಿಗೆ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು […]

ವಿಕಸಿತ ಸಂಭ್ರಮ -ವಾರ್ಷಿಕ ಕ್ರೀಡಾಕೂಟ

ವಿಕಸಿತ ಸಂಭ್ರಮ -ವಾರ್ಷಿಕ ಕ್ರೀಡಾಕೂಟ

Tuesday, December 24th, 2024

  ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ವಿಕಸಿತ ಸಂಭ್ರಮ ನಡೆಯಿತು. ಸ.ಹಿ.ಪ್ರಾ ಉನ್ನತೀಕರಿಸಿದ ಶಾಲೆ, ಅನಂತಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ಸುನೀತಾ ರೈ ಧ್ಜಜಾರೋಹಣಗೈದು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಲೋಕೇಶ್ ಎಸ್ ಆರ್ ಉದ್ಘಾಟಿಸಿ ಉತ್ತಮ ಆಹಾರಾಭ್ಯಾಸ, ಕ್ರೀಡಾ ತರಬೇತಿ ಮತ್ತು ಪ್ರೇರಣೆಯಿಂದಾಗಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ತಮ್ಮ ಸಂಸ್ಥೆ ಗುರುತಿಸುವಂತಾಗಿದೆ ಅದೇ ರೀತಿ ಶೈಕ್ಷಣಿಕವಾಗಿಯೂ ಉತ್ತಮ ಫಲಿತಾಂಶ ಬರುವಂತೆ ಪ್ರಯತ್ನಿಸಿ ಎಂದು ತಿಳಿಸಿದರು. […]

‘ಸಾಂಸ್ಕೃತಿಕ ಸಮನ್ವಯ’ ವರ್ಷದ ಹಬ್ಬ  - 2024

‘ಸಾಂಸ್ಕೃತಿಕ ಸಮನ್ವಯ’ ವರ್ಷದ ಹಬ್ಬ – 2024

Thursday, December 12th, 2024

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಾಂಸ್ಕೃತಿಕ ಸಮನ್ವಯ ‘ವರ್ಷದ ಹಬ್ಬ-2024’ ನಡೆಯಿತು. ಸ್ವಾಮಿ ವಿವೇಕಾನಂದರ ಬದುಕು ನಮಗೆ ಆದರ್ಶವಾಗಲಿ, ಸಾಮಾಜಿಕ ಕೆಡುಕುಗಳನ್ನು ಸಂಹರಿಸುವ ಶ್ರೀಕೃಷ್ಣರಾಗೋಣ – ಕಿಶೋರ್ ಕುಮಾರ್ ಬೊಟ್ಯಾಡಿ – ಗೌರವಾರ್ಪಣೆ ಸ್ವೀಕರಿಸಿ ಮಾತನಾಡಿದ ಕಾರ್ಯಕ್ರಮದ ಮುಖ್ಯ ಅಭ್ಯಾಗತರಲ್ಲಿ ಒಬ್ಬರಾಗಿದ್ದ, ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೊಟ್ಯಾಡಿ ಅವರು, ಪುತ್ತೂರು ಮಹಾಲಿಂಗೇಶ್ವರ ದೇವರ ಕೃಪಾ ಕಟಾಕ್ಷ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಶೀರ್ವಾದ ಮತ್ತು ನಿಮ್ಮಲ್ಲರ ಪ್ರೀತಿ – ಅಭಿಮಾನದ ಬಲದಿಂದ ಇಂದು ನಾನ್ನು ಎಂಎಲ್ಸಿಯಾಗಿ […]

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ – ದ್ವಿತೀಯ

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ – ದ್ವಿತೀಯ

Friday, December 6th, 2024

ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮತ್ತು ಹೋಲಿ ರಿಡೀಮರ್ ಶಿಕ್ಷಣ ಸಂಸ್ಥೆಗಳು ಬೆಳ್ತಂಗಡಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾಕಾರಂಜಿಯಲ್ಲಿ  ಶಾಲೆಯ ಶ್ರೀಕೃಷ್ಣ ಬಿ( ಶ್ರೀ ವೆಂಕಟೇಶ.ಬಿ ಮತ್ತು ಶ್ರೀಮತಿ ಮಂಗಳ ಗೌರಿ ದಂಪತಿಗಳ ಪುತ್ರ) -ಹಿರಿಯ ಪ್ರಾಥಮಿಕ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾನೆ.

ಪ್ರತಿಭಾ ಕಾರಂಜಿ –  ಜಿಲ್ಲಾಮಟ್ಟಕ್ಕೆ ಆಯ್ಕೆ

ಪ್ರತಿಭಾ ಕಾರಂಜಿ – ಜಿಲ್ಲಾಮಟ್ಟಕ್ಕೆ ಆಯ್ಕೆ

Wednesday, December 4th, 2024

                                                                                    ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕಛೇರಿ […]

ಸಾಂಸ್ಕೃತಿಕ ಸಮನ್ವಯ – ವರ್ಷದ ಹಬ್ಬ - 2024

ಸಾಂಸ್ಕೃತಿಕ ಸಮನ್ವಯ – ವರ್ಷದ ಹಬ್ಬ – 2024

Wednesday, December 4th, 2024
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸದೃಶ ಸಂಭ್ರಮ - 2024

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸದೃಶ ಸಂಭ್ರಮ – 2024

Wednesday, December 4th, 2024

‘ಅನುಭವ ಜನ್ಯ ಕಲಿಕೆಗೆ ಹೆಚ್ಚು ಮಹತ್ವ ಕೊಡಬೇಕು ‘     – ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ.ಮಾನ್ಯ ಶಾಸಕರು, ಪುತ್ತೂರು ವಿಧಾನಸಭಾ ಕ್ಷೇತ್ರ.                                                                                           […]

