ಸಾಂಸ್ಕೃತಿಕ ಸ್ಪರ್ಧೆ-  ಶಾಲೆಗೆ ಹಲವು ಪ್ರಶಸ್ತಿ

ಸಾಂಸ್ಕೃತಿಕ ಸ್ಪರ್ಧೆ- ಶಾಲೆಗೆ ಹಲವು ಪ್ರಶಸ್ತಿ

Monday, November 20th, 2023

ಸರೋಜಿನಿ ಮಧುಸೂದನ ಕುಶೆ, ಅತ್ತಾವರ, ಮಂಗಳೂರು ಇಲ್ಲಿನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲಾಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಸಬ್ ಜೂನಿಯರ್ ವಿಭಾಗದ ಚಿತ್ರಕಲೆಯಲ್ಲಿ ಶ್ರುತಿ ಎಸ್ ನಾಯಕ್ ತೃತೀಯ ಹಾಗೂ ಸಬ್ ಜೂನಿಯರ್ ವಿಭಾಗದ ಭಜನೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ, ಮತ್ತು ಜನಪದ ನೃತ್ಯ ಸ್ಪರ್ಧೆಯಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಜೂನಿಯರ್ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.     […]

ವಿಜ್ಞಾನ ವಸ್ತುಪ್ರದರ್ಶನ ರಾಜ್ಯಮಟ್ಟಕ್ಕೆ ಆಯ್ಕೆ

ವಿಜ್ಞಾನ ವಸ್ತುಪ್ರದರ್ಶನ ರಾಜ್ಯಮಟ್ಟಕ್ಕೆ ಆಯ್ಕೆ

Saturday, November 11th, 2023

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಿಕ್ಷಕರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರಾದ ರೋಹಿತ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾಮಟ್ಟದ ವಿಜ್ಞಾನ ವಸ್ತುಪ್ರದರ್ಶನ - ತೃತೀಯ

ಜಿಲ್ಲಾಮಟ್ಟದ ವಿಜ್ಞಾನ ವಸ್ತುಪ್ರದರ್ಶನ – ತೃತೀಯ

Saturday, November 11th, 2023

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ  ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಚಿರಂತನ್ ಕೆ.ವಿ ಮತ್ತು ಸ್ಕಂದ ಬಳ್ಳಕ್ಕುರಾಯ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಜಿಲ್ಲಾ ವಿಜ್ಞಾನ ವಸ್ತು ಪ್ರದರ್ಶನ

ಜಿಲ್ಲಾ ವಿಜ್ಞಾನ ವಸ್ತು ಪ್ರದರ್ಶನ

Saturday, November 11th, 2023

                           “ಆಸಕ್ತಿ, ಕುತೂಹಲಗಳೇ ವಿಜ್ಞಾನದ ಹೊಸ ಆವಿಷ್ಕಾರಗಳಿಗೆ ಮೂಲ”- ಶ್ರೀಮತಿ ರಾಜಲಕ್ಷ್ಮೀ “ಶಾಲಾ ಮಟ್ಟದಲ್ಲಿಯೇ ವಿದ್ಯಾರ್ಥಿಗಳಿಗೆ ವಿಜ್ಞಾನಕ್ಕೆ ಸಂಬಂಧಿಸಿದಂತೆ ನಾಟಕಗಳು, ಮಾದರಿ ತಯಾರಿ, ಸೆಮಿನಾರ್ ಇತ್ಯಾದಿಗಳಲ್ಲಿ ಸ್ಪರ್ಧೆಗಳು ಅಥವಾ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಅವರಿಗೆ ಹೊಸ ಸಂಶೋಧನೆಗಳನ್ನು ನಡೆಸಲು ಪ್ರೇರಣೆ, ಸ್ಪೂರ್ತಿ ದೊರೆಯುತ್ತದೆ. ವಿದ್ಯಾರ್ಥಿಗಳಲ್ಲಿ ಆಸಕ್ತಿಯಿದ್ದು ಹೊಸ ವಿಷಯಗಳನ್ನು ತಿಳಿಯುವ ಕುತೂಹಲವಿದ್ದಾಗ ವಿಜ್ಞಾನದ ಬೆಳವಣಿಗೆಯಾಗಿ ನೂತನ ಆವಿಷ್ಕಾರಗಳಿಗೆ ಕಾರಣವಾಗುತ್ತದೆ” ಎಂದು ಸಾರ್ವಜನಿಕ […]

ವಾಲ್ಮೀಕಿ ಜಯಂತಿ ಹಾಗೂ ರಾಮಾಯಣ - ಋಷಿ ದರ್ಶನ

ವಾಲ್ಮೀಕಿ ಜಯಂತಿ ಹಾಗೂ ರಾಮಾಯಣ – ಋಷಿ ದರ್ಶನ

Thursday, November 9th, 2023

ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ .ಪುತ್ತೂರು ತಾಲೂಕು ಘಟಕದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಅಂಗವಾಗಿ ರಾಮಾಯಣ ಋಷಿ ದರ್ಶನ ಕಾರ್ಯಕ್ರಮ  ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಜರಗಿತು. ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ನಾರಾಯಣ ಶೇವಿರೆ ಇವರು ರಾಮಾಯಣ ಮಹಾಕಾವ್ಯವಾಗಿ ನೀಡುತ್ತಿರುವ ಜೀವನ ದರ್ಶನ ಮೌಲ್ಯವನ್ನು ತಿಳಿಸುತ್ತಾ ” ರಾಮಾಯಣ ಕೇಳಬೇಕಾದರೆ ನಾವು ಸಾಮಾನ್ಯರಲ್ಲಿ ಸಾಮಾನ್ಯ ರಾಗಬೇಕು. ಕಾವ್ಯವೊಂದು ಮಹಾಕಾವ್ಯವಾಗುತ್ತಿದ್ದಂತೆ ಜಗತ್ತಿಗೆ ಅದರ ಕಾಣ್ಕೆಯನ್ನು ದರ್ಶಿಸಲು ನಾವು ಸಹಜವಾಗಿದರಬೇಕು. […]

ಪ್ರೌಢಶಾಲಾ ವಿಭಾಗದ ಪ್ರತಿಭಾಕಾರಂಜಿ  ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ

ಪ್ರೌಢಶಾಲಾ ವಿಭಾಗದ ಪ್ರತಿಭಾಕಾರಂಜಿ ಶಾಲೆಗೆ ಪ್ರಥಮ ಸಮಗ್ರ ಪ್ರಶಸ್ತಿ

Wednesday, November 8th, 2023

ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಹಾರಾಡಿ, ಸರಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆದ ಪುತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ- ಮಂಗಳಾದುರ್ಗಾ ಟಿ.ಆರ್ ( ಟಿ ರಾಮಕೃಷ್ಣ ಭಟ್ ಮತ್ತು ಈಶ್ವರಿ ಆರ್ ಕೆ ಭಟ್ ದಂಪತಿಗಳ ಪುತ್ರಿ)-ಗಝಲ್(ಪ್ರಥಮ), ಕವನಶ್ರೀ(ಗೋಪಾಲಕೃಷ್ಣ ಮತ್ತು ಕೆ ಶೈಲಜಾ ಪಂಪತಿ ಪುತ್ರಿ)- ರಂಗೋಲಿ(ಪ್ರಥಮ),ಶೃಜನ್ ಜೆ ರೈ(ಕೆ ಜಗನ್ಮೋಹನ್ ರೈ […]

