ಮೂಲಿಕಾ ವನ ಭೇಟಿ

ಮೂಲಿಕಾ ವನ ಭೇಟಿ

Thursday, June 29th, 2023

“ಪರಿಸರ ಸ್ನೇಹಿ ಬದುಕು ನಮ್ಮದಾದಾಗ ನಮ್ಮನ್ನು ನಾವು ಕಂಡುಕೊಳ್ಳಲು ಸಾಧ್ಯವಾಗುತ್ತದೆ” –ಡಾ.ರವೀಂದ್ರ ಐತಾಳರು ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹಾತ್ವಾಕಾಂಕ್ಷೆಯ ಯೋಜನೆ ‘ವಿವೇಕ ಸಂಜೀವಿನಿ’ಯ ಅನುಷ್ಠಾನಿಕ ಭಾಗವಾಗಿ ‘ಮೂಲಿಕಾ ವನ’ ನಿರ್ಮಾಣದ ಅಂಗವಾಗಿ ಪೂರ್ವಭಾವಿ ಮಾಹಿತಿ ಪಡೆಯುವ ದೃಷ್ಟಿಯಿಂದ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಖ್ಯಾತ ಔಷಧೀಯ ಸಸ್ಯಗಳ ಸಂರಕ್ಷಕ ಹಾಗೂ ಉರಗ ತಜ್ಞ ಡಾ. ರವೀಂದ್ರ ಐತಾಳರ ಮೂಲಿಕಾ ವನಕ್ಕೆ ಭೇಟಿ ನೀಡಿದರು. ತಮ್ಮ ಮೂಲಿಕಾ ವನದ ಪರಿಚಯ ಮಾಡಿಸಿ ಹಲವು ಜಾತಿಯ ಔಷಧೀಯ […]

ಕೆದಿಲದಲ್ಲಿ ಗ್ರಾಮ ಸಂಜೀವಿನಿ ಕಾರ್ಯಕ್ರಮ

ಕೆದಿಲದಲ್ಲಿ ಗ್ರಾಮ ಸಂಜೀವಿನಿ ಕಾರ್ಯಕ್ರಮ

Monday, June 26th, 2023

ಕೆದಿಲದಲ್ಲಿ ಗ್ರಾಮ ಸಂಜೀವಿನಿ ಕಾರ್ಯಕ್ರಮ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶಯದಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜಾಗೃತಿಯ ಮಹಾತ್ವಾಕಾಂಕ್ಷೆ ಯೋಜನೆ ವಿವೇಕ ಸಂಜೀವಿನಿಯ ಶಾಲಾ ಅನುಷ್ಠಾನಿಕ ಭಾಗವಾಗಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ಶ್ರೀರಾಮ ಭಜನಾ ಮಂದಿರ ಕೆದಿಲ, ಊರ ನಾಗರಿಕರ ಸಹಯೋಗದಲ್ಲಿ ಗ್ರಾಮ-ಸಂಜೀವಿನಿ ಯೋಜನೆಗೆ ಚಾಲನೆ ನೀಡಿದವರು ಕೆದಿಲ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಜಯಂತಿ ಧನಂಜಯ ಶೆಟ್ಟಿ ಇವರು. ‘ಶಾಲೆಯಿಂದ ಗ್ರಾಮಗಳಲ್ಲಿ ನಡೆಯುತ್ತಿರುವ ಅನ್ಯಾನ್ಯ ಕಾರ್ಯಕ್ರಮಗಳಾದ ಬದು ನಿರ್ಮಾಣ, ಗದ್ದೆ ಕೊಯ್ಲು, […]

‘ಸಹಜ’- ಸಂಜೀವಿನಿ ಸಮಿತಿ ರಚನೆ

‘ಸಹಜ’- ಸಂಜೀವಿನಿ ಸಮಿತಿ ರಚನೆ

Saturday, June 24th, 2023

ಸಹಜ’- ಸಂಜೀವಿನಿ ಸಮಿತಿ ರಚನೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜಾಗೃತಿಯ ಮಹಾತ್ವಾಕಾಂಕ್ಷೆಯ ಯೋಜನೆ ‘ವಿವೇಕ ಸಂಜೀವಿನಿ’ಯ ಶಾಲಾ ಅನುಷ್ಠಾನಿಕ ಭಾಗವಾಗಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಸಕ್ತ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳಾದ ಔಷಧೀಯ ಸಸ್ಯಗಳ ಪೆÇೀಷಣಾ ಹಬ್ಬ, ಸಹಜ-ಮೂಲಿಕಾ ವನ ನಿರ್ಮಾಣ, ಕೆದಿಲ ಗ್ರಾಮದಲ್ಲಿ ನಡೆಯಲಿರುವ ಗ್ರಾಮ-ವನ ನಿರ್ಮಾಣದ ಭಾಗವಾಗಿ ಪೆÇೀಷಕರನ್ನು ಒಳಗೊಂಡಂತೆ ಸಮಿತಿ ರಚನೆ ಮಾಡಲಾಯಿತು. ಪೂರ್ವಪ್ರಾಥಮಿಕದಿಂದ ಹತ್ತನೇ ವರೆಗಿನ ತರಗತಿಗಳ […]

‘ಸಹಜ’ – ಮೂಲಿಕಾ ವನ ನಿರ್ಮಾಣ ಯೋಜನೆ

‘ಸಹಜ’ – ಮೂಲಿಕಾ ವನ ನಿರ್ಮಾಣ ಯೋಜನೆ

Friday, June 23rd, 2023

ಔಷಧೀಯ ಸಸ್ಯಗಳ ಸಂರಕ್ಷಣೆ ಹಾಗೂ ಬಳಕೆಯ ಅರಿವು ಶಾಲಾ ದಿನಗಳಿಂದಲೇ ಬೆಳೆಸುವ ಶಾಲಾ ಕಾರ್ಯ ಶ್ಲಾಘನೀಯ –      ಡಾ.ಹರಿಕೃಷ್ಣ ಪಾಣಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷೆಯ ಯೋಜನೆ ‘ವಿವೇಕ ಸಂಜೀವಿನಿ’ ಯ [ಔಷಧೀಯ ಸಸ್ಯಗಳ ಸಂರಕ್ಷಣೆ, ಸಂವರ್ಧನೆ, ಬಳಕೆ ಹಾಗೂ ಜಾಗೃತಿಯ ಆಂದೋಲನ] ಆಶಯದಂತೆ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ಸಹಜ- ಮೂಲಿಕಾ ವನ ನಿರ್ಮಾಣ ಯೋಜನೆ’ಯ ಕಾರ್ಯಕ್ರಮವನ್ನು ಶ್ರೀ ದುರ್ಗಾ ಕ್ಲಿನಿಕ್ ಪುತ್ತೂರು ಇಲ್ಲಿನ ಆರ್ಯುವೇದಿಕ್ ವೈದ್ಯರಾದ ಡಾ|ಹರಿಕೃಷ್ಣ ಪಾಣಾಜೆ ಉದ್ಫಾಟಿಸಿ ಮಾತಾನಾಡಿ […]