ಜ್ಞಾನ –ವಿಜ್ಞಾನ ಮೇಳ – ರಾಷ್ಟ್ರಮಟ್ಟದಲ್ಲಿ ದ್ವಿತೀಯ

ಜ್ಞಾನ –ವಿಜ್ಞಾನ ಮೇಳ – ರಾಷ್ಟ್ರಮಟ್ಟದಲ್ಲಿ ದ್ವಿತೀಯ

Tuesday, November 19th, 2024

ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಕೃತಿ ಮಹೋತ್ಸವ ಇದರ ವತಿಯಿಂದ ಸರಸ್ವತಿ ವಿದ್ಯಾ ಮಂದಿರ, ಸಂಸ್ಕೃತಿ ಭವನ, ಋಷಿ ನಗರ, ಉಜ್ಜೈನಿ (ಮಧ್ಯಪ್ರದೇಶ) ಇಲ್ಲಿ ನಡೆದ ರಾಷ್ಟ್ರಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆಯ ಕ್ಲೇ ಮಾಡೆಲಿಂಗ್ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ನಿಖಿಲ್ (ಕೋಡಿಂಬಾಡಿ ನಿವಾಸಿ ಕೃಷ್ಣಪ್ಪ ಮತ್ತು ಧನವತಿ ದಂಪತಿಗಳ ಪುತ್ರ) ದ್ವಿತೀಯ ಸ್ಥಾನ ಪಡೆದಿದ್ದಾನೆ. ಇವನಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಇವರು ತರಬೇತಿ ಮಾರ್ಗದರ್ಶನ ನೀಡಿದ್ದರು

ತಂಬಾಕು ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಹಿತಿ ಕಾರ್ಯಾಗಾರ

ತಂಬಾಕು ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಹಿತಿ ಕಾರ್ಯಾಗಾರ

Wednesday, November 13th, 2024

                     ತಂಬಾಕಿನಿಂದ ತಯಾರಿಸುವ ವಿವಿಧ ವಸ್ತುಗಳ ಸೇವನೆಯಿಂದ ದೈಹಿಕ, ಮಾನಸಿಕ ಹಾಗೂ ಕೌಟುಂಬಿಕ ಜೀವನದ ಮೇಲೆ ಉಂಟಾಗುವ ದುಷ್ಫರಿಣಾಮಗಳ ಬಗ್ಗೆ ಜೊತೆಗೆ ಮನೆ ಹಾಗೂ ಸುತ್ತಲಿನ ಸಮಾಜದಲ್ಲಿ ಜಾಗೃತಿ ಮೂಡಿಸುವಂತೆ ಉದಾಹರಣೆಗಳ ಮೂಲಕ ವಿವರಿಸುತ್ತಾ ಶಾಲಾ ವಿದ್ಯಾರ್ಥಿಗಳಿಗೆ ‘ತಂಬಾಕು ವ್ಯಸನ ಮುಕ್ತ ಸಮಾಜ ನಿರ್ಮಾಣ” ಮಾಡುವ ಪ್ರಮಾಣ ವಚನವನ್ನು ಶಾಲಾ ಹಿರಿಯ ಶಿಕ್ಷಕಿ ಪೂರ್ಣಿಮಾ ಮಾತಾಜಿ ಬೋಧಿಸಿದರು.  

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ವತಿಯಿಂದ -ಶಾಲೆಗೆ ಸಮ್ಮಾನ

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ವತಿಯಿಂದ -ಶಾಲೆಗೆ ಸಮ್ಮಾನ

Monday, November 11th, 2024

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ) ಇವರು ನೀಡುವ ಉತ್ತಮ ಕನ್ನಡ ಶಾಲೆ– 2024ರ ಸನ್ಮಾನಕ್ಕೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪಾತ್ರವಾಗಿದೆ. ಶ್ರೀರಾಮ ಶಾಲೆ ಕಲ್ಲಡ್ಕ ಇಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸನ್ಮಾನಿಸಿದರು.

ವಲಯ ಮಟ್ಟದ ಪ್ರತಿಭಾಕಾರಂಜಿ - ದ್ವಿತೀಯ ಸಮಗ್ರ ಪ್ರಶಸ್ತಿ

ವಲಯ ಮಟ್ಟದ ಪ್ರತಿಭಾಕಾರಂಜಿ – ದ್ವಿತೀಯ ಸಮಗ್ರ ಪ್ರಶಸ್ತಿ

Saturday, November 9th, 2024

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು, ಇದರ ವತಿಯಿಂದ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ನಡೆದ ವೃತ್ತ ಮಟ್ಟದ ಪ್ರತಿಭಾರಂಜಿಯಲ್ಲಿ  ಶಾಲೆಯ ಪೂಜಾ – ಚಿತ್ರಕಲೆ (ಪ್ರಥಮ), ಪ್ರಜ್ಞಾ ನಿಡ್ವಣ್ಣಾಯ – ಸಂಸ್ಕೃತ ಭಾಷಣ(ಪ್ರಥಮ), ಶ್ರೀರಕ್ಷಾ ಎ – ಕವನ ವಾಚನ (ಪ್ರಥಮ), ಕುಶಿತಾ ಬಿ -ಗಝಲ್(ದ್ವಿತೀಯ), ಧನುಷ್ ಡಿ.ಜಿ-ಚರ್ಚಾ ಸ್ಪರ್ಧೆ (ತೃತೀಯ), ಲಾಸ್ಯ ಎನ್.ವಿ-ಭರತನಾಟ್ಯ (ತೃತೀಯ), ಕವ್ವಾಲಿ – ಸಾಯೀಶ್ವರಿ, ಶಾರ್ವರಿ, ಶ್ರೇಯಸ್ ರಾವ್, ಕರಣ್ ಗೌಡ, ಶಿವಪ್ರಕಾಶ್, […]