ವಿಜ್ಞಾನ ವಸ್ತು ಪ್ರದರ್ಶನ – ಜಿಲ್ಲಾಮಟ್ಟಕ್ಕೆ ಆಯ್ಕೆ

ವಿಜ್ಞಾನ ವಸ್ತು ಪ್ರದರ್ಶನ – ಜಿಲ್ಲಾಮಟ್ಟಕ್ಕೆ ಆಯ್ಕೆ

Monday, November 6th, 2023

ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಅಂಬಿಕಾ ವಿದ್ಯಾಲಯ ಬಪ್ಪಳಿಗೆ, ಪುತ್ತೂರು ಇಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಚಿರಂತನ್ ಮತ್ತು ಸ್ಕಂದ ಬಳಕ್ಕುರಾಯ ಇವರು ಮಂಡಿಸಿದ ಪ್ರದರ್ಶನವು ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ಜಿಲ್ಲಾಮಟ್ಟದ ಕ್ರೀಡಾಕೂಟ - ರುತಿಕ್ –ಪ್ರಥಮ

ಜಿಲ್ಲಾಮಟ್ಟದ ಕ್ರೀಡಾಕೂಟ – ರುತಿಕ್ –ಪ್ರಥಮ

Monday, November 6th, 2023

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆದ 14ರ ವಯೋಮಾನದ ಬಾಲಕ – ಬಾಲಕಿಯರ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ರುತಿಕ್(ಚಂದ್ರಶೇಖರ ಕರ್ಕೇರ ಮತ್ತು ಸುಮಿತ್ರ ದಂಪತಿಗಳ ಪುತ್ರ) ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಇವರಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ ಮತ್ತು ಶ್ರದ್ಧಾ ಶೆಟ್ಟಿ ತರಬೇತಿ ನೀಡಿರುತ್ತಾರೆ.

ರಾಜ್ಯಮಟ್ಟದ ಕ್ರೀಡಾಕೂಟ ಶಾಲೆಯ ರಿಲೇ ತಂಡ - ದ್ವಿತೀಯ

ರಾಜ್ಯಮಟ್ಟದ ಕ್ರೀಡಾಕೂಟ ಶಾಲೆಯ ರಿಲೇ ತಂಡ – ದ್ವಿತೀಯ

Monday, November 6th, 2023

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆದ 14ರ ವಯೋಮಾನದ ಬಾಲಕ – ಬಾಲಕಿಯರ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಪ್ರತೀಕ್ಷಾ(ಬಾಲಕೃಷ್ಣ ಮತ್ತು ಶಶಿಕಲಾ ದಂಪತಿಗಳ ಪುತ್ರಿ), ಕೀರ್ತಿ (ಮೋನಪ್ಪ ಮತ್ತು ಲಲಿತಾ ದಂಪತಿಗಳ ಪುತ್ರಿ), ತ್ರಿಶಾ (ಸತೀಶ್ ಮತ್ತು ಪುಷ್ಪಲತಾ ದಂಪತಿಗಳ ಪುತ್ರಿ), ಗುಣಶ್ರೀ (ಶ್ರೀನಿವಾಸ್ ಮತ್ತು ಹೇಮಾವತಿ ದಂಪತಿಗಳ ಪುತ್ರಿ), ಇವರ ರಿಲೇ ತಂಡ 55.7 ಸಮಯದಲ್ಲಿ ಗುರಿ ತಲುಪಿ ನೂತನ ದಾಖಲೆಯೊಂದಿಗೆ ಪ್ರಥಮ ಸ್ಥಾನ […]

ಎತ್ತರ ಜಿಗಿತ  -ಕೀರ್ತಿ – ರಾಷ್ಟ್ರಮಟ್ಟಕ್ಕೆ ಆಯ್ಕೆ

ಎತ್ತರ ಜಿಗಿತ -ಕೀರ್ತಿ – ರಾಷ್ಟ್ರಮಟ್ಟಕ್ಕೆ ಆಯ್ಕೆ

Monday, November 6th, 2023

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಉಡುಪಿಯಲ್ಲಿ ನಡೆದ 14ರ ವಯೋಮಾನದ ಬಾಲಕ-ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕು. ಕೀರ್ತಿ (ಮೋನಪ್ಪ ಮತ್ತು ಲಲಿತಾ ದಂಪತಿಗಳ ಪುತ್ರಿ) ಎತ್ತರ ಜಿಗಿತದಲ್ಲಿ 1.40ಮೀ ಎತ್ತರ ಹಾರಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ ಮತ್ತು ಶ್ರದ್ಧಾ ಶೆಟ್ಟಿ ತರಬೇತಿ ನೀಡಿರುತ್ತಾರೆ.

ಚಿತ್ರಕಲಾ ಸ್ಪರ್ಧೆ  ಜಿಲ್ಲಾಮಟ್ಟಕ್ಕೆ ಆಯ್ಕೆ

ಚಿತ್ರಕಲಾ ಸ್ಪರ್ಧೆ ಜಿಲ್ಲಾಮಟ್ಟಕ್ಕೆ ಆಯ್ಕೆ

Monday, November 6th, 2023

ಉದಯವಾಣಿ ಮಕ್ಕಳ ಚಿತ್ರಕಲಾ ಸ್ಪರ್ಧೆ ಪುತ್ತೂರು ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅದ್ವಿತ್ ಜಿ (ಗಣೇಶ್ ಆಚಾರ್ಯ ಮತ್ತು ಮಂಜುಳಾ ದಂಪತಿ ಪುತ್ರ) ಪ್ರಾಥಮಿಕ ವಿಭಾಗದಲ್ಲಿ ಪ್ರಥಮ, ಪೂಜಾ (ಸುರೇಶ್ ಮತ್ತು ವನಿತಾ ದಂಪತಿಗಳ ಪುತ್ರಿ) ಪ್ರೌಢಶಾಲಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ರುಕ್ಮಯ ಪೂಜಾರಿ ತರಬೇತಿ ನೀಡಿರುತ್ತಾರೆ.

ಕನ್ನಡ ರಾಜ್ಯೋತ್ಸವ ಆಚರಣೆ

ಕನ್ನಡ ರಾಜ್ಯೋತ್ಸವ ಆಚರಣೆ

Saturday, November 4th, 2023

“ಸರಳವಾದ ಹಾಗೂ ಸುಂದರವಾದ ಕನ್ನಡ ಭಾಷೆಯಲ್ಲಿ ಶಿಕ್ಷಣವನ್ನು ಪಡೆಯುವ ಮೂಲಕ ನಮ್ಮ ಭವಿಷ್ಯದ ಬೇರನ್ನು ಗಟ್ಟಿಗೊಳಿಸೋಣ. ಕನ್ನಡವು ನಮ್ಮ ಹೃದಯದ ಭಾಷೆ. ಇದರಲ್ಲಿ ನಾವು ಆಲೋಚನೆ ಮಾಡುತ್ತಾ ದೈನಂದಿನ ಜೀವನದಲ್ಲಿ ಕನ್ನಡದಲ್ಲಿಯೇ ವ್ಯವಹರಿಸೋಣ. ಕನ್ನಡವನ್ನು ಪ್ರೀತಿಸಿ, ಗೌರವಿಸಿ ಬೆಳೆಸುವ ಮೂಲಕ ನಮ್ಮ ಕನ್ನಡ ನಾಡಿನ ನೆಲ, ಜಲ ಸಂಸ್ಕೃತಿಯನ್ನು ರಕ್ಷಿಸೋಣ” ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಹಿರಿಯ ಶಿಕ್ಷಕಿ ಶ್ರೀಮತಿ ರೇವತಿ ಇವರು ನುಡಿದರು. ಶಿಕ್ಷಕಿ ಪೂರ್ಣಿಮಾರವರು […]

ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ

ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ

Thursday, November 2nd, 2023

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ದಿನಾಂಕ 20.10.2023ರಂದು ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ ಪೂಜಾ ವಿಧಿ – ವಿಧಾನಗಳನ್ನು ನೆರವೇರಿದವು. ಸರಸ್ವತಿ ಪೂಜೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬಳಿಕ ಅಕ್ಷರಾಭ್ಯಾಸದ ಮೂಲಕ ತಮ್ಮ ಜ್ಞಾನಾರಂಭಕ್ಕೆ ಪುಟಾಣಿಗಳು ಶುಭ ಮೂಹೂರ್ತವಿರಿಸಿದರು. ಮಕ್ಕಳಿಗೆ ಆರತಿ ಎತ್ತಿ ಶಾರದ ಮಾತೆಗೆ ಪುಷ್ಫ ನಮನವನ್ನು ಸಲ್ಲಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಮುಖ್ಯ ಗುರುಗಳೂ, ಶಿಕ್ಷಕ- ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.

ವಿದ್ಯಾಭಾರತಿ  ರಾಷ್ಟ್ರೀಯ ಮಟ್ಟದ ಕಬಡ್ಡಿ  ಪಂದ್ಯಾಟ  - ಎಸ್.ಜಿ.ಎಫ್.ಐ ಗೆ ಆಯ್ಕೆ

ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ – ಎಸ್.ಜಿ.ಎಫ್.ಐ ಗೆ ಆಯ್ಕೆ

Friday, October 13th, 2023

ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ – ಎಸ್.ಜಿ.ಎಫ್.ಐ ಗೆ ಆಯ್ಕೆ ಉತ್ತರ ಪ್ರದೇಶದ ಫತೆಪೂರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಶಾಲಾ ವಿದ್ಯಾರ್ಥಿನಿಯರಾದ ಪಿ ಕವನಶ್ರೀ (ಶ್ರೀ ಗೋಪಾಲಕೃಷ್ಣ ಮತ್ತು ಶೈಲಜಾ ದಂಪತಿಗಳ ಪುತ್ರಿ), ಪೂಜಾ (ಶ್ರೀ ಸುರೇಶ್ ಮತ್ತು ವನಿತಾ ದಂಪತಿಗಳ ಪುತ್ರಿ), ಮಾನಸ ಎಂ(ಶ್ರೀ ಜಯೇಶ್ […]

ಮಹಿಳಾ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

ಮಹಿಳಾ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

Friday, October 13th, 2023

ಮಹಿಳಾ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ   – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗಿ ಜನರಿಗೆ ಹತ್ತಿರವಾಗುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆಗಳ ಎಲ್ಲಾ ಠಾಣೆಗಳಲ್ಲಿ ‘ತೆರೆದ ಮನೆ’ ಎಂಬ ಕಾರ್ಯಕ್ರಮ ಆರಂಭಗೊಂಡಿದ್ದು,  ಪೊಲೀಸರ ಕುರಿತು ಜನಸಾಮಾನ್ಯರಲ್ಲಿ ಅಡಗಿರುವ ಭಯವನ್ನು ಮುಕ್ತಗೊಳಿಸುವ ಕಾರ್ಯಕ್ರಮ ಇದಾಗಿದೆ. ಈ ನಿಟ್ಟಿನಲ್ಲಿ ಪುತ್ತೂರು ಮಹಿಳಾಪೊಲೀಸ್ ಠಾಣೆಯಲ್ಲಿ ಅ.12ರಂದು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 75 ವಿದ್ಯಾರ್ಥಿಗಳಿಗೆ ಠಾಣೆ ಭೇಟಿ ಕಾರ್ಯಕ್ರಮ ನಡೆಯಿತು. ಮಹಿಳಾ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ […]

ನವದಂಪತಿ ಸಮಾವೇಶ

ನವದಂಪತಿ ಸಮಾವೇಶ

Thursday, October 12th, 2023

                                    ಜಗತ್ತಿಗೇ ಮಾರ್ಗದರ್ಶನ ತೋರುವ ಶಕ್ತಿ ಭಾರತಕ್ಕಿದೆ- ಸು.ರಾಮಣ್ಣ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜ್ಯೇಷ್ಠ ಪ್ರಚಾರಕರು “ಗುರು ಹಿರಿಯರ ಆಶೀರ್ವಾದ ಪಡೆಯುವ ವಧೂವರರಿಗೆ ಸಂಸ್ಕಾರವನ್ನು ಕೊಡುವ ಒಂದು ವಿಧಿಯೇ ಮದುವೆ. ಪ್ರಕೃತಿಯ ಶಿಶುವಾದ ಮಾನವನು ಸಂಸ್ಕೃತಿಯಿಂದ ವಿಕಸಿತನಾಗಿ , ವಿಕೃತಿಯೆಡೆಗೆ ಜಾರದಂತೆ ಧರ್ಮಾಚರಣೆಯಲ್ಲಿ ತೊಡಗಿ ಸಮೃದ್ಧಿ, ಸಂಸ್ಕೃತಿ ಎರಡರಲ್ಲೂ ಸಮತೋಲನ ಕಾಪಾಡಿಕೊಳ್ಳಬೇಕು. […]

ಶಿಕ್ಷಣದಲ್ಲಿ ರಂಗಚಟುವಟಿಕೆ ಕಾರ್ಯಾಗಾರ

ಶಿಕ್ಷಣದಲ್ಲಿ ರಂಗಚಟುವಟಿಕೆ ಕಾರ್ಯಾಗಾರ

Thursday, October 12th, 2023

“ಕಲಾ ಮನೋಭಾವನೆಯನ್ನು ಹೊಂದಿರಬೇಕಾದರೆ ಮೊದಲು ನಾವು ಪ್ರೇಕ್ಷಕರಾಗಿರಬೇಕು” – ಪುರುಷೋತ್ತಮ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ರಂಗ ಚಟುವಟಿಕೆ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನೇಲ್ಯಡ್ಕ ಇಲ್ಲಿಯ ಪ್ರಭಾರ ಮುಖ್ಯೋಪಾಧ್ಯಾಯರಾದ ಪುರುಷೋತ್ತಮ ಇವರು ವಿದ್ಯಾರ್ಥಿಗಳಿಗೆ ವಿವಿಧರಂಗಗೀತಾ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.                                                                                          […]