ವಿಶ್ವ ಯೋಗ ದಿನಾಚರಣೆ

ವಿಶ್ವ ಯೋಗ ದಿನಾಚರಣೆ

Thursday, June 22nd, 2023

               ‘ಸ್ವಾಸ್ಥ್ಯ’ – ಶಾಲಾ ಯೋಗ ಚಟುವಟಿಕಾ ಸಂಘ   ‘ಯೋಗವು ಕೇವಲ ಆಸನಗಳಿಗೆ ಸೀಮಿತವಾಗದೆ ಮನಸ್ಸಿನ ಸುಸ್ಥಿತಿಗೆ ಸಹಾಯಕ’- ವಸಂತ ಸುವರ್ಣ ವಿಶ್ವಯೋಗ ದಿನಾಚರಣೆಯ ಪ್ರಯುಕ್ತ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ಸ್ವಾಸ್ಥ್ಯ’ ಶಾಲಾ ಯೋಗ ಚಟುವಟಿಕಾ ಸಂಘ ಇದರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಆಡಳಿತ ಮಂಡಳಿ ಸಂಚಾಲPರಾದ ಶ್ರೀ ವಸಂತ ಸುವರ್ಣ ಅವರು ‘ಮನಸ್ಸು, ಬುದ್ಧಿ ಮತ್ತು ಶರೀರದ ನಡುವೆ […]

ಶಾಲಾ ಚುನಾವಣೆ

ಶಾಲಾ ಚುನಾವಣೆ

Saturday, June 10th, 2023

                                          ಮಂತ್ರಿಮಂಡಲ ರಚನೆ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಶಾಲಾ ‘ಸಮನ್ವಯ’ ಸಮಾಜ ವಿಜ್ಞಾನ ಸಂಘದ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಚುನಾವಣೆ ಹಾಗೂ ಮಂತ್ರಿಮಂಡಲ ರಚನಾ ಪ್ರಕ್ರಿಯೆ ನಡೆಯಿತು. ಪ್ರೌಢಶಾಲಾ ವಿಭಾಗದ ನಾಯಕನಾಗಿ ಭವಿಷ್ ಜಿ ಮತ್ತು ಉಪನಾಯಕನಾಗಿ ತಶ್ವಿತ್ ರಾಜ್ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿ ನಾಯಕನಾಗಿ […]

ಪರಿಸರ ದಿನಾಚರಣಾ ಕಾರ್ಯಕ್ರಮಗಳು

ಪರಿಸರ ದಿನಾಚರಣಾ ಕಾರ್ಯಕ್ರಮಗಳು

Tuesday, June 6th, 2023

ವಿದ್ಯಾರ್ಥಿ ದಿಶೆಯಿಂದಲೇ ಪರಿಸರ ಸಂರಕ್ಷಣೆಗೆ ನಿರಂತರ ಕೆಲಸವಾಗಬೇಕು.- ಶ್ರೀ ಲೋಕೇಶ್ ಎಸ್.ಆರ್                                                                                             […]

ಶಾಲಾ ಆರಂಭೋತ್ಸವ

ಶಾಲಾ ಆರಂಭೋತ್ಸವ

Tuesday, June 6th, 2023

2023-24ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗೆ ಹೊಸ ಸೇರ್ಪಡೆಗೊಂಡಿರುವ ಹಾಗೂ ಮರು ಸೇರ್ಪಡೆಗೊಂಡಿರುವ ಮಕ್ಕಳ ಹಾಗೂ ಅವರ ಪೆÇೀಷಕರಿಗೆ ಶಾಲಾ ಪುನರಾರಂಭದಂದು ಗಣಹೋಮ ನಡೆಸಿ ಸ್ವಾಗತಿಸಲಾಯಿತು.                     ಶಾಲಾ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರದ ಶ್ರೀಮತಿ ನವೀನಾಕ್ಷಿ ದಂಪತಿಗಳು ಪ್ರಧಾನರ್ಚಕರ ಸಮ್ಮುಖದಲ್ಲಿ ದೈವೀ ಕಾರ್ಯ ನೆರವೇರಿಸಿದರು. ಬಂದಂತಹ ಮಕ್ಕಳಿಗೆ ತಿಲಕವಿರಿಸಿ ಆರತಿ ಬೆಳಗಿ ಶುಭ ಕೋರಲಾಯಿತು. ಶಾಲಾ ಆಡಳಿತ ಮಂಡಳಿ, ಅಧ್ಯಕ್ಷರು, ಸಂಚಾಲಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಆಂಗ್ಲಭಾಷಾ ಸಂವಹನ ಕಾರ್ಯಾಗಾರ

ಆಂಗ್ಲಭಾಷಾ ಸಂವಹನ ಕಾರ್ಯಾಗಾರ

Tuesday, June 6th, 2023

ಆಂಗ್ಲಭಾಷಾ ಕಲಿಕೆ ವ್ಯಾವಹಾರಿಕ ಜ್ಞಾನದ ಅಭಿವೃದ್ದಿಗೆ ಪೂರಕವಾಗಿದೆ-                                                                                          ಶ್ರೀ ರಾಮ ಚಂದ್ರ ಭಟ್- ನಿವೃತ್ತ […]

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ

‘ಸನ್ಮತಿ’ ಶಿಕ್ಷಕರ ಕಲಿಕಾ ಕಾರ್ಯಾಗಾರ

Tuesday, June 6th, 2023

ಅಧ್ಯಯನದ ವೈವಿಧ್ಯಮಯ ಸಾಧ್ಯತೆಗಳು ಅಧ್ಯಾಪನವನ್ನು ಪರಿಣಾಮಕಾರಿಯಾಗಿಸುತ್ತದೆ-                                                                                                     […]

ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ

ಸಾಧನಾಭಿವಂದನಾ – ಅಭಿನಂದನಾ ಕಾರ್ಯಕ್ರಮ

Monday, June 5th, 2023

‘ವಿದ್ಯಾರ್ಥಿ ದಿಶೆಯಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಅನಂತರವೂ ಅದನ್ನು ಮುಂದುವರಿಸಬೇಕು. ಶ್ರೀ ವಸಂತ ಕೋನಡ್ಕ- ವಕೀಲರು, ಬೆಂಗಳೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ ಹತ್ತನೇ ತರಗತಿ ಮಕ್ಕಳ ಉತ್ತಮ ಫಲಿತಾಂಶ[98%]ಕ್ಕಾಗಿ ಆಯೋಜಿಸಲಾದ ಸಾಧನಾಭಿನಂದನಾ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಭಾಗವಹಿಸಿದ ಶ್ರೀ ವಸಂತಕೋನಡ್ಕ ಅವರು ‘ನಮ್ಮಲ್ಲಿ ನಾವು ಪ್ರಮುಖವಾಗಿ ಐದು ಗುಣಗಳಾದ ಯೋಚನಾ ಸಾಮರ್ಥ್ಯ, ಯೋಜನಾ ಬದ್ಧತೆ, ಸಾಮಾನ್ಯಜ್ಞಾನ, ಸಮಯ ಪ್ರಜ್ಞೆ, ಸಮಾಜಮುಖಿ ಬದುಕು ಇವುಗಳನ್ನು ಬದುಕಿನಲ್ಲಿ ರೂಢಿಸಿಕೊಳ್ಳಬೇಕಾಗಿದೆ’ ಎಂದರು.            […]

