ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Tuesday, November 2nd, 2021

ಕನ್ನಡ ರಾಜ್ಯೋತ್ಸವದಂದು ಶಾಲಾ ಕನ್ನಡ ಸಂಘ ವಿದ್ಯಾಧ್ವನಿಯ ಆಯೋಜನೆಯಲ್ಲಿ ಪಠ್ಯ-ಪದ್ಯಗಳ ಸಾಹಿತ್ಯಿಕ ಹಿನ್ನಲೆ ಹಾಗೂ ರಾಗ ಸಂಯೋಜಿತ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಮುಖ್ಯಗುರುಗಳಾದ ಶ್ರೀಮತಿ ರೂಪಕಲಾ ಇವರು ಪ್ರೌಢಶಾಲಾ ಮಕ್ಕಳಿಗೆ ಮಾತನಾಡಿ ಕನ್ನಡ ಪಠ್ಯದ ಪದ್ಯ ಭಾಗವು ಭಾಷಾ ಜ್ಞಾನದ ಬೆಳವಣಿಗೆಗೆ ಸಹಕಾರಿಯಾಗಬೇಕು. ಸಾಹಿತ್ಯಾಸಕ್ತಿ ಬೆಳೆದಾಗ ಕನ್ನಡ ಭಾಷಾ ಸಂಪತ್ತಿನ ಬಗ್ಗೆ ನಮ್ಮಲ್ಲಿ ಅರಿವು ಮೂಡಲು ಸಾಧ್ಯ ಎಂದರು. ಅನಂತರ ಪ್ರಾಥಮಿಕ, ಪ್ರೌಢಶಾಲಾ ಮಕ್ಕಳು ಹಾಗೂ ಶಿಕ್ಷಕರಿಂದ ಕನ್ನಡ ಹಾಡುಗಳ ಗಾಯನದೊಂದಿಗೆ […]

ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ

ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ

Tuesday, October 12th, 2021

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ದಿನಾಂಕ 12-10-2021 ರಂದು ಶಾರದಾ ಪೂಜೆ ಮತ್ತು ಅಕ್ಷರಾಭ್ಯಾಸ ಪೂಜಾ ವಿಧಿ – ವಿಧಾನಗಳನ್ನು ನೆರವೇರಿದವು. ಸರಸ್ವತಿ ಪೂಜೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬಳಿಕ ಅಕ್ಷರಾಭ್ಯಾಸದ ಮೂಲಕ ತಮ್ಮ ಜ್ಞಾನಾರಂಭಕ್ಕೆ ಸುಮಾರು ಪುಟಾಣಿಗಳು ಶುಭ ಮೂಹೂರ್ತವಿರಿಸಿದರು. ಮಕ್ಕಳಿಗೆ ಆರತಿ ಎತ್ತಿ ಶಾರದ ಮಾತೆಗೆ ಪುಷ್ಫ ನಮನವನ್ನು ಸಲ್ಲಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಮುಖ್ಯ ಗುರುಗಳೂ, ಶಿಕ್ಷಕ- ಶಿಕ್ಷಕೇತರ ವೃಂದ ಉಪಸ್ಥಿತರಿದ್ದರು.

'ಉಚಿತ ಕಾನೂನು ಅರಿವು' ಕಾರ್ಯಕ್ರಮ

‘ಉಚಿತ ಕಾನೂನು ಅರಿವು’ ಕಾರ್ಯಕ್ರಮ

Tuesday, October 5th, 2021

ವಿವೇಕಾನಂದಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗಾಗಿ ಕಾನೂನು ಅರಿವು ಕಾರ್ಯಕ್ರಮದಲ್ಲಿ ಸ್ಥಳೀಯ ವಕೀಲರುಗಳಾದ ಶ್ರೀಮತಿ ಹರಿಣಾಕ್ಷಿಜೆ ಶೆಟ್ಟಿ ಹಾಗೂ ರಾಜೇಶ್ವರಿಇವರು ಆಗಮಿಸಿ ಮಕ್ಕಳ ಹಕ್ಕುಗಳು ಹಾಗೂ ಉಚಿತ ಕಾನೂನಿನ ನೆರವಿನ ಬಗ್ಗೆ ಮಾಹಿತಿ ನೀಡುವುದರಜೊತೆಗೆ ಯಾರೆಲ್ಲಾ ಈ ಉಚಿತ ಕಾನೂನಿನ ನೆರವು ಪಡೆಯಬಹುದು ಎಂಬ ವಿಚಾರವನ್ನು ಸವಿವರವಾಗಿ ತಿಳಿಸಿದರು. ವಿದ್ಯಾರ್ಥಿಗಳಲ್ಲಿ ಸಂವಾದ ನಡೆಸುತ್ತಾಅವರ ಸಂದೇಹಗಳನ್ನು ಬಗೆಹರಿಸಿ ಮಧ್ಯಸ್ಥಿಕೆ ಹಾಗೂ ಲೋಕ ಅದಾಲತ್ ಬಗ್ಗೆ ವಿಚಾರ ತಿಳಿಸಿದರು. ಇಲ್ಲಿ ವಿದ್ಯಾರ್ಥಿಗಳು ಕಾನೂನಿನ ಬಗೆಗಿನ ಹೆಚ್ಚಿನ ವಿಚಾರವನ್ನು ತಿಳಿದುಕೊಂಡರು. ಹತ್ತನೇ ತರಗತಿಯ […]

ಗಾಂಧಿ ಜಯಂತಿ -ಲಾಲ್ ಬಹದ್ದೂರ್ ಶಾಸ್ತ್ರೀ ನುಡಿ ನಮನ

ಗಾಂಧಿ ಜಯಂತಿ -ಲಾಲ್ ಬಹದ್ದೂರ್ ಶಾಸ್ತ್ರೀ ನುಡಿ ನಮನ

Saturday, October 2nd, 2021

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಆಯೋಜಿಸಿದ ವಿದ್ಯಾಧ್ವನಿ ಶೈಕ್ಷಣಿಕ ಅರಿವು ಎಂಬ ಪರಿಕಲ್ಪನೆಯ ಅಡಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿಯನ್ನು ಆಚರಿಸಲಾಯಿತು. ಬದಲಾಗುತ್ತಿರುವ ಈ ಕಾಲಘಟ್ಟದಲ್ಲಿ ಉತ್ತಮ ಮೌಲ್ಯಗಳು, ನೈತಿಕ ಪ್ರಜ್ಞೆ ಇತ್ಯಾದಿಗಳ ಬಗ್ಗೆ ಪ್ರಸ್ತುತ ಪೀಳಿಗೆಗೆ ಅರಿವು ಮೂಡಿಸಬೇಕಾದ ಅಗತ್ಯತೆ ಅತ್ಯವಶ್ಯಕವಾಗಿದೆ. ರಾಷ್ಟ್ರಪಿತ ಗಾಂಧೀಜಿ, ಭಾರತ ರತ್ನ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆಸಿದ ಆದರ್ಶ ಜೀವನವು ಎಲ್ಲರಿಗೂ ಮಾರ್ಗದರ್ಶನ ನೀಡಬಲ್ಲದು. ’ಮಾಡಿ ಇಲ್ಲವೇ ಮಡಿ’ ಎಂಬಂತಹ ದಿಟ್ಟ ನಿರ್ಧಾರಗಳು ’ಜೈ ಜವಾನ್ […]

ವಿದ್ಯಾಧ್ವನಿ - ಶೈಕ್ಷಣಿಕ ಅರಿವು

ವಿದ್ಯಾಧ್ವನಿ – ಶೈಕ್ಷಣಿಕ ಅರಿವು

Tuesday, September 14th, 2021

ಸ್ಪರ್ಧಾತ್ಮಕ ಪರೀಕ್ಷೆ ಮಾಹಿತಿ ಕಾರ್ಯಾಗಾರ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ದಿನಾಂಕ 14-09-2021 ರಂದು ’ವಿದ್ಯಾಧ್ವನಿ – ಶೈಕ್ಷಣಿಕ ಅರಿವು’ ಎಂಬ ಯೋಜನೆಯಡಿಯಲ್ಲಿ ಎನ್.ಟಿ.ಎಸ್.ಇ ಪರೀಕ್ಷೆಯ ಮಾಹಿತಿ ನೀಡುವ ಕಾರ್ಯಾಗಾರವು ನಡೆಯಿತು. ಎನ್.ಟಿ.ಎಸ್.ಇ ಪರೀಕ್ಷೆಯ ರೂಪುರೇಷೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಚಿನ್ಮಯಿ ಮಯ್ಯರವರು ನೀಡಿದರು. ಪರೀಕ್ಷೆ ತಯಾರಿ ಹಾಗೂ ಸಮಯದ ಹೊಂದಾಣಿಕೆಯ ಬಗ್ಗೆ ಎನ್.ಟಿ.ಎಸ್.ಇ ಪರೀಕ್ಷೆಯ ಮೊದಲ ಹಂತದಲ್ಲಿ ರಾಜ್ಯಕ್ಕೆ 20ನೇ ಸ್ಥಾನ ಗಳಿಸಿದ ಆಶ್ರಯ.ಪಿ ಇವರು ವಿದ್ಯಾರ್ಥಿಗಳಿಗೆ ತಮ್ಮ ಅನುಭವದೊಂದಿಗೆ […]