ಜಲಸಿರಿ ಯೋಜನೆಯ ಮಹತ್ವದ ಅರಿವು ಕಾರ್ಯಕ್ರಮ

ಜಲಸಿರಿ ಯೋಜನೆಯ ಮಹತ್ವದ ಅರಿವು ಕಾರ್ಯಕ್ರಮ

Tuesday, October 10th, 2023

 ಜಲಸಿರಿ ಯೋಜನೆಯ ಮಹತ್ವದ ಅರಿವು ಕಾರ್ಯಕ್ರಮ “ನೀರಿನ ಮಿತ ಬಳಕೆಯ ಬಗ್ಗೆ ನಮ್ಮ ಈ ತಲೆಮಾರಿಗೆ ಅರಿವು ನೀಡಿದಾಗ ಭವಿಷ್ಯದಲ್ಲಿ ನೀರಿನ ಸುಸ್ಥಿತಿ ಸಾಧ್ಯ” ಎಂದು KUIDFCಯ ಜಲಸಿರಿ ಯೋಜನೆಯ ಗ್ರಾಮ ಸಂಸ್ಥೆಯ ಜಂಡರ್ ಸ್ಪೆಷಲಿಸ್ಟ್ ಆಗಿರುವ ಶ್ರೀಮತಿ ಅಮೀಶಾ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ನಡೆದ ಜಲಸಿರಿ ಯೋಜನೆಯ ಅರಿವು ಕಾರ್ಯಕ್ರಮದಲ್ಲಿ ನುಡಿದರು. ನೀರಿನ ಅಗತ್ಯತೆ ಹಾಗೂ ಸದ್ವಿನಿಯೋಗ ಆದಾಗ ಮಾತ್ರ ಜಲಸಂರಕ್ಷಣೆ ಸಾಧ್ಯ ಎನ್ನುತ್ತಾ ವಿದ್ಯಾರ್ಥಿಗಳಲ್ಲಿ ಜಾಗೃತಿ […]

ವಿದ್ಯಾಭಾರತಿ ಕ್ರೀಡಾಕೂಟ -  ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕ್ರೀಡಾಕೂಟ – ರಾಷ್ಟ್ರಮಟ್ಟಕ್ಕೆ ಆಯ್ಕೆ

Tuesday, October 10th, 2023

ವಿದ್ಯಾಭಾರತಿ ಕ್ರೀಡಾಕೂಟ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ ವಿದ್ಯಾಭಾರತಿ ವತಿಯಿಂದ ಶ್ರೀ ಸರಸ್ವತಿ ವಿದ್ಯಾ ಪೀಠಂ, ಶಾರದಾ ಧಾಮ, ಹೈದರಾಬಾದ್, ತೆಲಂಗಾಣದಲ್ಲಿ ನಡೆದ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕೀರ್ತಿ – ಎತ್ತರ ಜಿಗಿತ (ಪ್ರಥಮ) – (ಮೋನಪ್ಪ ಮತ್ತು ಲಲಿತಾ ದಂಪತಿಗಳ ಪುತ್ರಿ), ಗುಣಶ್ರೀ 80ಮೀ ಹರ್ಡಲ್ಸ್ (ಪ್ರಥಮ)- (ಶ್ರೀನಿವಾಸ್ ಮತ್ತು ಹೇಮಾವತಿ ದಂಪತಿಗಳ ಪುತ್ರಿ) , ವಿಕೃತಿ ಕುಮಾರಿ(ಗೀತಾ ರೈ ಮತ್ತು ಪ್ರವೀಣ್ […]

ದಸರಾ ಕ್ರೀಡಾಕೂಟ – ಜಿಲ್ಲಾಮಟ್ಟಕ್ಕೆ ಆಯ್ಕೆ

ದಸರಾ ಕ್ರೀಡಾಕೂಟ – ಜಿಲ್ಲಾಮಟ್ಟಕ್ಕೆ ಆಯ್ಕೆ

Wednesday, September 27th, 2023

ದಸರಾ ಕ್ರೀಡಾಕೂಟ – ಜಿಲ್ಲಾಮಟ್ಟಕ್ಕೆ ಆಯ್ಕೆ ಪುತ್ತೂರು ತಾಲೂಕು ಮಟ್ಟದಲ್ಲಿ ನಡೆದ ಮಹಿಳೆಯರ ಖೋ-ಖೋ ಪಂದ್ಯಾವಳಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರು ಪ್ರಥಮ ಸ್ಥಾನ ಮತ್ತು ಪುರುಷರ ಖೋ-ಖೋ ಪಂದ್ಯಾವಳಿಯಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಕೊಂಡಿದೆ. ಮತ್ತು ಮಹಿಳೆಯರ 4×100 ಮೀಟರ್ ರಿಲೇಯಲ್ಲಿ ಗುಣಶ್ರೀ (ಶ್ರೀನಿವಾಸ್ ಮತ್ತು ಹೇಮಾವತಿ ದಂಪತಿಗಳ ಪುತ್ರಿ), ಪ್ರತೀಕ್ಷಾ(ಬಾಲಕೃಷ್ಣ ಮತ್ತು ಶಶಿಕಲಾ ದಂಪತಿಗಳ ಪುತ್ರಿ), ತ್ರಿಶಾ (ಸತೀಶ್ ಮತ್ತು ಪುಷ್ಪಲತಾ ದಂಪತಿಗಳ ಪುತ್ರಿ), ಕೀರ್ತಿ (ಮೋನಪ್ಪ ಮತ್ತು ಲಲಿತಾ […]

ವಿದ್ಯಾಭಾರತಿ  ಕ್ರೀಡಾಕೂಟ

ವಿದ್ಯಾಭಾರತಿ ಕ್ರೀಡಾಕೂಟ

Wednesday, September 27th, 2023

ವಿದ್ಯಾಭಾರತಿ ಕ್ರೀಡಾಕೂಟ ಮಂಡ್ಯದ ಕೆರಗೋಡುನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 4×100 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದು ಕೊಂಡಿದ್ದಾರೆ. ರಿಲೆಯಲ್ಲಿ ಗುಣಶ್ರೀ (ಶ್ರೀನಿವಾಸ್ ಮತ್ತು ಹೇಮಾವತಿ ದಂಪತಿಗಳ ಪುತ್ರಿ), ಪ್ರತೀಕ್ಷಾ (ಬಾಲಕೃಷ್ಣ ಮತ್ತು ಶಶಿಕಲಾ ದಂಪತಿಗಳ ಪುತ್ರಿ) ತ್ರಿಶಾ (ಸತೀಶ್ ಮತ್ತು ಪುಷ್ಫಲತಾ ದಂಪತಿಗಳ ಪುತ್ರಿ) ಕೀರ್ತಿ (ಮೋನಪ್ಪ ಮತ್ತು ಲಲಿತ ದಂಪತಿಗಳ ಪುತ್ರಿ) ಪ್ರಥಮ ಸ್ಥಾನ ಹಾಗೂ ಕೀರ್ತಿ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ […]

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ

ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟ

Thursday, September 21st, 2023

   ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಇನ್‍ಪೆಂಟ್ ಮೇರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕಾಟಿಪಳ್ಳ, ಸುರತ್ಕಲ್ ಇಲ್ಲಿ ನಡೆದ ಜಿಲ್ಲಾಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ವನೀಶ್ (ಚಿದಾನಂದ ಮತ್ತು ಪೂರ್ಣಿಮಾ ದಂಪತಿಗಳ ಪುತ್ರ), ಚಿಂತನ್ (ರವೀಂದ್ರ ಮತ್ತು ಸುನೀತ ದಂಪತಿಗಳ ಪುತ್ರ), ಭವಿಷ್(ಗಿರಿಧರ ಮತ್ತು ವಿಶಾಲಾಕ್ಷಿ […]