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ `ಸಾಧನಾಭಿವಂದನಾ'

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ `ಸಾಧನಾಭಿವಂದನಾ’

Saturday, May 27th, 2023
ಎಸ್.ಎಸ್.ಎಲ್.ಸಿಯಲ್ಲಿ ಶಾಲೆಗೆ 96.80 ಫಲಿತಾಂಶ

ಎಸ್.ಎಸ್.ಎಲ್.ಸಿಯಲ್ಲಿ ಶಾಲೆಗೆ 96.80 ಫಲಿತಾಂಶ

Wednesday, May 24th, 2023
2022-23ನೇ ಸಾಲಿನ ಶೈಕ್ಷಣಿಕ ವರ್ಷದ ಹತ್ತನೇ ತರಗತಿ ವಿದ್ಯಾರ್ಥಿ ವೃಂದ

2022-23ನೇ ಸಾಲಿನ ಶೈಕ್ಷಣಿಕ ವರ್ಷದ ಹತ್ತನೇ ತರಗತಿ ವಿದ್ಯಾರ್ಥಿ ವೃಂದ

Wednesday, April 5th, 2023
ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ಸಾನಿಧ್ಯ’- ಪೂರ್ವ ಪ್ರಾಥಮಿಕ ಮಕ್ಕಳ ಪೋಷಕರ  ಪ್ರಶಿಕ್ಷಣ ಕಾರ್ಯಾಗಾರ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ‘ಸಾನಿಧ್ಯ’- ಪೂರ್ವ ಪ್ರಾಥಮಿಕ ಮಕ್ಕಳ ಪೋಷಕರ ಪ್ರಶಿಕ್ಷಣ ಕಾರ್ಯಾಗಾರ

Wednesday, March 15th, 2023

ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಪೂರ್ವ ಪ್ರಾಥಮಿಕ ಮಕ್ಕಳ ಪೋಷಕರಿಗೆ ಸಾನಿಧ್ಯ- ಪ್ರಶಿಕ್ಷಣ ಕಾರ್ಯಗಾರ ನಡೆಯಿತು. ‘ಆಟದ ಮೂಲಕ ಪಾಠ’ ಪರಿಕಲ್ಪನೆ ಆಧಾರಿತ ಕಾರ್ಯಾಗಾರದಲ್ಲಿ ಅಭಿನಯ ಗೀತೆ, ಕಥಾಯೋಗ, ಸಾಹಸ ಪ್ರದರ್ಶನ, ಕರಕುಶಲ ಕಲಾ ವಸ್ತು ಪ್ರದರ್ಶನ, ಕಲಿಕಾ ಉಪಕರಣಗಳು ಪ್ರದರ್ಶಿತಗೊಂಡವು. ಕಾರ್ಯಗಾರಕ್ಕೆ ಆಗಮಿಸಿದ್ದ ಹಿರಿಯ ದಂಪತಿಗಳಾದ ಪ್ರೊಫೆಸರ್ ನಾರಾಯಣ ಮಜಿ (ನಿವೃತ್ತ ಪ್ರಾಧ್ಯಾಪಕರು) ಹಾಗೂ ಸರಸ್ವತಿ ಪಿ (ನಿವೃತ್ತ ಮುಖ್ಯೋಪಾಧ್ಯಾಯರು) ಉಪಸ್ಥಿತರಿದ್ದು, ಶುಭ ಹಾರೈಸಿದರು. ಪೋಷಕರನ್ನು ಆಟ ಆಡಿಸುತ್ತಾ ನೀಡಿದ ಪ್ರಶಿಕ್ಷಣವು ಮಗುವಿನ ಜೊತೆಗೆ ಪೋಷಕರು […]

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿ ಮಕ್ಕಳಿಗೆ ದೀಪ ಪ್ರದಾನ ಕಾರ್ಯಕ್ರಮ

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿ ಮಕ್ಕಳಿಗೆ ದೀಪ ಪ್ರದಾನ ಕಾರ್ಯಕ್ರಮ

Wednesday, March 15th, 2023

              ವಿವೇಕಾನಂದ ಕನ್ನಡ ಶಾಲಾ 10ನೇ ತರಗತಿ ಮಕ್ಕಳ ದೀಪ ಪ್ರದಾನ ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿದ್ದ ಶ್ರೀರಾಮ ಹಾಗೂ ಇಂದ್ರಪ್ರಸ್ಥ ಶಾಲೆ ಉಪ್ಪಿನಂಗಡಿ ಇಲ್ಲಿನ ಸಂಚಾಲಕರು, ಹಿರಿಯ ಪೋಷಕರು ಆದ ಶ್ರೀಯುತ ಯು. ಜಿ. ರಾಧ ಮಾತನಾಡಿ “ಶಾಲಾ ದಿನಗಳ ಗುಣಮಟ್ಟದ ಕಲಿಕೆ ವಿದ್ಯಾರ್ಥಿಯಲ್ಲಿ ಗಟ್ಟಿಯಾದರೆ ಬದುಕಿನಲ್ಲಿ ಖುಷಿ ಕಾಣಲು ಸಾಧ್ಯವಿದೆ. ಉನ್ನತ ಶಿಕ್ಷಣ, ಉದ್ಯೋಗ ಮುಂತಾದವುಗಳಿಗಾಗಿ ಸರ್ಟಿಫಿಕೇಟ್ ಆಧಾರದ ಶಿಕ್ಷಣ ಸಹಕಾರಿಯಾಗುವುದು ಒಂದು ಭಾಗವಾದರೆ ಸಮಾಜ ಮುಖಿಯಾಗಿ […]

ವಿಧಾನಸಭಾ ಅಧಿವೇಶನ ಕಾರ್ಯಕಲಾಪಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ವಿಧಾನಸಭಾ ಅಧಿವೇಶನ ಕಾರ್ಯಕಲಾಪಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Monday, February 6th, 2023