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಗಳು – ಶಾಲೆಗೆ ಪ್ರಶಸ್ತಿ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆಗಳು – ಶಾಲೆಗೆ ಪ್ರಶಸ್ತಿ

Saturday, November 9th, 2024

  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ)ಇದರ ವತಿಯಿಂದ ನಡೆದ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ  ಶಾಲೆಯ ಲಿಖಿತಾ ‘ಜ್ಞಾನ ದರ್ಶಿನಿ’ ಪುಸ್ತಕಾಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಪ್ರಜ್ಞಾ ನಿಡ್ವಣ್ಣಾಯ ‘ಜ್ಞಾನ ವರ್ಷಿಣಿ’ ಪುಸ್ತಕಾಧಾರಿತ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ – ಶಾಲಾ ಶಿಕ್ಷಕರಿಗೆ ಪ್ರಶಸ್ತಿ

ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ – ಶಾಲಾ ಶಿಕ್ಷಕರಿಗೆ ಪ್ರಶಸ್ತಿ

Wednesday, November 6th, 2024

                                                            ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಇದರ ವತಿಯಿಂದ ವಿಕ್ಟರ್ಸ್ ಪ್ರೌಢಶಾಲೆ ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆಯಲ್ಲಿ  ಶಾಲೆಯ ಶಿಕ್ಷಕರಾದ ಸುಂದರ್ – ಪ್ರೌಢಶಾಲಾ […]

ಕು. ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ

ಕು. ಕೀರ್ತಿ ಸತತ ಎರಡನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ

Tuesday, November 5th, 2024

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ  ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕು. ಜಿ.ಎಂ.ಕೀರ್ತಿ 17ರ ವಯೋಮಾನದ ಬಾಲಕಿಯರ ವಿಭಾಗದ ಎತ್ತರ ಜಿಗಿತದಲ್ಲಿ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳು ತರಬೇತಿ ನೀಡಿರುತ್ತಾರೆ.

ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡ ರಾಜ್ಯೋತ್ಸವ ಆಚರಣೆ

Tuesday, November 5th, 2024

ನಮ್ಮ ಮಾತೃ ಭಾಷೆಯಾದ ಕನ್ನಡ ನಮ್ಮ ಹೃದಯದ ಭಾಷೆಯಾಗಿದೆ. ಭಾವನೆಗಳನ್ನು ಪರಿಣಾಮಕಾರಿಯಾಗಿ ವ್ಯಕ್ತಪಡಿಸಲು ಕೇವಲ ಮಾತೃ ಭಾಷೆಯಿಂದ ಮಾತ್ರ ಸಾಧ್ಯ . ಆದ್ದರಿಂದ ಭಾಷೆಯ ಸೊಗಡು ಬೇರೆ ಬೇರೆ ಇದ್ದರೂ ಅದನ್ನು ಸವಿಯುವ ಮನೋಭಾವ ನಮ್ಮದಾಗಬೇಕು ಎಂದು ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಆಚರಣೆಯ ಸಂದರ್ಭದಲ್ಲಿ ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ರೇವತಿ ನುಡಿದರು. ಕನ್ನಡ ಭಾಷೆಯ ಹಿರಿಮೆ – ಗರಿಮೆ ಹಾಗೂ ಕನ್ನಡ ಭಾಷೆಯಲ್ಲಿ ಲಭ್ಯವಿರುವ ಸಾಹಿತ್ಯವನ್ನು ಹೆಚ್ಚು ಹೆಚ್ಚಾಗಿ ಓದುವಂತೆ ತಿಳಿಸಿದರು.                                               ಮುಖ್ಯ […]

ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಗಾಂಧೀ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Monday, November 4th, 2024

                                                                    ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಆಚರಣೆಯ ಪ್ರಯುಕ್ತ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ವೈಷ್ಣವ ಜನತೋ ಹಾಗೂ ರಘುಪತಿ ರಾಘವ ರಾಜಾರಾಮ ಹಾಡುಗಳನ್ನು ಸಾಮೂಹಿಕವಾಗಿ […]

ಜಿಲ್ಲಾ ಮಟ್ಟದ ಸ್ಕೂಲ್ ಬ್ಯಾಂಡ್ ಸ್ಪರ್ಧಾಕೂಟ   - ರಾಜ್ಯಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಸ್ಕೂಲ್ ಬ್ಯಾಂಡ್ ಸ್ಪರ್ಧಾಕೂಟ – ರಾಜ್ಯಮಟ್ಟಕ್ಕೆ ಆಯ್ಕೆ

Monday, October 28th, 2024

ಕ್ರೀಡಾ ಭಾರತಿ, ಕರ್ನಾಟಕ ದಕ್ಷಿಣ, ಇದರ ವತಿಯಿಂದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ, ತೊಕ್ಕೊಟ್ಟು ಇಲ್ಲಿ ನಡೆದ ಜಿಲ್ಲಾಮಟ್ಟದ ಸ್ಕೂಲ್ ಬ್ಯಾಂಡ್ ಸ್ಪರ್ಧಾಕೂಟ – 2024ರಲ್ಲಿ  ಶಾಲಾ ವಿದ್ಯಾರ್ಥಿಗಳ ‘ಶೇಷಾದ್ರಿ’ ಘೋಷ್ ಪತಕ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಇವರಿಗೆ ಶಾಲಾ ಘೋಷ್ ಸಂಯೋಜಕರಾದ ವಿಜಯ ಕುಮಾರ್ ಮತ್ತು ತರಬೇತುದಾರರಾಗಿ ಶ್ರೀ ವಿನೋದ್ ಕೊಡ್ಮಣ್ ಮತ್ತು ಶ್ರೀ ಚೇತನ್ ಕುಮಾರ್ ತರಬೇತಿ ನೀಡಿದ್ದರು