ಜಿಲ್ಲಾ ಪ್ರೌಢ ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

ಜಿಲ್ಲಾ ಪ್ರೌಢ ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Saturday, September 16th, 2023

ಕ್ರೀಡಾ ಮನೋಭಾವ ವ್ಯಕ್ತಿಯ ವ್ಯಕ್ತಿತ್ವವನ್ನು ಅರಳಿಸುತ್ತದೆ-ಡಾ. ಕೃಷ್ಣ ಭಟ್ ಕೊಂಕೋಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ದಕ್ಷಿಣ ಕನ್ನಡ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿ ಪುತ್ತೂರು ತಾಲೂಕು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಒಳಾಂಗಣ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಜರುಗಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಡಾ.ಕೃಷ್ಣ ಭಟ್ ಕೊಂಕೋಡಿ ಇವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅನ್ಯಾನ್ಯ […]

ಜಿಲ್ಲಾಮಟ್ಟದ ಕಬಡ್ಡಿ

ಜಿಲ್ಲಾಮಟ್ಟದ ಕಬಡ್ಡಿ

Saturday, September 16th, 2023

ವಿಭಾಗ ಮಟ್ಟಕ್ಕೆ ಆಯ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಇದರ ಸಹಯೋಗದಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ತಂಡದಲ್ಲಿಕೃತಿಕಾ ಜಿ ( ಶ್ರೀ ರವಿ ಮತ್ತುಯಶೋಧ ದಂಪತಿಗಳ ಪುತ್ರಿ), ಆದ್ಯ ಬಿ.ಆರ್(ಶ್ರೀ ರಾಮಣ್ಣಗೌಡ ಮತ್ತುರೇಖಾ ಪಿ ದಂಪತಿಗಳ ಪುತ್ರಿ), ಪಿ ಕವನಶ್ರೀ (ಶ್ರೀ […]

ಯೋಗಾಸನ ಸ್ಪರ್ಧೆ

ಯೋಗಾಸನ ಸ್ಪರ್ಧೆ

Saturday, September 16th, 2023

ಜಿಲ್ಲಾಮಟ್ಟಕ್ಕೆ ಆಯ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರು ಇಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವಾರು ಬಹುಮಾನ ಪಡೆದಿರುತ್ತಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಶೃಜನ್ ಜೆ ರೈ ( ಜಗನ್ಮೋಹನ ರೈ ಮತ್ತು ಜಲಜಾ ರೈ ದಂಪತಿಗಳ ಪುತ್ರ)- ಪ್ರಥಮ ಸ್ಥಾನ, ರಿತೇಶ್ ನಾಯಕ್ (ರಾಜೇಶ್ ನಾಯಕ್ ಮತ್ತು ಸಂಧ್ಯಾ […]

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ

ತಾಲೂಕು ಮಟ್ಟದ ಖೋ ಖೋ ಪಂದ್ಯಾಟ

Saturday, September 16th, 2023

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸರಕಾರಿ ಪ್ರೌಢಶಾಲೆ ಕೊಣಾಲು ಇಲ್ಲಿ ನಡೆದ ಪುತ್ತೂರುತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ತಂಡದಲ್ಲಿ ಮನೀಶ್ (ಚಿದಾನಂದ ಮತ್ತು ಪೂರ್ಣಿಮಾ ದಂಪತಿಗಳ ಪುತ್ರ), ಚಿಂತನ್ (ರವೀಂದ್ರ ಮತ್ತು ಸುನೀತ ದಂಪತಿಗಳ ಪುತ್ರ), ಭವಿಷ್(ಗಿರಿಧರ ಮತ್ತು ವಿಶಾಲಾಕ್ಷಿ ದಂಪತಿಗಳ ಪುತ್ರ), ಸೃಜನ್ (ವಸಂತ ಜಿ ಮತ್ತು ಲಲಿತ ದಂಪತಿಗಳ ಪುತ್ರ), ಕೌಶಿಕ್ […]

ಮೂರ್ತಿಕಲಾ ರಚನಾ ಸ್ಪರ್ಧೆ – ರಾಷ್ಟಮಟ್ಟಕ್ಕೆ ಆಯ್ಕೆ

ಮೂರ್ತಿಕಲಾ ರಚನಾ ಸ್ಪರ್ಧೆ – ರಾಷ್ಟಮಟ್ಟಕ್ಕೆ ಆಯ್ಕೆ

Saturday, September 16th, 2023

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಕಲಬುರಗಿ ಜಿಲ್ಲೆಯ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಮ್ ಇಲ್ಲಿ ನಡೆದ ರಾಜ್ಯಮಟ್ಟದ ಗಣಿತ -ವಿಜ್ಞಾನ ಮೇಳದ ಮೂರ್ತಿಕಲಾ ರಚನಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ೮ನೇ ತರಗತಿಯ ವಿದ್ಯಾರ್ಥಿ ಕಿಶಾನ್(ಹರೀಶ್ ಗೌಡ ಮತ್ತು ಸವಿತಾ ದಂಪತಿಗಳ ಪುತ್ರ) ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ ತರಬೇತಿ ನೀಡಿರುತ್ತಾರೆ.

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

Saturday, September 16th, 2023

‘ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುತ್ತಾ ಪ್ರತಿಯೊಂದು ನಂಬಿಕೆ ಆಚರಣೆಗಳ ಹಿಂದಿರುವ ವೈಜ್ಞಾನಿಕ ಸತ್ಯವನ್ನು ತಿಳಿದುಕೊಳ್ಳಬೇಕು’ ವಿಜ್ಞಾನ ಸಂಶೋಧನೆಗಳ ಸಾಧನೆಗಳು ಮನುಕುಲದ ಒಳಿತಿಗಾಗಿ ಬಳಸಿಕೊಳ್ಳಬೇಕೇ ಹೊರತು ವಿನಾಶಕ್ಕಲ್ಲ ಎಂಬುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್ ಎಂ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿಜ್ಞಾನ ನಾಟಕ ಸ್ಪರ್ಧೆಯ ಉದ್ಘಾಟನಾ ಸಂದರ್ಭದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಸಂಚಾಲಕರಾದ […]

ರಕ್ಷಾಬಂಧನ

ರಕ್ಷಾಬಂಧನ

Saturday, September 16th, 2023

ರಕ್ಷಾಬಂಧನ ಹಬ್ಬವು ನಮ್ಮ ದೇಶದ ಒಗ್ಗಟ್ಟು, ಸಾಮರಸ್ಯತೆಯನ್ನು ಸಾರುತ್ತದೆ- ಬ.ಗಣರಾಜ್ ಭಟ್ “ಸೃಷ್ಟಿಯಲ್ಲಿ ಪಂಚಮಹಾಭೂತಗಳಿವೆ. ಅವುಗಳಿಂದಲೇ ಮುಂದೆ ಪ್ರಕೃತಿಯ ಬದಲಾವಣೆ ಇಲ್ಲಿ ಭಗವಂತನ ನೆಲೆ ಇದೆ. ತಪಸ್ಸು ಶ್ರದ್ಧೆ, ಸತ್ಯ, ಋತುಗಳೆಲ್ಲ ಅಲ್ಲಿಂದಲೇ ಬೆಳೆದು ಬಂದಿದೆ.ಆದರೆ ಈಗೀಗ ಇದರಲ್ಲಿ ನಂಬಿಕೆ ಕಡಿಮೆಯಾಗಿ ಅಂಧಾನುಕರಣೆಗೆ ಮಾರು ಹೋಗಿದ್ದೇವೆ. ಬ್ರಿಟಿಷರ ಇತಿಹಾಸದಿಂದ ನಾವುಗಳು ಪೂರ್ತಿಯಾಗಿ ಚೇತರಿಸಿಕೊಳ್ಳದೆ ನಮ್ಮತನದಿಂದ ವಂಚಿತರಾಗಿದ್ದೇವೆ. ಈ ರಕ್ಷಾಬಂಧನ ಹಬ್ಬವು ನಮ್ಮದೇಶದಒಗ್ಗಟ್ಟು, ಸಾಮರಸ್ಯತೆಯನ್ನು ಸಾರುತ್ತದೆ” ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ರಕ್ಷಾಬಂಧನ ಆಚರಣೆಯಲ್ಲಿಅಭ್ಯಾಗತರಾಗಿ ಆಗಮಿಸಿದ […]

ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ

ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ

Saturday, September 16th, 2023

ಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಪುತ್ತೂರು ಇವರ ವತಿಯಿಂದ ಇ.ಎಸ್.ಆರ್ ಪ್ರೆಸಿಡೆನ್ಸಿ ಶಾಲೆ ಮರೀಲ್ – ಪುತ್ತೂರು ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿರಿಯ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಎರಡೂ ವಿಭಾಗಗಳಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಿರಿಯ ಪ್ರಾಥಮಿಕ ವಿಭಾಗ- ತನ್ವೀಶ್ (ವಾಸಪ್ಪ÷್ಪಗೌಡ ಮತ್ತು […]

ಜಿಲ್ಲಾಮಟ್ಟದ ಗಣಿತ– ವಿಜ್ಞಾನ ಹಾಗೂ ಸಂಸ್ಕತಿ ಜ್ಞಾನ– ಮಹೋತ್ಸವ

ಜಿಲ್ಲಾಮಟ್ಟದ ಗಣಿತ– ವಿಜ್ಞಾನ ಹಾಗೂ ಸಂಸ್ಕತಿ ಜ್ಞಾನ– ಮಹೋತ್ಸವ

Saturday, September 16th, 2023

ನಮ್ಮಲ್ಲಿ ಪ್ರಶ್ನಿಸುವ ಮನೋಭಾವ ಸದಾಜಾಗೃತವಾಗಿರಬೇಕು–ಡಾ| ಕೆ.ಗಣೇಶ್‌ರಾಜ್(ನಿವೃತ್ತ ವಿಜ್ಞಾನಿ)                                                                                                   […]

ಕಬಡ್ಡಿ –  ವಲಯ ಮಟ್ಟಕ್ಕೆ ಆಯ್ಕೆ

ಕಬಡ್ಡಿ – ವಲಯ ಮಟ್ಟಕ್ಕೆ ಆಯ್ಕೆ

Monday, August 28th, 2023

ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಲ್ನಾಡು ಇಲ್ಲಿ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕಿಯರ ಮತ್ತು ಬಾಲಕರ ಕಬಡ್ಡಿ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕರ ತಂಡದಲ್ಲಿ ತಶ್ವಿತ್ ರಾಜ್(ಆನಂದ ಪೂಜಾರಿ ಮತ್ತು ಕೆ. ಶುಭ ದಂಪತಿಗಳ ಪುತ್ರ), ಜನಿತ್ ಕೆ.ಎಸ್(ಕೆ ಸಂಜೀವ ಗೌಡ ಮತ್ತು ಕಮಲಾಕ್ಷಿ ದಂಪತಿಗಳ ಪುತ್ರ), ಪುನೀತ್ (ಶ್ರೀಧರ ಮತ್ತು ನಳಿನಿ ದಂಪತಿಗಳ ಪುತ್ರ), […]

ಚಂದ್ರಯಾನ -3 ರ ಯಶಸ್ವಿ ಸಾಧನೆಯ ಸಂಭ್ರಮಾಚರಣೆ

ಚಂದ್ರಯಾನ -3 ರ ಯಶಸ್ವಿ ಸಾಧನೆಯ ಸಂಭ್ರಮಾಚರಣೆ

Monday, August 28th, 2023

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಭಾರತದ ವೈಜ್ಞಾನಿಕ ಸಾಧನೆಗಳಲ್ಲಿ ಪ್ರಮುಖ ಹಾಗೂ ಮಹತ್ವಪೂರ್ಣವಾದ ಚಂದ್ರಯಾನ 3 ರ ಯಶಸ್ವಿ ಸಾಧನೆಯ ಸಂಭ್ರಮವನ್ನು ಆಚರಿಸಲಾಯಿತು. ಭಾರತಮಾತೆಯ ಭಾವಚಿತ್ರಕ್ಕೆ ಆರತಿ ಬೆಳಗಿ, ಪುಷ್ಪಾರ್ಚನೆ ಮಾಡಿ ಜಯಘೋಷದೊಂದಿಗೆ ವಂದೇ ಮಾತರಂ ಹಾಡನ್ನು ಸಾಮೂಹಿಕವಾಗಿ ಹಾಡಲಾಯಿತು. ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಮಾತಾಜಿ ಚಂದ್ರಯಾನದ ಸಾಧನೆಗಳನ್ನು ತಿಳಿಸುತ್ತಾ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಶುಭ ಹಾರೈಕೆಯ ಮಾತುಗಳನ್ನು ಉಲ್ಲೇಖಿಸಿದರು. ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ವಸಂತ ಸುವರ್ಣ ಇವರು ಭಾರತೀಯ […]

ತಾಲೂಕು ಮಟ್ಟದ ದೇಶಭಕ್ತಿ ಗೀತೆ - ದ್ವಿತೀಯ

ತಾಲೂಕು ಮಟ್ಟದ ದೇಶಭಕ್ತಿ ಗೀತೆ – ದ್ವಿತೀಯ

Wednesday, August 16th, 2023

ಸಂಸ್ಕಾರ ಭಾರತಿ ಪುತ್ತೂರು ವಿಭಾಗ ಇದರ ಆಶಯದಲ್ಲಿ ರೇಡಿಯೋ ಪಾಂಚಜನ್ಯ, ರೋಟರಿ ಯುವ ರೋಟರಿ ಕ್ಲಬ್ ಪುತ್ತೂರು ಸಿಟಿ ಮತ್ತು ಇನ್ನರ್ವೀಲ್ ಕ್ಲಬ್ ಇವುಗಳ ಸಹಯೋಗದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ (ಗ್ರೂಪ್) ಪ್ರೌಢ ಶಾಲಾ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ದ್ವಿತೀಯ ಸ್ಥಾನ ಗಳಿಸಿದೆ.