” ಅರ್ಥಪೂರ್ಣ ಚರ್ಚೆಗಳಿಂದ ಸಮರ್ಪಕ ಮಸೂದೆ ಮಂಡನೆ ಸಾಧ್ಯ” -ಶ್ರೀ ಲಕ್ಷ್ಮಿಕಾಂತ್, ಪ್ರಾಧ್ಯಾಪಕರು ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು. ನಮ್ಮ ಶಾಲಾ ‘ಸಮನ್ವಯ‘ ಸಮಾಜ ವಿಜ್ಞಾನ ಸಂಘದ ವತಿಯಿಂದ ಪ್ರೌಢಶಾಲಾ ಮಕ್ಕಳಿಗೆ ನಡೆದಂತಹ ವಿಧಾನಸಭಾ ಅಧಿವೇಶನ ಕಾರ್ಯಕಲಾಪಗಳು ಯಾಕೆ ? ಹೇಗೆ ?ಎಂಬ ವಿಷಯದ ಕುರಿತು ಮಾತನಾಡಿದ ಶ್ರೀಯುತ ಲಕ್ಷ್ಮೀಕಾಂತ್ ಇವರು ಮಾದರಿ ಸಂಸತ್ತು ಮತ್ತು ಅಣಕು ಸಂಸತ್ತಿನ ನಡುವಿನ ಭಿನ್ನತೆಯನ್ನು ತಿಳಿಸುತ್ತಾ ಅಧಿವೇಶನದ ಪ್ರಾಮುಖ್ಯತೆಯ ಮಾಹಿತಿ ನೀಡಿದರು. ಸಂಘದ ಸಂಯೋಜಕ ಸಹಶಿಕ್ಷಕರಾದ ಲೀಲಾವತಿ ಹಾಗೂ ಶ್ರೀಮತಿ […]

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆ

ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆ

Friday, February 3rd, 2023

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಶ್ರೀರಾಮ ಪ್ರೌಢಶಾಲೆ ಪಟ್ಟೂರು ಇಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಿಶಾಂತ್ 6ನೇ ತರಗತಿ-ತೃತೀಯ,ಕರಣ್ ಗೌಡ 6ನೇ ತರಗತಿ -ಚತುರ್ಥ, ಪ್ರೌಢ ವಿಭಾಗದಲ್ಲಿ ಸ್ಕಂದ-8ನೇ ತರಗತಿ ದ್ವಿತೀಯ,ರಿತೇಶ್ ನಾಯಕ್ -8 ನೇ ತರಗತಿ-ಚತುರ್ಥ, ಪ್ರಜ್ಞಾ-8ನೇ ತರಗತಿ-ಚತುರ್ಥ ಹಾಗೂ ಪ್ರಾಥಮಿಕ ವಿಭಾಗದ ಬಾಲಕರು ಪ್ರಥಮ ಸ್ಥಾನದೊಂದಿಗೆ ಸಮಗ್ರ ಪ್ರಶಸ್ತಿ, ಪ್ರೌಢ ವಿಭಾಗದ ಬಾಲಕರು ಪ್ರಥಮ ಸ್ಥಾನದೊಂದಿಗೆ ಸಮಗ್ರ ಪ್ರಶಸ್ತಿ, ಪ್ರೌಢ ವಿಭಾಗದ ಬಾಲಕಿಯರು ಸಮಗ್ರ ದ್ವಿತೀಯ ಪ್ರಶಸ್ತಿ ಪಡೆದಿರುತ್ತಾರೆ.

ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Friday, February 3rd, 2023

  ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನದೊಂದಿಗೆ ಸಮಗ್ರ ಪ್ರಶಸ್ತಿ ಪಡೆದು ಪ್ರಾಥಮಿಕ ವಿಭಾಗದಲ್ಲಿ ನಿಶಾಂತ್ 6ನೇ ತರಗತಿ, ಪ್ರೌಢಶಾಲಾ ವಿಭಾಗದಲ್ಲಿ ಸ್ಕಂದ 8ನೇ ತರಗತಿ ಬಂಟ್ವಾಳ ತಾಲೂಕಿನ ದಡ್ಡಲಕಾಡು ಇಲ್ಲಿ ನಡೆಯುವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.    

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Friday, February 3rd, 2023

ಸಾಂದೀಪನಿ ವಿದ್ಯಾಭವನ, ಬೆಂಗಳೂರು ಇಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ನಮ್ಮ ಶಾಲಾ ವಿದ್ಯಾರ್ಥಿಗಳಾದ ಸ್ಕಂದ ಬಳ್ಳಕ್ಕುರಾಯ, ರಿತೇಶ್ ನಾಯಕ್, ನಿಶಾಂತ್ ಎಚ್.ಸಿ, ಕರಣ್ ಗೌಡ.

ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಸಾಧನೆ

ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಸಾಧನೆ

Thursday, February 2nd, 2023
ಸ್ವಚ್ಛ ಭಾರತ್ ಅಭಿಯಾನ ಕುರಿತು ಕಾರ್ಯಾಗಾರ

ಸ್ವಚ್ಛ ಭಾರತ್ ಅಭಿಯಾನ ಕುರಿತು ಕಾರ್ಯಾಗಾರ

Wednesday, February 1st, 2023

ವಿವೇಕಾನಂದ ಪದವಿ ಕಾಲೇಜು ನೆಹರುನಗರ ಪುತ್ತೂರು ಇಲ್ಲಿನ ಬಿಬಿಎ ವಿಭಾಗದ ತೃತೀಯ ವರ್ಷದ ವಿದ್ಯಾರ್ಥಿಗಳಾದ ಚಿತ್ರಶ್ರೀ, ಸ್ವೀಕೃತ್ ಶೆಟ್ಟಿ, ವರುಣ್ ರೈ ಹಾಗೂ ಸುಬ್ರಹ್ಮಣ್ಯೇಶ್ವರ ಪ್ರಸಾದ್ ಇವರಿಂದ ನಮ್ಮ ಶಾಲೆಯಲ್ಲಿ ‘ಸ್ವಚ್ಛ ಭಾರತ್’ ಅಭಿಯಾನ ಕುರಿತು ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಯಿತು. ಕಾರ್ಯಾಗಾರದಲ್ಲಿ ಸ್ವಚ್ಛತೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರಾತ್ಯಕ್ಷಿಕಾ ಮಾಹಿತಿ ನೀಡಲಾಯಿತು. ಅನಂತರ ಮಕ್ಕಳಿಗೆ ಏರ್ಷಡಿಸಿದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಾಲಾ ಮುಖ್ಯಗುರುಗಳಾದ ಶ್ರೀಮತಿ ನಳಿನಿವಾಗ್ಲೆ ಬಹುಮಾನ ವಿತರಿಸಿದರು. ಶಾಲಾ ವಿಜ್ಞಾನ […]

ವಿವೇಕಾನಂದ ವಿದ್ಯಾಸಂಸ್ಥೆಗಳು ವಿವೇಕನಗರ ತೆಂಕಿಲ ಪುತ್ತೂರು ಇಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ

ವಿವೇಕಾನಂದ ವಿದ್ಯಾಸಂಸ್ಥೆಗಳು ವಿವೇಕನಗರ ತೆಂಕಿಲ ಪುತ್ತೂರು ಇಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ

Wednesday, February 1st, 2023

ದಿನಾಂಕ 26-01-2023ನೇ ಗುರುವಾರದಂದು ವಿವೇಕಾನಂದ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆ, ವಿವೇಕಾನಂದ ಬಿ.ಇಡಿ ಕಾಲೇಜು, ನರೇಂದ್ರ ಪದವಿ ಪೂರ್ವ ಕಾಲೇಜು ವಿವೇಕನಗರ ತೆಂಕಿಲ ಇವುಗಳ ಜಂಟಿ ಆಶ್ರಯದಲ್ಲಿ 74ನೇ ಗಣರಾಜ್ಯೋತ್ಸವವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಮ್ಮ ದೇಶದ ನಿವೃತ್ತ ಸೈನ್ಯಾಧಿಕಾರಿ ಹಾಗೂ ಪೋಷಕರಾದ ಶ್ರೀ ಕಿಶೋರ್ ಮಾವಜಿ ಅವರು ಧ್ವಜಾರೋಹಣಗೈದರು. ನಂತರ ಮಾತನಾಡಿದ ಅವರು ಮೂಲಭೂತ ಹಕ್ಕುಗಳ ಜೊತೆಗೆ ಮೂಲಭೂತ ಕರ್ತವ್ಯಗಳನ್ನು ಸೂಕ್ತವಾಗಿ ನಿರ್ವಹಿಸುವ ಅಗತ್ಯವಿದೆ. ಮಾತ್ರವಲ್ಲದೆ ಸಂವಿಧಾನದ ಗೌರವ […]

74ನೇ ಗಣರಾಜ್ಯೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ನಮ್ಮ ಶಾಲೆಗೆ ಹಲವು ಬಹುಮಾನ

74ನೇ ಗಣರಾಜ್ಯೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ನಮ್ಮ ಶಾಲೆಗೆ ಹಲವು ಬಹುಮಾನ

Tuesday, January 31st, 2023

       ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಅಂಬಿಕಾ ವಿದ್ಯಾಲಯ (ಸಿ.ಬಿ.ಎಸ್.ಇ) ಬಪ್ಪಳಿಗೆ ಇವರ ಸಹಯೋಗದೊಂದಿಗೆ 74ನೇ ಗಣರಾಜ್ಯೋತ್ಸವದ ಪ್ರಯುಕ್ತ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅಂಬಿಕಾ ವಿದ್ಯಾಲಯ ಇಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ನಮ್ಮ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಪ್ರಾಥಮಿಕ ವಿಭಾಗದ ದೇಶ ಭಕ್ತರ ಜೀವನದ ಘಟನೆಗಳ ವರ್ಣನೆಯಲ್ಲಿ ದರ್ಶಿನಿ 7ನೇ ತರಗತಿ ದ್ವಿತೀಯ (ಮಾಡ್ಲೆಕೊಚ್ಚಿ ನಿವಾಸಿ ಮೋಹನ್ ಗೌಡ ಮತ್ತು ಯಶೋಧ ದಂಪತಿಗಳ ಪುತ್ರಿ), ಆಶುಭಾಷಣ […]

ಸಾಮೂಹಿಕ ಸೂರ್ಯ ನಮಸ್ಕಾರ -ರಥಸಪ್ತಮಿ

ಸಾಮೂಹಿಕ ಸೂರ್ಯ ನಮಸ್ಕಾರ -ರಥಸಪ್ತಮಿ

Monday, January 30th, 2023

ರಥಸಪ್ತಮಿಯ ಅಂಗವಾಗಿ ನಮ್ಮ ಶಾಲಾ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಮ್ಮುಖದಲ್ಲಿ ಸಾಮೂಹಿಕ ಸೂರ್ಯನಮಸ್ಕಾರ ಜರುಗಿತು. ಶಾಲಾ ಯೋಗ ಹಾಗೂ ಮೌಲ್ಯಶಿಕ್ಷಣ ಸಂಯೋಜಕರಾದ ಶ್ರೀಮತಿ ವೀಣಾ ಸರಸ್ವತಿ ಮಾತನಾಡಿ “ರಥಸಪ್ತಮಿಯು ಸಂವತ್ಸರ ಕಾಲಗಣನೆಯ ಒಂದು ಬಹುಮುಖ್ಯವಾದ ಆಚರಣೆ. ಪ್ರಪ್ರಥವಾಗಿ ಭೌತಿಕ ಪ್ರಪಂಚಕ್ಕೆ ಸೂರ್ಯ ಪ್ರಕಟವಾದ ದಿನದ ಆಚರಣೆಯೇ ರಥಸಪ್ತಮಿ. ಸೂರ್ಯ ಸಕಲ ಜೀವರಾಶಿಗಳನ್ನು ಪೋಷಣೆ ಮಾಡುವ ದೇವರಾಗಿ ಆರಾಧಿಸಲ್ಪಡುತ್ತಿದ್ದಾರೆ. ಪ್ರಕೃತಿಯ ಜೀವ – ನಿರ್ಜೀವ ವಸ್ತುಗಳಲ್ಲೂ ಕೃತಜ್ಞತಾ ಭಾವ ನಮ್ಮಲ್ಲಿರಬೇಕು. ಹಾಗಾಗಿ ನಮ್ಮ ಆರೋಗ್ಯ, ಪ್ರಜ್ಞೆ, ಬಲ […]

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಶಸ್ತಿಗಳು

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಶಸ್ತಿಗಳು

Wednesday, January 25th, 2023

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಛೇರಿ,ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಮ್ಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶ್ರೀಶ ನಿಡ್ವಣ್ಣಾಯ (ಹೆಬ್ಬಾರಬೈಲು ನಿವಾಸಿ ಶ್ರೀ ರಾಮಗೋಪಾಲ ನೂಜಾಜೆ ಮತ್ತು ಪೂರ್ಣಿಮ ನೂಜಾಜೆ ದಂಪತಿಗಳ ಪುತ್ರ) ಪ್ರೌಢ ವಿಭಾಗದ ಸಂಸ್ಕೃತ ಧಾರ್ಮಿಕ ಪಠಣದಲ್ಲಿ ತೃತೀಯ […]

ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ಧಾತ್ರಿ ಆರ್ ರೈಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ಧಾತ್ರಿ ಆರ್ ರೈಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Wednesday, January 25th, 2023

ಶಾಂತಿವನ ಟ್ರಸ್ಟ್ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಧರ್ಮಸ್ಥಳದಲ್ಲಿ ನಡೆದ ಜಿಲ್ಲಾ ಮಟ್ಟದ ಜ್ಞಾನ ಪ್ರಕಾಶ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಸ್ಪರ್ಧೆಗಳಲ್ಲಿ ನಮ್ಮ ಶಾಲೆಯ ಧಾತ್ರಿ ಆರ್ ರೈ (ನೆಹರುನಗರ ನಿವಾಸಿ ರವೀಂದ್ರ ರೈ ಮತ್ತು ಉಷಾ ದಂಪತಿಗಳ ಪುತ್ರಿ) ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

‘ಪರೀಕ್ಷಾ ಸಿದ್ಧತೆ’ ಯ ಬಗ್ಗೆ ಮಾಹಿತಿ ಕಾರ್ಯಾಗಾರ

‘ಪರೀಕ್ಷಾ ಸಿದ್ಧತೆ’ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Tuesday, January 24th, 2023