ಆರೋಗ್ಯಮಿತ್ರ : ಕೋವಿಡ್ - 19 ರ ಮಾಹಿತಿ ಕಾರ್ಯಾಗಾರ

ಆರೋಗ್ಯಮಿತ್ರ : ಕೋವಿಡ್ – 19 ರ ಮಾಹಿತಿ ಕಾರ್ಯಾಗಾರ

Wednesday, September 8th, 2021

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ವಿವೇಕಾನಂದ ಆಯುರ್ವೇದ ಆಸ್ಪತ್ರೆ ಪುತ್ತೂರು, ರೇಡಿಯೋ ಪಾಂಚಜನ್ಯ 90.8 ಎಫ್.ಎಮ್ ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಯೋಜನೆಗಳಲ್ಲಿ ಒಂದಾದ ಆರೋಗ್ಯಮಿತ್ರ ಪರಿಕಲ್ಪನೆಯಲ್ಲಿ ಕೋವಿಡ್- 19 ರ ಜಾಗೃತಿ ಕಾರ್ಯಾಗಾರವು ದಿನಾಂಕ 6-9-2021 ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಮೊದಲ ಅವಧಿಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ವಿಜಯ ಸರಸ್ವತಿ ಸಂಯೋಜಕರು, ಸ್ನಾತಕೋತ್ತರ ವಾಣಿಜ್ಯಶಾಸ್ತ್ರ […]

’ವೃತಿಕಾ’ ಹಸಿರು ಯೋಜನೆ

’ವೃತಿಕಾ’ ಹಸಿರು ಯೋಜನೆ

Thursday, August 26th, 2021

2020-21 ನೇ ಸಾಲಿನಲ್ಲಿ ಶಾಲೆ ’ವೃತಿಕಾ’ ಹಸಿರು ಯೋಜನೆ ಹಮ್ಮಿಕೊಂಡಿದ್ದು ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿ- ಪೋಷಕರು ಈ ಯೋಜನೆಯಲ್ಲಿ ಕೈಜೋಡಿಸಿದ್ದಾರೆ. ಮಿತಿ ಮೀರುತ್ತಿರುವ ಭೂಮಿಯ ತಾಪಮಾನವನ್ನು ನಿಯಂತ್ರಣದಲ್ಲಿರುವ ಕ್ರಮಗಳಲ್ಲಿ ಪ್ರಮುಖವಾಗಿ ನೆಲ ಹಸಿರೀಕರಣಕ್ಕೆ ಆದ್ಯತೆ ನೀಡಬೇಕೆಂಬ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಅಪೇಕ್ಷೆಯಂತೆ ಈ ಯೋಜನೆ ಹಮ್ಮಿಕೊಳ್ಳಲಾಗಿದೆ. ಎರಡು ವರ್ಷಗಳ ಹಿಂದಿನಿಂದ ಶಾಲಾ ಆವರಣದಲ್ಲಿ ಸುಮಾರು 15 ಬಗೆಯ ಬಾಳೆಗಿಡಗಳನ್ನು ನೆಟ್ಟು ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಪ್ರಸಕ್ತ ವರ್ಷ ಇದನ್ನು ಇನ್ನಷ್ಟು […]

ಭರತ ವರ್ಷಾಮೃತ ಸ್ವತಂತ್ರ ಭಾರತ 75 ರ ಸಂಭ್ರಮ 

ಭರತ ವರ್ಷಾಮೃತ ಸ್ವತಂತ್ರ ಭಾರತ 75 ರ ಸಂಭ್ರಮ 

Sunday, August 15th, 2021

ಭಾರತ – ಪ್ರಾಚೀನ ನಾಗರೀಕತೆ ಹೊಂದಿದದೇಶ. ವಿಶ್ವಕ್ಕೆ ಜ್ಞಾನದ ಬೆಳಕು ಪಸರಿಸಿದ ಕೀರ್ತಿ ನಮ್ಮೀ ದೇಶದ ಹೆಗ್ಗುರುತು. ಭೌಗೋಳಿಕ ಸಾಂಸ್ಕೃತಿಕ , ಸಾಮಾಜಿಕ, ಧಾರ್ಮಿಕತೆಯಿಂದ ಸಂಪನ್ನಗೊಂಡ ನಮ್ಮೀ ದೇಶದ ಹಿರಿಮೆ ಗರಿಮೆಯ ಪರಿಚಯ ಸರಣಿ ಕಾರ್ಯಕ್ರಮವೇ ಭರತ ವರ್ಷಾಮೃತ ಸ್ವಾತಂತ್ರ್ಯ ಸಂಭ್ರಮದ 75 ನೇ ವರ್ಷದ ಸಮಯದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ ಬಾನುಲಿ ಕೇಂದ್ರದಿಂದ 15 ದಿನಗಳ ಸರಣಿ ಕಾರ್ಯಕ್ರಮ ಪ್ರಸಾರವಾಯಿತು. ಮಾತೃಸ್ವರೂಪಿ ಭಾರತ, ಸ್ವತಂತ್ರ ಪೂರ್ವ […]

ಎಸ್.ಎಸ್.ಎಲ್.ಸಿ ಫಲಿತಾಂಶ

ಎಸ್.ಎಸ್.ಎಲ್.ಸಿ ಫಲಿತಾಂಶ

Wednesday, August 11th, 2021

2020-21 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕು. ಜಾಹ್ನವಿ.ಸಿ.ಶೆಟ್ಟಿ 614 ಅಂಕಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಮಿತ್ತೂರು ಏಮಾಜೆ ನಿವಾಸಿ ಕೆ.ಚಿದಾನಂದ ಶೆಟ್ಟಿ ಮತ್ತು ರಾಜೀವಿ ದಂಪತಿಗಳ ಪುತ್ರಿ. ಪವಿತ್ರಾ ಭಟ್- 608 (ಸಂಪ್ಯ ನಿವಾಸಿ ಶಂಕರನಾರಾಯಣ ಭಟ್ ಮತ್ತು ಗೀತಾಲಕ್ಷ್ಮೀ ಕೆ ದಂಪತಿಗಳ ಪುತ್ರಿ), ಅನ್ವಿತಾ ವಿ- 603 (ಕೆದಿಲ ನಿವಾಸಿ ಧರ್ನಪ್ಪಗೌಡ ಮತ್ತು ಸರೋಜ ದಂಪತಿಗಳ ಪುತ್ರಿ) , ಅರ್ಚನಾ ಪಿ.ಕೆ- 603  (ನಗರ ನಿವಾಸಿ ಪ್ರಭಾಕರ […]

ಗೃಹ ಮಿಲನ ಕಾರ್ಯಕ್ರಮ

ಗೃಹ ಮಿಲನ ಕಾರ್ಯಕ್ರಮ

Tuesday, July 20th, 2021

ಪ್ರಸ್ತುತ ಸಮಯದದ ನಿರ್ವಹಣೆ ನಮಗೆಲ್ಲರಿಗೂ ಸವಾಲಾಗಿದೆ. ಮನೆಯೇ ಸಂಪೂರ್ಣ ಪಾಠಶಾಲೆಯಾಗಿದೆ. ಇಲ್ಲಿ ಸಮಯದ ಸದುಪಯೋಗ ಮಾಡಿಕೊಳ್ಳಲು ಹಲವಾರು ಸಾಧ್ಯತೆಗಳು ನಮ್ಮ ಮುಂದಿವೆ. ಈ ದಿಶೆಯಲ್ಲಿ ವಿವೇಕಾನಂದ ಕನ್ನಡ ಶಾಲೆಯ ಹೆತ್ತವರು ಶಿಕ್ಷಕರು ಮತ್ತು ಮಕ್ಕಳು ವಿಭಿನ್ನ (ಶೈಕ್ಷಣಿಕ) ಚಟುವಟಿಕೆಗಳಲ್ಲಿ ತೊಡಗಿಕೊಂಡಿರುತ್ತಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರಾರು ಇತ್ಯಾತ್ಮಕ ಆಲೋಚನೆ ಮತ್ತು ಆಯೋಜನೆಗಳಲ್ಲಿ ಒಂದಾದ ಗೃಹ ಮಿಲನ- ಕೌಟುಂಬಿಕ ಸಹಮಿಲನ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿ ಬಂದಿದೆ ಅನ್ನುವುದು ಹೆತ್ತವರ ಅಭಿಮತ. ಭಾರತೀಯ ’ಐಕ್ಯತಾ ಮಂತ್ರ ವಸುದೈವ ಕುಟುಂಬಕಂ’ ಪರಿಕಲ್ಪನೆಯ […]