ವಿದ್ಯಾಭಾರತಿ ಕಬಡ್ಡಿ –  ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕಬಡ್ಡಿ – ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

Wednesday, August 16th, 2023

ವಿದ್ಯಾಭಾರತಿ ಕರ್ನಾಟಕ ಮತ್ತು ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ ಮಂಗಳೂರು ಇವರ ಆಶ್ರಯದಲ್ಲಿ ಶಕ್ತಿ ವಿದ್ಯಾಸಂಸ್ಥೆ ಮಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿಶೋರವರ್ಗದ ಬಾಲಕಿಯರ ಕಬಡ್ಡಿ ತಂಡವು ಪ್ರಥಮ ಸ್ಥಾನ ಪಡೆದು ಕ್ಷೇತ್ರೀಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಕೃತಿಕಾ ಜಿ ( ಶ್ರೀ ರವಿ ಮತ್ತು ಯಶೋಧ ದಂಪತಿಗಳ ಪುತ್ರಿ), ಆದ್ಯ ಬಿ.ಆರ್(ಶ್ರೀ ರಾಮಣ್ಣ ಗೌಡ ಮತ್ತು ರೇಖಾ ಪಿ ದಂಪತಿಗಳ ಪುತ್ರಿ), ಪಿ ಕವನಶ್ರೀ (ಶ್ರೀ ಗೋಪಾಲಕೃಷ್ಣ ಮತ್ತು […]

ಖೋ-ಖೋ ಪಂದ್ಯಾಟ ರಾಜ್ಯಮಟ್ಟಕ್ಕೆ ಆಯ್ಕೆ

ಖೋ-ಖೋ ಪಂದ್ಯಾಟ ರಾಜ್ಯಮಟ್ಟಕ್ಕೆ ಆಯ್ಕೆ

Thursday, August 10th, 2023

ಖೋ-ಖೋ ಪಂದ್ಯಾಟ ರಾಜ್ಯಮಟ್ಟಕ್ಕೆ ಆಯ್ಕೆ ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವಿವೇಕಾನಂದ ವಿದ್ಯಾಸಂಸ್ಥೆ ಮುಂಡಾಜೆ ಇಲ್ಲಿ ನಡೆದ ಬಾಲವರ್ಗದ ಬಾಲಕಿಯರ ಮತ್ತು ಬಾಲವರ್ಗದ ಬಾಲಕರ ಎರಡೂ ವಿಭಾಗಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ ಕೃತಿ (ರಮೇಶ್ ಗೌಡ ಮತ್ತು ನಳಿನಿ ದಂಪತಿಗಳ ಪುತ್ರಿ), ಶ್ರಾವ್ಯ (ಕೆ ಸುರೇಂದ್ರ ನಾಯಕ್ ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ), ಸಂಧ್ಯಾ (ಮಣಿಕಂಠ ರಾಜ್ […]

ಓದುವ ದಿನದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ  ಶಾಲೆಯ ಮಕ್ಕಳಿಗೆ ಪ್ರಶಸ್ತಿ

ಓದುವ ದಿನದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ಶಾಲೆಯ ಮಕ್ಕಳಿಗೆ ಪ್ರಶಸ್ತಿ

Tuesday, August 8th, 2023

                                                                                  ತ್ರಿಸ್ಥಾ ಭಟ್                                      ಸಾಯೀಶ್ವರಿ  […]

ಶಿಕ್ಷಕ-ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ

ಶಿಕ್ಷಕ-ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಾಧಿಕಾರಿಗಳ ಆಯ್ಕೆ

Friday, August 4th, 2023

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ೨೦೨೩-೨೪ನೇ ಸಾಲಿನ ಶಿಕ್ಷಕ – ರಕ್ಷಕ ಸಂಘ ಮತ್ತು ಮಾತೃಭಾರತಿಯ ಪದಗ್ರಹಣ ಸಮಾರಂಭ ನಡೆಯಿತು. ಪ್ರಸಕ್ತ ರ‍್ಷದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀ ಜಯಂತ್ ಗೌಡ ಕೆ, ಉಪಾಧ್ಯಕ್ಷರಾಗಿ ಶ್ರೀಮತಿ ಆಶಾ ಕೆ, ಕಾರ್ಯದರ್ಶಿಯಾಗಿ ಶ್ರೀ ಯುವರಾಜ ಕೆ, ಆಯ್ಕೆಗೊಂಡರು.ಮಾತೃಭಾರತಿಯ ಅಧ್ಯಕ್ಷೆಯಾಗಿ ಶ್ರೀಮತಿ ಮಂಗಳ ಗೌರಿ, ಉಪಾಧ್ಯಕ್ಷೆಯಾಗಿ ಶ್ರೀಮತಿ ಪ್ರೀತಿಕಲಾ, ಕಾರ್ಯದರ್ಶಿಯಾಗಿ ಶ್ರೀಮತಿ ಮಂಜುಳಾ ಆಯ್ಕೆಗೊಂಡರು. ಶಿಕ್ಷಕ-ರಕ್ಷಕ ಸಂಘ               […]

ವಿದ್ಯಾಭಾರತಿ ಕಬಡ್ಡಿ –  ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕಬಡ್ಡಿ – ರಾಜ್ಯಮಟ್ಟಕ್ಕೆ ಆಯ್ಕೆ

Friday, August 4th, 2023

ವಿದ್ಯಾಭಾರತಿ ಕಬಡ್ಡಿ – ರಾಜ್ಯಮಟ್ಟಕ್ಕೆ ಆಯ್ಕೆ ವಿದ್ಯಾಭಾರತಿ ಕರ್ನಾಟಕ ಮತ್ತು ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ ಮಂಗಳೂರು ಇವರ ಆಶ್ರಯದಲ್ಲಿ ಶಕ್ತಿ ವಿದ್ಯಾಸಂಸ್ಥೆ ಮಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕಿಶೋರವರ್ಗದ ಬಾಲಕಿಯರ ಕಬಡ್ಡಿ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಕೃತಿಕಾ ಜಿ ( ಶ್ರೀ ರವಿ ಮತ್ತು ಯಶೋಧ ದಂಪತಿಗಳ ಪುತ್ರಿ), ಆದ್ಯ ಬಿ.ಆರ್(ಶ್ರೀ ರಾಮಣ್ಣ ಗೌಡ ಮತ್ತು ರೇಖಾ ಪಿ ದಂಪತಿಗಳ ಪುತ್ರಿ), […]

ಪೋಷಕರ ಸಭೆ ಹಾಗೂ ಸಮಿತಿ ಸಮನ್ವಯ ಸಭೆ

ಪೋಷಕರ ಸಭೆ ಹಾಗೂ ಸಮಿತಿ ಸಮನ್ವಯ ಸಭೆ

Friday, August 4th, 2023

‘ಮಕ್ಕಳ ಮೂಲಕ ಪೋಷಕರಲ್ಲೂ ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಮಕ್ಕಳಿಂದ ಪ್ರಾತ್ಯಕ್ಷಿತಗೊಂಡ ವಿಜ್ಞಾನದ ದೈನಂದಿನ ಬದುಕಿಗೆ ಸಂಬಂಧಿಸಿದ ಪ್ರಯೋಗಗಳು ನಮಗೂ ಕೆಲವಾರು ವಿಷಯಗಳನ್ನು ತಿಳಿಸಿದುವು. ಮಕ್ಕಳ ಪ್ರಯತ್ನ ಶ್ಲಾಘನೀಯ’ – ಶ್ರೀಮತಿ ಆಶಾ (ಪೋಷಕರು) ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ನಡೆದ ವಿಭಾಗವಾರು ಪೋಷಕರ ಸಭೆಯಲ್ಲಿ ಮಕ್ಕಳಿಂದ ಶ್ಲೋಕ, ಅಮೃತ ವಚನ, ಮಂಕುತಿಮ್ಮನ ಕಗ್ಗ, ದೇಶಭಕ್ತಿ ಗೀತೆ, ಕನ್ನಡ ಮತ್ತು ಆಂಗ್ಲ ಭಾಷೆಯ ಭಾಷಣ ಹಾಗೂ ವಿಜ್ಞಾನ ಪ್ರಾತ್ಯಕ್ಷಿಕೆಗಳು ಪ್ರಸ್ತುತಗೊಂಡವು. ಪೋಷಕರೊಂದಿಗೆ […]