ಅರ್ಡುಯಿನೋ ಕಾರ್ಯಾಗಾರ

ಅರ್ಡುಯಿನೋ ಕಾರ್ಯಾಗಾರ

Saturday, October 26th, 2024

  ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಂದ  ಶಾಲೆಯ ವಿದ್ಯಾರ್ಥಿಗಳಿಗೆ ಪ್ರೊಗ್ರ‍ಾಮಿಂಗ್ ಅರ್ಡುಯಿನೋ ಎನ್ನುವ ಕಾರ್ಯಾಗಾರವನ್ನು ನಡೆಸಲಾಯಿತು. ಒಂದು ದಿನದ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳಿಗೆ  , ಡಿಸಿಷನ್ ಮೇಕಿಂಗ್ ಸ್ಟೇಟ್ ಮೆಂಟ್ಸ್ ಮತ್ತು ಲೂಪಿಂಗ್ ಸ್ಟೇಟ್ ಮೆಂಟ್ಸ್‍ಗಳ ಬಗೆಗೆ ತಿಳಿಸಿಕೊಡಲಾಯಿತು. ಕಾಲೇಜಿನ ಬಿಸಿಎ ವಿಭಾಗದ ಮುಖ್ಯಸ್ಥ ಪ್ರಕಾಶ್ ಕುಮಾರ್ ಪಿ ಹಾಗೂ ಉಪನ್ಯಾಸಕ ಕೀರ್ತನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ಕಾರ್ಯಾಗಾರವು ನಡೆಯಿತು.

ಕಬಡ್ಡಿ - ರಾಷ್ಟ್ರಮಟ್ಟಕ್ಕೆ (S.G.F.I) ಆಯ್ಕೆ

ಕಬಡ್ಡಿ – ರಾಷ್ಟ್ರಮಟ್ಟಕ್ಕೆ (S.G.F.I) ಆಯ್ಕೆ

Thursday, October 24th, 2024

ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ (ಆಡಳಿತ) ಚಿಕ್ಕಮಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು ಹಾಗೂ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ, ಕಡೂರು ಇಲ್ಲಿ ನಡೆದ 17ರ ವಯೋಮಾನದ ಬಾಲಕರ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ (S.G.F.I) ಗೆ ಆಯ್ಕೆಯಾಗಿದೆ. ಶಾಲೆಯ ಪುನೀತ್ (ಶ್ರೀಧರ ಮತ್ತು ನಳಿನಿ ದಂಪತಿಗಳ ಪುತ್ರ), ಧನ್ವಿತ್ (ನೀಲಪ್ಪ ಗೌಡ ಮತ್ತು ಶಶಿಕಲಾ ದಂಪತಿಗಳ ಪುತ್ರ), ಜಿ ಶೇಖರ (ಗದ್ದೆ ಫಕೀರಪ್ಪ ಮತ್ತು ಹಂಪಮ್ಮ ದಂಪತಿಗಳ ಪುತ್ರ), ನರಸಪ್ಪ […]

ಜ್ಞಾನ – ವಿಜ್ಞಾನ ಮೇಳ – ಶಾಲಾ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಜ್ಞಾನ – ವಿಜ್ಞಾನ ಮೇಳ – ಶಾಲಾ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Monday, October 21st, 2024

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಇದರ ವತಿಯಿಂದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ತಲಪಾಡಿ ಮಂಗಳೂರು ಇಲ್ಲಿ ನಡೆದ ಮಧ್ಯಕ್ಷೇತ್ರೀಯ ಮಟ್ಟದ ಗಣಿತ-ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಮಹೋತ್ಸವ ಸ್ಪರ್ಧೆಯ ಕ್ಲೇ ಮಾಡೆಲಿಂಗ್ ನಲ್ಲಿ  ಶಾಲೆಯ ನಿಖಿಲ್ (ಕೋಡಿಂಬಾಡಿ ನಿವಾಸಿ ಕೃಷ್ಣಪ್ಪ ಮತ್ತು ಧನವತಿ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಇವನಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಇವರು ತರಬೇತಿ […]

ಜಿಲ್ಲಾ ಮಟ್ಟದ ಖೋ ಖೋ –  ಶಾಲಾ ವಿದ್ಯಾರ್ಥಿಗಳು ವಿಭಾಗಮಟ್ಟಕ್ಕೆ ಆಯ್ಕೆ

ಜಿಲ್ಲಾ ಮಟ್ಟದ ಖೋ ಖೋ – ಶಾಲಾ ವಿದ್ಯಾರ್ಥಿಗಳು ವಿಭಾಗಮಟ್ಟಕ್ಕೆ ಆಯ್ಕೆ

Saturday, September 28th, 2024

  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇವರ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ, ನಯನಾಡು, ಬಂಟ್ವಾಳ ಇಲ್ಲಿ ನಡೆದ ಜಿಲ್ಲಾಮಟ್ಟದ ಖೋ ಖೋ ಪಂದ್ಯಾಟದಲಿ ್ಲ  ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ತರುಣ್, ದೀಪಕ್, ಪ್ರಜ್ವಲ್, ಮೇಘರಾಜ್, ಭವಿತ್, ವಿನೀತ್, ಲಿಖಿತ್, ಕೀರ್ತನ್, ದೇಶ್ಚಿತ್, ಭಾಸ್ವತ್ ಎಂದು ಶಾಲಾ ಮುಖ್ಯಗುರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ಪ್ರೇರಣಾ - ಶಿಕ್ಷಕರಿಗಾಗಿ ನಡೆದ - ಸಂಘ ಪರಿಚಯ ವರ್ಗ