ವಿಶ್ವಯೋಗ ದಿನಾಚರಣೆ

ವಿಶ್ವಯೋಗ ದಿನಾಚರಣೆ

Monday, June 21st, 2021

’ಯೋಗ’ ಅಂದರೆ ಜೋಡಣೆ, ಸಮ್ಯೋಗ, ಸಹಬಂಧ ಎಂಬೆಲ್ಲಾ ಅರ್ಥ ನೀಡುವ ಶಬ್ಧ ಮಾತ್ರವಲ್ಲ. ಈ ಶಬ್ದಾರ್ಥದೊಂದಿಗೆ ಭಾರತೀಯರ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಭಾವನೆಗಳು ಬೆಸೆದುಕೊಂಡಿದೆ. ಯೋಗ- ಕೇವಲ ವ್ಯಾಯಾಮ, ಪ್ರಾಣಾಯಾಮ ಅನ್ನುವ ಪರಿಕಲ್ಪನೆಗೆ ಸೀಮಿತವಾಗಿಲ್ಲ. ಭಾರತೀಯರ ಭಾವನೆಗಳೊಂದಿಗೆ ಯೋಗ ಬೆರೆತು ಹೋಗಿದೆ. ಬೌದ್ಧಿಕ, ಮಾನಸಿಕ, ಶಾರೀರಕ, ತನ್ಮೂಲಕ ಸಾಮಾಜಿಕ ಅಧ್ಯಾತ್ಮಿಕ ಬೆಳವಣಿಗೆಗೆ ಯೋಗದ ಮಹತ್ತರ ಯೋಗದಾನವಿದೆ. ಯೋಗ – ಬದುಕುವ ವಿಧಾನವಾಗಿದೆ. ಭಾರತೀಯ ಬದುಕಿನ ಪರಿಚಯ ಪ್ರಾಚೀನ ಕಾಲದಿಂದಲೂ ವಿಶ್ವಕ್ಕೇ ಮಾದರಿಯಾಗಿತ್ತು. ಆದರೆ ಅನಂತರದ ದಿನಗಳಲ್ಲಿ ಭಾರತೀಯರ […]

’ಹೆಣ್ಣು ಮಕ್ಕಳ ಆರೋಗ್ಯ ಮತ್ತು ನೈರ್ಮಲ್ಯ’ ಕುರಿತು ಕಾರ್ಯಾಗಾರ

’ಹೆಣ್ಣು ಮಕ್ಕಳ ಆರೋಗ್ಯ ಮತ್ತು ನೈರ್ಮಲ್ಯ’ ಕುರಿತು ಕಾರ್ಯಾಗಾರ

Wednesday, March 10th, 2021

ಆರ್ಟ್ ಆಫ್ ಲಿವಿಂಗ್, ಪ್ರಗತಿ ಜನೌಷಧಿ ಕೇಂದ್ರ ಮತ್ತು ಬಿ.ಜೆ.ಪಿ ಮಹಿಳಾ ಮೋರ್ಛಾ ಪುತ್ತೂರು ಇದರ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 7 ನೇ ತರಗತಿಯಿಂದ 9 ನೇ ತರಗತಿಯ ವಿದ್ಯಾರ್ಥಿನಿಯರಿಗಾಗಿ ’ಹೆಣ್ಣು ಮಕ್ಕಳ ಆರೋಗ್ಯ ಮತ್ತು ನೈರ್ಮಲ್ಯ’ಎಂಬ ವಿಷಯದ ಕುರಿತು ಆರ್ಟ್ ಆಫ್ ಲಿವಿಂಗ್‌ನ ಶಿಕ್ಷಕರಾದ ಶ್ರೀಮತಿ ಭಾರತಿ ಜಯರಾಮ್ ಅವರು ಮಾತನಾಡಿ ಜಗತ್ತಿನಲ್ಲಿ ಬದಲಾವಣೆ ಪ್ರಕೃತಿಯ ಸಹಜ ನಿಯಮ. ಅದರಲ್ಲಿ ಮಾನವ ದೇಹದ ಅದರಲ್ಲೂ ಮುಖ್ಯವಾಗಿ ಹೆಣ್ಣುಮಕ್ಕಳ ದೈಹಿಕ ಹಾಗೂ ಮಾನಸಿಕ ಬದಲಾವಣೆ […]

10 ನೇ ತರಗತಿಯ ಪೋಷಕರ ಸಭೆ

10 ನೇ ತರಗತಿಯ ಪೋಷಕರ ಸಭೆ

Thursday, March 4th, 2021

2020-21 ರ ಶೈಕ್ಷಣಿಕ ವರ್ಷದ 10 ನೇ ತರಗತಿಯ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಮುಖ್ಯಗುರುಗಳಾದ ಶ್ರೀಮತಿ ಆಶಾ ಬೆಳ್ಳಾರೆ ಮಾತನಾಡಿ ಕೊರೋನಾ ರಜೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಸೃಜನಶೀಲತೆಯ ಮೂಲಕ ವಿಶೇಷ ಕೌಶಲ್ಯವನ್ನು ಮಾಡುವಲ್ಲಿ ಸಮಯವನ್ನು ಸದುಪಯೋಗಪಡಿಸಿಕೊಂಡರು ಎಂದರು. ಸಂಚಾಲಕರಾದ ಶ್ರೀಯುತ ರವಿನಾರಾಯಣರವರು ವಿವೇಕಾನಂದ ವಿದ್ಯಾವರ್ಧಕ ಸಂಘ ಇವರು ಉಪಸ್ಥಿತರಿದ್ದರು.  

ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು

ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು

Wednesday, February 24th, 2021

ಮಾದಕ ವ್ಯಸನವು ಚಕ್ರವ್ಯೂಹಕ್ಕೆ ಸಿಲುಕಿದಂತೆ – ಶ್ರೀ ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಶ್ರೀ ಒಡಿಯೂರು ವಜ್ರಮಾತಾ ಮಹಿಳಾ ಭಜನಾ ಮಂಡಳಿ ಮತ್ತು ಒಡಿಯೂರು ಷಷ್ಯಬ್ಧ ಸಂಭ್ರಮ ಸಮಿತಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ತೆಂಕಿಲ ಇವರ ಜಂಟಿ ಆಶ್ರಯದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಫರಿಣಾಮಗಳು ಎಂಬ ವಿಷಯದಡಿಯಲ್ಲಿ ಕಾರ್ಯಕ್ರಮ ನಡೆಯಿತು. ಪುತ್ತೂರಿನ ವೈದ್ಯರಾದ ಶ್ರೀ ರಾಘವೇಂದ್ರ ಪ್ರಸಾದ್ ಬಂಗಾರಡ್ಕರವರು ಕಾರ್ಯಕ್ರಮದ ವಿಶೇಷ ಅತಿಥಿಯಾಗಿದ್ದು, […]

ಎಸ್. ಎಸ್. ಎಲ್. ಸಿ. ವಿಷಯವಾರು ಕಾರ್ಯಾಗಾರ

ಎಸ್. ಎಸ್. ಎಲ್. ಸಿ. ವಿಷಯವಾರು ಕಾರ್ಯಾಗಾರ

Tuesday, February 23rd, 2021

ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಪುತ್ತೂರು ತಾಲೂಕು ಸಂಯೋಜನೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ವೃದ್ಧಿಗಾಗಿ ಆಂಗ್ಲ ಭಾಷಾ ಶಿಕ್ಷಕರ ಕಾರ್ಯಾಗಾರ ನಡೆಯಿತು. ತಾಲೂಕಿನ ಸರಕಾರಿ/ಅನುದಾನಿತ/ಖಾಸಗಿ ಆಂಗ್ಲ ಭಾಷಾ ಬೋಧನಾ ಶಿಕ್ಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದರು. ತಾಲೂಕು ನೋಡಲ್ ಅಧಿಕಾರಿಯಾದ ಶ್ರೀಯುತ ಹರಿಪ್ರಸಾದ್ ದೀಪ ಬೆಳಗಿಸಿ ಕಾರ್ಯಾಗಾರ ಉದ್ಘಾಟಿಸಿದರು. ಶಾಲಾ ಸಂಚಾಲಕರಾದ ಶ್ರೀಯುತ ರವಿನಾರಾಯಣ ಸಭಾಧ್ಯಕ್ಷತೆ ವಹಿಸಿ ಜ್ಞಾನಾಭಿವೃದ್ಧಿಯ ದೃಷ್ಟಿಯಿಂದ ಇಂತಹ ಕಾರ್ಯಾಗಾರಗಳ ಪ್ರಸ್ತುತತೆಯನ್ನು ತಿಳಿಸಿದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಸರಕಾರಿ ಪದವಿ […]