‘ಕಲಿಕೆಗೆ ಸುಗಮ ಹಾದಿಯೆಂಬುದಿಲ್ಲ. ಇಷ್ಟಪಟ್ಟು ಕಲಿತಾಗ ವಿಷಯ ಬೇಗ ಅರ್ಥವಾಗುತ್ತದೆ. ಹತ್ತನೇ ತರಗತಿಯ ಪರೀಕ್ಷೆ ಬರೆಯಲಿರುವ ಮಕ್ಕಳು ಸುಗಮ ಕಲಿಕಾ ವಿಧಾನಗಳನ್ನು ಅನುಸರಿಸಿ-ಅಭ್ಯಸಿಸಿ ಉತ್ತಮ ತಯಾರಿಯತ್ತ ತಮ್ಮ ಗಮನ ಹರಿಸಬೇಕು’ – ಬಿ.ವಿ ಸೂರ್ಯನಾರಾಯಣ, ನಿವೃತ್ತ ಪ್ರಾಂಶುಪಾಲರು. ನಮ್ಮ ಶಾಲಾ ಹತ್ತನೇ ತರಗತಿಯ ಮಕ್ಕಳಿಗೆ ‘ವೃತಿಕಾ’ ವಿಜ್ಞಾನ ವೇದಿಕೆ ವತಿಯಿಂದ ಆಯೋಜಿಸಲಾದ ‘ಪರೀಕ್ಷಾ ಸಿದ್ಧತೆ’ ವಿಷಯದ ಬಗ್ಗೆ ಶ್ರೀಯುತರು ಮಾತನಾಡಿ ಕಲಿಕೆಯು ಪರೀಕ್ಷೆಗಳಿಗೆ ಸೀಮಿತವಾಗದೆ ತಿಳುವಳಿಕೆಯ ದೃಷ್ಟಿಯಿಂದ ಮುನ್ನಡೆಯುವಂತಿರಬೇಕು ಎಂದು ಹೇಳಿದರು. ವಿಜ್ಞಾನ ಸಂಘದ ಸಂಯೋಜಕರಾದ ಶ್ರೀಮತಿ […]

ಪೋಷಕರ ಸಭೆ

ಪೋಷಕರ ಸಭೆ

Tuesday, January 24th, 2023

           “ ಮೌಲ್ಯಾಂಕನ ಪದ್ಧತಿ ಮಕ್ಕಳ ಕಲಿಕಾ ಸಾಮಥ್ರ್ಯ ತಿಳಿಯುವ ದಾರಿಯಾಗಿದೆ. ಪ್ರಸಕ್ತ ವರ್ಷ 5 ಮತ್ತು 8ನೇ ತರಗತಿ ಮಕ್ಕಳಿಗೆ ರಾಜ್ಯಾದಾತ್ಯಂತ ಏಕರೂಪವಾಗಿ ಮೌಲ್ಯಾಂಕನ ಪರೀಕ್ಷೆ ನಡೆಯಲಿದೆ. ಈ ದಿಶೆಯಿಂದ ಮಗುವಿನ ಸಾಮಥ್ರ್ಯ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರದಷ್ಟೇ ಮಹತ್ವದ ಪಾತ್ರ ಪೋಷಕರದ್ದಾಗಿರುತ್ತದೆ.” – ಶ್ರೀಮತಿ ದೇವಕಿ, ಶಿಕ್ಷಕರು ಸ.ಹಿ.ಪ್ರಾ.ಶಾಲೆ ಉಪ್ಪಿನಂಗಡಿ. ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ ಪೋಷಕರ ಸಭೆಗೆ ಅಭ್ಯಾಗತರಾಗಿ ಆಗಮಿಸಿ 5 ಮತ್ತು 8ನೇ […]

ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ರಸಪ್ರಶ್ನೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Friday, January 20th, 2023

ರೇಡಿಯೋ ಪಾಂಚಜನ್ಯದಲ್ಲಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಾದ ಸಂಜನ್ ಮತ್ತು ಶ್ರೀವತ್ಸ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ತಾಲೂಕು ಮಟ್ಟದ ದೇಶ ಭಕ್ತಿ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ

ತಾಲೂಕು ಮಟ್ಟದ ದೇಶ ಭಕ್ತಿ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ

Thursday, January 19th, 2023

ಪುತ್ತೂರು ತಾಲೂಕು ಸಂಸ್ಕಾರ ಭಾರತಿ ವತಿಯಿಂದ ನಡೆದ ತಾಲೂಕು ಮಟ್ಟದ ದೇಶ ಭಕ್ತಿಗೀತೆ ಸ್ಪರ್ಧೆಯ 1 ರಿಂದ 4ನೇ ತರಗತಿ ವಿಭಾಗದಲ್ಲಿ ನಮ್ಮ ಶಾಲಾ ಮಕ್ಕಳಾದ ಪ್ರಣತಿ, ಗರಿಮ, ತನುಷಾ, ಮಾತಂಗಿ, ಹಸ್ತ, ವೃದ್ಧಿ ಪ್ರಥಮ ಬಹುಮಾನವನ್ನು ಪಡೆದುಕೊಂಡಿರುತ್ತಾರೆ.

ಕಂಬಳಬೆಟ್ಟುವಿನ ಸುವರ್ಣ ಸಂಭ್ರಮದ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕಂಬಳಬೆಟ್ಟುವಿನ ಸುವರ್ಣ ಸಂಭ್ರಮದ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Thursday, January 19th, 2023

  51ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಕಂಬಳಬೆಟ್ಟುವಿನ ಸುವರ್ಣ ಸಂಭ್ರಮದ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ರೂಪಾಯಿ 15,000 ನಗದು ಹಾಗೂ ಫಲಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡ ನಮ್ಮ ಶಾಲಾ ಮಕ್ಕಳು.

ಕನಸುಗಳು- ವಿಶೇಷ ಪುರಸ್ಕಾರ ಪ್ರಶಸ್ತಿ

ಕನಸುಗಳು- ವಿಶೇಷ ಪುರಸ್ಕಾರ ಪ್ರಶಸ್ತಿ

Wednesday, January 18th, 2023

ವಿವೇಕಾನಂದ ಪದವಿ ಪೂರ್ವ ಕಾಲೇಜು ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆ ನೀಡುವ ನಿಟ್ಟಿನಲ್ಲಿ ಕನಸುಗಳು-2022 ಕಾರ್ಯಕ್ರಮವನ್ನು ದಿನಾಂಕ 11-11-2022 ಹಾಗೂ 12-11-2022ರಂದು ಆಯೋಜಿದ್ದರು. ಈ ಕಾರ್ಯಕ್ರಮದಲ್ಲಿ ನಮ್ಮ ಶಾಲಾ 59 ಮಕ್ಕಳು ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಮಕ್ಕಳ ಪಾಲ್ಗೊಳ್ಳುವಿಕೆ ಹಾಗೂ ಪ್ರದರ್ಶನವನ್ನು ಪರಿಗಣಿಸಿ ನಮ್ಮ ಶಾಲೆಗೆ ವಿಶೇಷ ಪುರಸ್ಕಾರವನ್ನು ನೀಡಿ ಗೌರವಿಸಿದ್ದಾರೆ.