ಪ್ರೇರಣಾ – ಶಿಕ್ಷಕರಿಗಾಗಿ ನಡೆದ – ಸಂಘ ಪರಿಚಯ ವರ್ಗ

Thursday, September 26th, 2024

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ). ಇದರ ವತಿಯಿಂದ ನಡೆಸಲ್ಪಡುವ ‘ಪ್ರೇರಣಾ’ – ಸಂಘ ಪರಿಚಯ ವರ್ಗ –ಎಂಬ ವಿಷಯದ ಶಿಕ್ಷಕರ ಕಾರ್ಯಾಗಾರವು ಶಾಲೆಯಲ್ಲಿ ನಡೆಯಿತು. ಪ್ರಥಮ ಅವಧಿಯಲ್ಲಿ ಕಾರ್ಯಾಗಾರದ ಉದ್ಘಾಟನೆಯೊಂದಿಗೆ ಸಂಘದ ಪರಿಚಯವನ್ನು ಮಾಡಿದ ನೀಡಿದ ಶ್ರೀ ನಾರಾಯಣ ಶೆಣೈ ಇವರು ವ್ಯಕ್ತಿತ್ವ, ಕರ್ತತ್ವ, ನೇತೃತ್ವ, ವಿವೇಕ, ದೇಶ ಭಕ್ತಿ ನಿರ್ಮಾಣ ಮಾಡುವಲ್ಲಿ ಸಂಘ ಮತ್ತು ಶಾಖೆಗಳ ಪರಿಚಯವನ್ನು ತಿಳಿಸಿಕೊಟ್ಟರು. ಎರಡನೇ ಅವಧಿಯಲ್ಲಿ ಶ್ರೀ ಹರಿಕೃಷ್ಣ ಇವರು ಗತಿವಿಧಿ ಪರಿಚಯ ಎಂಬ ವಿಷಯದಲ್ಲಿ ಕುಟುಂಬ ಪ್ರಭೋದನ, […]

ಜಿಲ್ಲಾಮಟ್ಟದ ಕಬಡ್ಡಿ – ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

ಜಿಲ್ಲಾಮಟ್ಟದ ಕಬಡ್ಡಿ – ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

Monday, September 23rd, 2024

  ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಛೇರಿ, ಸುಳ್ಯ, ಪಿ.ಎಂ ಶ್ರೀ ಸ.ಮಾ.ಹಿ.ಪ್ರಾ ಶಾಲೆ ಗುತ್ತಿಗಾರು, ಸ.ಪ.ಪೂ ಕಾಲೇಜು ಗುತ್ತಿಗಾರು (ಪ್ರೌಢಶಾಲಾ ವಿಭಾಗ) ಈ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕರ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶಾಲಾ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಪುನೀತ್ (ಶ್ರೀಧರ ಮತ್ತು ನಳಿನಿ ದಂಪತಿಗಳ ಪುತ್ರ), ಧನ್ವಿತ್ (ನೀಲಪ್ಪ ಗೌಡ ಮತ್ತು ಶಶಿಕಲಾ […]

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ - ಜಿಲ್ಲಾಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ – ಜಿಲ್ಲಾಮಟ್ಟಕ್ಕೆ ಆಯ್ಕೆ

Tuesday, September 3rd, 2024

ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳಾದ ಪ್ರಜ್ಞಾ ನಿಡ್ವಣ್ಣಾಯ, ಚಾರಿತ್ರ್ಯ, ಗಗನ, ದರ್ಶಿನಿ, ಗ್ರೀಷ್ಮಾ, ವಚನ್, ಶಿವಪ್ರಕಾಶ್ ಮತ್ತು ಹರ್ಷವರ್ಧನ್ ಇವರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ಪುಟ್ಬಾಲ್ –  ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಪುಟ್ಬಾಲ್ – ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Tuesday, September 3rd, 2024

ಸಾರ್ವಜನಿಕ ಶಿಕ್ಷಣ ಇಲಾಖಾ ವತಿಯಿಂದ ನಡೆದ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ  ಶಾಲೆಯ ಪ್ರೌಢಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ – ಜಿಲ್ಲಾಮಟ್ಟಕ್ಕೆ ಆಯ್ಕೆ

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ – ಜಿಲ್ಲಾಮಟ್ಟಕ್ಕೆ ಆಯ್ಕೆ

Monday, September 2nd, 2024

ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯು ಸರಸ್ವತಿ ವಿದ್ಯಾಲಯ ಕಡಬ ಇಲ್ಲಿ ನಡೆದಿದ್ದು ಇದರಲ್ಲಿ  ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಪ್ರೌಢ ವಿಭಾಗದಲ್ಲಿ ಸ್ಕಂದ ಬಳ್ಳಕ್ಕುರಾಯ – ಪ್ರಥಮ, ರಿತೇಶ್ – ತೃತೀಯ, ದುರ್ಗಾಪ್ರಸಾದ್ – ಚತುರ್ಥ. ಎಂಟನೇ ತರಗತಿಯ 14ರ ವಯೋಮಾನದ ವಿಭಾಗದಲ್ಲಿ ನಿಶಾಂತ್ – ದ್ವಿತೀಯ, ಪ್ರಾಥಮಿಕ ವಿಭಾಗದಲ್ಲಿ ಲಿಖಿತ್ ತೃತೀಯ, ಅಥ್ಲೆಟಿಕ್ಸ್ ಯೋಗಾಸನದಲ್ಲಿ ರಾಹುಲ್ -ಪ್ರಥಮ, ಮಲ್ಲಿಕಾರ್ಜುನ – ತೃತೀಯ, ಸಾಧನ – ದ್ವಿತೀಯ, ರಿದಮಿಕ್ ಯೋಗಾಸನದಲ್ಲಿ […]