ರಥ ಸಪ್ತಮಿ- ಸೂರ್ಯ ನಮಸ್ಕಾರ ಪ್ರಾತ್ಯಕ್ಷಿಕೆ

ರಥ ಸಪ್ತಮಿ- ಸೂರ್ಯ ನಮಸ್ಕಾರ ಪ್ರಾತ್ಯಕ್ಷಿಕೆ

Tuesday, February 23rd, 2021

ಭಾರತೀಯ ಹಬ್ಬಗಳಲ್ಲಿ ಒಂದಾದ ರಥಸಪ್ತಮಿಯ ವೈಜ್ಞಾನಿಕ ಆಚರಣಾ ಮಹತ್ವ ಮತ್ತು ಸೂರ್ಯನಮಸ್ಕಾರದ ಪ್ರಾತ್ಯಕ್ಷಿಕೆ ನೀಡಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು ಮೊದಲಿಗೆ ಶಾಲಾ ಆವರಣದಲ್ಲಿ ವಿಭಾಗಶಃ 6 ರಿಂದ 10 ನೇ ತರಗತಿಯ ಮಕ್ಕಳಿಂದ ಸೂರ್ಯ ಸ್ತುತಿಯೊಂದಿಗೆ ಪ್ರಾತ್ಯಕ್ಷಿಕೆ ನಡೆಯಿತು. ವಿದ್ಯಾರ್ಥಿನಿಯರಾದ ಸಂಹಿತಾ ಶರ್ಮ ಹಾಗೂ ಧಾತ್ರಿ ರಥಸಪ್ತಮಿ ಸೂರ್ಯನಮಸ್ಕಾರದ ಆರೋಗ್ಯಕರ ಮಹತ್ವದ ಬಗ್ಗೆ ಮಾತನಾಡಿದರು. ಅನಂತರ ಮಕ್ಕಳ ತಂಡ ಪುತ್ತೂರು ತಾಲೂಕಿನ ಪತ್ರಿಕಾ ಭವನ, ನರೇಂದ್ರ ಪದವಿಪೂರ್ವ ಕಾಲೇಜಿಗೆ ತೆರಳಿ ಕಾರ್ಯಕ್ರಮ ನೀಡಿದರು. ಪುತ್ತೂರು […]

1 ರಿಂದ 4 ನೇ ತರಗತಿಯ ಮಕ್ಕಳ ಪೋಷಕರ ಸಭೆ

1 ರಿಂದ 4 ನೇ ತರಗತಿಯ ಮಕ್ಕಳ ಪೋಷಕರ ಸಭೆ

Monday, February 15th, 2021

ಪ್ರಸಕ್ತ ಶೈಕ್ಷಣಿಕ ವರ್ಷದ 1 ರಿಂದ 4 ನೇ ತರಗತಿಯ ಮಕ್ಕಳ ಪೋಷಕರ ಸಭೆಯು ನಡೆಯಿತು. ಸಭೆಯಲ್ಲಿ ಶಾಲಾ ಅಧ್ಯಕ್ಷರು, ಸಂಚಾಲಕರು, ಮುಖ್ಯಗುರುಗಳು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಮಕ್ಕ್ಳ ಪೋಷಕರು ತಮ್ಮ ಮಕ್ಕಳ ಉತ್ತಮ ಕಲಿಕಾ ಚಟುವಟಿಕೆಗಳ ಬಗ್ಗೆ ಧನಾತ್ಮಕ ಅಂಶಗಳನ್ನು ವ್ಯಕ್ತಪಡಿಸಿದರು. ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಶ್ರಮವನ್ನು ಪ್ರಶಂಸಿಸಿದರು. ಶಾಲಾ ಸಂಚಾಲಕರಾದ ಶ್ರೀಯುತ ರವಿನಾರಾಯಣ ಇವರು ಮಕ್ಕಳ ಉತ್ತಮ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಲ್ಲಿ ಧನಾತ್ಮಕ ವಿಚಾರಗಳು ಹೆಚ್ಚು ಪ್ರಭಾವ ಬೀರುತ್ತವೆ. ಈ ನಿಟ್ಟಿನಲ್ಲಿ ಪೋಷಕರು ಮಕ್ಕಳನ್ನು […]

8 ಹಾಗೂ 9 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆ

8 ಹಾಗೂ 9 ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆ

Tuesday, February 9th, 2021

ಶೈಕ್ಷಣಿಕ ಹಂತದ 8 ಹಾಗೂ 9 ನೇ ತರಗತಿಯ ವಿದ್ಯಾರ್ಥಿಗಳ 2020-21 ನೇ ಸಾಲಿನ ಪೋಷಕರ ಸಭೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಲಾ ಅಧ್ಯಕ್ಷರಾದ ರಮೇಶ್ಚಂದ್ರ ಮಾತನಾಡಿ ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕಾಗಿ ನಾವು ಹೇಗೆ ಪರಿಶ್ರಮ ಪಡುತ್ತೇವೆಯೋ ಹಾಗೆಯೇ ಶಾಲಾ ಆಗುಹೋಗುಗಳ ಬಗ್ಗೆ ಗಂಭೀರವಾಗಿ ಚಿಂತಿಸಿ ಪೋಷಕರು ಸಹಾಯ ಹಸ್ತ ಚಾಚುವುದರ ಬಗ್ಗೆ ಸೂಚಿಸಿದರು. ಮುಖ್ಯಗುರುಗಳಾದ ಶ್ರೀಮತಿ ಆಶಾಬೆಳ್ಳಾರೆ ಮಾತನಾಡಿ ಲಾಕ್‌ಡೌನ್ ಸಂದರ್ಭದಲ್ಲಿ ಮನೆಯಲ್ಲಿದ್ದ ಕೆಲವು ವಿದ್ಯಾರ್ಥಿಗಳು ತಮ್ಮ ವಿಶೇಷ ಕೌಶಲ್ಯವನ್ನು ಸದುಪಯೋಗ ಪಡಿಸಿಕೊಂಡು […]

5, 6, 7 ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆ

5, 6, 7 ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆ

Tuesday, February 9th, 2021

ಪ್ರಸಕ್ತ ಶೈಕ್ಷಣಿಕ ವರ್ಷದ 5, 6, 7 ನೇ ತರಗತಿ ವಿದ್ಯಾರ್ಥಿಗಳ ಪ್ರಥಮ ಪೋಷಕರ ಸಭೆ ನಡೆಯಿತು. ಶಾಲಾ ಸಂಚಾಲಕರಾದ ಶ್ರೀ ರವಿನಾರಾಯಣ ಮಾತನಾಡಿ ಪೋಷಕರು ಮಕ್ಕಳಲ್ಲಿ ಪ್ರಸ್ತುತ ಸಮಾಜದಲ್ಲಿ ನಡೆಯುವ ಧನಾತ್ಮಕ ವಿಚಾರಗಳನ್ನು ಹೆಚ್ಚಾಗಿ ತುಂಬಬೇಕೆಂಬ ಕಿವಿಮಾತನ್ನು ಹೇಳಿದರು. ಶಾಲಾ ಮುಖ್ಯಗುರುಗಳಾದ ಆಶಾ ಬೆಳ್ಳಾರೆ ಮಾತನಾಡಿ ಮಕ್ಕಳ ಮನೋಸ್ಥೆರ್ಯ ಹೆಚ್ಚಾಗಬೇಕಾದರೆ ಪಾಲಕರು ಮತ್ತು ಮಕ್ಕಳ ಮಧ್ಯೆ ಮುಕ್ತ ಮಾತುಕತೆ ಇರಬೇಕೆಂದರು. ಪೋಷಕರಿಂದ ಆಫ್ ಲೈನ್ ತರಗತಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತಾದರೂ ದೈನಂದಿನ ತರಗತಿ ಕೊಠಡಿಗಳಲ್ಲಿ ನಡೆಯುವ […]