ರಾಷ್ಟ್ರಮಟ್ಟದ ವಿಜ್ಞಾನ ಮೇಳ

ರಾಷ್ಟ್ರಮಟ್ಟದ ವಿಜ್ಞಾನ ಮೇಳ

Wednesday, January 18th, 2023

   ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದ ವತಿಯಂದ ನಡೆದ ಗಣಿತ ವಿಜ್ಞಾನ ಮೇಳದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ನಮ್ಮ ಶಾಲಾ ವಿದ್ಯಾರ್ಥಿಗಳಾದ ಪ್ರಜ್ಞಾ ನಿಡ್ವಣ್ಣಾಯ 8ನೇ ತರಗತಿ, ಧನುಷ್ ಡಿ ಜಿ 7ನೇ ತರಗತಿ, ಶಿವಾನಿ 7ನೇ ತರಗತಿ ಇವರು ಭಾಗವಹಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಕಾರ್ಯಕ್ರಮದಲ್ಲಿ ವಿಜ್ಞಾನ ಮಾದರಿ, ಗಣಿತ ಮಾದರಿ, ಪ್ರೆಸೆಂಟೇಶನ್, ವಿಜ್ಞಾನ ರಸಪ್ರಶ್ನೆ ಸ್ಪರ್ಧೆಗಳು ನಡೆದವು.

ಗಣಿತ ವಿಜ್ಞಾನ ಮೇಳದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಗಣಿತ ವಿಜ್ಞಾನ ಮೇಳದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Tuesday, January 17th, 2023

ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ ಗಣಿತ ವಿಜ್ಞಾನ ಮೇಳ ಹೈದರಾಬಾದ್ ತೆಲಂಗಾಣ ಇಲ್ಲಿ ನಡೆದ ಕ್ಷೇತ್ರಿಯ ಮಟ್ಟದ ವಿಜ್ಞಾನ ರಸಪ್ರಶ್ನೆಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಾದ ಪ್ರಜ್ಞಾ ನಿಡ್ವಣ್ಣಾಯ 8 ನೇ ತರಗತಿ (ಹೆಬ್ಬಾರಬೈಲು ನಿವಾಸಿ ರಾಮಗೋಪಾಲ ನೂಜಾಜೆ ಮತ್ತು ಪೂರ್ಣಿಮ ನೂಜಾಜೆ ಇವರ ಪುತ್ರಿ), ಶಿವಾನಿ ಎಸ್ ರೈ 7ನೇ ತರಗತಿ (ಶಿಬರ ಪಂಜಳ ನಿವಾಸಿ ಸೋಮನಾಥ ರೈ ಮತ್ತು ವಸಂತಿ ಕುಮಾರಿ ಇವರ ಪುತ್ರಿ), ಧನುಷ್ ಡಿ ಜಿ 7ನೇ ತರಗತಿ (ಪಾಂಗಳಾಯಿ ನಿವಾಸಿ ಡಿ […]

ಜ್ಞಾನ ವಿಜ್ಞಾನ ಮೇಳದಲ್ಲಿ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

ಜ್ಞಾನ ವಿಜ್ಞಾನ ಮೇಳದಲ್ಲಿ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

Tuesday, January 17th, 2023

ಶಾಸ್ತ್ರಿ ಪಬ್ಲಿಕ್ ಸ್ಕೂಲ್ ಹುಣಸೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಭಾಗವಹಿಸಿ ನಮ್ಮ ಶಾಲಾ ವಿದ್ಯಾರ್ಥಿಗಳಾದ ತನ್ಮಯ ಕೃಷ್ಣ 10ನೇ ತರಗತಿ ಸೆನ್ಸಾರ್ ಮಾದರಿಯಲ್ಲಿ ಪ್ರಥಮ , ವಿಜ್ಞಾನ ರಸಪ್ರಶ್ನೆಯಲ್ಲಿ ಶಿವಾನಿ ಎಸ್ ರೈ 7ನೇ ತರಗತಿ, ಧನುಷ್ ಡಿ ಜಿ 7ನೇ ತರಗತಿ, ಪ್ರಜ್ಞಾ ನಿಡ್ವಣ್ಣಾಯ -8ನೇ ತರಗತಿ ಇವರು ಪ್ರಥಮ ಸ್ಥಾನ ಪಡೆದು ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾಭಾರತಿ ಕರ್ನಾಟಕ ತಾಲೂಕು ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಭಾಗವಹಿಸಿ ಬಹುಮಾನ ಪಡೆದ ವಿದ್ಯಾರ್ಥಿಗಳು

ವಿದ್ಯಾಭಾರತಿ ಕರ್ನಾಟಕ ತಾಲೂಕು ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಭಾಗವಹಿಸಿ ಬಹುಮಾನ ಪಡೆದ ವಿದ್ಯಾರ್ಥಿಗಳು

Tuesday, January 17th, 2023

      ಉಪ್ಪಿನಂಗಡಿಯ ಇಂದ್ರಪ್ರಸ್ಥದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ತಾಲೂಕು ಮಟ್ಟದ ಜ್ಞಾನ ವಿಜ್ಞಾನ ಮೇಳದಲ್ಲಿ ಭಾಗವಹಿಸಿ ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಪಡೆದ ನಮ್ಮ ಶಾಲಾ ವಿದ್ಯಾರ್ಥಿಗಳು. ಶಿಶು ವರ್ಗ: ಆಹಾರ ಶೃಂಖಲೆ ಮಾದರಿ ತಯಾರಿ ಗರಿಮಾ – ತೃತೀಯ, ಜಲ ಶುದ್ಧೀಕರಣ ಮತ್ತು ಸಂರಕ್ಷಣೆ ಸುಭಾಷ್- ತೃತೀಯ, ಸೃಜನಾತ್ಮಕ ಮಾದರಿ ತಯಾರಿಕೆ ತರುಣ್ ಕೃಷ್ಣ -ಪ್ರಥಮ, ಸಂಸ್ಕøತಿ ಜ್ಞಾನ ರಸಪ್ರಶ್ನೆ ಶ್ರೀಕೃಷ್ಣ, ದ್ವಿಜನ್,ನಂದನ್ -ಪ್ರಥಮ, ಕಥಾಕಥನ ತನುಷಾ-ಪ್ರಥಮ, ವಿಜ್ಞಾನ ಪ್ರಯೋಗ ಗಾನವಿ-ತೃತೀಯಾ, […]

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ, ವಿವೇಕಾನಂದ ಶಿಶುಮಂದಿರ ಇಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು

ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ, ವಿವೇಕಾನಂದ ಶಿಶುಮಂದಿರ ಇಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು

Tuesday, January 17th, 2023

  ಶಂಖನಾದ-ಗಗನ್ ದೀಪ್ ಹತ್ತನೇ ತರಗತಿ – ದ್ವಿತೀಯ ಭಗವದ್ಗೀತೆ ಗೀತೆ ಕಂಠಪಾಠ- ಶ್ರೀ ನಂದನ್ ಒಂಬತ್ತನೇ ತರಗತಿ- ಪ್ರಥಮ ಪ್ರಾರ್ಥನ ಶ್ಲೋಕ – ಕೃತಿಕಾ 6ನೇ ತರಗತಿ- ಪ್ರಥಮ ವೈಷ್ಣವಿ 5ನೇ ತರಗತಿ- ದ್ವಿತೀಯ.