ವಿದ್ಯಾಭಾರತಿ ಖೋ – ಖೋ ಪಂದ್ಯಾಟ –  ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಖೋ – ಖೋ ಪಂದ್ಯಾಟ – ರಾಷ್ಟ್ರಮಟ್ಟಕ್ಕೆ ಆಯ್ಕೆ

Monday, September 2nd, 2024

  ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಖೋ-ಖೋ ಕ್ರೀಡಾಕೂಟದಲ್ಲಿ  ಶಾಲೆಯ ಕಿಶೋರ ವರ್ಗದ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮಸ್ಥಾನ ಗಳಿಸಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡದಲ್ಲಿ : ತರುಣ್, ದೇಶ್ಚಿತ್, ಲತೇಶ್, ಭಾಸ್ವತ್, ಲಿಖಿತ್, ಕೀರ್ತನ್, ವಿನೀತ್, ಭವಿತ್, ಮೇಘರಾಜ್, ಶ್ರವಣ್, ಚಂದನ್ ಮತ್ತು ದೀಪಕ್ ಭಾಗವಹಿಸಿದ್ದರು. ಬಾಲಕಿಯರ ತಂಡದಲ್ಲಿ : ಧನ್ಯಶ್ರೀ, ರಕ್ಷಾ, ನಳಿನಿ, ಪೃಥ್ವಿ, ವರ್ಷಾ, ದೃಷಾ, ಯೋಗ್ಯ, ಕೃತಿ, ಭೂಮಿಕಾ, […]

ವಿದ್ಯಾಭಾರತಿ ಕಬಡ್ಡಿ – ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕಬಡ್ಡಿ – ರಾಷ್ಟ್ರಮಟ್ಟಕ್ಕೆ ಆಯ್ಕೆ

Monday, September 2nd, 2024

ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಹಾಸನದ ಮಂಗಳೂರು ಪಬ್ಲಿಕ್ ಸ್ಕೂಲ್ ಇಲ್ಲಿ ನಡೆದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ  ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿದ್ದ ಕ್ರೀಡಾಪಟುಗಳು ದೀಕ್ಷಿತಾ (ದೇವಪ್ಪ ಗೌಡ ಮತ್ತು ಹೇಮಾವತಿ ದಂಪತಿಗಳ ಪುತ್ರಿ), ಬಿಂದುಶ್ರೀ (ಜನಾರ್ಧನ ಮತ್ತು ಶಶಿಕಲಾ ದಂಪತಿಗಳ ಪುತ್ರಿ), ನಿಖಿತಾ (ಸುಂದರ ಮತ್ತು ಗೀತಾ ದಂಪತಿಗಳ ಪುತ್ರಿ), ವಿನ್ಯಾ ರೈ (ಕೃಷ್ಣಪ್ರಸಾದ್ ರೈ ಮತ್ತು ರಾಜೀವಿ ರೈ ದಂಪತಿಗಳ ಪುತ್ರಿ), ಸುಶಾ ಎಂ ( ಕೃಷ್ಣಪ್ಪ […]

ಕ್ಲಸ್ಟರ್ ಪ್ರತಿಭಾಕಾರಂಜಿ  ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಪ್ರತಿಭಾಕಾರಂಜಿ ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ

Friday, August 30th, 2024

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕ್ಷೇತ್ರ ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇದರ ವತಿಯಿಂದ ನಡೆದ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶಾಲೆಯ ಕಿರಿಯ ಪ್ರಾಥಮಿಕ ವಿಭಾಗಕ್ಕೆ ಪ್ರಥಮ ಸಮಗ್ರ ಪ್ರಶಸ್ತಿ ಬಂದಿರುತ್ತದೆ. ಕಿರಿಯರ ವಿಭಾಗದಲ್ಲಿ :ಆಯುಷ್ ಬಿ – ಪ್ರಥಮ (ಚಿತ್ರಕಲೆ), ಮಾತಂಗಿ – ಪ್ರಥಮ(ಭಕ್ತಿಗೀತೆ), ಭಾರ್ಗವ ರಾಮ ಯು- ಪ್ರಥಮ (ಆಶುಭಾಷಣ), ಸನ್ಮಯ ಭಟ್ ವೈ – […]

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

Friday, August 30th, 2024

“ನಾಟಕಗಳು ಶಾಲಾ ಹಂತದಿಂದಲೇ ಮೌಲ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗಿವೆ. ಆದ್ದರಿಂದ ಮಕ್ಕಳು ಸಂಗೀತ, ನೃತ್ಯ, ನಾಟಕಗಳಂತಹ ಪಠ್ಯಪೂರಕ ಕಲೆಗಳಲ್ಲಿ ಆಸಕ್ತಿ ಬೆಳೆಸಿಕೊಂಡು ತಮ್ಮಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ ಸಮಾಜದಲ್ಲೂ ಅದನ್ನು ಪ್ರತಿಬಿಂಬಿಸುವ ವ್ಯಕ್ತಿತ್ವನ್ನು ಬೆಳೆಸಿಕೊಳ್ಳಬೇಕು” ಎಂದು ಸರಕಾರಿ ಪ್ರೌಢಶಾಲೆ ಕೊಂಬೆಟ್ಟು ಇಲ್ಲಿನ ಪ್ರಾಂಶುಪಾಲರಾದ ಶ್ರೀ ವಸಂತ ಮೂಲ್ಯ ಹೇಳಿದರು. ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ […]