72 ನೇ ಗಣರಾಜ್ಯೋತ್ಸವ

72 ನೇ ಗಣರಾಜ್ಯೋತ್ಸವ

Tuesday, January 26th, 2021

ಭಾರತದ ಪ್ರತಿಯೊಬ್ಬ ವ್ಯಕ್ತಿಯೂ ಒಂದಿಲ್ಲೊಂದು ರೀತಿಯಲ್ಲಿ ದೇಶಕ್ಕೆ ತನ್ನದೇ ಶೈಲಿಯಲ್ಲಿ ಸೇವೆ ಸಲ್ಲಿಸಿದಾಗ ಅವರ ಜನ್ಮ ಸಾರ್ಥಕವೆನಿಸುತ್ತದೆ ಎಂದು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸುಬೇದಾರ್ ವಸಂತ ಕುಂಟ್ಯಾನ ಹೇಳಿದರು. ಅವರು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ, ನರೇಂದ್ರ ಪದವಿಪೂರ್ವ ಕಾಲೇಜು ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ 72ನೇ ಗಣರಾಜ್ಯೋತ್ಸವ ಆಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು. ನಾಲ್ಕೂ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ […]

ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ - ರಾಜ್ಯಮಟ್ಟದಲ್ಲಿ ನೂತನ ದಾಖಲೆ

ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿ – ರಾಜ್ಯಮಟ್ಟದಲ್ಲಿ ನೂತನ ದಾಖಲೆ

Thursday, January 21st, 2021

ಆಳ್ವಾಸ್ ವಿದ್ಯಾಸಂಸ್ಥೆಯವರು ನಡೆಸಿದ 36 ನೇ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ – 2020-21 ರಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಆದಿಲ್ 16 ನೇ ವಯೋಮಾನದ ಬಾಲಕರ ವಿಭಾಗದ ಉದ್ದ ಜಿಗಿತದಲ್ಲಿ 6.73 ಮೀ ಜಿಗಿದು ಪ್ರಥಮ ಸ್ಥಾನದೊಂದಿಗೆ ನೂತನ ದಾಖಲೆ ಮಾಡಿದ್ದಾನೆ ಹಾಗೂ ೮೦ಮೀ ಹರ್ಡಲ್ಸ್‌ನಲ್ಲಿ ಕೂಡ ಪ್ರಥಮ ಸ್ಥಾನದೊಂದಿಗೆ ದಾಖಲೆ ಮಾಡಿರುತ್ತಾನೆ. ಇವನಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ ಹಾಗೂ ಹರಿಣಾಕ್ಷಿ […]

ಶಾಲಾ ಪ್ರಾರಂಭೋತ್ಸವ

ಶಾಲಾ ಪ್ರಾರಂಭೋತ್ಸವ

Monday, January 4th, 2021

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲದಲ್ಲಿ 1-1-2021 ರಂದು ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಗಣಹೋಮದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಶಾಲೆಯ ಮಕ್ಕಳನ್ನು ಮಾತಾಜಿಯವರು ತಿಲಕವಿಟ್ಟು ಸಿಹಿ ನೀಡಿ ಸ್ವಾಗತಿಸಿದರು. ಎಲ್ಲಾ ಹೊಸ ಮಕ್ಕಳೂ ಭಾರತಾಂಬೆಯ ಚರಣಗಳಿಗೆ ನಮಸ್ಕರಿಸಿ ಪುಷ್ಪಾರ್ಚನೆಗೈದು ತಮ್ಮ ಮುಂದಿನ ವಿದ್ಯಾರ್ಜನೆಗೆ ಶುಭಾರಂಭಗೈದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಶಿಕ್ಷಕ -ರಕ್ಷಕ ಸಂಘದ ಪದಾಧಿಕಾರಿಗಳು, ಪೋಷಕರು – ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

74 ನೇ ಸ್ವಾತಂತ್ರ್ಯ ದಿನಾಚರಣೆ

74 ನೇ ಸ್ವಾತಂತ್ರ್ಯ ದಿನಾಚರಣೆ

Saturday, August 15th, 2020

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರ ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನರೇಂದ್ರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀಮತಿ ರೂಪಲೇಖಾ ಪಾಣಾಜೆದೇಶದಲ್ಲಿ ಪ್ರಸ್ತುತತೆಯ ಸಂದರ್ಭದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅದರ ವಿರುದ್ಧ ನಾವು ಹೋರಾಡಬೇಕಾದ ಅನಿವಾರ್ಯತೆಯ ಅರಿವನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸಿಬ್ಬಂದಿ ವರ್ಗ, ವಿದ್ಯಾರ್ಥಿ ವೃಂದ, ಹಾಗೂ ಶಾಲಾ ಆಡಳಿತ ಮಂಡಳಿಯ […]

ಎಸ್.ಎಸ್.ಎಲ್.ಸಿ. ಫಲಿತಾಂಶ 2019-20

ಎಸ್.ಎಸ್.ಎಲ್.ಸಿ. ಫಲಿತಾಂಶ 2019-20

Wednesday, August 12th, 2020

2019-20 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕು. ಪ್ರಣಮ್ಯ 609 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ದೊಡ್ಡಡ್ಕ ನಿವಾಸಿ ಗಣಪತಿ ನಾಯಕ್ ಮತ್ತು ಸುಲೋಚನ ದಂಪತಿಗಳ ಪುತ್ರಿ. ಧನ್ಯಶ್ರೀ- 608 (ಅಲಂಕಾರು ನಿವಾಸಿ ದಾಮೋದರಗೌಡ ಮತ್ತು ಮತ್ತು ಕಮಲ ದಂಪತಿಗಳ ಪುತ್ರಿ), ಆದರ್ಶ್ ಹೆಗ್ಡೆ-605 (ಉರ್ಲಾಂಡಿ ನಿವಾಸಿ ದಿ. ಅನಿಲ್ ಕುಮಾರ್ ಹೆಗ್ಡೆ ಮತ್ತು ಧನಲಕ್ಷ್ಮೀ ಹೆಗ್ಡೆ ದಂಪತಿಗಳ ಪುತ್ರ), ಅನಘಾ ಭಟ್-603 (ಕೆದಿಲ ನಿವಾಸಿ ಸುಬ್ಬಣ್ಣ ಭಟ್‌ ಮತ್ತು […]

ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ - ದ್ವಿತೀಯ

ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ – ದ್ವಿತೀಯ

Tuesday, March 10th, 2020

ಇಸ್ಕಾನ್ ಮಂಗಳೂರು ವತಿಯಿಂದ ನಡೆಸಲ್ಪಟ್ಟ ಶ್ರೀಕೃಷ್ಣ ಗೋಲೋಕ ಶೇಡ್ಸ್ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 2ನೇ ತರಗತಿಯ ವಿದ್ಯಾರ್ಥಿನಿ ಕು. ವಂಶಿಕಾ ಜಿ. ವಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಶಾಲಾ ಮಟ್ಟದಲ್ಲಿ ಹಲವು ಮಕ್ಕಳು ಬಹುಮಾನ ಪಡೆದಿರುತ್ತಾರೆ.

ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಡಾ|ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಶ್ರೇಷ್ಠ ಶಾಲೆ ಪ್ರಶಸ್ತಿ

ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಡಾ|ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಶ್ರೇಷ್ಠ ಶಾಲೆ ಪ್ರಶಸ್ತಿ

Sunday, March 8th, 2020

ಶಿಕ್ಷಣದ ಗುಣಾತ್ಮಕತೆಯಲ್ಲಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಲೆಯು ದಿ. ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಶ್ರೇಷ್ಠ ಶಾಲೆ ಪ್ರಶಸ್ತಿಗೆ ಆಯ್ಕೆಯಾಗಿದೆ. ಮಾ. 3 ರಂದು ದೇರಳಕಟ್ಟೆಯ ನಿಟ್ಟೆ ವಿದ್ಯಾಸಂಸ್ಥೆಯ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆದು ಪ್ರಶಸ್ತಿಯೊಂದಿಗೆ ರೂ 10 ಲಕ್ಷ ನಗದು ಪುರಸ್ಕಾರವೂ ದೊರೆತಿದೆ.ನಿಟ್ಟೆ ಮೌಲ್ಯಮಾಪಕರ ತಂಡವು ಶಾಲೆಗೆ ಆಗಮಿಸಿ ಗುಣಾತ್ಮಕತೆಯ ಪರಿಶೀಲನೆ ನಡೆಸಿದ್ದಾರೆ. ಶಾಲಾ ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಮೊದಲಾದವುಗಳನ್ನು ಪರಿಶೀಲನೆ ನಡೆಸಿದ್ದಾರೆ. ಮಕ್ಕಳನ್ನು ಪರೀಕ್ಷೆ ನಡೆಸಿ ಶಿಕ್ಷಣದ […]