ಅಂಬಿಕಾ ವಿದ್ಯಾಲಯದಲ್ಲಿ ಅಜಾದಿ ಕಾ ಅಮೃತ್ ಉತ್ಸವದ ಪ್ರಯುಕ್ತ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳು

ಅಂಬಿಕಾ ವಿದ್ಯಾಲಯದಲ್ಲಿ ಅಜಾದಿ ಕಾ ಅಮೃತ್ ಉತ್ಸವದ ಪ್ರಯುಕ್ತ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದ ವಿದ್ಯಾರ್ಥಿಗಳು

Tuesday, January 17th, 2023

ಅಂಬಿಕಾ ವಿದ್ಯಾಲಯದಲ್ಲಿ ಅಜಾದಿ ಕಾ ಅಮೃತ್ ಉತ್ಸವದ ಪ್ರಯುಕ್ತ ನಡೆಸಿದ ಸ್ಪರ್ಧೆಗಳಲ್ಲಿ ನಮ್ಮ ಶಾಲಾ ಮಕ್ಕಳು ಭಾಗವಹಿಸಿ ಬಹುಮಾನ ಪಡೆದಿರುತ್ತಾರೆ. ಪ್ರಬಂಧ: ಅವನಿ ಬೆಳ್ಳಾರೆ- ಪ್ರಥಮ ಚಿತ್ರಕಲೆ: ಅಗಮ್ಯ- ಪ್ರಥಮ ಭಾಷಣ: ಧಾತ್ರಿ- ತೃತೀಯ ದೇಶ ಭಕ್ತಿ ಗೀತೆ: ಹರಿಣಿ ಮತ್ತು ತಂಡ- ತೃತೀಯ

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ರನ್ನರ್ ಅಪ್ ಪ್ರಶಸ್ತಿ

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ರನ್ನರ್ ಅಪ್ ಪ್ರಶಸ್ತಿ

Tuesday, January 17th, 2023

ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಉರ್ವ ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ರನ್ನರ್ ಅಪ್ ಆಗಿ ಬಹುಮಾನ ಪಡೆದುಕೊಂಡಿದ್ದಾರೆ.

ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿಜೇತರಾಗಿ ಸ್ಕೂಲ್ ಫೆಡರೇಷನ್ ಆಫ್ ಇಂಡಿಯಾಗೆ ಆಯ್ಕೆ

ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿಜೇತರಾಗಿ ಸ್ಕೂಲ್ ಫೆಡರೇಷನ್ ಆಫ್ ಇಂಡಿಯಾಗೆ ಆಯ್ಕೆ

Tuesday, January 17th, 2023

        ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ರಾಷ್ಟ್ರೀಯ ಬಾಲಕಿಯರ ಕಬಡ್ಡಿ ಪಂದ್ಯಾಟ ಉತ್ತರ ಪ್ರದೇಶದ ಛತ್ತಿಸ್‍ಗಢ ಸಾವಿತ್ರಿದೇವಿ ಲಕ್ಷ್ಮಿಬಾಯಿ ಸರಸ್ವತಿ ವಿದ್ಯಾಮಂದಿರ ಕುರ್ಜಾ ಇಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ವಿಜೇತರಾಗಿ ಸ್ಕೂಲ್ ಫೆಡರೇಷನ್ ಆಫ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ.

14ರ ವಯೋಮಾನದ ರಾಷ್ಟ್ರೀಯ ಬಾಲಕಿಯರ ಕಬಡ್ಡಿ ಪಂದ್ಯಾಟ- ರನ್ನರ್ ಅಪ್ ಪ್ರಶಸ್ತಿ

14ರ ವಯೋಮಾನದ ರಾಷ್ಟ್ರೀಯ ಬಾಲಕಿಯರ ಕಬಡ್ಡಿ ಪಂದ್ಯಾಟ- ರನ್ನರ್ ಅಪ್ ಪ್ರಶಸ್ತಿ

Tuesday, January 17th, 2023

     ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ರಾಷ್ಟ್ರೀಯ ಬಾಲಕಿಯರ ಕಬಡ್ಡಿ ಪಂದ್ಯಾಟ ಉತ್ತರ ಪ್ರದೇಶದ ಛತ್ತಿಸ್‍ಗಢ ಸಾವಿತ್ರಿದೇವಿ ಲಕ್ಷ್ಮಿಬಾಯಿ ಸರಸ್ವತಿ ವಿದ್ಯಾಮಂದಿರ ಕುರ್ಜಾ ಇಲ್ಲಿ ನಡೆದ 14ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Tuesday, January 17th, 2023

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ರಾಮನಗರ, ಬೆಂಗಳೂರು ಇಲ್ಲಿ ನಡೆದ ರಾಜ್ಯ ಮಟ್ಟದ ಮಟ್ಟದ ಕಬಡ್ಡಿ ಪಂದ್ಯದಲ್ಲಿ ವಿಜೇತರಾಗಿ ರಾಷ್ಟ್ರೀಯ ಮಟ್ಟದ ಪಂದ್ಯಾಟದಲ್ಲಿ ಆಡಲು ಆಯ್ಕೆಯಾದ ನಮ್ಮ ಶಾಲೆಯ ಹೆಮ್ಮೆಯ ವಿದ್ಯಾರ್ಥಿಗಳು.  

ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Tuesday, January 17th, 2023

ಸುಳ್ಯದಲ್ಲಿ ನಡೆದ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ .ತಂಡದಲ್ಲಿ ನಮ್ಮ ಶಾಲಾ ವಿದ್ಯಾರ್ಥಿನಿಯರಾದ ಪ್ರನ್ವಿಕಾ,ತೃಷಾ,ಕೃತಿಕಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕ್ಷೇತ್ರಿಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕ್ಷೇತ್ರಿಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Tuesday, January 17th, 2023

    ವಿಜಯಪುರದ ಮುದ್ದೇಬಿಹಾಳದಲ್ಲಿ ನಡೆದ ಪ್ರಾಂತೀಯ ಮತ್ತು ಕ್ಷೇತ್ರಿಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ನಮ್ಮ ಶಾಲಾ ವಿದ್ಯಾರ್ಥಿಗಳು.

Highslide for Wordpress Plugin