ವಿವೇಕಾನಂದ ತೆಂಕಿಲ ವಿದ್ಯಾಸಂಸ್ಥೆಗಳಿಂದ ಸ್ವಾತಂತ್ರೋತ್ಸವ ಆಚರಣೆ

ವಿವೇಕಾನಂದ ತೆಂಕಿಲ ವಿದ್ಯಾಸಂಸ್ಥೆಗಳಿಂದ ಸ್ವಾತಂತ್ರೋತ್ಸವ ಆಚರಣೆ

Saturday, August 17th, 2024

ಪುತ್ತೂರಿನ ತೆಂಕಿಲ ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ಧ್ವಜರೋಹಣ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಉದಯಶಂಕರ ಮಾಣಿ ಮುಖ್ಯ ಅತಿಥಿಗಳಾಗಿದ್ದು ಧ್ವಜಾರೋಹಣ ಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ರೂಪಲೇಖ, ಮತ್ತು ತೆಂಕಿಲ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಮುಖ್ಯಗುರುಗಳು ಉಪಸ್ಥಿತರಿದ್ದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ನರೇಂದ್ರ ಪದವಿಪೂರ್ವ ಕಾಲೇಜು, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಳಿಕ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ […]

ಜಿಲ್ಲಾಮಟ್ಟದ ಈಜುಸ್ಪರ್ಧೆ - ದ್ವಿತೀಯ ಸ್ಥಾನ

ಜಿಲ್ಲಾಮಟ್ಟದ ಈಜುಸ್ಪರ್ಧೆ – ದ್ವಿತೀಯ ಸ್ಥಾನ

Wednesday, August 14th, 2024

ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶಕ್ತಿ ವಿದ್ಯಾಸಂಸ್ಥೆ ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ ೧೭ವರ್ಷದೊಳಗಿನ ಬಾಲಕಿಯರ ಈಜುಸ್ಪರ್ಧೆಯಲ್ಲಿ  ಶಾಲೆಯ ವಿದ್ಯಾರ್ಥಿನಿ ಅನನ್ಯ ಎ (ಶ್ರೀ ಅಪ್ಪು ಮತ್ತು ಜಯಲಕ್ಷಿ ದಂಪತಿಗಳ ಪುತ್ರಿ) ೫೦ಮೀ ಬ್ಯಾಕ್  ಸ್ಟ್ರೋಕ್ ನಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.

ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ - ಪ್ರಥಮ

ವಿದ್ಯಾಭಾರತಿ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ – ಪ್ರಥಮ

Wednesday, August 7th, 2024

ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶಾಲೆಯ ೬ನೇ ತರಗತಿ ವಿದ್ಯಾರ್ಥಿ ಶ್ರೀ ಕೃಷ್ಣ ಬಿ (ಶ್ರೀ ವೆಂಕಟೇಶ್ ಪ್ರಸಾದ್ ಮತ್ತು ಮಂಗಳ ಗೌರಿ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾಭಾರತಿ ರಾಜ್ಯಮಟ್ಟದ  ಯೋಗ ಸ್ಪರ್ಧೆ

ವಿದ್ಯಾಭಾರತಿ ರಾಜ್ಯಮಟ್ಟದ ಯೋಗ ಸ್ಪರ್ಧೆ

Tuesday, August 6th, 2024

ಉಡುಪಿ ಜಿಲ್ಲೆಯ ಸರಸ್ವತಿ ವಿದ್ಯಾಲಯ ಸಿದ್ಧಾಪುರ ಇಲ್ಲಿ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾಂತ್ ಬಾಲವರ್ಗದ ಬಾಲಕರ ವಿಭಾಗದ ತಂಡದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದಿರುತ್ತಾನೆ. ಮತ್ತು ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ ಶೃಜನ್ ಜೆ ರೈ, ದುರ್ಗಾಪ್ರಸಾದ್, ರಿತೇಶ್, ಸ್ಕಂದ ಬಳ್ಳಕ್ಕುರಾಯ ಇವರ ತಂಡ ದ್ವಿತೀಯ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ಶಿಕ್ಷಕಿಯರಾದ ಶ್ರೀಮತಿ ಅನುರಾಧ ಮತ್ತು ಶ್ರೀಮತಿ ನಮಿತಾ ಕೆ.ಕೆ ತರಬೇತಿ ನೀಡಿದ್ದರು.

ವಿದ್ಯಾಭಾರತಿ ಯೋಗ –  ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಯೋಗ – ರಾಜ್ಯಮಟ್ಟಕ್ಕೆ ಆಯ್ಕೆ

Saturday, August 3rd, 2024

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಸರಸ್ವತಿ ವಿದ್ಯಾಲಯ ಕಡಬ ಇಲ್ಲಿ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಕಿಶೋರ ವಿಭಾಗ ಮತ್ತು ಬಾಲವರ್ಗ ಈ ಎರಡೂ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲವರ್ಗದ ಬಾಲಕರ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯೊಂದಿಗೆ ವೈಯಕ್ತಿಕ ವಿಭಾಗದಲ್ಲಿ ನಿಶಾಂತ್ –(ಚಂದ್ರಶೇಖರ ಮತ್ತು ಸವಿತಾ ದಂಪತಿಗಳ ಪುತ್ರ) ಪ್ರಥಮ, ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಹುಲ್ (ಚಂದ್ರಕಾ0ತ್ ಮತ್ತು ಲಕ್ಷಿ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕಿಶೋರ ವರ್ಗದ […]