ರಾಮಾಯಣ ಪರೀಕ್ಷೆ - ಆಕಾಂಕ್ಷ ಜಿಲ್ಲೆಯಲ್ಲಿ ದ್ವಿತೀಯ

ರಾಮಾಯಣ ಪರೀಕ್ಷೆ – ಆಕಾಂಕ್ಷ ಜಿಲ್ಲೆಯಲ್ಲಿ ದ್ವಿತೀಯ

Tuesday, February 11th, 2020

ಭಾರತ ಸಂಸ್ಕೃತಿ ಪ್ರತಿಷ್ಠಾನ ಬೆಂಗಳೂರು ಇವರು 2019 ನೇ ಸಾಲಿನಲ್ಲಿ ನಡೆಸಿದ ರಾಮಾಯಣ-ಮಹಾಭಾರತ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕು. ಆಕಾಂಕ್ಷ ಇವರು ರಾಮಾಯಣ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. (ಇವರು ಸುನಾದ ಸಂಗೀತಕ ಲಾಶಾಲೆಯ ಗುರುಗಳಾದ ಕಾಂಚನ ಈಶ್ವರ ಭಟ್ ಮತ್ತು ವಿಜಯಶ್ರೀ ದಂಪತಿಯ ಪುತ್ರಿ.) ಮತ್ತು ಕು. ಸುಮಾ ಭಟ್ ಸಿ. ಎಚ್. ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಹಾಗೂ ಮಹಾಭಾರತ ಪರೀಕ್ಷೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಾದ […]

ರಾಜ್ಯಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ : ಶಾಲಾ ತಂಡಕ್ಕೆ ತೃತೀಯ ಸ್ಥಾನ

ರಾಜ್ಯಮಟ್ಟದ ಪ್ರತಿಭಾ ಕಾರಂಜಿ-ಕಲೋತ್ಸವ : ಶಾಲಾ ತಂಡಕ್ಕೆ ತೃತೀಯ ಸ್ಥಾನ

Monday, February 10th, 2020

ಕರ್ನಾಟಕ ಸರಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಕೋಲಾರ, ಇದರ ವತಿಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾಕಾರಂಜಿ-ಕಲೋತ್ಸವ ಸ್ಪರ್ಧೆಗಳಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಶಿಶಿರ್ ಎಸ್, ಕೌಶಿಕ್ ಎ.ಜಿ, ಮುಖೇಶ್ ಕೃಷ್ಣ, ಸಮೀಕ್ಷಾ ಎಸ್‌. ಇವರ ತಂಡ ದೃಶ್ಯಕಲೆ (ಕಲೋತ್ಸವ) ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸಿದೆ. ಇವರಿಗೆ ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀ ರುಕ್ಮಯ್ಯ ಮತ್ತು ಶ್ರೀ ರಂಗಪ್ಪ ತರಬೇತಿ ನೀಡಿದ್ದರು.

ರಥಸಪ್ತಮಿ ಆಚರಣೆ

ರಥಸಪ್ತಮಿ ಆಚರಣೆ

Saturday, February 1st, 2020

ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ರಥ ಸಪ್ತಮಿಯಂದು ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಸಿದ ಸಂದರ್ಭದಲ್ಲಿ ವಿದ್ಯಾರ್ಥಿ ಸಮೂಹವನ್ನುದ್ದೇಶಿಸಿ ಶಾಲಾ ಪೋಷಕರೂ, ಯೋಗ ಶಿಕ್ಷಕಿಯು ಆದ ಶ್ರೀಮತಿ ಶರಾವತಿ ರವಿನಾರಾಯಣ ಮಾತನಾಡಿ ’ಜಗತ್ತಿನ ಎಲ್ಲಾ ಜೀವಿರಾಶಿಗೂ ಶಕ್ತಿಯ ಪ್ರಧಾನ ಮೂಲ ಸೂರ್ಯ. ಉತ್ತರಾಯಣದಲ್ಲಿ ಬರುವ ಮಾಘ ಶುದ್ಧ ಸಪ್ತಮಿಯಂದು ಆಚರಿಸುವ ರಥ ಸಪ್ತಮಿ ಹಬ್ಬವು ಅತ್ಯಂತ ಅರ್ಥಪೂರ್ಣವಾಗಿ ಸೂರ್ಯದೇವನಿಗೆ ಸಲ್ಲಿಸುವ ಕೃತಜ್ಞತೆಯಾಗಿದೆ ಎಂದು ತಿಳಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಯುತ ರಮೇಶ್ಚಂದ್ರರವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಸಲಾದ […]

ಗಣರಾಜ್ಯೋತ್ಸವ ಆಚರಣೆ

ಗಣರಾಜ್ಯೋತ್ಸವ ಆಚರಣೆ

Tuesday, January 28th, 2020

ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ ಶಾಲೆಗಳು. ನರೇಂದ್ರ ಪದವಿಪೂರ್ವ ಕಾಲೇಜು, ವಿವೇಕಾನಂದ ಬಿ. ಎಡ್‌. ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಸೇನಾಧಿಕಾರಿ ಕರ್ನಲ್‌ ಡಿ. ಜಿ. ಭಟ್‌ ಇವರು ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಕೆ.ಎಸ್.ಆರ್.ಪಿ. ರಾಮದಾಸ್‌ ಗಣರಾಜ್ಯೋತ್ಸವದ ಸಂದೇಶವನ್ನು ಸಾರಿದರು. ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಪ್ರಾರಂಭದಲ್ಲಿ ವಿವೇಕಾನಂದ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಸಾಮೂಹಿಕ […]

ಚಿತ್ರಕಲಾ ಸ್ಪರ್ಧೆ - ಶಾಲೆಗೆ ಹಲವು ಪ್ರಶಸ್ತಿ

ಚಿತ್ರಕಲಾ ಸ್ಪರ್ಧೆ – ಶಾಲೆಗೆ ಹಲವು ಪ್ರಶಸ್ತಿ

Monday, January 27th, 2020

ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ತಾಲೂಕು ಬಾಲಭವನ ಸಮಿತಿ ಪುತ್ತೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದ. ಕ., ಶಿಶು ಅಭಿವೃದ್ಧಿ ಯೋಜನೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವದ ಅಂಗವಾಗಿ ನಡೆಸಿದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಬಹುಮಾನಗಳನ್ನು ಪಡೆದಿರುತ್ತಾರೆ. 5 ರಿಂದ-8 ವರ್ಷ ವಯೋಮಿತಿಯ ವಿಭಾಗದಲ್ಲಿ : ವಿಘ್ನೇಶ್ ವಿಶ್ವಕರ್ಮ- (ದ್ವಿತೀಯ), ಅದ್ವೀತ್ ಜಿ. – […]

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ - ಜಿಲ್ಲಾ ಮಟ್ಟದಲ್ಲಿ ಪ್ರಥಮ

ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ – ಜಿಲ್ಲಾ ಮಟ್ಟದಲ್ಲಿ ಪ್ರಥಮ

Monday, January 27th, 2020

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಶ್ರೀ ಕ್ಷೇತ್ರ ಧರ್ಮಸ್ಥಳ, ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆಯವರು ಧರ್ಮಸ್ಥಳದ ಮಹೋತ್ಸವ ಭವನದಲ್ಲಿ ನಡೆಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ವಿಭಾಗದ ಜ್ಞಾನ ಮಂಜೂಷಾ ಪುಸ್ತಕಾಧಾರಿತ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅಗಮ್ಯ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಶ್ರೀ ಗಣೇಶ್‌ ಆಚಾರ್ಯ ಮತ್ತು ಶ್ರೀಮತಿ ಮಂಜುಳಾ ಗಣೇಶ್ ದಂಪತಿಗಳ ಪುತ್ರಿ.

ತಡೆಗೋಡೆ ಲೋಕಾರ್ಪಣೆ

ತಡೆಗೋಡೆ ಲೋಕಾರ್ಪಣೆ

Tuesday, January 21st, 2020

ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಇಲಾಖೆಯ ರೂ. 10 ಲಕ್ಷ ಅನುದಾನದಲ್ಲಿ ವಿವೇಕಾನಂದಕನ್ನಡ ಮಾಧ್ಯಮ ಶಾಲೆಯ ಬಳಿ ತಡೆಗೋಡೆ ನಿರ್ಮಾಣದ ಲೋಕಾರ್ಪಣಾ ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಂಜೀವ ಮಠಂದೂರು ಇವರು ಲೋಕಾರ್ಪಣೆಗೊಳಿಸಿದರು. ವೇದಿಕೆಯಲ್ಲಿ ಇಂಜಿನಿಯರ್ ಹರೀಶ್‌ ಕುಮಾರ್, ನಗರಸಭಾ ಕೌನ್ಸಿಲರ್‌ ಜಗನ್ನೀವಾಸ್‌ ರಾವ್ ಶಾಲಾ ಅಧ್ಯಕ್ಷರಾದ ಶ್ರೀ ರಮೇಶ್ಚಂದ್ರ, ಸಂಚಾಲಕರಾದ ಶ್ರೀ ರವಿ ನಾರಾಯಣ, ಖಜಾಂಚಿ ವಸಂತ ಸುವರ್ಣ ಉಪಸ್ಥಿತರಿದ್ದರು.