ಯೋಗಾಸನ ಸ್ಪರ್ಧೆ ರಾಜ್ಯಮಟ್ಟಕ್ಕೆ ಆಯ್ಕೆ

ಯೋಗಾಸನ ಸ್ಪರ್ಧೆ ರಾಜ್ಯಮಟ್ಟಕ್ಕೆ ಆಯ್ಕೆ

Tuesday, August 1st, 2023

ಯೋಗಾಸನ ಸ್ಪರ್ಧೆ  ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ವಿದ್ಯಾಭಾರತಿ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಸರಸ್ವತಿ ವಿದ್ಯಾಲಯ ಕಡಬ ಇವರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಥಮ ಬಹುಮಾನ, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಸಮಗ್ರ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಸಮಗ್ರ ಪ್ರಥಮ ಸ್ಥಾನ ಕವಿತಾ (ರಿದಮಿಕ್) ದ್ವಿತೀಯ ಸ್ಥಾನ, ಮುಕುಂದ(ರಿದಮಿಕ್) ತೃತೀಯ […]

ನೂತನ ಪಾಕ ಶಾಲೆ - ಸಾನ್ನಿಧ್ಯ-ಲೋಕಾರ್ಪಣೆ

ನೂತನ ಪಾಕ ಶಾಲೆ – ಸಾನ್ನಿಧ್ಯ-ಲೋಕಾರ್ಪಣೆ

Friday, July 14th, 2023

ಹಣದ ಹಿಂದೆ ಹೋಗುವ ಬದಲು ಗುಣದ ಹಿಂದೆ ಹೋಗುವಂತಾಗಬೇಕು – ಡಾ.ಪ್ರಭಾಕರ ಭಟ್ ಹಿಂದು ಸಮಾಜದ ನಂಬಿಕೆಗಳನ್ನು ಗಟ್ಟಿ ಮಾಡುವ ಸಂಗತಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಿಂದ ಆಗುತ್ತಿದೆ. ಹಣದ ಹಿಂದೆ ಹೋಗುವ ಬದಲು ಗುಣದ ಹಿಂದೆ ಹೋಗುವ ಮನಸ್ಸು ನಮ್ಮದಾಗಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಹೇಳಿದರು. ತೆಂಕಿಲ ವಿವೇಕನಗರದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶೇಷಾದ್ರಿಯಲ್ಲಿ ‘ಅನ್ನಪೂರ್ಣ’ ಯೋಜನೆಯ ನೂತನ ಪಾಕಶಾಲೆ ‘ಸಾನ್ನಿಧ್ಯ’ […]

ಸಾನ್ನಿಧ್ಯ - ಲೋಕಾರ್ಪಣೆ – ಗಣಪತಿ ಹೋಮ

ಸಾನ್ನಿಧ್ಯ – ಲೋಕಾರ್ಪಣೆ – ಗಣಪತಿ ಹೋಮ

Monday, July 10th, 2023

ಸಾನ್ನಿಧ್ಯ – ಲೋಕಾರ್ಪಣೆ – ಗಣಪತಿ ಹೋಮ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಅನ್ನಪೂರ್ಣ ಯೋಜನೆಯ ನೂತನ ಪಾಕಶಾಲೆ ‘ಸಾನ್ನಿಧ್ಯ’ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಜು.06ರಂದು ನೆರವೇರಿತು. ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ ವಿ.ಎಸ್.ಭಟ್ ನೇತೃತ್ವದಲ್ಲಿ ಗಣಪತಿ ಹೋಮ ನಡೆದು ‘ಸಾನ್ನಿಧ್ಯ’ ಅನ್ನಪೂರ್ಣ ಪಾಕಶಾಲೆಯ ಪ್ರವೇಶೋತ್ಸವ ನೆರವೇರಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಂಪ್ಯ ಆನಂದಾಶ್ರಮ ಸೇವಾ ಟ್ರಸ್ಟ್‍ನ ಅಧ್ಯಕ್ಷೆ ಡಾ. ಗೌರಿ […]

ಸಾನ್ನಿಧ್ಯ- ಲೋಕಾರ್ಪಣೆ– ವಾಸ್ತು ಪೂಜೆ

ಸಾನ್ನಿಧ್ಯ- ಲೋಕಾರ್ಪಣೆ– ವಾಸ್ತು ಪೂಜೆ

Monday, July 10th, 2023

ಸಾನ್ನಿಧ್ಯ- ಲೋಕಾರ್ಪಣೆ– ವಾಸ್ತು ಪೂಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ‘ಅನ್ನಪೂರ್ಣ’ ಯೋಜನೆಯ ನೂತನ ಪಾಕಶಾಲೆ ‘ಸಾನ್ನಿಧ್ಯ’ ಇದರ ಲೋಕಾರ್ಪಣೆ ಜು.5ರಂದು ನಡೆಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ವಿ.ಎಸ್ ಭಟ್ ರವರ ನೇತೃತ್ವದಲ್ಲಿ ವಾಸ್ತು ಪೂಜೆ ನಡೆಯಿತಿ. ಬೆಂಗಳೂರು ಬಯೋಟೆಕ್ ಕಂಪೆನಿಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕರಾಗಿರುವ ಡಾ. ಶಾಮ ಭಟ್ಟ, ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಚುತ ನಾಯಕ್ ಹೆಚ್ ಉಪಸ್ಥಿತರಿದ್ದರು.   ಕಾರ್ಯಕ್ರಮದಲ್ಲಿ ಬೆಂಗಳೂರು […]

ಜನಪದ ಗೀತೆ ಸ್ಪರ್ಧೆ

ಜನಪದ ಗೀತೆ ಸ್ಪರ್ಧೆ

Tuesday, July 4th, 2023

ಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ಶ್ರೀ ದಿವಂಗತ ಬಾಲಕೃಷ್ಣ ಮಧುವನ ಇವರ ಸ್ಮರಣಾರ್ಥ ಸರ್ವೋದಯ ಪ್ರೌಢಶಾಲೆ, ಸುಳ್ಯಪದವು ಇಲ್ಲಿ ನಡೆದ ತಾಲೂಕು ಮಟ್ಟದ ಜನಪದ ಗೀತೆ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹರಿಣಿ, ಸುಷ್ಮಾ ಮತ್ತು ಮಂಗಳಾದುರ್ಗಾ ಇವರ  ತಂಡ  ಪ್ರೋತ್ಸಾಹಕ  ಬಹುಮಾನವನ್ನು ಪಡೆದುಕೊಂಡಿದ್ದಾರೆ.

Highslide for Wordpress Plugin