ವಿವೇಕಾನಂದ ವಿದ್ಯಾಸಂಸ್ಥೆಗಳಿ0ದ ಕಾರ್ಗಿಲ್ ವಿಜಯೋತ್ಸವ – ಯೋಧ ನಮನ

ವಿವೇಕಾನಂದ ವಿದ್ಯಾಸಂಸ್ಥೆಗಳಿ0ದ ಕಾರ್ಗಿಲ್ ವಿಜಯೋತ್ಸವ – ಯೋಧ ನಮನ

Monday, July 29th, 2024

ಸುಖ ಜೀವನ, ಹಣಕ್ಕಿಂತ ದೇಶ ದೊಡ್ಡದು – ಲೆ. ಕ. ಅಶೋಕ್ ಕಿಣಿ ಜನ್ಮ ನೀಡಿದ ಭೂಮಿಯನ್ನು ಸ್ವರ್ಗಕ್ಕಿಂತ ಮೇಲು ಎಂದು ಭಾವಿಸುವ ನಾವು ಸುಖದ ಜೀವನ, ಸಂಪತ್ತುಗಳಿಸುವುದಕ್ಕಿAತ ದೇಶ ದೊಡ್ಡದು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅಂತಹ ದೇಶವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಕೇವಲ ಸೈನಿಕರಲ್ಲದೇ ನಮ್ಮೆಲ್ಲರಲಿದೆ ಎಂದು ಮಾಜಿ ರಾಷ್ಟçಪತಿ ಎಪಿಜೆ ಅಬ್ದುಲ್ ಕಲಾಂರವರ ರಕ್ಷಣಾಪಡೆಯಲ್ಲಿ ಅಧಿಕಾರಿಯಾಗಿದ್ದ ಕೇಂದ್ರದ ರಕ್ಷಣಾ ರಾಜ್ಯ ಸಚಿವರ ಮಾಜಿ ಭದ್ರತಾ ಸಲಹೆಗಾರ ಲೆ.ಕ ಅಶೋಕ್ ಕಿಣಿ ಎಚ್ ಹೇಳಿದರು.   ಕಾರ್ಗಿಲ್ […]

ಜಿಲ್ಲಾಮಟ್ಟದ ಸ್ಪರ್ಧೆ - ಶಾಲೆಗೆ ಪ್ರಶಸ್ತಿ

ಜಿಲ್ಲಾಮಟ್ಟದ ಸ್ಪರ್ಧೆ – ಶಾಲೆಗೆ ಪ್ರಶಸ್ತಿ

Monday, July 29th, 2024

  ಶಾರದಾ ವಿದ್ಯಾಲಯ ಮಂಗಳೂರು ಇದರ ವತಿಯಿಂದ ನಡೆದ ‘ಶಾರದಾ ಮಹೋತ್ಸವ’ ಜಿಲ್ಲಾಮಟ್ಟದ ಸಾಂಸ್ಕತಿಕ ಸ್ಪರ್ಧೆಯಲ್ಲಿ ಶಾಲೆಯ ಅದ್ವಿತ್.ಜಿ ಬಾಲವರ್ಗದ ಚಿತ್ರಕಲಾ ಸ್ಪರ್ಧೆಯಲ್ಲಿ – ದ್ವಿತೀಯ ಸ್ಥಾನ ಮತ್ತು ಶ್ರೀರಕ್ಷಾ ಕಿಶೋರವರ್ಗದ ಗೀತಕಂಠಪಾಠ ಸ್ಪರ್ಧೆಯಲ್ಲಿ – ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಕಾರ್ಗಿಲ್ ವಿಜಯೋತ್ಸವ - ಯೋಧ ನಮನ ಕಾರ್ಯಕ್ರಮ

ಕಾರ್ಗಿಲ್ ವಿಜಯೋತ್ಸವ – ಯೋಧ ನಮನ ಕಾರ್ಯಕ್ರಮ

Thursday, July 25th, 2024
ಶಿಶು ವಾಟಿಕಾ ಆಚಾರ್ಯ ಪ್ರಶಿಕ್ಷಣ ವರ್ಗ

ಶಿಶು ವಾಟಿಕಾ ಆಚಾರ್ಯ ಪ್ರಶಿಕ್ಷಣ ವರ್ಗ

Tuesday, July 23rd, 2024

ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬAಧಿತ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಶಿಶುವಾಟಿಕ ಆಚಾರ್ಯ ಪ್ರಶಿಕ್ಷಣ ವರ್ಗವನ್ನು ಸರಸ್ವತಿ ವಿದ್ಯಾಮಂದಿರ ನರಿಮೊಗರು ಇದರ ಅಧ್ಯಕ್ಷರಾದ ಅವಿನಾಶ್ ಕೊಡಂಕಿರಿಯವರು ದೀಪ ಪ್ರಜ್ವಲಿಸಿ ಉದ್ಘಾಟಿಸುತ್ತಾ ಶಿಶುಮಂದಿರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾತಾಜಿಯವರು ಅಧ್ಯಯನ ಶೀಲ, ವಿವೇಚನಾ ಸಹಿತ, ವಿಮರ್ಶಾ ಗುಣವನ್ನು ಹೊಂದಿರಬೇಕು. ಶಿಕ್ಷಕರ ಈ ಮನೋ ವೃತ್ತಿಯು ಮಕ್ಕಳ ಕ್ರಿಯಾಶೀಲತೆಯನ್ನು ಪೋಷಿಸಲು ಸಹಕಾರಿಯಾಗಿದೆ. ಮನೆ – ಶಾಲೆ ಹಾಗೂ ವಾತಾವರಣ ಅವರ ಮೇಲೆ ಧನಾತ್ಮಕ ಪರಿಣಾಮ ಬೀರುವಂತೆ ಶಿಕ್ಷಣ ನೀಡುವ ಜವಾಬ್ದಾರಿ […]

Highslide for Wordpress Plugin