ಕುಸುಮಸಾರಂಗ ನಾಟಕ ಹಬ್ಬ 2020 ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು

ಕುಸುಮಸಾರಂಗ ನಾಟಕ ಹಬ್ಬ 2020 ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು

Wednesday, January 15th, 2020

ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಇಲ್ಲಿ ನಡೆದ ಕುಸುಮಸಾರಂಗ ನಾಟಕ ಹಬ್ಬ 2020 ಕಾರ್ಯಕ್ರಮದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ’ಗೊರವರ ಮೈಲಾರ’ ನಾಟಕ ಪ್ರದರ್ಶನಗೊಂಡಿತು.

ವಿವೇಕಾನಂದರ ಜೀವನವೇ ನಮಗೆ ಪ್ರೇರಣೆಯಾಗಲಿ - ಶ್ರೀ ರಮೇಶ್ಚಂದ್ರ

ವಿವೇಕಾನಂದರ ಜೀವನವೇ ನಮಗೆ ಪ್ರೇರಣೆಯಾಗಲಿ – ಶ್ರೀ ರಮೇಶ್ಚಂದ್ರ

Tuesday, January 14th, 2020

ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಮೂಲಕ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀಯುತ ರಮೇಶ್ಚಂದ್ರ ನುಡಿದರು. ವಿವೇಕಾನಂದರ ಬಾಲ್ಯ ಹಾಗೂ ಅವರ ಮೇಲೆ ಗುರು ರಾಮಕೃಷ್ಣ ಪರಮಹಂಸರ ಪ್ರಭಾವವನ್ನು ಪ್ರಹಸನದ ಮೂಲಕ ವಿದ್ಯಾರ್ಥಿಗಳು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಸಂಚಾಲಕರಾದ ಶ್ರೀ ರವಿನಾರಾಯಣ, ಪ್ರಾಥಮಿಕ […]

ತಾಯಿ ಒಂದು ಪ್ರೇರಣಾ ಶಕ್ತಿ - ಸಾವಿತ್ರಿ ಮಾತಾಜಿ

ತಾಯಿ ಒಂದು ಪ್ರೇರಣಾ ಶಕ್ತಿ – ಸಾವಿತ್ರಿ ಮಾತಾಜಿ

Wednesday, January 8th, 2020

ಜೀವ-ಜೀವನ ನೀಡುವವಳು ಮಾತೆ. ನಿಸ್ವಾರ್ಥ ಸೇವೆಗೆ ಇನ್ನೊಂದು ಹೆಸರೇ ತಾಯಿ. ತಾಯಿ ಆಕೆ ಒಂದು ಶ್ರೇಷ್ಠ ಹಾಗೂ ಪ್ರೇರಣಾಶಕ್ತಿ ಎಂದು ವಿದ್ಯಾಭಾರತಿ ಕರ್ನಾಟಕ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಮಾತೃಭಾರತಿ ಜಿಲ್ಲಾ ಸಮಾವೇಶದಲ್ಲಿ ಉದ್ಘಾಟನಾ ಸಮಾರಂಭದ ದಿಕ್ಸೂಚಿ ಮಾತುಗಳಲ್ಲಿ ಮೈತ್ರೇಯಿ ಗುರುಕುಲದ ಸಾವಿತ್ರಿ ಮಾತಾಜಿ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ|ಕಮಲ ಪ್ರಭಾಕರ ಭಟ್, ಇವರು ಸ್ತ್ರೀಶಕ್ತಿಯ ಕುರಿತಾದ ಹಲವು ಪ್ರೇರಣೆ ನೀಡುವ ಕಥೆಗಳನ್ನು ಹೇಳಿ ಎಲ್ಲರೊಂದಿಗೆ ಪ್ರೀತಿ, ಗೌರವದಿಂದ ವರ್ತಿಸಬೇಕು ಎಂದು ತಿಳಿಸಿದರು. […]

ಚಿತ್ರಕಲಾ ಸ್ಪರ್ಧೆ - ಪ್ರಶಸ್ತಿ

ಚಿತ್ರಕಲಾ ಸ್ಪರ್ಧೆ – ಪ್ರಶಸ್ತಿ

Monday, December 23rd, 2019

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಇದರ ವತಿಯಿಂದ ಕೆಯ್ಯೂರು ಜಯಕರ್ನಾಟಕ ಸಭಾಭವನ ಆವರಣದಲ್ಲಿ ಪುತ್ತೂರು ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು. ಈ ಸಮ್ಮೇಳನದ ಪ್ರಯುಕ್ತ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಅವನಿ ಬೆಳ್ಳಾರೆ (7ನೇ ತರಗತಿ)- ದ್ವಿತೀಯ, ಅಗಮ್ಯ (7ನೇ ತರಗತಿ) ತೃತೀಯ, ಪ್ರಣಾಮ್ (7ನೇ ತರಗತಿ)- ಸಮಾಧಾನಕರ ಬಹುಮಾನ ಪಡೆದಿರುತ್ತಾರೆ. ಪ್ರೌಢ ವಿಭಾಗದಲ್ಲಿ ಶಿಶಿರ್ […]

ಡ್ರಾಯಿಂಗ್‌ಗ್ರೇಡ್ ಪರೀಕ್ಷೆ - ಶಾಲೆಗೆ 100% ಫಲಿತಾಂಶ

ಡ್ರಾಯಿಂಗ್‌ಗ್ರೇಡ್ ಪರೀಕ್ಷೆ – ಶಾಲೆಗೆ 100% ಫಲಿತಾಂಶ

Tuesday, December 17th, 2019

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು 2019-20 ನೇ ಸಾಲಿನಲ್ಲಿ ನಡೆಸಿದ ಡ್ರಾಯಿಂಗ್‌ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಿಂದ ಲೋವರ್‌ಗ್ರೇಡ್‌ನಲ್ಲಿ 14 ಮಕ್ಕಳು ಹಾಜರಾಗಿದ್ದು ಈ ಪೈಕಿ 12 ವಿದ್ಯಾರ್ಥಿಗಳು ಡಿಸ್ಟಿಂಕ್ಷನಲ್ಲಿ ಮತ್ತು 2 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಹೈಯರ್‌ಗ್ರೇಡ್‌ನಲ್ಲಿ 15 ಮಕ್ಕಳು ಹಾಜರಾಗಿದ್ದು 13 ಮಕ್ಕಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದು 2 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಲೋವರ್‌ಗ್ರೇಡ್‌ನಲ್ಲಿ ಡಿಸ್ಟಿಂಕ್ಷನ್ ಪಡೆದವರು: ದೀಕ್ಷಿತಾ, ಧನುಷ್‌ಕುಮಾರ್ ವಿ, ಕೆ. ಪ್ರಾಪ್ತಿ, ಸೃಜನ್ ಕೆ, ಮಿಥುನ್ ವಿ. ಕೆ., ಲಕ್ಷ್ಮೀ ಸಾಗರ್, ಶಿವಾನಿ ಕೆ, […]

ಆವಿಷ್ಕಾರ ಮೇಕಥಾನ್ - ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ದ್ವಿತೀಯ

ಆವಿಷ್ಕಾರ ಮೇಕಥಾನ್ – ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ದ್ವಿತೀಯ

Monday, December 16th, 2019

ತ್ಯಾಗರಾಜ ಸ್ಪೋರ್ಟ್ ಸಂಕೀರ್ಣ, ನವದೆಹಲಿ ಇಲ್ಲಿ ನಡೆದರಾಷ್ಟ್ರೀಯ ಮಟ್ಟದ ’ಆವಿಷ್ಕಾರ ಮೇಕಥಾನ್’ ವಿಜ್ಞಾನ ಮತ್ತು ತಂತ್ರಜ್ಞಾನದ ಆಚರಣೆಯ ಅಂಗವಾಗಿ, ವಿಶೇಷವಾಗಿ ಅಟಲ್‌ ಟಿಂಕರಿಂಗ್ ಲ್ಯಾಬ್ ಹೊಂದಿರುವ ಶಾಲೆಗಳಿಗೆ ನಡೆದ ಸೃಜನಾತ್ಮಕ ಮಾದರಿ ತಯಾರಿಕೆಯ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಣವ ಎಮ್. ಭಟ್ ಮತ್ತು ಪ್ರಮಥ ಎಮ್. ಭಟ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಇವರು ಶಾಲಾ ಸಂಚಾಲಕರೂ, ಮೈತ್ರಿ ಇಲೆಕ್ಟ್ರಿಕಲ್ಸ್‌ನ ಮಾಲಕರೂ ಆದ ಶ್ರೀ ರವಿನಾರಾಯಣ ಮತ್ತು ಶ್ರೀಮತಿ ಶರಾವತಿ ರವಿನಾರಾಯಣ ದಂಪತಿಗಳ ಪುತ್ರರಾಗಿರುತ್ತಾರೆ.

ವಿವೇಕೋತ್ಸವ 2019

ವಿವೇಕೋತ್ಸವ 2019

Monday, December 16th, 2019

ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜೊತೆಗೆ ಬದುಕಿನ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಶಾಲೆಯಲ್ಲಿ ಡಿಸೆಂಬರ್ 8 ರಂದು ನಡೆದ ಶಾಲಾ ವಾರ್ಷಿಕೋತ್ಸವ ’ವಿವೇಕೋತ್ಸವ’ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಭಾಷೆಗಳು ನಾಶವಾದಾಗ ಸಂಸ್ಕೃತಿಗಳು ನಾಶವಾದಂತೆ. ನಮ್ಮ ತನವನ್ನು ಉಳಿಸಿಕೊಳ್ಳಲು ನಾವು ಪ್ರಯತ್ನಿಸಬೇಕು ಎಂದರು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಲಾ ಹಿರಿಯ ವಿದ್ಯಾರ್ಥಿನಿ, ಕರ್ನಾಟಕ ಬ್ಯಾಂಕ್ ಉದ್ಯೋಗಿ ಶ್ರೀಮತಿ ಕೃಪಾಶಂಕರಿ ಮಾತನಾಡಿ, ಕನ್ನಡ ಮಾಧ್ಯಮ ದ ಬಗ್ಗೆ ಯಾರಿಗೂ ಹಿಂಜರಿಕೆ ಬೇಡ. […]

ಆಮಂತ್ರಣ : ವಿವೇಕೋತ್ಸವ 2019

ಆಮಂತ್ರಣ : ವಿವೇಕೋತ್ಸವ 2019

Thursday, December 5th, 2019
ರಾಜ್ಯಮಟ್ಟದ ಕ್ರೀಡಾಕೂಟ :  5 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಜ್ಯಮಟ್ಟದ ಕ್ರೀಡಾಕೂಟ : 5 ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Friday, November 22nd, 2019

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಂಡ್ಯಜಿಲ್ಲೆಯ ನಾಗಮಂಡಲ ತಾಲೂಕಿನ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ನವೆಂಬರ್ 11 ರಿಂದ 14 ರ ತನಕ ನಡೆದ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ 14 ರ ವಯೋಮಾನದ ಬಾಲಕಿಯರ ವಿಭಾಗದ 4×100 ಮೀ ರಿಲೇ ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯರಾದ ಪೂರ್ಣಲಕ್ಷ್ಮೀ (ಸಂಪ್ಯ ಬೈಲಾಡಿ ನಿವಾಸಿ ರವಿ ಮತ್ತು ಶೀಲಾವತಿ ದಂಪತಿಗಳ ಪುತ್ರಿ), ನಿಶಾ ಬಿ.ಎಮ್ (ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡ ಮತ್ತು […]

ಅಟಲ್ ಟಿಂಕರಿಂಗ್ ಫೆಸ್ಟ್ - ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಅಟಲ್ ಟಿಂಕರಿಂಗ್ ಫೆಸ್ಟ್ – ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

Wednesday, November 20th, 2019

ಶಾರದ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ತಲಪ್ಪಾಡಿ ಇದರ ವತಿಯಿಂದ ನಡೆದ ಜಿಲ್ಲಾಮಟ್ಟದ 2019-20 ನೇ ಸಾಲಿನ ಅಟಲ್ ಟಿಂಕರಿಂಗ್ ಫೆಸ್ಟ್‌ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಚಿನ್ಮಯ ಮಜಿ ’ಅಗ್ರಿಕಲ್ಚರ್ ಟೆಕ್ನೋಲಜಿ’ ವಿಷಯದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಪ್ರಣವ ಎಂ ಭಟ್ ಮತ್ತು ಪ್ರತೀಕ್ ಇವರ ತಂಡ ’ಸೃಜನಾತ್ಮಕ’ ವಿಷಯದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಹಾಗೆಯೇ ಶಿಶಿರ್ ಮತ್ತು ಆದರ್ಶ್ ಇವರ ತಂಡ ’ಸಂಪನ್ಮೂಲ ನಿರ್ವಹಣೆ’ ವಿಷಯದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.

ಕನಕ ಜಯಂತಿ ಆಚರಣೆ

ಕನಕ ಜಯಂತಿ ಆಚರಣೆ

Friday, November 15th, 2019

ಕನಕದಾಸರ ಕಾವ್ಯ ಪರಂಪರೆಯಲ್ಲಿ ಜನಜೀವನದ ಭಾಷೆಯನ್ನು ಕಾಣಬೇಕು- ವೀಣಾಸರಸ್ವತಿ ವಿವೇಕಾನಂದ ಕನ್ನಡ ಶಾಲೆಯಲ್ಲಿ ’ಮಹತಿ’ ಕನ್ನಡ ಸಂಘದ ವತಿಯಿಂದ ಕನಕದಾಸರ ಜಯಂತಿ ಆಚರಿಸಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಮತಿ ವೀಣಾಸರಸ್ವತಿ ಇವರು ಕನಕದಾಸರ ಹಾಡುಗಳನ್ನು ಮಕ್ಕಳಿಂದ ಹಾಡಿಸುತ್ತಾ ಅರ್ಥ ವ್ಯಾಖ್ಯಾನದೊಂದಿಗೆ ಕಥೆ ಹೇಳುತ್ತಾ ಅವರ ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಜ್ಞಾನಮಾರ್ಗವು ನಮಗೆಲ್ಲಾ ಸ್ಪೂರ್ತಿಯಾಗಿದೆ ಎಂದರು.

’ಕ್ರೀಡಾಸ್ಪೂರ್ತಿ ನಿತ್ಯ ನಿರಂತರವಾಗಲಿ’ - ಸಹನಾ ಭವಿನ

’ಕ್ರೀಡಾಸ್ಪೂರ್ತಿ ನಿತ್ಯ ನಿರಂತರವಾಗಲಿ’ – ಸಹನಾ ಭವಿನ

Friday, November 15th, 2019

ಪ್ರತಿಯೊಬ್ಬ ವಿದ್ಯಾರ್ಥಿ ತನ್ನಲ್ಲಿರುವ ಕ್ರೀಡಾಸ್ಫೂರ್ತಿಯ ಸದ್ಭಳಕೆ ಮಾಡಿಕೊಂಡು ಜೀವನದಲ್ಲಿ ಮುನ್ನಡೆಯುವ ಶಕ್ತಿ ಪಡೆದುಕೊಂಡರೆ ಕ್ರೀಡಾ ದಿನಚರಿಯು ಅರ್ಥಪೂರ್ಣವಾಗುತ್ತದೆ ಎಂದು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಾರ್ಷಿಕ ಕ್ರೀಡಾಕೂಟದ ಉದ್ಘಾಟಕರಾಗಿ ಆಗಮಿಸಿದ ಪುತ್ತೂರಿನ ಉದ್ಯಮಿಗಳಾದ ಶ್ರೀ ಕೂಡ್ಗಿ ಶ್ರೀಕಾಂತ್ ಶೆಣೈಯವರು ಮಾತನಾಡಿದರು. ಪುತ್ತೂರು ಇನ್ನರ್ ವೀಲ್ ಕ್ಲಬ್‌ನ ಸಹಯೋಗದೊಂದಿಗೆ ನಡೆದ ಶಾಲಾ ಕ್ರೀಡಾಕೂಟದ ಧ್ವಜವಂದನೆ ಸ್ವೀಕಾರ ಮಾಡಿದ ಶ್ರೀಮತಿ ಸಹನಾ ಭವಿನ್ ಇವರು ಮಕ್ಕಳ ದಿನಾಚರಣೆಗೆ ಶುಭಕೋರುತ್ತಾ ಮಕ್ಕಳ ಕ್ರೀಡಾಸ್ಫೂರ್ತಿ ನಿತ್ಯ ನಿರ೦ತರವಾಗಲಿ ಎಂದು ಶುಭ ಹಾರೈಸಿದರು. ಅಭ್ಯಾಗತರಾಗಿ […]

Highslide for Wordpress Plugin